Homeಮುಖಪುಟಅರಣ್ಯ ಕಾನೂನು ಉಲ್ಲಂಘನೆ: ಜಗ್ಗಿ ವಾಸುದೇವ್, ಅಸ್ಸಾಂ ಸಿಎಂ ವಿರುದ್ಧ ದೂರು, ಬಂಧನಕ್ಕೆ ಆಗ್ರಹ

ಅರಣ್ಯ ಕಾನೂನು ಉಲ್ಲಂಘನೆ: ಜಗ್ಗಿ ವಾಸುದೇವ್, ಅಸ್ಸಾಂ ಸಿಎಂ ವಿರುದ್ಧ ದೂರು, ಬಂಧನಕ್ಕೆ ಆಗ್ರಹ

- Advertisement -
- Advertisement -

ಕಾಜಿರಂಗ ರಾಷ್ಟ್ರೀಯ ಉದ್ಯಾನವನ (ಕೆಎನ್‌ಪಿ) ವ್ಯಾಪ್ತಿಯಲ್ಲಿ ಮುಸ್ಸಂಜೆಯ ನಂತರ ಜೀಪ್ ಸಫಾರಿ ಮಾಡಿ ವನ್ಯಜೀವಿ ಸಂರಕ್ಷಣಾ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಹಳ್ಳಿಗಳಲ್ಲಿ ವಾಸಿಸುವ ಜನರು ಗೋಲಾಘಾಟ್ ಜಿಲ್ಲೆಯ ಬೊಕಾಖಾಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ವಿಚಾರಣೆ ಆರಂಭಿಸಿದ್ದು, ಕೆಎನ್‌ಪಿ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ದೂರು ಬಂದಿರುವುದರಿಂದ ಉದ್ಯಾನವನದ ವಿಭಾಗೀಯ ಅರಣ್ಯಾಧಿಕಾರಿಗಳಿಂದ ವರದಿ ಕೇಳಿದ್ದೇವೆ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಬಂಧಪಟ್ಟವರನ್ನು ಸಂಪರ್ಕಿಸಿದಾಗ ಹೆಸರು ಹೇಳಲಿಚ್ಛಿಸದ ಕೆಎನ್‌ಪಿಯ ಅಧಿಕಾರಿಯೊಬ್ಬರು, “ಈ ಹಂತದಲ್ಲಿ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಆಗುವುದಿಲ್ಲ” ಎಂದು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

“ಜನರಿಗೆ ಆರೋಪ ಮಾಡುವ ಹಕ್ಕಿದೆ, ಅದರ ಆಧಾರದ ಮೇಲೆ ತನಿಖೆ ನಡೆಸಲಾಗುವುದು. ಆದರೆ ವಿಷಯವನ್ನು ಪರಿಶೀಲಿಸುವ ಮೊದಲು ನಾವು ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾನೂನುಗಳ ಉಲ್ಲಂಘನೆಯ ಆರೋಪ ಬಗ್ಗೆ ಉತ್ತರಿಸಲು ಅಧಿಕಾರಿಯು ನಿರಾಕರಿಸಿದ್ದಾರೆ ಎಂದು ‘ಟೆಲಿಗ್ರಾಫ್’ ವರದಿ ಮಾಡಿದೆ.

“ಇದು ಅಧಿಕೃತ ಕಾರ್ಯಕ್ರಮವಾಗಿತ್ತು. ಕೆಲವೊಮ್ಮೆ, ಅಂತಹ ಕಾರ್ಯಕ್ರಮವು ಸ್ವಲ್ಪ ತಡವಾಗಿ ನಡೆಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಾವು ಇದನ್ನು ಕಾನೂನು ಉಲ್ಲಂಘನೆ ಎಂದು ಕರೆಯಲಾಗದು ಎಂದು ನಾನು ಭಾವಿಸುತ್ತೇನೆ” ಎಂದು ಅಧಿಕಾರಿ ಹೇಳಿದ್ದಾರೆ.

ಮುಸ್ಸಂಜೆಯ ನಂತರ ವಾಹನದ ಹೆಡ್‌ಲೈಟ್ ಆನ್‌ ಮಾಡಿ ಜೀಫ್‌ ಸವಾರಿ ಮಾಡಲಾಗಿದೆ. ಇದು ವನ್ಯಜೀವಿ ಸಂರಕ್ಷಣಾ ಕಾಯಿದೆ, 1972 ರ ಉಲ್ಲಂಘನೆಯಾಗಿದೆ ಎಂದು ಉದ್ಯಾನದ ಬಳಿಯ ಮೊರೊಂಗಿಯಾಲ್ ಮತ್ತು ಬಲಿಜನ್ ಆದರ್ಶ್ ಮಾದರಿ ಗ್ರಾಮಗಳ ನಿವಾಸಿಗಳಾದ ಸೋನೇಶ್ವರ ನರಹ್, ಪ್ರಬಿನ್ ಪೆಗು ಆರೋಪಿಸಿದ್ದಾರೆ.

