Homeಮುಖಪುಟವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಬಿಜೆಪಿ ಪಕ್ಷದ ರಾಜ್ಯ ಕನ್ವೀನರ್ ಐಟಿ ಮತ್ತು ಸಾಮಾಜಿಕ ಜಾಲತಾಣದ ಸಿ.ಟಿ. ನಿರ್ಮಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಐಎಡಿಎಂಕೆ ನಾಯಕರು 30 ವರ್ಷಗಳ ಕಾಲ ‘ಸೀರೆಯ’ ಹಿಂದೆ ಅಡಗಿಕೊಂಡಿದ್ದಾರೆ ಎಂದು ಹೇಳಿ, ದಿವಂಗತ ಜೆ. ಜಯಲಲಿತಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ತಮಿಳುನಾಡು ಸರ್ಕಾರವು ಕೊರೊನಾ ಹಿನ್ನಲೆಯಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡುವ ಸಾರ್ವಜನಿಕ ಆಚರಣೆಗಳು, ಮೆರವಣಿಗೆಗಳನ್ನು ನಿಷೇಧಿಸಿದೆ. ಇದು ಸಾಂಸ್ಕೃತಿಕ ಹಬ್ಬವಾಗಿರುವುದರಿಂದ ನಿಯಮಗಳನ್ನು ಸಡಿಲಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ.

ಮೇ 2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ತನಕ ತಮಿಳುನಾಡಿನ ಎಐಎಡಿಎಂಕೆ ಜೊತೆ ಸೌಹಾರ್ದಯುತ ಸಂಬಂಧವನ್ನು ಹೊಂದಲು ಬಿಜೆಪಿ ಬಯಸುತ್ತಿದೆ, ಆದರೆ ಗಣೇಶ ಚತುರ್ಥಿಗೆ ಸಂಬಂಧಿಸಿದಂತೆ ಆಡಳಿತರೂಢ AIADMK ಮತ್ತು BJP ನಡುವೆ ಟ್ವಿಟ್ಟರ್‌‌ನಲ್ಲಿ ಯುದ್ದ ನಡೆಯುತ್ತಿದೆ.

ಕೊರೊನಾ ಸಾಂಕ್ರಾಮಿಕದಿಂದಾಗಿ ಕೇಂದ್ರವು ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಸಾರವಾಗಿ ಈ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ (ಆಗಸ್ಟ್ 20) ತನ್ನ ಸ್ಪಷ್ಟನೆಯಲ್ಲಿ ಹೇಳಿದೆ. ಅಲ್ಲದೆ ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಮದ್ರಾಸ್ ಹೈಕೋರ್ಟ್ ಸಾರ್ವಜನಿಕರಿಗೆ ನಿರ್ದೇಶನ ನೀಡಿದೆ.

AIADMK ಲಾಂಛನ (PC: Money Control)

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಎಚ್.ರಾಜಾ, ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿರುವ ಕರ್ನಾಟಕದ ರಾಜ್ಯ ಸರ್ಕಾರವನ್ನು “ಗಂಡು ಸರ್ಕಾರ” ಎಂದು ಟ್ವೀಟ್ ಮಾಡುವ ಮೂಲಕ ತಮಿಳುನಾಡು ಸರ್ಕಾರವನ್ನು ಅಣಕಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಎಐಎಡಿಎಂಕೆ ಐಟಿ ವಿಭಾಗದ ಕಾರ್ಯದರ್ಶಿಗಳಾದ ರಾಜ್ ಸತ್ಯನ್ ಮತ್ತು ಕೋವಾಯ್ ಸತ್ಯನ್, “ಎಚ್. ರಾಜಾ ಕನಿಷ್ಠ ಸ್ಕೌಟ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತನ್ನ ‘ಪುರುಷತ್ವವನ್ನು’ ಸಾಬೀತುಪಡಿಸಬೇಕು” ಎಂದು ತಿರುಗೇಟು ನೀಡಿದ್ದಾರೆ.

ಎಚ್‌. ರಾಜಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ (ತಮಿಳುನಾಡು) ನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಫರ್ಧಿಸಿ ಕೇವಲ 52 ಮತ ಪಡೆದು ಸೋತಿದ್ದರು.

