Homeಮುಖಪುಟವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಬಿಜೆಪಿ ಪಕ್ಷದ ರಾಜ್ಯ ಕನ್ವೀನರ್ ಐಟಿ ಮತ್ತು ಸಾಮಾಜಿಕ ಜಾಲತಾಣದ ಸಿ.ಟಿ. ನಿರ್ಮಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಐಎಡಿಎಂಕೆ ನಾಯಕರು 30 ವರ್ಷಗಳ ಕಾಲ ‘ಸೀರೆಯ’ ಹಿಂದೆ ಅಡಗಿಕೊಂಡಿದ್ದಾರೆ ಎಂದು ಹೇಳಿ, ದಿವಂಗತ ಜೆ. ಜಯಲಲಿತಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ತಮಿಳುನಾಡು ಸರ್ಕಾರವು ಕೊರೊನಾ ಹಿನ್ನಲೆಯಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡುವ ಸಾರ್ವಜನಿಕ ಆಚರಣೆಗಳು, ಮೆರವಣಿಗೆಗಳನ್ನು ನಿಷೇಧಿಸಿದೆ. ಇದು ಸಾಂಸ್ಕೃತಿಕ ಹಬ್ಬವಾಗಿರುವುದರಿಂದ ನಿಯಮಗಳನ್ನು ಸಡಿಲಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ.

ಮೇ 2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ತನಕ ತಮಿಳುನಾಡಿನ ಎಐಎಡಿಎಂಕೆ ಜೊತೆ ಸೌಹಾರ್ದಯುತ ಸಂಬಂಧವನ್ನು ಹೊಂದಲು ಬಿಜೆಪಿ ಬಯಸುತ್ತಿದೆ, ಆದರೆ ಗಣೇಶ ಚತುರ್ಥಿಗೆ ಸಂಬಂಧಿಸಿದಂತೆ ಆಡಳಿತರೂಢ AIADMK ಮತ್ತು BJP ನಡುವೆ ಟ್ವಿಟ್ಟರ್‌‌ನಲ್ಲಿ ಯುದ್ದ ನಡೆಯುತ್ತಿದೆ.

ಕೊರೊನಾ ಸಾಂಕ್ರಾಮಿಕದಿಂದಾಗಿ ಕೇಂದ್ರವು ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಸಾರವಾಗಿ ಈ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ (ಆಗಸ್ಟ್ 20) ತನ್ನ ಸ್ಪಷ್ಟನೆಯಲ್ಲಿ ಹೇಳಿದೆ. ಅಲ್ಲದೆ ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಮದ್ರಾಸ್ ಹೈಕೋರ್ಟ್ ಸಾರ್ವಜನಿಕರಿಗೆ ನಿರ್ದೇಶನ ನೀಡಿದೆ.

AIADMK ಲಾಂಛನ (PC: Money Control)

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಎಚ್.ರಾಜಾ, ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿರುವ ಕರ್ನಾಟಕದ ರಾಜ್ಯ ಸರ್ಕಾರವನ್ನು “ಗಂಡು ಸರ್ಕಾರ” ಎಂದು ಟ್ವೀಟ್ ಮಾಡುವ ಮೂಲಕ ತಮಿಳುನಾಡು ಸರ್ಕಾರವನ್ನು ಅಣಕಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಎಐಎಡಿಎಂಕೆ ಐಟಿ ವಿಭಾಗದ ಕಾರ್ಯದರ್ಶಿಗಳಾದ ರಾಜ್ ಸತ್ಯನ್ ಮತ್ತು ಕೋವಾಯ್ ಸತ್ಯನ್, “ಎಚ್. ರಾಜಾ ಕನಿಷ್ಠ ಸ್ಕೌಟ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತನ್ನ ‘ಪುರುಷತ್ವವನ್ನು’ ಸಾಬೀತುಪಡಿಸಬೇಕು” ಎಂದು ತಿರುಗೇಟು ನೀಡಿದ್ದಾರೆ.

ಎಚ್‌. ರಾಜಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ (ತಮಿಳುನಾಡು) ನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಫರ್ಧಿಸಿ ಕೇವಲ 52 ಮತ ಪಡೆದು ಸೋತಿದ್ದರು.