ಜೀಪ್ ಸಫಾರಿಯಲ್ಲಿ ಪಾಲ್ಗೊಂಡಿದ್ದ ಜಗ್ಗಿ ವಾಸುದೇವ್, ಮುಖ್ಯಮಂತ್ರಿ ಶರ್ಮಾ, ರಾಜ್ಯ ಪ್ರವಾಸೋದ್ಯಮ ಸಚಿವ ಜಯಂತ ಮಲ್ಲ ಬರುವಾ ಮತ್ತು ಇತರರನ್ನು ತಕ್ಷಣವೇ ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ, ಕಾನೂನಿನ ಉಲ್ಲಂಘನೆ ಮಾಡಿರುವ ಕುರಿತು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರವಾಸಿಗರಿಗೆ ನಿಗದಿತ ಸಮಯ ಮುಗಿದ ನಂತರ, ಉದ್ಯಾನವನದೊಳಗೆ ಪ್ರವೇಶಿಸಿ ಹೆಡ್‌ಲೈಟ್‌ಗಳನ್ನು ಹಾಕಿಕೊಂಡು ಜೀಪ್ ಓಡಿಸುತ್ತಿದ್ದ ಜಗ್ಗಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ.

ಜಗ್ಗಿ ವಾಸುದೇವ್‌ ಕಾನೂನು ಉಲ್ಲಂಘಿಸಿದ ಇತಿಹಾಸ

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್ ಅವರು ಈ ಹಿಂದೆಯೂ ಪರಿಸರ ಕಾನೂನು ಉಲ್ಲಂಘನೆ ಮಾಡಿದ ಆರೋಪಗಳನ್ನು ಎದುರಿಸಿದ್ದಾರೆ. ಈ ಕುರಿತು ಬಿಬಿಸಿ ಮಾಧ್ಯಮ ಪ್ರಶ್ನಿಸಿದ್ದಾಗ, ಮೈಕ್ ಕಿತ್ತು ಎಸೆದು ಸಂದರ್ಶನವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ ಘಟನೆ ಕೆಲವು ತಿಂಗಳ ಹಿಂದೆ ನಡೆದಿತ್ತು.

ಕೊಯಮತ್ತೂರು ಜಿಲ್ಲೆಯ ಬೂಲುವಾಪಟ್ಟಿ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿರ್ಮಾಣ ಮುಗಿದ ಸುಮಾರು ಮೂರು ವರ್ಷಗಳ ನಂತರ ಅಗತ್ಯವಿರುವ ಅನುಮತಿಗಳನ್ನು ಕೇಳಲಾಗಿದೆ ಎಂದು 2018ರಲ್ಲಿ ಸದ್ಗುರುಗಳ ಇಶಾ ಫೌಂಡೇಶನ್ ವಿರುದ್ಧ ಕಂಟ್ರೋಲರ್ ಮತ್ತು ಆಡಿಟರ್ ಜನರಲ್‌‌ (ಸಿಎಜೆ) ಗಂಭೀರ ಆರೋಪಗಳನ್ನು ಮಾಡಿದ್ದರು.

ಗ್ರಾಮದಲ್ಲಿ 32,856 ಚದರ ಅಡಿ ವಿಸ್ತೀರ್ಣದ ವಿವಿಧ ಕಟ್ಟಡಗಳನ್ನು 1994 ರಿಂದ 2008 ರ ನಡುವೆ ಸೂಕ್ತ ಅನುಮತಿಯೊಂದಿಗೆ ನಿರ್ಮಿಸಲಾಗಿದೆ ಎಂದು ಸಿಎಜಿ ಹೇಳಿದ್ದರು. ಆದರೆ 2005 ಮತ್ತು 2008ರ ನಡುವೆ ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯದೆ ಕಟ್ಟಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು. ಈಶಾ ಸಂಸ್ಥೆಯು 2011ರಲ್ಲಿ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯನ್ನು ಕೋರಿತ್ತು.

ಇದನ್ನೂ ಓದಿರಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

“ಕಟ್ಟಡಗಳ ನಿರ್ಮಾಣಕ್ಕೆ ಅನುಮತಿಯನ್ನು ಪಡೆದಿಲ್ಲ ಎಂಬ ಆರೋಪದ ಬಗ್ಗೆ ಸದ್ಗುರುಗಳ ಅಭಿಪ್ರಾಯವೇನು?” ಎಂದು ಬಿಬಿಸಿ ಸಂದರ್ಶನದಲ್ಲಿ ಕೇಳಲಾಗಿತ್ತು. ಇದರಿಂದ ತಾಳ್ಮೆ ಕಳೆದುಕೊಂಡ ಸದ್ಗುರು, ‘ಇದನ್ನು ಎಷ್ಟು ಬಾರಿ ಕೇಳುತ್ತೀರಿ?’ ಎಂದಿದ್ದರು.

ಮಾತು ಮುಂದುವರಿಸಲು ಹೊರಟ ಪತ್ರಕರ್ತನನ್ನು ತಡೆದು, “ನೀವು ಸುದ್ದಿ ನೋಡುತ್ತಿದ್ದೀರಾ, ಸರ್ಕಾರಿ ಇಲಾಖೆ ಹೇಳುವುದನ್ನು, ನ್ಯಾಯಾಲಯ ಹೇಳಿದ್ದನ್ನು ನೋಡಿದ್ದೀರಿ? ಅಥವಾ ನೀವು ಅರೆಬೆಂದ ವ್ಯಕ್ತಿಯ ಮಾತನ್ನು ಕೇಳುತ್ತಿದ್ದೀರಾ?” ಎಂದು ಪ್ರಶ್ನೆಗಳನ್ನು ಕೇಳಿದ್ದರು. ಜೊತೆಗೆ ಸಂದರ್ಶನವನ್ನು ಅರ್ಧಕ್ಕೆ ಮೊಟುಕುಗೊಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...