ಬಿಜೆಪಿ ಪಕ್ಷದ ರಾಜ್ಯ ಕನ್ವೀನರ್ ಐಟಿ ಮತ್ತು ಸಾಮಾಜಿಕ ಜಾಲತಾಣದ ಸಿ.ಟಿ. ನಿರ್ಮಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಐಎಡಿಎಂಕೆ ನಾಯಕರು 30 ವರ್ಷಗಳ ಕಾಲ ‘ಸೀರೆಯ’ ಹಿಂದೆ ಅಡಗಿಕೊಂಡಿದ್ದಾರೆ ಎಂದು ಹೇಳಿ, ದಿವಂಗತ ಜೆ. ಜಯಲಲಿತಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಈ ಟ್ವೀಟ್ ಯುದ್ದವು ಇಲ್ಲಿಗೆ ಮುಗಿಯದೆ ಎಐಎಡಿಎಂಕೆ ಅಧಿಕೃತ ಟ್ವಿಟರ್ ಹ್ಯಾಂಡಲ್ ಕೂಡಾ ಯುದ್ಧಕ್ಕೆ ಸೇರಿದ್ದು, ಚುನಾವಣೆಯಲ್ಲಿ ’ನೋಟಾ’ವನ್ನು ಸೋಲಿಸಲು ಸಾಧ್ಯವಾಗದ ಒಬ್ಬರ ಕೋಮು ಹಿತಾಸಕ್ತಿಗಳಿಗಾಗಿ ತಮಿಳುನಾಡು ಸರ್ಕಾರ ತನ್ನ ಜನರ ಜೀವನವನ್ನು ಗಿರವಿಗೆ ಇಡುವುದಿಲ್ಲ ಎಂದು ಹೇಳಿದೆ. “ಅವರು ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡಲಿ ಮತ್ತು ಕನಿಷ್ಠ ತಮ್ಮ ಠೇವಣಿಗಳನ್ನು ಉಳಿಸಲಿ. ಈ ರೀತಿಯಾಗಿ ತಮ್ಮ ಪುರುಷತ್ವವನ್ನು ಸಾಬೀತುಪಡಿಸಲಿ” ಎಂದು ಅದು ಹೇಳಿದೆ.

ಈ ಎಲ್ಲ ಕಾದಾಟಗಳ ಮಧ್ಯೆ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ ಸೆಲ್ವಂ ಸೇರಿದಂತೆ ಪಕ್ಷದ ಉನ್ನತ ಮಟ್ಟದ ಮೌನವಾಗಿದ್ದಾರೆ. 2017 ರಲ್ಲಿ ತಮಿಳು ವಾರಪತ್ರಿಕೆ ತುಘ್ಲಕ್ ಸಂಪಾದಕರಾದ ಗುರುಮೂರ್ತಿ ಇದೇ ರೀತಿಯಲ್ಲಿ ಆಪಾದನೆ ಮಾಡಿದಾಗಲೂ ಉನ್ನತ ಮಟ್ಟದ ನಾಯಕರು ಮೌನವಾಗಿದ್ದರು.

ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ (PC: New Indian Express.)

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮೀನುಗಾರಿಕೆ ಸಚಿವ ಡಿ.ಜಯಕುಮಾರ್, “ಎಐಎಡಿಎಂಕೆ ಸರ್ಕಾರ ಗಂಡಸು ಸರ್ಕಾರ. ಎಚ್. ರಾಜಾ ನಮ್ಮನ್ನು ತಪ್ಪು ದಾರಿಗೆ ತಳ್ಳಬಾರದು.” ಎಂದು ಹೇಳಿದ್ದಾರೆ. ವಿಶೇಷವೆಂದರೆ, 2017 ರಲ್ಲಿ ಪಕ್ಷದ ಉನ್ನತ ನಾಯಕರ ಪರವಾಗಿ ಗುರುಮೂರ್ತಿಯನ್ನು ಡಿ. ಜಯಕುಮಾರ್‌ ಎದುರಿಸಿದ್ದರು.

