Homeಕರ್ನಾಟಕಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

ಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

- Advertisement -
- Advertisement -

ದುನಿಯಾ ವಿಜಯ್ ಮತ್ತು ಅಮೂಲ್ಯ ಅಭಿನಯದ ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ಟೈಮಲ್ಲಿ ವಿಲನ್ ಪಾತ್ರ ಮಾಡಿದ್ದ ಖಳನಟ ಅನಿಲ್ ಮತ್ತು ರಾಘವ್ ಉದಯ್ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದು ನಿಮಗೆಲ್ಲಾ ಗೊತ್ತಿದೆ.

ಈ ಸಾವು ಅಚಾತುರ್ಯ ಮತ್ತು ಆಕಸ್ಮಿಕವಾಗಿ ಆದದ್ದು ಎಂದು ಹೇಳಿದರೂ, ಅಲ್ಲಿನ ಸನ್ನಿವೇಶ ಅದು ಸುಳ್ಳು ಎನ್ನುವಂತಿತ್ತು. ಈಜುಬರದ ಕಲಾವಿದರು ನಟನೆ ಮಾಡುವಾಗ ಅನಾಹುತ ನಡೆಯದಂತೆ ಎಚ್ಚರಿಕೆ ವಹಿಸಿ ಲೈಫ್ ಜಾಕೇಟ್, ಬೋಟು ಎಲ್ಲವನ್ನೂ ರೆಡಿ ಇಟ್ಟುಕೊಳ್ಳಬೇಕು. ಆದರೆ ಅವಾವು ಅಲ್ಲಿರಲಿಲ್ಲ. ಹಾಗಾಗಿ ಇದು ಸಿನಿಮಾದ ಪ್ರಮೋಷನ್ ಗೀಳಿಗೆ ಹೂಡಲಾಗಿದ್ದ ಖತರ್ನಾಕ್ ಪ್ಲಾನು ಎಂದು ಸಿನಿರಂಗವಷ್ಟೇ ಅಲ್ಲದೆ ಸಿನಿ ಪ್ರೇಕ್ಷಕರ ಅಂಗಳದಲ್ಲಿಯೂ ಗಾಸಿಪ್ ತರ ಹರಡಿತ್ತು.

ಈ ವಿಚಾರವಾಗಿ ತಾವರೆಕೆರೆ ಪೊಲೀಸ್ ಸ್ಟೇಷನ್‍ನಲ್ಲಿ ಸಿನಿಮಾದ 6 ಜನರ ಮೇಲೆ ಕೇಸು ದಾಖಲಾಗಿದ್ದು, ಚಿತ್ರದ ನಿರ್ಮಾಪಕ ಸುಂದರ್‌ಗೌಡ ಅವರನ್ನು ಎ-1 ಆರೋಪಿಯೆಂದು ದಾಖಲಿಸಲಾಗಿತ್ತು. ಆರನೇ ಆರೋಪಿಯಗಿದ್ದ ಹೆಲಿಕಾಪ್ಟರ್ ಪೈಲಟ್‍ನನ್ನು ಸಾಕ್ಷ್ಯಾಧಾರ ಕೊರತೆಯಿಂದ ಕೇಸಿನಿಂದ ಮುಕ್ತಗೊಳಿಸಲಾಗಿದೆ.

ವಿಷ್ಯ ಏನಂದ್ರೆ, ಸಿನಿಮಾಗಳ ಪ್ರಮೋಷನ್‍ಗಾಗಿ ಡೈರೆಕ್ಟರ್ ಮತ್ತು ಪ್ರೊಡ್ಯೂಸರ್ ಏನೆಲ್ಲಾ ಗಿಮಿಕ್‍ಗಳನ್ನ ಮಾಡೋಕು ಕೇರ್ ಮಾಡಲ್ಲ ಅನ್ನೋದು ಜಗಜ್ಜಾಹೀರಾಗಿರುವ ವಿಚಾರ. ಅಂತಹದರಲ್ಲಿ ಈ ಇಬ್ಬರು ಖಳನಟರ ಸಾವೂ ಒಂದು ಗಿಮಿಕ್ ಭಾಗವೇ ಇರಬಹುದು. ಇದು ನಿಜವೇ ಆದರೆ ಅದರಲ್ಲಿ ಮೈನ್ ರೋಲ್ ಪ್ರೊಡ್ಯೂಸರ್‌ದೆ ಆಗಿರುತ್ತೆ.

ಹಾಗಾಗಿಯೇ ಎಫ್‍ಐಆರ್ ಪಟ್ಟಿಯಲ್ಲಿ ಸುಂದರ್ ಹೆಸರು ಮೊದಲಿದೆ (ಎ1 ಆರೋಪಿ). ಹೀಗಿರುವಾಗ ಈ ಎಲ್ಲರೂ ತಮ್ಮ ಮೇಲಿರುವ ಆರೋಪವನ್ನು ಕೈಬಿಟ್ಟು ದೋಷಮುಕ್ತಗೊಳಿಸಬೇಕೆಂದು ರಾಮನಗರ ಸೆಷನ್ಸ್ ಕೋರ್ಟ್‍ನಲ್ಲಿ ಅಪೀಲು ಹಾಕಿದ್ದರು. ನ್ಯಾಯಾಧೀಶ ಸಿದ್ಧಲಿಂಗಪ್ರಭು ಅವರು ಆ ಅರ್ಜಿಯನ್ನು ವಜಾಗೊಳಿಸಿದ್ದರು.

ಹೈಕೋರ್ಟ್ ಮೆಟ್ಟಿಲೇರಿದ ಸುಂದರ್‍ಗೆ ಅಲ್ಲಿಯೂ ಮಣೆ ಹಾಕಲಿಲ್ಲ. ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದೆ. ಐಪಿಸಿ ಸೆಕ್ಷನ್ 305(1) ಹಾಗೂ 308ರ ಅನ್ವಯ ಕೇಸು ಎದುರಿಸುತ್ತಿರುವ ಈ ಐವರು ಗಿಮಿಕ್ ಮಾಡಿ ಸಿನಿಮಾ ಪ್ರಮೋಟ್‍ಗಾಗಿ ಆ ಇಬ್ಬರ ಸಾವಿಗೆ ಕಾರಣರಾಗಿದ್ದಾರೋ, ಇಲ್ಲವೋ ಬೇರೆಯ ವಿಚಾರ. ಆದರೆ ಯಾವುದೇ ಮುಂಜಾಗ್ರತೆ ಇಲ್ಲದೆ ಬೇಜವಾಬ್ದಾರಿತನದಿಂದಂತೂ ಅನಿಲ್ ಮತ್ತು ಉದಯ್ ಸಾವಿಗೆ ಕಾರಣರಾಗಿದ್ದಾರೆ. ಅದಕ್ಕಾದರೂ ಅವರು ಶಿಕ್ಷೆ ಅನುಭವಿಸಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...