Homeಮುಖಪುಟವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಬಿಜೆಪಿ ಪಕ್ಷದ ರಾಜ್ಯ ಕನ್ವೀನರ್ ಐಟಿ ಮತ್ತು ಸಾಮಾಜಿಕ ಜಾಲತಾಣದ ಸಿ.ಟಿ. ನಿರ್ಮಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಐಎಡಿಎಂಕೆ ನಾಯಕರು 30 ವರ್ಷಗಳ ಕಾಲ ‘ಸೀರೆಯ’ ಹಿಂದೆ ಅಡಗಿಕೊಂಡಿದ್ದಾರೆ ಎಂದು ಹೇಳಿ, ದಿವಂಗತ ಜೆ. ಜಯಲಲಿತಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ತಮಿಳುನಾಡು ಸರ್ಕಾರವು ಕೊರೊನಾ ಹಿನ್ನಲೆಯಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡುವ ಸಾರ್ವಜನಿಕ ಆಚರಣೆಗಳು, ಮೆರವಣಿಗೆಗಳನ್ನು ನಿಷೇಧಿಸಿದೆ. ಇದು ಸಾಂಸ್ಕೃತಿಕ ಹಬ್ಬವಾಗಿರುವುದರಿಂದ ನಿಯಮಗಳನ್ನು ಸಡಿಲಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ.

ಮೇ 2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ತನಕ ತಮಿಳುನಾಡಿನ ಎಐಎಡಿಎಂಕೆ ಜೊತೆ ಸೌಹಾರ್ದಯುತ ಸಂಬಂಧವನ್ನು ಹೊಂದಲು ಬಿಜೆಪಿ ಬಯಸುತ್ತಿದೆ, ಆದರೆ ಗಣೇಶ ಚತುರ್ಥಿಗೆ ಸಂಬಂಧಿಸಿದಂತೆ ಆಡಳಿತರೂಢ AIADMK ಮತ್ತು BJP ನಡುವೆ ಟ್ವಿಟ್ಟರ್‌‌ನಲ್ಲಿ ಯುದ್ದ ನಡೆಯುತ್ತಿದೆ.

ಕೊರೊನಾ ಸಾಂಕ್ರಾಮಿಕದಿಂದಾಗಿ ಕೇಂದ್ರವು ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಸಾರವಾಗಿ ಈ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ (ಆಗಸ್ಟ್ 20) ತನ್ನ ಸ್ಪಷ್ಟನೆಯಲ್ಲಿ ಹೇಳಿದೆ. ಅಲ್ಲದೆ ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಮದ್ರಾಸ್ ಹೈಕೋರ್ಟ್ ಸಾರ್ವಜನಿಕರಿಗೆ ನಿರ್ದೇಶನ ನೀಡಿದೆ.

AIADMK ಲಾಂಛನ (PC: Money Control)

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಎಚ್.ರಾಜಾ, ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿರುವ ಕರ್ನಾಟಕದ ರಾಜ್ಯ ಸರ್ಕಾರವನ್ನು “ಗಂಡು ಸರ್ಕಾರ” ಎಂದು ಟ್ವೀಟ್ ಮಾಡುವ ಮೂಲಕ ತಮಿಳುನಾಡು ಸರ್ಕಾರವನ್ನು ಅಣಕಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಎಐಎಡಿಎಂಕೆ ಐಟಿ ವಿಭಾಗದ ಕಾರ್ಯದರ್ಶಿಗಳಾದ ರಾಜ್ ಸತ್ಯನ್ ಮತ್ತು ಕೋವಾಯ್ ಸತ್ಯನ್, “ಎಚ್. ರಾಜಾ ಕನಿಷ್ಠ ಸ್ಕೌಟ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತನ್ನ ‘ಪುರುಷತ್ವವನ್ನು’ ಸಾಬೀತುಪಡಿಸಬೇಕು” ಎಂದು ತಿರುಗೇಟು ನೀಡಿದ್ದಾರೆ.

ಎಚ್‌. ರಾಜಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ (ತಮಿಳುನಾಡು) ನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಫರ್ಧಿಸಿ ಕೇವಲ 52 ಮತ ಪಡೆದು ಸೋತಿದ್ದರು.