ಇಷ್ಟೆ ಅಲ್ಲದೆ ಹಿಂದೂ ಮುನ್ನನಿ ಎಂಬ ಬಲಪಂಥೀಯ ಸಂಘಟನೆಯೊಂದು ರಾಜ್ಯದ ಆದೇಶವನ್ನು ಧಿಕ್ಕರಿಸಿ ರಾಜ್ಯದಲ್ಲಿ ಸುಮಾರು 1.5 ಲಕ್ಷ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದಾಗಿ ಹೇಳಿದೆ.

ಆಗಸ್ಟ್ 18 ರಂದು ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯು ಸಾರ್ವಜನಿಕ ಸಂಭ್ರಮಾಚರಣೆಗೆ ಅನುಮತಿ ನಿಡುವಂತೆ ಹಿಂದು ಮುನ್ನನಿ ಕೋರಿತ್ತು. ನ್ಯಾಯಾಲಯವು ಅನುಮತಿಯನ್ನು ನಿರಾಕರಿಸಿದ್ದಲ್ಲದೆ, ಅರ್ಜಿಯನ್ನು ಹಿಂಪಡೆಯದಿದ್ದರೆ ಅರ್ಜಿದಾರರಿಗೆ ದಂಡ ವಿಧಿಸಲಾಗುವುದು ಎಂದು ಹೇಳಿದೆ.

ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಎಲ್ ಮುರುಗನ್ ಮತ್ತು ಇತರ ಹಿರಿಯ ಮುಖಂಡರು ಮುಖ್ಯಮಂತ್ರಿ ಪಳನಿಸ್ವಾಮಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕೆಲವು ನಿರ್ಬಂಧಗಳನ್ನು ಸರಾಗಗೊಳಿಸಿವಂತೆ ಕೇಳಿದ್ದರೂ ಅವರು ಒಪ್ಪಿಲ್ಲ.

ಹಿಂದೂ ಮುನ್ನನಿಯ ಹೇಳಿಕೆಯನ್ನು ಬೆಂಬಲಿಸಿದ ಬಿಜೆಪಿಯು “ಸಣ್ಣ ದೇವಾಲಯಗಳಲ್ಲಿ ಸಾರ್ವಜನಿಕ ಪೂಜೆಯನ್ನು ಮತ್ತು ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯವು ಅನುಮತಿ ನೀಡಿದಾಗ, ವಿನಾಯಕ ಚತುರ್ಥಿ ಆಚರಣೆಯನ್ನು ಸಾರ್ವಜನಿಕವಾಗಿ ಸರ್ಕಾರ ಏಕೆ ನಿರಾಕರಿಸುತ್ತಿದೆ. ಕೊರೊನಾ ಪ್ರಕರಣ ಮತ್ತು ಸಾವುಗಳು ಹೆಚ್ಚಿರುವ ಮಹಾರಾಷ್ಟ್ರ ಚತುರ್ಥಿ ರ್‍ಯಾಲಿಗಳಿಗೆ ಅವಕಾಶ ನೀಡಿದಾಗ, ತಮಿಳುನಾಡು ಸರ್ಕಾರವು ನಮಗೆ ಏಕೆ ಅನುಮತಿ ನೀಡಲು ಸಾಧ್ಯವಿಲ್ಲ?” ಎಂದು ಹೇಳಿದೆ.

ಆದರೆ ತಮಿಳುನಾಡು ಸರ್ಕಾರ ತಮ್ಮ ಮನೆಗಳಲ್ಲೇ ವಿನಾಯಕ ಚತುರ್ಥಿಯನ್ನು ಆಚರಿಸುವಂತೆ ರಾಜ್ಯದ ಜನತೆಯಲ್ಲಿ ವಿನಂತಿಸಿದೆ. ಕೇಂದ್ರದ ಸೂಚನೆಯಂತೆ ಧಾರ್ಮಿಕ ಹಬ್ಬಗಳು ಮತ್ತು ಸಾಮೂಹಿಕ ಪ್ರಾರ್ಥನೆಗಳನ್ನು ನಿಷೇಧಿಸಲಾಗಿದೆ ಎಂದು ಅದು ಪುನರುಚ್ಚರಿಸಿದೆ.


ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...