ಬಿಜೆಪಿ ಪಕ್ಷದ ರಾಜ್ಯ ಕನ್ವೀನರ್ ಐಟಿ ಮತ್ತು ಸಾಮಾಜಿಕ ಜಾಲತಾಣದ ಸಿ.ಟಿ. ನಿರ್ಮಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಐಎಡಿಎಂಕೆ ನಾಯಕರು 30 ವರ್ಷಗಳ ಕಾಲ ‘ಸೀರೆಯ’ ಹಿಂದೆ ಅಡಗಿಕೊಂಡಿದ್ದಾರೆ ಎಂದು ಹೇಳಿ, ದಿವಂಗತ ಜೆ. ಜಯಲಲಿತಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಈ ಟ್ವೀಟ್ ಯುದ್ದವು ಇಲ್ಲಿಗೆ ಮುಗಿಯದೆ ಎಐಎಡಿಎಂಕೆ ಅಧಿಕೃತ ಟ್ವಿಟರ್ ಹ್ಯಾಂಡಲ್ ಕೂಡಾ ಯುದ್ಧಕ್ಕೆ ಸೇರಿದ್ದು, ಚುನಾವಣೆಯಲ್ಲಿ ’ನೋಟಾ’ವನ್ನು ಸೋಲಿಸಲು ಸಾಧ್ಯವಾಗದ ಒಬ್ಬರ ಕೋಮು ಹಿತಾಸಕ್ತಿಗಳಿಗಾಗಿ ತಮಿಳುನಾಡು ಸರ್ಕಾರ ತನ್ನ ಜನರ ಜೀವನವನ್ನು ಗಿರವಿಗೆ ಇಡುವುದಿಲ್ಲ ಎಂದು ಹೇಳಿದೆ. “ಅವರು ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡಲಿ ಮತ್ತು ಕನಿಷ್ಠ ತಮ್ಮ ಠೇವಣಿಗಳನ್ನು ಉಳಿಸಲಿ. ಈ ರೀತಿಯಾಗಿ ತಮ್ಮ ಪುರುಷತ್ವವನ್ನು ಸಾಬೀತುಪಡಿಸಲಿ” ಎಂದು ಅದು ಹೇಳಿದೆ.

ಈ ಎಲ್ಲ ಕಾದಾಟಗಳ ಮಧ್ಯೆ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ ಸೆಲ್ವಂ ಸೇರಿದಂತೆ ಪಕ್ಷದ ಉನ್ನತ ಮಟ್ಟದ ಮೌನವಾಗಿದ್ದಾರೆ. 2017 ರಲ್ಲಿ ತಮಿಳು ವಾರಪತ್ರಿಕೆ ತುಘ್ಲಕ್ ಸಂಪಾದಕರಾದ ಗುರುಮೂರ್ತಿ ಇದೇ ರೀತಿಯಲ್ಲಿ ಆಪಾದನೆ ಮಾಡಿದಾಗಲೂ ಉನ್ನತ ಮಟ್ಟದ ನಾಯಕರು ಮೌನವಾಗಿದ್ದರು.

ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ (PC: New Indian Express.)

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮೀನುಗಾರಿಕೆ ಸಚಿವ ಡಿ.ಜಯಕುಮಾರ್, “ಎಐಎಡಿಎಂಕೆ ಸರ್ಕಾರ ಗಂಡಸು ಸರ್ಕಾರ. ಎಚ್. ರಾಜಾ ನಮ್ಮನ್ನು ತಪ್ಪು ದಾರಿಗೆ ತಳ್ಳಬಾರದು.” ಎಂದು ಹೇಳಿದ್ದಾರೆ. ವಿಶೇಷವೆಂದರೆ, 2017 ರಲ್ಲಿ ಪಕ್ಷದ ಉನ್ನತ ನಾಯಕರ ಪರವಾಗಿ ಗುರುಮೂರ್ತಿಯನ್ನು ಡಿ. ಜಯಕುಮಾರ್‌ ಎದುರಿಸಿದ್ದರು.