ಬಿಜೆಪಿ ಪಕ್ಷದ ರಾಜ್ಯ ಕನ್ವೀನರ್ ಐಟಿ ಮತ್ತು ಸಾಮಾಜಿಕ ಜಾಲತಾಣದ ಸಿ.ಟಿ. ನಿರ್ಮಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಐಎಡಿಎಂಕೆ ನಾಯಕರು 30 ವರ್ಷಗಳ ಕಾಲ ‘ಸೀರೆಯ’ ಹಿಂದೆ ಅಡಗಿಕೊಂಡಿದ್ದಾರೆ ಎಂದು ಹೇಳಿ, ದಿವಂಗತ ಜೆ. ಜಯಲಲಿತಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಈ ಟ್ವೀಟ್ ಯುದ್ದವು ಇಲ್ಲಿಗೆ ಮುಗಿಯದೆ ಎಐಎಡಿಎಂಕೆ ಅಧಿಕೃತ ಟ್ವಿಟರ್ ಹ್ಯಾಂಡಲ್ ಕೂಡಾ ಯುದ್ಧಕ್ಕೆ ಸೇರಿದ್ದು, ಚುನಾವಣೆಯಲ್ಲಿ ’ನೋಟಾ’ವನ್ನು ಸೋಲಿಸಲು ಸಾಧ್ಯವಾಗದ ಒಬ್ಬರ ಕೋಮು ಹಿತಾಸಕ್ತಿಗಳಿಗಾಗಿ ತಮಿಳುನಾಡು ಸರ್ಕಾರ ತನ್ನ ಜನರ ಜೀವನವನ್ನು ಗಿರವಿಗೆ ಇಡುವುದಿಲ್ಲ ಎಂದು ಹೇಳಿದೆ. “ಅವರು ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡಲಿ ಮತ್ತು ಕನಿಷ್ಠ ತಮ್ಮ ಠೇವಣಿಗಳನ್ನು ಉಳಿಸಲಿ. ಈ ರೀತಿಯಾಗಿ ತಮ್ಮ ಪುರುಷತ್ವವನ್ನು ಸಾಬೀತುಪಡಿಸಲಿ” ಎಂದು ಅದು ಹೇಳಿದೆ.

ಈ ಎಲ್ಲ ಕಾದಾಟಗಳ ಮಧ್ಯೆ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ ಸೆಲ್ವಂ ಸೇರಿದಂತೆ ಪಕ್ಷದ ಉನ್ನತ ಮಟ್ಟದ ಮೌನವಾಗಿದ್ದಾರೆ. 2017 ರಲ್ಲಿ ತಮಿಳು ವಾರಪತ್ರಿಕೆ ತುಘ್ಲಕ್ ಸಂಪಾದಕರಾದ ಗುರುಮೂರ್ತಿ ಇದೇ ರೀತಿಯಲ್ಲಿ ಆಪಾದನೆ ಮಾಡಿದಾಗಲೂ ಉನ್ನತ ಮಟ್ಟದ ನಾಯಕರು ಮೌನವಾಗಿದ್ದರು.

ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ (PC: New Indian Express.)

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮೀನುಗಾರಿಕೆ ಸಚಿವ ಡಿ.ಜಯಕುಮಾರ್, “ಎಐಎಡಿಎಂಕೆ ಸರ್ಕಾರ ಗಂಡಸು ಸರ್ಕಾರ. ಎಚ್. ರಾಜಾ ನಮ್ಮನ್ನು ತಪ್ಪು ದಾರಿಗೆ ತಳ್ಳಬಾರದು.” ಎಂದು ಹೇಳಿದ್ದಾರೆ. ವಿಶೇಷವೆಂದರೆ, 2017 ರಲ್ಲಿ ಪಕ್ಷದ ಉನ್ನತ ನಾಯಕರ ಪರವಾಗಿ ಗುರುಮೂರ್ತಿಯನ್ನು ಡಿ. ಜಯಕುಮಾರ್‌ ಎದುರಿಸಿದ್ದರು.

