Homeಮುಖಪುಟವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಬಿಜೆಪಿ ಪಕ್ಷದ ರಾಜ್ಯ ಕನ್ವೀನರ್ ಐಟಿ ಮತ್ತು ಸಾಮಾಜಿಕ ಜಾಲತಾಣದ ಸಿ.ಟಿ. ನಿರ್ಮಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಐಎಡಿಎಂಕೆ ನಾಯಕರು 30 ವರ್ಷಗಳ ಕಾಲ ‘ಸೀರೆಯ’ ಹಿಂದೆ ಅಡಗಿಕೊಂಡಿದ್ದಾರೆ ಎಂದು ಹೇಳಿ, ದಿವಂಗತ ಜೆ. ಜಯಲಲಿತಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ತಮಿಳುನಾಡು ಸರ್ಕಾರವು ಕೊರೊನಾ ಹಿನ್ನಲೆಯಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮಾಡುವ ಸಾರ್ವಜನಿಕ ಆಚರಣೆಗಳು, ಮೆರವಣಿಗೆಗಳನ್ನು ನಿಷೇಧಿಸಿದೆ. ಇದು ಸಾಂಸ್ಕೃತಿಕ ಹಬ್ಬವಾಗಿರುವುದರಿಂದ ನಿಯಮಗಳನ್ನು ಸಡಿಲಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ.

ಮೇ 2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ತನಕ ತಮಿಳುನಾಡಿನ ಎಐಎಡಿಎಂಕೆ ಜೊತೆ ಸೌಹಾರ್ದಯುತ ಸಂಬಂಧವನ್ನು ಹೊಂದಲು ಬಿಜೆಪಿ ಬಯಸುತ್ತಿದೆ, ಆದರೆ ಗಣೇಶ ಚತುರ್ಥಿಗೆ ಸಂಬಂಧಿಸಿದಂತೆ ಆಡಳಿತರೂಢ AIADMK ಮತ್ತು BJP ನಡುವೆ ಟ್ವಿಟ್ಟರ್‌‌ನಲ್ಲಿ ಯುದ್ದ ನಡೆಯುತ್ತಿದೆ.

ಕೊರೊನಾ ಸಾಂಕ್ರಾಮಿಕದಿಂದಾಗಿ ಕೇಂದ್ರವು ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಸಾರವಾಗಿ ಈ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ (ಆಗಸ್ಟ್ 20) ತನ್ನ ಸ್ಪಷ್ಟನೆಯಲ್ಲಿ ಹೇಳಿದೆ. ಅಲ್ಲದೆ ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಮದ್ರಾಸ್ ಹೈಕೋರ್ಟ್ ಸಾರ್ವಜನಿಕರಿಗೆ ನಿರ್ದೇಶನ ನೀಡಿದೆ.

AIADMK ಲಾಂಛನ (PC: Money Control)

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಎಚ್.ರಾಜಾ, ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿರುವ ಕರ್ನಾಟಕದ ರಾಜ್ಯ ಸರ್ಕಾರವನ್ನು “ಗಂಡು ಸರ್ಕಾರ” ಎಂದು ಟ್ವೀಟ್ ಮಾಡುವ ಮೂಲಕ ತಮಿಳುನಾಡು ಸರ್ಕಾರವನ್ನು ಅಣಕಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಎಐಎಡಿಎಂಕೆ ಐಟಿ ವಿಭಾಗದ ಕಾರ್ಯದರ್ಶಿಗಳಾದ ರಾಜ್ ಸತ್ಯನ್ ಮತ್ತು ಕೋವಾಯ್ ಸತ್ಯನ್, “ಎಚ್. ರಾಜಾ ಕನಿಷ್ಠ ಸ್ಕೌಟ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತನ್ನ ‘ಪುರುಷತ್ವವನ್ನು’ ಸಾಬೀತುಪಡಿಸಬೇಕು” ಎಂದು ತಿರುಗೇಟು ನೀಡಿದ್ದಾರೆ.

ಎಚ್‌. ರಾಜಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ (ತಮಿಳುನಾಡು) ನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಫರ್ಧಿಸಿ ಕೇವಲ 52 ಮತ ಪಡೆದು ಸೋತಿದ್ದರು.