ಇಷ್ಟೆ ಅಲ್ಲದೆ ಹಿಂದೂ ಮುನ್ನನಿ ಎಂಬ ಬಲಪಂಥೀಯ ಸಂಘಟನೆಯೊಂದು ರಾಜ್ಯದ ಆದೇಶವನ್ನು ಧಿಕ್ಕರಿಸಿ ರಾಜ್ಯದಲ್ಲಿ ಸುಮಾರು 1.5 ಲಕ್ಷ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದಾಗಿ ಹೇಳಿದೆ.

ಆಗಸ್ಟ್ 18 ರಂದು ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯು ಸಾರ್ವಜನಿಕ ಸಂಭ್ರಮಾಚರಣೆಗೆ ಅನುಮತಿ ನಿಡುವಂತೆ ಹಿಂದು ಮುನ್ನನಿ ಕೋರಿತ್ತು. ನ್ಯಾಯಾಲಯವು ಅನುಮತಿಯನ್ನು ನಿರಾಕರಿಸಿದ್ದಲ್ಲದೆ, ಅರ್ಜಿಯನ್ನು ಹಿಂಪಡೆಯದಿದ್ದರೆ ಅರ್ಜಿದಾರರಿಗೆ ದಂಡ ವಿಧಿಸಲಾಗುವುದು ಎಂದು ಹೇಳಿದೆ.

ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಎಲ್ ಮುರುಗನ್ ಮತ್ತು ಇತರ ಹಿರಿಯ ಮುಖಂಡರು ಮುಖ್ಯಮಂತ್ರಿ ಪಳನಿಸ್ವಾಮಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕೆಲವು ನಿರ್ಬಂಧಗಳನ್ನು ಸರಾಗಗೊಳಿಸಿವಂತೆ ಕೇಳಿದ್ದರೂ ಅವರು ಒಪ್ಪಿಲ್ಲ.

ಹಿಂದೂ ಮುನ್ನನಿಯ ಹೇಳಿಕೆಯನ್ನು ಬೆಂಬಲಿಸಿದ ಬಿಜೆಪಿಯು “ಸಣ್ಣ ದೇವಾಲಯಗಳಲ್ಲಿ ಸಾರ್ವಜನಿಕ ಪೂಜೆಯನ್ನು ಮತ್ತು ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯವು ಅನುಮತಿ ನೀಡಿದಾಗ, ವಿನಾಯಕ ಚತುರ್ಥಿ ಆಚರಣೆಯನ್ನು ಸಾರ್ವಜನಿಕವಾಗಿ ಸರ್ಕಾರ ಏಕೆ ನಿರಾಕರಿಸುತ್ತಿದೆ. ಕೊರೊನಾ ಪ್ರಕರಣ ಮತ್ತು ಸಾವುಗಳು ಹೆಚ್ಚಿರುವ ಮಹಾರಾಷ್ಟ್ರ ಚತುರ್ಥಿ ರ್‍ಯಾಲಿಗಳಿಗೆ ಅವಕಾಶ ನೀಡಿದಾಗ, ತಮಿಳುನಾಡು ಸರ್ಕಾರವು ನಮಗೆ ಏಕೆ ಅನುಮತಿ ನೀಡಲು ಸಾಧ್ಯವಿಲ್ಲ?” ಎಂದು ಹೇಳಿದೆ.

ಆದರೆ ತಮಿಳುನಾಡು ಸರ್ಕಾರ ತಮ್ಮ ಮನೆಗಳಲ್ಲೇ ವಿನಾಯಕ ಚತುರ್ಥಿಯನ್ನು ಆಚರಿಸುವಂತೆ ರಾಜ್ಯದ ಜನತೆಯಲ್ಲಿ ವಿನಂತಿಸಿದೆ. ಕೇಂದ್ರದ ಸೂಚನೆಯಂತೆ ಧಾರ್ಮಿಕ ಹಬ್ಬಗಳು ಮತ್ತು ಸಾಮೂಹಿಕ ಪ್ರಾರ್ಥನೆಗಳನ್ನು ನಿಷೇಧಿಸಲಾಗಿದೆ ಎಂದು ಅದು ಪುನರುಚ್ಚರಿಸಿದೆ.


ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...