Homeಕರ್ನಾಟಕಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

ಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

- Advertisement -
- Advertisement -

ದುನಿಯಾ ವಿಜಯ್ ಮತ್ತು ಅಮೂಲ್ಯ ಅಭಿನಯದ ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ಟೈಮಲ್ಲಿ ವಿಲನ್ ಪಾತ್ರ ಮಾಡಿದ್ದ ಖಳನಟ ಅನಿಲ್ ಮತ್ತು ರಾಘವ್ ಉದಯ್ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದು ನಿಮಗೆಲ್ಲಾ ಗೊತ್ತಿದೆ.

ಈ ಸಾವು ಅಚಾತುರ್ಯ ಮತ್ತು ಆಕಸ್ಮಿಕವಾಗಿ ಆದದ್ದು ಎಂದು ಹೇಳಿದರೂ, ಅಲ್ಲಿನ ಸನ್ನಿವೇಶ ಅದು ಸುಳ್ಳು ಎನ್ನುವಂತಿತ್ತು. ಈಜುಬರದ ಕಲಾವಿದರು ನಟನೆ ಮಾಡುವಾಗ ಅನಾಹುತ ನಡೆಯದಂತೆ ಎಚ್ಚರಿಕೆ ವಹಿಸಿ ಲೈಫ್ ಜಾಕೇಟ್, ಬೋಟು ಎಲ್ಲವನ್ನೂ ರೆಡಿ ಇಟ್ಟುಕೊಳ್ಳಬೇಕು. ಆದರೆ ಅವಾವು ಅಲ್ಲಿರಲಿಲ್ಲ. ಹಾಗಾಗಿ ಇದು ಸಿನಿಮಾದ ಪ್ರಮೋಷನ್ ಗೀಳಿಗೆ ಹೂಡಲಾಗಿದ್ದ ಖತರ್ನಾಕ್ ಪ್ಲಾನು ಎಂದು ಸಿನಿರಂಗವಷ್ಟೇ ಅಲ್ಲದೆ ಸಿನಿ ಪ್ರೇಕ್ಷಕರ ಅಂಗಳದಲ್ಲಿಯೂ ಗಾಸಿಪ್ ತರ ಹರಡಿತ್ತು.

ಈ ವಿಚಾರವಾಗಿ ತಾವರೆಕೆರೆ ಪೊಲೀಸ್ ಸ್ಟೇಷನ್‍ನಲ್ಲಿ ಸಿನಿಮಾದ 6 ಜನರ ಮೇಲೆ ಕೇಸು ದಾಖಲಾಗಿದ್ದು, ಚಿತ್ರದ ನಿರ್ಮಾಪಕ ಸುಂದರ್‌ಗೌಡ ಅವರನ್ನು ಎ-1 ಆರೋಪಿಯೆಂದು ದಾಖಲಿಸಲಾಗಿತ್ತು. ಆರನೇ ಆರೋಪಿಯಗಿದ್ದ ಹೆಲಿಕಾಪ್ಟರ್ ಪೈಲಟ್‍ನನ್ನು ಸಾಕ್ಷ್ಯಾಧಾರ ಕೊರತೆಯಿಂದ ಕೇಸಿನಿಂದ ಮುಕ್ತಗೊಳಿಸಲಾಗಿದೆ.

ವಿಷ್ಯ ಏನಂದ್ರೆ, ಸಿನಿಮಾಗಳ ಪ್ರಮೋಷನ್‍ಗಾಗಿ ಡೈರೆಕ್ಟರ್ ಮತ್ತು ಪ್ರೊಡ್ಯೂಸರ್ ಏನೆಲ್ಲಾ ಗಿಮಿಕ್‍ಗಳನ್ನ ಮಾಡೋಕು ಕೇರ್ ಮಾಡಲ್ಲ ಅನ್ನೋದು ಜಗಜ್ಜಾಹೀರಾಗಿರುವ ವಿಚಾರ. ಅಂತಹದರಲ್ಲಿ ಈ ಇಬ್ಬರು ಖಳನಟರ ಸಾವೂ ಒಂದು ಗಿಮಿಕ್ ಭಾಗವೇ ಇರಬಹುದು. ಇದು ನಿಜವೇ ಆದರೆ ಅದರಲ್ಲಿ ಮೈನ್ ರೋಲ್ ಪ್ರೊಡ್ಯೂಸರ್‌ದೆ ಆಗಿರುತ್ತೆ.

ಹಾಗಾಗಿಯೇ ಎಫ್‍ಐಆರ್ ಪಟ್ಟಿಯಲ್ಲಿ ಸುಂದರ್ ಹೆಸರು ಮೊದಲಿದೆ (ಎ1 ಆರೋಪಿ). ಹೀಗಿರುವಾಗ ಈ ಎಲ್ಲರೂ ತಮ್ಮ ಮೇಲಿರುವ ಆರೋಪವನ್ನು ಕೈಬಿಟ್ಟು ದೋಷಮುಕ್ತಗೊಳಿಸಬೇಕೆಂದು ರಾಮನಗರ ಸೆಷನ್ಸ್ ಕೋರ್ಟ್‍ನಲ್ಲಿ ಅಪೀಲು ಹಾಕಿದ್ದರು. ನ್ಯಾಯಾಧೀಶ ಸಿದ್ಧಲಿಂಗಪ್ರಭು ಅವರು ಆ ಅರ್ಜಿಯನ್ನು ವಜಾಗೊಳಿಸಿದ್ದರು.

ಹೈಕೋರ್ಟ್ ಮೆಟ್ಟಿಲೇರಿದ ಸುಂದರ್‍ಗೆ ಅಲ್ಲಿಯೂ ಮಣೆ ಹಾಕಲಿಲ್ಲ. ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದೆ. ಐಪಿಸಿ ಸೆಕ್ಷನ್ 305(1) ಹಾಗೂ 308ರ ಅನ್ವಯ ಕೇಸು ಎದುರಿಸುತ್ತಿರುವ ಈ ಐವರು ಗಿಮಿಕ್ ಮಾಡಿ ಸಿನಿಮಾ ಪ್ರಮೋಟ್‍ಗಾಗಿ ಆ ಇಬ್ಬರ ಸಾವಿಗೆ ಕಾರಣರಾಗಿದ್ದಾರೋ, ಇಲ್ಲವೋ ಬೇರೆಯ ವಿಚಾರ. ಆದರೆ ಯಾವುದೇ ಮುಂಜಾಗ್ರತೆ ಇಲ್ಲದೆ ಬೇಜವಾಬ್ದಾರಿತನದಿಂದಂತೂ ಅನಿಲ್ ಮತ್ತು ಉದಯ್ ಸಾವಿಗೆ ಕಾರಣರಾಗಿದ್ದಾರೆ. ಅದಕ್ಕಾದರೂ ಅವರು ಶಿಕ್ಷೆ ಅನುಭವಿಸಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...