ಬಿಜೆಪಿ ಪಕ್ಷದ ರಾಜ್ಯ ಕನ್ವೀನರ್ ಐಟಿ ಮತ್ತು ಸಾಮಾಜಿಕ ಜಾಲತಾಣದ ಸಿ.ಟಿ. ನಿರ್ಮಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಐಎಡಿಎಂಕೆ ನಾಯಕರು 30 ವರ್ಷಗಳ ಕಾಲ ‘ಸೀರೆಯ’ ಹಿಂದೆ ಅಡಗಿಕೊಂಡಿದ್ದಾರೆ ಎಂದು ಹೇಳಿ, ದಿವಂಗತ ಜೆ. ಜಯಲಲಿತಾ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಈ ಟ್ವೀಟ್ ಯುದ್ದವು ಇಲ್ಲಿಗೆ ಮುಗಿಯದೆ ಎಐಎಡಿಎಂಕೆ ಅಧಿಕೃತ ಟ್ವಿಟರ್ ಹ್ಯಾಂಡಲ್ ಕೂಡಾ ಯುದ್ಧಕ್ಕೆ ಸೇರಿದ್ದು, ಚುನಾವಣೆಯಲ್ಲಿ ’ನೋಟಾ’ವನ್ನು ಸೋಲಿಸಲು ಸಾಧ್ಯವಾಗದ ಒಬ್ಬರ ಕೋಮು ಹಿತಾಸಕ್ತಿಗಳಿಗಾಗಿ ತಮಿಳುನಾಡು ಸರ್ಕಾರ ತನ್ನ ಜನರ ಜೀವನವನ್ನು ಗಿರವಿಗೆ ಇಡುವುದಿಲ್ಲ ಎಂದು ಹೇಳಿದೆ. “ಅವರು ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡಲಿ ಮತ್ತು ಕನಿಷ್ಠ ತಮ್ಮ ಠೇವಣಿಗಳನ್ನು ಉಳಿಸಲಿ. ಈ ರೀತಿಯಾಗಿ ತಮ್ಮ ಪುರುಷತ್ವವನ್ನು ಸಾಬೀತುಪಡಿಸಲಿ” ಎಂದು ಅದು ಹೇಳಿದೆ.

ಈ ಎಲ್ಲ ಕಾದಾಟಗಳ ಮಧ್ಯೆ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ ಸೆಲ್ವಂ ಸೇರಿದಂತೆ ಪಕ್ಷದ ಉನ್ನತ ಮಟ್ಟದ ಮೌನವಾಗಿದ್ದಾರೆ. 2017 ರಲ್ಲಿ ತಮಿಳು ವಾರಪತ್ರಿಕೆ ತುಘ್ಲಕ್ ಸಂಪಾದಕರಾದ ಗುರುಮೂರ್ತಿ ಇದೇ ರೀತಿಯಲ್ಲಿ ಆಪಾದನೆ ಮಾಡಿದಾಗಲೂ ಉನ್ನತ ಮಟ್ಟದ ನಾಯಕರು ಮೌನವಾಗಿದ್ದರು.

ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ (PC: New Indian Express.)

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮೀನುಗಾರಿಕೆ ಸಚಿವ ಡಿ.ಜಯಕುಮಾರ್, “ಎಐಎಡಿಎಂಕೆ ಸರ್ಕಾರ ಗಂಡಸು ಸರ್ಕಾರ. ಎಚ್. ರಾಜಾ ನಮ್ಮನ್ನು ತಪ್ಪು ದಾರಿಗೆ ತಳ್ಳಬಾರದು.” ಎಂದು ಹೇಳಿದ್ದಾರೆ. ವಿಶೇಷವೆಂದರೆ, 2017 ರಲ್ಲಿ ಪಕ್ಷದ ಉನ್ನತ ನಾಯಕರ ಪರವಾಗಿ ಗುರುಮೂರ್ತಿಯನ್ನು ಡಿ. ಜಯಕುಮಾರ್‌ ಎದುರಿಸಿದ್ದರು.

