Homeಕರ್ನಾಟಕಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

ಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

- Advertisement -
- Advertisement -

ದುನಿಯಾ ವಿಜಯ್ ಮತ್ತು ಅಮೂಲ್ಯ ಅಭಿನಯದ ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ಟೈಮಲ್ಲಿ ವಿಲನ್ ಪಾತ್ರ ಮಾಡಿದ್ದ ಖಳನಟ ಅನಿಲ್ ಮತ್ತು ರಾಘವ್ ಉದಯ್ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದು ನಿಮಗೆಲ್ಲಾ ಗೊತ್ತಿದೆ.

ಈ ಸಾವು ಅಚಾತುರ್ಯ ಮತ್ತು ಆಕಸ್ಮಿಕವಾಗಿ ಆದದ್ದು ಎಂದು ಹೇಳಿದರೂ, ಅಲ್ಲಿನ ಸನ್ನಿವೇಶ ಅದು ಸುಳ್ಳು ಎನ್ನುವಂತಿತ್ತು. ಈಜುಬರದ ಕಲಾವಿದರು ನಟನೆ ಮಾಡುವಾಗ ಅನಾಹುತ ನಡೆಯದಂತೆ ಎಚ್ಚರಿಕೆ ವಹಿಸಿ ಲೈಫ್ ಜಾಕೇಟ್, ಬೋಟು ಎಲ್ಲವನ್ನೂ ರೆಡಿ ಇಟ್ಟುಕೊಳ್ಳಬೇಕು. ಆದರೆ ಅವಾವು ಅಲ್ಲಿರಲಿಲ್ಲ. ಹಾಗಾಗಿ ಇದು ಸಿನಿಮಾದ ಪ್ರಮೋಷನ್ ಗೀಳಿಗೆ ಹೂಡಲಾಗಿದ್ದ ಖತರ್ನಾಕ್ ಪ್ಲಾನು ಎಂದು ಸಿನಿರಂಗವಷ್ಟೇ ಅಲ್ಲದೆ ಸಿನಿ ಪ್ರೇಕ್ಷಕರ ಅಂಗಳದಲ್ಲಿಯೂ ಗಾಸಿಪ್ ತರ ಹರಡಿತ್ತು.

ಈ ವಿಚಾರವಾಗಿ ತಾವರೆಕೆರೆ ಪೊಲೀಸ್ ಸ್ಟೇಷನ್‍ನಲ್ಲಿ ಸಿನಿಮಾದ 6 ಜನರ ಮೇಲೆ ಕೇಸು ದಾಖಲಾಗಿದ್ದು, ಚಿತ್ರದ ನಿರ್ಮಾಪಕ ಸುಂದರ್‌ಗೌಡ ಅವರನ್ನು ಎ-1 ಆರೋಪಿಯೆಂದು ದಾಖಲಿಸಲಾಗಿತ್ತು. ಆರನೇ ಆರೋಪಿಯಗಿದ್ದ ಹೆಲಿಕಾಪ್ಟರ್ ಪೈಲಟ್‍ನನ್ನು ಸಾಕ್ಷ್ಯಾಧಾರ ಕೊರತೆಯಿಂದ ಕೇಸಿನಿಂದ ಮುಕ್ತಗೊಳಿಸಲಾಗಿದೆ.

ವಿಷ್ಯ ಏನಂದ್ರೆ, ಸಿನಿಮಾಗಳ ಪ್ರಮೋಷನ್‍ಗಾಗಿ ಡೈರೆಕ್ಟರ್ ಮತ್ತು ಪ್ರೊಡ್ಯೂಸರ್ ಏನೆಲ್ಲಾ ಗಿಮಿಕ್‍ಗಳನ್ನ ಮಾಡೋಕು ಕೇರ್ ಮಾಡಲ್ಲ ಅನ್ನೋದು ಜಗಜ್ಜಾಹೀರಾಗಿರುವ ವಿಚಾರ. ಅಂತಹದರಲ್ಲಿ ಈ ಇಬ್ಬರು ಖಳನಟರ ಸಾವೂ ಒಂದು ಗಿಮಿಕ್ ಭಾಗವೇ ಇರಬಹುದು. ಇದು ನಿಜವೇ ಆದರೆ ಅದರಲ್ಲಿ ಮೈನ್ ರೋಲ್ ಪ್ರೊಡ್ಯೂಸರ್‌ದೆ ಆಗಿರುತ್ತೆ.

ಹಾಗಾಗಿಯೇ ಎಫ್‍ಐಆರ್ ಪಟ್ಟಿಯಲ್ಲಿ ಸುಂದರ್ ಹೆಸರು ಮೊದಲಿದೆ (ಎ1 ಆರೋಪಿ). ಹೀಗಿರುವಾಗ ಈ ಎಲ್ಲರೂ ತಮ್ಮ ಮೇಲಿರುವ ಆರೋಪವನ್ನು ಕೈಬಿಟ್ಟು ದೋಷಮುಕ್ತಗೊಳಿಸಬೇಕೆಂದು ರಾಮನಗರ ಸೆಷನ್ಸ್ ಕೋರ್ಟ್‍ನಲ್ಲಿ ಅಪೀಲು ಹಾಕಿದ್ದರು. ನ್ಯಾಯಾಧೀಶ ಸಿದ್ಧಲಿಂಗಪ್ರಭು ಅವರು ಆ ಅರ್ಜಿಯನ್ನು ವಜಾಗೊಳಿಸಿದ್ದರು.

ಹೈಕೋರ್ಟ್ ಮೆಟ್ಟಿಲೇರಿದ ಸುಂದರ್‍ಗೆ ಅಲ್ಲಿಯೂ ಮಣೆ ಹಾಕಲಿಲ್ಲ. ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದೆ. ಐಪಿಸಿ ಸೆಕ್ಷನ್ 305(1) ಹಾಗೂ 308ರ ಅನ್ವಯ ಕೇಸು ಎದುರಿಸುತ್ತಿರುವ ಈ ಐವರು ಗಿಮಿಕ್ ಮಾಡಿ ಸಿನಿಮಾ ಪ್ರಮೋಟ್‍ಗಾಗಿ ಆ ಇಬ್ಬರ ಸಾವಿಗೆ ಕಾರಣರಾಗಿದ್ದಾರೋ, ಇಲ್ಲವೋ ಬೇರೆಯ ವಿಚಾರ. ಆದರೆ ಯಾವುದೇ ಮುಂಜಾಗ್ರತೆ ಇಲ್ಲದೆ ಬೇಜವಾಬ್ದಾರಿತನದಿಂದಂತೂ ಅನಿಲ್ ಮತ್ತು ಉದಯ್ ಸಾವಿಗೆ ಕಾರಣರಾಗಿದ್ದಾರೆ. ಅದಕ್ಕಾದರೂ ಅವರು ಶಿಕ್ಷೆ ಅನುಭವಿಸಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...