Homeಕರ್ನಾಟಕಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

ಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

- Advertisement -
- Advertisement -

ದುನಿಯಾ ವಿಜಯ್ ಮತ್ತು ಅಮೂಲ್ಯ ಅಭಿನಯದ ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ಟೈಮಲ್ಲಿ ವಿಲನ್ ಪಾತ್ರ ಮಾಡಿದ್ದ ಖಳನಟ ಅನಿಲ್ ಮತ್ತು ರಾಘವ್ ಉದಯ್ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದು ನಿಮಗೆಲ್ಲಾ ಗೊತ್ತಿದೆ.

ಈ ಸಾವು ಅಚಾತುರ್ಯ ಮತ್ತು ಆಕಸ್ಮಿಕವಾಗಿ ಆದದ್ದು ಎಂದು ಹೇಳಿದರೂ, ಅಲ್ಲಿನ ಸನ್ನಿವೇಶ ಅದು ಸುಳ್ಳು ಎನ್ನುವಂತಿತ್ತು. ಈಜುಬರದ ಕಲಾವಿದರು ನಟನೆ ಮಾಡುವಾಗ ಅನಾಹುತ ನಡೆಯದಂತೆ ಎಚ್ಚರಿಕೆ ವಹಿಸಿ ಲೈಫ್ ಜಾಕೇಟ್, ಬೋಟು ಎಲ್ಲವನ್ನೂ ರೆಡಿ ಇಟ್ಟುಕೊಳ್ಳಬೇಕು. ಆದರೆ ಅವಾವು ಅಲ್ಲಿರಲಿಲ್ಲ. ಹಾಗಾಗಿ ಇದು ಸಿನಿಮಾದ ಪ್ರಮೋಷನ್ ಗೀಳಿಗೆ ಹೂಡಲಾಗಿದ್ದ ಖತರ್ನಾಕ್ ಪ್ಲಾನು ಎಂದು ಸಿನಿರಂಗವಷ್ಟೇ ಅಲ್ಲದೆ ಸಿನಿ ಪ್ರೇಕ್ಷಕರ ಅಂಗಳದಲ್ಲಿಯೂ ಗಾಸಿಪ್ ತರ ಹರಡಿತ್ತು.

ಈ ವಿಚಾರವಾಗಿ ತಾವರೆಕೆರೆ ಪೊಲೀಸ್ ಸ್ಟೇಷನ್‍ನಲ್ಲಿ ಸಿನಿಮಾದ 6 ಜನರ ಮೇಲೆ ಕೇಸು ದಾಖಲಾಗಿದ್ದು, ಚಿತ್ರದ ನಿರ್ಮಾಪಕ ಸುಂದರ್‌ಗೌಡ ಅವರನ್ನು ಎ-1 ಆರೋಪಿಯೆಂದು ದಾಖಲಿಸಲಾಗಿತ್ತು. ಆರನೇ ಆರೋಪಿಯಗಿದ್ದ ಹೆಲಿಕಾಪ್ಟರ್ ಪೈಲಟ್‍ನನ್ನು ಸಾಕ್ಷ್ಯಾಧಾರ ಕೊರತೆಯಿಂದ ಕೇಸಿನಿಂದ ಮುಕ್ತಗೊಳಿಸಲಾಗಿದೆ.

ವಿಷ್ಯ ಏನಂದ್ರೆ, ಸಿನಿಮಾಗಳ ಪ್ರಮೋಷನ್‍ಗಾಗಿ ಡೈರೆಕ್ಟರ್ ಮತ್ತು ಪ್ರೊಡ್ಯೂಸರ್ ಏನೆಲ್ಲಾ ಗಿಮಿಕ್‍ಗಳನ್ನ ಮಾಡೋಕು ಕೇರ್ ಮಾಡಲ್ಲ ಅನ್ನೋದು ಜಗಜ್ಜಾಹೀರಾಗಿರುವ ವಿಚಾರ. ಅಂತಹದರಲ್ಲಿ ಈ ಇಬ್ಬರು ಖಳನಟರ ಸಾವೂ ಒಂದು ಗಿಮಿಕ್ ಭಾಗವೇ ಇರಬಹುದು. ಇದು ನಿಜವೇ ಆದರೆ ಅದರಲ್ಲಿ ಮೈನ್ ರೋಲ್ ಪ್ರೊಡ್ಯೂಸರ್‌ದೆ ಆಗಿರುತ್ತೆ.

ಹಾಗಾಗಿಯೇ ಎಫ್‍ಐಆರ್ ಪಟ್ಟಿಯಲ್ಲಿ ಸುಂದರ್ ಹೆಸರು ಮೊದಲಿದೆ (ಎ1 ಆರೋಪಿ). ಹೀಗಿರುವಾಗ ಈ ಎಲ್ಲರೂ ತಮ್ಮ ಮೇಲಿರುವ ಆರೋಪವನ್ನು ಕೈಬಿಟ್ಟು ದೋಷಮುಕ್ತಗೊಳಿಸಬೇಕೆಂದು ರಾಮನಗರ ಸೆಷನ್ಸ್ ಕೋರ್ಟ್‍ನಲ್ಲಿ ಅಪೀಲು ಹಾಕಿದ್ದರು. ನ್ಯಾಯಾಧೀಶ ಸಿದ್ಧಲಿಂಗಪ್ರಭು ಅವರು ಆ ಅರ್ಜಿಯನ್ನು ವಜಾಗೊಳಿಸಿದ್ದರು.

ಹೈಕೋರ್ಟ್ ಮೆಟ್ಟಿಲೇರಿದ ಸುಂದರ್‍ಗೆ ಅಲ್ಲಿಯೂ ಮಣೆ ಹಾಕಲಿಲ್ಲ. ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದೆ. ಐಪಿಸಿ ಸೆಕ್ಷನ್ 305(1) ಹಾಗೂ 308ರ ಅನ್ವಯ ಕೇಸು ಎದುರಿಸುತ್ತಿರುವ ಈ ಐವರು ಗಿಮಿಕ್ ಮಾಡಿ ಸಿನಿಮಾ ಪ್ರಮೋಟ್‍ಗಾಗಿ ಆ ಇಬ್ಬರ ಸಾವಿಗೆ ಕಾರಣರಾಗಿದ್ದಾರೋ, ಇಲ್ಲವೋ ಬೇರೆಯ ವಿಚಾರ. ಆದರೆ ಯಾವುದೇ ಮುಂಜಾಗ್ರತೆ ಇಲ್ಲದೆ ಬೇಜವಾಬ್ದಾರಿತನದಿಂದಂತೂ ಅನಿಲ್ ಮತ್ತು ಉದಯ್ ಸಾವಿಗೆ ಕಾರಣರಾಗಿದ್ದಾರೆ. ಅದಕ್ಕಾದರೂ ಅವರು ಶಿಕ್ಷೆ ಅನುಭವಿಸಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...