ಇಷ್ಟೆ ಅಲ್ಲದೆ ಹಿಂದೂ ಮುನ್ನನಿ ಎಂಬ ಬಲಪಂಥೀಯ ಸಂಘಟನೆಯೊಂದು ರಾಜ್ಯದ ಆದೇಶವನ್ನು ಧಿಕ್ಕರಿಸಿ ರಾಜ್ಯದಲ್ಲಿ ಸುಮಾರು 1.5 ಲಕ್ಷ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದಾಗಿ ಹೇಳಿದೆ.

ಆಗಸ್ಟ್ 18 ರಂದು ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯು ಸಾರ್ವಜನಿಕ ಸಂಭ್ರಮಾಚರಣೆಗೆ ಅನುಮತಿ ನಿಡುವಂತೆ ಹಿಂದು ಮುನ್ನನಿ ಕೋರಿತ್ತು. ನ್ಯಾಯಾಲಯವು ಅನುಮತಿಯನ್ನು ನಿರಾಕರಿಸಿದ್ದಲ್ಲದೆ, ಅರ್ಜಿಯನ್ನು ಹಿಂಪಡೆಯದಿದ್ದರೆ ಅರ್ಜಿದಾರರಿಗೆ ದಂಡ ವಿಧಿಸಲಾಗುವುದು ಎಂದು ಹೇಳಿದೆ.

ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಎಲ್ ಮುರುಗನ್ ಮತ್ತು ಇತರ ಹಿರಿಯ ಮುಖಂಡರು ಮುಖ್ಯಮಂತ್ರಿ ಪಳನಿಸ್ವಾಮಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕೆಲವು ನಿರ್ಬಂಧಗಳನ್ನು ಸರಾಗಗೊಳಿಸಿವಂತೆ ಕೇಳಿದ್ದರೂ ಅವರು ಒಪ್ಪಿಲ್ಲ.

ಹಿಂದೂ ಮುನ್ನನಿಯ ಹೇಳಿಕೆಯನ್ನು ಬೆಂಬಲಿಸಿದ ಬಿಜೆಪಿಯು “ಸಣ್ಣ ದೇವಾಲಯಗಳಲ್ಲಿ ಸಾರ್ವಜನಿಕ ಪೂಜೆಯನ್ನು ಮತ್ತು ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯವು ಅನುಮತಿ ನೀಡಿದಾಗ, ವಿನಾಯಕ ಚತುರ್ಥಿ ಆಚರಣೆಯನ್ನು ಸಾರ್ವಜನಿಕವಾಗಿ ಸರ್ಕಾರ ಏಕೆ ನಿರಾಕರಿಸುತ್ತಿದೆ. ಕೊರೊನಾ ಪ್ರಕರಣ ಮತ್ತು ಸಾವುಗಳು ಹೆಚ್ಚಿರುವ ಮಹಾರಾಷ್ಟ್ರ ಚತುರ್ಥಿ ರ್‍ಯಾಲಿಗಳಿಗೆ ಅವಕಾಶ ನೀಡಿದಾಗ, ತಮಿಳುನಾಡು ಸರ್ಕಾರವು ನಮಗೆ ಏಕೆ ಅನುಮತಿ ನೀಡಲು ಸಾಧ್ಯವಿಲ್ಲ?” ಎಂದು ಹೇಳಿದೆ.

ಆದರೆ ತಮಿಳುನಾಡು ಸರ್ಕಾರ ತಮ್ಮ ಮನೆಗಳಲ್ಲೇ ವಿನಾಯಕ ಚತುರ್ಥಿಯನ್ನು ಆಚರಿಸುವಂತೆ ರಾಜ್ಯದ ಜನತೆಯಲ್ಲಿ ವಿನಂತಿಸಿದೆ. ಕೇಂದ್ರದ ಸೂಚನೆಯಂತೆ ಧಾರ್ಮಿಕ ಹಬ್ಬಗಳು ಮತ್ತು ಸಾಮೂಹಿಕ ಪ್ರಾರ್ಥನೆಗಳನ್ನು ನಿಷೇಧಿಸಲಾಗಿದೆ ಎಂದು ಅದು ಪುನರುಚ್ಚರಿಸಿದೆ.


ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...