HomeಮುಖಪುಟVinesh Phogat | ಹರಿಯಾಣ ಫಲಿತಾಂಶ | ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಪೋಗಟ್ ಜಯಭೇರಿ

Vinesh Phogat | ಹರಿಯಾಣ ಫಲಿತಾಂಶ | ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಪೋಗಟ್ ಜಯಭೇರಿ

- Advertisement -
- Advertisement -

ಖ್ಯಾತ ಕುಸ್ತಿಪಟು, ಹರಿಯಾಣ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಪೋಗಟ್ (Vinesh Phogat) ಅವರು ಜುಲಾನ ವಿಧಾನಸಭಾ ಕ್ಷೇತ್ರದಲ್ಲಿ ಜಯಶಾಲಿಯಾಗಿದ್ದಾರೆ. ತಮ್ಮ ನೇರ ಪ್ರತಿಸ್ಪರ್ಧಿ ಜೆಜೆಪಿಯ ಅಮರ್‌ಜಿತ್ ಧಂಡಾ ಅವರ ವಿರುದ್ಧ ವಿನೇಶ್‌ ಅವರು ಸುಮಾರು 5 ಸಾವಿರಕ್ಕೂ ಹೆಚ್ಚಿನ ಮತಗಳಿಂದ ಅವರು ಜಯಭೇರಿ ಭಾರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭಾರತೀಯ ಮಹಿಳಾ ಕುಸ್ತಿಪಟುಗಳ ವಿರುದ್ಧ ಲೈಂಗಿಕ ದೌರ್ಜನ್ಯ ನಡೆದಿದ್ದ ಬಿಜೆಪಿಯ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ವಿನೇಶ್ ಅವರು ಕಳೆದ ಒಲಿಂಪಿಕ್ಸ್ ನಂತರ ಕಾಂಗ್ರೆಸ್ ಸೇರಿದ್ದರು. 2019 ರ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ, JJP ಯ ಅಮರಜೀತ್ ಧಂಡಾ ಈ ಕ್ಷೇತ್ರದಲ್ಲಿ ಬಿಜೆಪಿಯ ಪರ್ಮಿಂದರ್ ಸಿಂಗ್ ಧುಲ್ ಅವರನ್ನು 24,193 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಈ ಕ್ಷೇತ್ರವನ್ನು ವಿನೇಶ್ ಅವರು ವಶಕ್ಕೆ ಪಡೆದುಕೊಂಡಿದ್ದಾರೆ.Vinesh Phogat

90 ಕ್ಷೇತ್ರಗಳಿರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಘಾತವುಂಟಾಗಿದ್ದು, ಆಡಳಿತರೂಢ ಬಿಜೆಪಿ ಸ್ಪಷ್ಟ ಬಹುಮತದತ್ತ ಮುನ್ನಡೆ ಕಾಯ್ದುಕೊಂಡಿದೆ. ರಾಜ್ಯದಲ್ಲಿ ಅಕ್ಟೋಬರ್ 5ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು.Haryana Assembly Elections

ಹರಿಯಾಣದಲ್ಲಿ ಈ ವರೆಗಿನ ಟ್ರೆಂಡ್‌ನಂತೆ ಬಿಜೆಪಿ 51 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ 34 ಕ್ಷೇತ್ರದಗಳಲ್ಲಿ ಮುನ್ನಡೆಯಲ್ಲಿದೆ. ಅಲ್ಲದೆ, ಪಕ್ಷೇತರರು 3 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದರೆ, ಐಎನ್‌ಎಲ್‌ಡಿ ಮತ್ತು ಬಿಎಸ್‌ಪಿ ಕ್ರಮವಾಗಿ ಒಂದೊಂದು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಬಿಜೆಪಿ              51
ಕಾಂಗ್ರೆಸ್         34
ಪಕ್ಷೇತರ          03
ಐಎನ್‌ಎಲ್‌ಡಿ 01
ಬಿಎಸ್‌ಪಿ         01

ಇದನ್ನೂಓದಿ: FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಲ್ಲಿ 17 ಕ್ಷೇತ್ರಗಳು ಪರಿಶಿಷ್ಟ ಜಾತಿ ಸಮುದಾಯಕ್ಕೆ ಮೀಸಲಾಗಿದ್ದು, ಪ್ರಸ್ತುತ ವಿಧಾನಸಭೆಯ ಅಧಿಕಾರಾವಧಿಯು ನವೆಂಬರ್ 3, 2024 ರಂದು ಕೊನೆಗೊಳ್ಳುತ್ತದೆ.Haryana Assembly Elections

ರಾಜ್ಯದಲ್ಲಿ ಬಿಜೆಪಿ 2014 ಮತ್ತು 2019 ರಲ್ಲಿ ಸತತ ಚುನಾವಣೆಗಳನ್ನು ಗೆದ್ದು, ಎರಡೂ ಸಂದರ್ಭಗಳಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ರಾಜ್ಯ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಒಟ್ಟು 2.04 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದರು.

ಪ್ರಮುಖ ಚುನಾವಣಾ ವಿಷಯಗಳು ಅಗ್ನಿಪಥ್ ಯೋಜನೆ, ಎಂಎಸ್‌ಪಿಗೆ ಕಾನೂನು ಖಾತರಿಗಾಗಿ ಒತ್ತಾಯಿಸಿ ರೈತರ ಪ್ರತಿಭಟನೆ ಮತ್ತು ರಾಜ್ಯದ ಕುಸ್ತಿಪಟುಗಳಿಂದ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಬಿಜೆಪಿ ವಿರುದ್ಧ ಹೊರಿಸಲಾಗಿತ್ತು. ಆದರೆ ಇವೆಲ್ಲವನ್ನು ರಾಜ್ಯದ ಜನತೆ ಪರಿಗಣಿಸದೆ, ಜಾತಿ ಸಂಯೋಜನೆಯೆ ಚುನಾವಣೆಯ ಪ್ರಮುಖ ವಿಷಯ ಎಂಬುವುದು ಫಲಿತಾಂಶದಲ್ಲಿ ತಿಳಿದುಬಂದಿದೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...