Homeಕರ್ನಾಟಕಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

ಮಾಸ್ತಿಗುಡಿ ಸಿನಿಮಾದ ಖಳನಟರ ಸಾವಿನ ಹಿಂದೆ ಇತ್ತೇ ಸಂಚು?

- Advertisement -
- Advertisement -

ದುನಿಯಾ ವಿಜಯ್ ಮತ್ತು ಅಮೂಲ್ಯ ಅಭಿನಯದ ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ಟೈಮಲ್ಲಿ ವಿಲನ್ ಪಾತ್ರ ಮಾಡಿದ್ದ ಖಳನಟ ಅನಿಲ್ ಮತ್ತು ರಾಘವ್ ಉದಯ್ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದು ನಿಮಗೆಲ್ಲಾ ಗೊತ್ತಿದೆ.

ಈ ಸಾವು ಅಚಾತುರ್ಯ ಮತ್ತು ಆಕಸ್ಮಿಕವಾಗಿ ಆದದ್ದು ಎಂದು ಹೇಳಿದರೂ, ಅಲ್ಲಿನ ಸನ್ನಿವೇಶ ಅದು ಸುಳ್ಳು ಎನ್ನುವಂತಿತ್ತು. ಈಜುಬರದ ಕಲಾವಿದರು ನಟನೆ ಮಾಡುವಾಗ ಅನಾಹುತ ನಡೆಯದಂತೆ ಎಚ್ಚರಿಕೆ ವಹಿಸಿ ಲೈಫ್ ಜಾಕೇಟ್, ಬೋಟು ಎಲ್ಲವನ್ನೂ ರೆಡಿ ಇಟ್ಟುಕೊಳ್ಳಬೇಕು. ಆದರೆ ಅವಾವು ಅಲ್ಲಿರಲಿಲ್ಲ. ಹಾಗಾಗಿ ಇದು ಸಿನಿಮಾದ ಪ್ರಮೋಷನ್ ಗೀಳಿಗೆ ಹೂಡಲಾಗಿದ್ದ ಖತರ್ನಾಕ್ ಪ್ಲಾನು ಎಂದು ಸಿನಿರಂಗವಷ್ಟೇ ಅಲ್ಲದೆ ಸಿನಿ ಪ್ರೇಕ್ಷಕರ ಅಂಗಳದಲ್ಲಿಯೂ ಗಾಸಿಪ್ ತರ ಹರಡಿತ್ತು.

ಈ ವಿಚಾರವಾಗಿ ತಾವರೆಕೆರೆ ಪೊಲೀಸ್ ಸ್ಟೇಷನ್‍ನಲ್ಲಿ ಸಿನಿಮಾದ 6 ಜನರ ಮೇಲೆ ಕೇಸು ದಾಖಲಾಗಿದ್ದು, ಚಿತ್ರದ ನಿರ್ಮಾಪಕ ಸುಂದರ್‌ಗೌಡ ಅವರನ್ನು ಎ-1 ಆರೋಪಿಯೆಂದು ದಾಖಲಿಸಲಾಗಿತ್ತು. ಆರನೇ ಆರೋಪಿಯಗಿದ್ದ ಹೆಲಿಕಾಪ್ಟರ್ ಪೈಲಟ್‍ನನ್ನು ಸಾಕ್ಷ್ಯಾಧಾರ ಕೊರತೆಯಿಂದ ಕೇಸಿನಿಂದ ಮುಕ್ತಗೊಳಿಸಲಾಗಿದೆ.

ವಿಷ್ಯ ಏನಂದ್ರೆ, ಸಿನಿಮಾಗಳ ಪ್ರಮೋಷನ್‍ಗಾಗಿ ಡೈರೆಕ್ಟರ್ ಮತ್ತು ಪ್ರೊಡ್ಯೂಸರ್ ಏನೆಲ್ಲಾ ಗಿಮಿಕ್‍ಗಳನ್ನ ಮಾಡೋಕು ಕೇರ್ ಮಾಡಲ್ಲ ಅನ್ನೋದು ಜಗಜ್ಜಾಹೀರಾಗಿರುವ ವಿಚಾರ. ಅಂತಹದರಲ್ಲಿ ಈ ಇಬ್ಬರು ಖಳನಟರ ಸಾವೂ ಒಂದು ಗಿಮಿಕ್ ಭಾಗವೇ ಇರಬಹುದು. ಇದು ನಿಜವೇ ಆದರೆ ಅದರಲ್ಲಿ ಮೈನ್ ರೋಲ್ ಪ್ರೊಡ್ಯೂಸರ್‌ದೆ ಆಗಿರುತ್ತೆ.

ಹಾಗಾಗಿಯೇ ಎಫ್‍ಐಆರ್ ಪಟ್ಟಿಯಲ್ಲಿ ಸುಂದರ್ ಹೆಸರು ಮೊದಲಿದೆ (ಎ1 ಆರೋಪಿ). ಹೀಗಿರುವಾಗ ಈ ಎಲ್ಲರೂ ತಮ್ಮ ಮೇಲಿರುವ ಆರೋಪವನ್ನು ಕೈಬಿಟ್ಟು ದೋಷಮುಕ್ತಗೊಳಿಸಬೇಕೆಂದು ರಾಮನಗರ ಸೆಷನ್ಸ್ ಕೋರ್ಟ್‍ನಲ್ಲಿ ಅಪೀಲು ಹಾಕಿದ್ದರು. ನ್ಯಾಯಾಧೀಶ ಸಿದ್ಧಲಿಂಗಪ್ರಭು ಅವರು ಆ ಅರ್ಜಿಯನ್ನು ವಜಾಗೊಳಿಸಿದ್ದರು.

ಹೈಕೋರ್ಟ್ ಮೆಟ್ಟಿಲೇರಿದ ಸುಂದರ್‍ಗೆ ಅಲ್ಲಿಯೂ ಮಣೆ ಹಾಕಲಿಲ್ಲ. ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದೆ. ಐಪಿಸಿ ಸೆಕ್ಷನ್ 305(1) ಹಾಗೂ 308ರ ಅನ್ವಯ ಕೇಸು ಎದುರಿಸುತ್ತಿರುವ ಈ ಐವರು ಗಿಮಿಕ್ ಮಾಡಿ ಸಿನಿಮಾ ಪ್ರಮೋಟ್‍ಗಾಗಿ ಆ ಇಬ್ಬರ ಸಾವಿಗೆ ಕಾರಣರಾಗಿದ್ದಾರೋ, ಇಲ್ಲವೋ ಬೇರೆಯ ವಿಚಾರ. ಆದರೆ ಯಾವುದೇ ಮುಂಜಾಗ್ರತೆ ಇಲ್ಲದೆ ಬೇಜವಾಬ್ದಾರಿತನದಿಂದಂತೂ ಅನಿಲ್ ಮತ್ತು ಉದಯ್ ಸಾವಿಗೆ ಕಾರಣರಾಗಿದ್ದಾರೆ. ಅದಕ್ಕಾದರೂ ಅವರು ಶಿಕ್ಷೆ ಅನುಭವಿಸಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...