ಇಷ್ಟೆ ಅಲ್ಲದೆ ಹಿಂದೂ ಮುನ್ನನಿ ಎಂಬ ಬಲಪಂಥೀಯ ಸಂಘಟನೆಯೊಂದು ರಾಜ್ಯದ ಆದೇಶವನ್ನು ಧಿಕ್ಕರಿಸಿ ರಾಜ್ಯದಲ್ಲಿ ಸುಮಾರು 1.5 ಲಕ್ಷ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವುದಾಗಿ ಹೇಳಿದೆ.

ಆಗಸ್ಟ್ 18 ರಂದು ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯು ಸಾರ್ವಜನಿಕ ಸಂಭ್ರಮಾಚರಣೆಗೆ ಅನುಮತಿ ನಿಡುವಂತೆ ಹಿಂದು ಮುನ್ನನಿ ಕೋರಿತ್ತು. ನ್ಯಾಯಾಲಯವು ಅನುಮತಿಯನ್ನು ನಿರಾಕರಿಸಿದ್ದಲ್ಲದೆ, ಅರ್ಜಿಯನ್ನು ಹಿಂಪಡೆಯದಿದ್ದರೆ ಅರ್ಜಿದಾರರಿಗೆ ದಂಡ ವಿಧಿಸಲಾಗುವುದು ಎಂದು ಹೇಳಿದೆ.

ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಎಲ್ ಮುರುಗನ್ ಮತ್ತು ಇತರ ಹಿರಿಯ ಮುಖಂಡರು ಮುಖ್ಯಮಂತ್ರಿ ಪಳನಿಸ್ವಾಮಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕೆಲವು ನಿರ್ಬಂಧಗಳನ್ನು ಸರಾಗಗೊಳಿಸಿವಂತೆ ಕೇಳಿದ್ದರೂ ಅವರು ಒಪ್ಪಿಲ್ಲ.

ಹಿಂದೂ ಮುನ್ನನಿಯ ಹೇಳಿಕೆಯನ್ನು ಬೆಂಬಲಿಸಿದ ಬಿಜೆಪಿಯು “ಸಣ್ಣ ದೇವಾಲಯಗಳಲ್ಲಿ ಸಾರ್ವಜನಿಕ ಪೂಜೆಯನ್ನು ಮತ್ತು ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯವು ಅನುಮತಿ ನೀಡಿದಾಗ, ವಿನಾಯಕ ಚತುರ್ಥಿ ಆಚರಣೆಯನ್ನು ಸಾರ್ವಜನಿಕವಾಗಿ ಸರ್ಕಾರ ಏಕೆ ನಿರಾಕರಿಸುತ್ತಿದೆ. ಕೊರೊನಾ ಪ್ರಕರಣ ಮತ್ತು ಸಾವುಗಳು ಹೆಚ್ಚಿರುವ ಮಹಾರಾಷ್ಟ್ರ ಚತುರ್ಥಿ ರ್‍ಯಾಲಿಗಳಿಗೆ ಅವಕಾಶ ನೀಡಿದಾಗ, ತಮಿಳುನಾಡು ಸರ್ಕಾರವು ನಮಗೆ ಏಕೆ ಅನುಮತಿ ನೀಡಲು ಸಾಧ್ಯವಿಲ್ಲ?” ಎಂದು ಹೇಳಿದೆ.

ಆದರೆ ತಮಿಳುನಾಡು ಸರ್ಕಾರ ತಮ್ಮ ಮನೆಗಳಲ್ಲೇ ವಿನಾಯಕ ಚತುರ್ಥಿಯನ್ನು ಆಚರಿಸುವಂತೆ ರಾಜ್ಯದ ಜನತೆಯಲ್ಲಿ ವಿನಂತಿಸಿದೆ. ಕೇಂದ್ರದ ಸೂಚನೆಯಂತೆ ಧಾರ್ಮಿಕ ಹಬ್ಬಗಳು ಮತ್ತು ಸಾಮೂಹಿಕ ಪ್ರಾರ್ಥನೆಗಳನ್ನು ನಿಷೇಧಿಸಲಾಗಿದೆ ಎಂದು ಅದು ಪುನರುಚ್ಚರಿಸಿದೆ.


ಓದಿ: ’ಥೂ… ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ’; ಸಚಿವ ಸುಧಾಕರ್‌ಗೆ ಮಹಿಳಾ ವೈದ್ಯೆ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....