Homeಮುಖಪುಟದೆಹಲಿ: ಅರ್ಜುನ, ಖೇಲ್ ರತ್ನ ಪ್ರಶಸ್ತಿಗಳನ್ನು ಕರ್ತವ್ಯ ಪಥದಲ್ಲಿಟ್ಟು ತೆರಳಿದ ಕುಸ್ತಿಪಟು ವಿನೇಶ್ ಫೋಗಟ್!

ದೆಹಲಿ: ಅರ್ಜುನ, ಖೇಲ್ ರತ್ನ ಪ್ರಶಸ್ತಿಗಳನ್ನು ಕರ್ತವ್ಯ ಪಥದಲ್ಲಿಟ್ಟು ತೆರಳಿದ ಕುಸ್ತಿಪಟು ವಿನೇಶ್ ಫೋಗಟ್!

- Advertisement -
- Advertisement -

ಭಾರತೀಯ ಕುಸ್ತಿ ಫೇಡರೇಶನ್‌ (ಡಬ್ಲ್ಯುಎಫ್‌ಐ)ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಭಾಗವಾಗಿ ಕುಸ್ತಿಪಟು ವಿನೇಶ್ ಫೋಗಟ್ ತಮ್ಮ ಅರ್ಜುನ ಮತ್ತು ಖೇಲ್ ರತ್ನ ಪ್ರಶಸ್ತಿ ಹಿಂದಿರುಗಿಸಿದ್ದಾರೆ.

ಏಷ್ಯನ್ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ ಗೇಮ್ಸ್‌ನ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್‌ ಇಂದು (ಡಿ.30)ತಮ್ಮ ಅತ್ಯುನ್ನತ ಪ್ರಶಸ್ತಿಗಳನ್ನು ನವದೆಹಲಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿಟ್ಟು ತೆರಳಿದ್ದಾರೆ.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾವನಾತ್ಮಕ ಪತ್ರ ಬರೆದಿದ್ದ ವಿನೇಶ್ ಫೋಗಟ್, ಪ್ರಶಸ್ತಿ ಹಿಂದಿರುಗಿಸುವುದಾಗಿ ಹೇಳಿದ್ದರು. ಅದರಂತೆ ಇಂದು ಪ್ರಶಸ್ತಿ ಮರಳಿಸಿದ್ದಾರೆ.

ವಿನೇಶ್ ಫೋಗಟ್ ತಮ್ಮ ಪ್ರಶಸ್ತಿಗಳನ್ನು ನವದೆಹಲಿಯ ಪ್ರಧಾನ ಮಂತ್ರಿ ಕಚೇರಿಯ ಹೊರಗೆ ಇಡಲು ಮುಂದಾಗಿದ್ದರು. ಆದರೆ, ಕರ್ತವ್ಯ ಪಥದಲ್ಲಿ ಪೊಲೀಸರು ಅವರನ್ನು ತಡೆದರು. ಹಾಗಾಗಿ, ವಿನೇಶ್ ತನ್ನ ಪ್ರಶಸ್ತಿಗಳನ್ನು ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲೇ ಬಿಟ್ಟು ತೆರಳಿದ್ದಾರೆ.

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ವಿರುದ್ದ ಕ್ರಮಕೈಗೊಳ್ಳದ ಹಿನ್ನೆಲೆ ಮತ್ತು ಬ್ರಿಜ್ ಭೂಷಣ್ ಆಪ್ತ ಕುಸ್ತಿ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವುದಕ್ಕೆ ಬೇಸಗೊಂಡು ದೇಶದ ಖ್ಯಾತ ಕುಸ್ತಿಟುಗಳು ತಮ್ಮ ಉನ್ನತ ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದಾರೆ.

ಡಿಸೆಂಬರ್ 21ರಂದು ಭಾರತೀಯ ಕುಸ್ತಿ ಫೆಡರೇಶನ್‌(ಡಬ್ಲ್ಯುಎಫ್‌ಐ)ಗೆ ನಡೆದ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್‌ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಒಲಿಂಪಿಕ್ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲಿಕ್ ತಮ್ಮ ಬೂಟು ಕಳಚಿಟ್ಟು ಕುಸ್ತಿಗೆ ವಿದಾಯ ಹೇಳಿದ್ದರು.

ಸಾಕ್ಷಿ ಮಲಿಕ್‌ ಬೆಂಬಲಿಸಿದ್ದ ಮತ್ತೋರ್ವ ಕುಸ್ತಿಪಟು ಬಜರಂಗ್ ಪೂನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ದೆಹಲಿಯ ಕರ್ತವ್ಯ ಪಥದಲ್ಲಿ ಇಟ್ಟು ಪ್ರಧಾನಿಗೆ ತಲುಪಿಸುವಂತೆ ಹೇಳಿ ಹೊರಟು ಹೋಗಿದ್ದರು. ಇದರ ಬೆನ್ನಲ್ಲೇ ಕುಸ್ತಿಪಟು ವಿರೇಂದರ್ ಯಾದವ್ ತಮ್ಮ ಪದ್ಮಶ್ರೀ ಪ್ರಶಸ್ತಿ ಮರಳಿಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘೋಷಿಡಸಿದ್ದರು. ಬಳಿಕ ವಿನೇಶ್ ಫೋಗಟ್ ಕೂಡ ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವ ಘೋಷಣೆ ಮಾಡಿದ್ದರು.

ಇದನ್ನೂ ಓದಿ : ಎಸ್ಸಿ-ಎಸ್ಟಿ ವಿದ್ಯಾರ್ಥಿವೇತನ ಹಗರಣ: ಶೈಕ್ಷಣಿಕ ಸಂಸ್ಥೆಗೆ ಸೇರಿದ 2 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Not only wrestlers, all the sports personalities should join this agitation, then only these Chuikidars can understand the strength in unity of our proud sports personalities. If every one raise their vioce, sucess will be achieved.👌👌👌👍👍👍🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...