Homeಮುಖಪುಟಅರಣ್ಯ ಕಾನೂನು ಉಲ್ಲಂಘನೆ: ಜಗ್ಗಿ ವಾಸುದೇವ್, ಅಸ್ಸಾಂ ಸಿಎಂ ವಿರುದ್ಧ ದೂರು, ಬಂಧನಕ್ಕೆ ಆಗ್ರಹ

ಅರಣ್ಯ ಕಾನೂನು ಉಲ್ಲಂಘನೆ: ಜಗ್ಗಿ ವಾಸುದೇವ್, ಅಸ್ಸಾಂ ಸಿಎಂ ವಿರುದ್ಧ ದೂರು, ಬಂಧನಕ್ಕೆ ಆಗ್ರಹ

- Advertisement -
- Advertisement -

ಕಾಜಿರಂಗ ರಾಷ್ಟ್ರೀಯ ಉದ್ಯಾನವನ (ಕೆಎನ್‌ಪಿ) ವ್ಯಾಪ್ತಿಯಲ್ಲಿ ಮುಸ್ಸಂಜೆಯ ನಂತರ ಜೀಪ್ ಸಫಾರಿ ಮಾಡಿ ವನ್ಯಜೀವಿ ಸಂರಕ್ಷಣಾ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಹಳ್ಳಿಗಳಲ್ಲಿ ವಾಸಿಸುವ ಜನರು ಗೋಲಾಘಾಟ್ ಜಿಲ್ಲೆಯ ಬೊಕಾಖಾಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ವಿಚಾರಣೆ ಆರಂಭಿಸಿದ್ದು, ಕೆಎನ್‌ಪಿ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ದೂರು ಬಂದಿರುವುದರಿಂದ ಉದ್ಯಾನವನದ ವಿಭಾಗೀಯ ಅರಣ್ಯಾಧಿಕಾರಿಗಳಿಂದ ವರದಿ ಕೇಳಿದ್ದೇವೆ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಬಂಧಪಟ್ಟವರನ್ನು ಸಂಪರ್ಕಿಸಿದಾಗ ಹೆಸರು ಹೇಳಲಿಚ್ಛಿಸದ ಕೆಎನ್‌ಪಿಯ ಅಧಿಕಾರಿಯೊಬ್ಬರು, “ಈ ಹಂತದಲ್ಲಿ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಆಗುವುದಿಲ್ಲ” ಎಂದು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

“ಜನರಿಗೆ ಆರೋಪ ಮಾಡುವ ಹಕ್ಕಿದೆ, ಅದರ ಆಧಾರದ ಮೇಲೆ ತನಿಖೆ ನಡೆಸಲಾಗುವುದು. ಆದರೆ ವಿಷಯವನ್ನು ಪರಿಶೀಲಿಸುವ ಮೊದಲು ನಾವು ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾನೂನುಗಳ ಉಲ್ಲಂಘನೆಯ ಆರೋಪ ಬಗ್ಗೆ ಉತ್ತರಿಸಲು ಅಧಿಕಾರಿಯು ನಿರಾಕರಿಸಿದ್ದಾರೆ ಎಂದು ‘ಟೆಲಿಗ್ರಾಫ್’ ವರದಿ ಮಾಡಿದೆ.

“ಇದು ಅಧಿಕೃತ ಕಾರ್ಯಕ್ರಮವಾಗಿತ್ತು. ಕೆಲವೊಮ್ಮೆ, ಅಂತಹ ಕಾರ್ಯಕ್ರಮವು ಸ್ವಲ್ಪ ತಡವಾಗಿ ನಡೆಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಾವು ಇದನ್ನು ಕಾನೂನು ಉಲ್ಲಂಘನೆ ಎಂದು ಕರೆಯಲಾಗದು ಎಂದು ನಾನು ಭಾವಿಸುತ್ತೇನೆ” ಎಂದು ಅಧಿಕಾರಿ ಹೇಳಿದ್ದಾರೆ.

ಮುಸ್ಸಂಜೆಯ ನಂತರ ವಾಹನದ ಹೆಡ್‌ಲೈಟ್ ಆನ್‌ ಮಾಡಿ ಜೀಫ್‌ ಸವಾರಿ ಮಾಡಲಾಗಿದೆ. ಇದು ವನ್ಯಜೀವಿ ಸಂರಕ್ಷಣಾ ಕಾಯಿದೆ, 1972 ರ ಉಲ್ಲಂಘನೆಯಾಗಿದೆ ಎಂದು ಉದ್ಯಾನದ ಬಳಿಯ ಮೊರೊಂಗಿಯಾಲ್ ಮತ್ತು ಬಲಿಜನ್ ಆದರ್ಶ್ ಮಾದರಿ ಗ್ರಾಮಗಳ ನಿವಾಸಿಗಳಾದ ಸೋನೇಶ್ವರ ನರಹ್, ಪ್ರಬಿನ್ ಪೆಗು ಆರೋಪಿಸಿದ್ದಾರೆ.

ಜೀಪ್ ಸಫಾರಿಯಲ್ಲಿ ಪಾಲ್ಗೊಂಡಿದ್ದ ಜಗ್ಗಿ ವಾಸುದೇವ್, ಮುಖ್ಯಮಂತ್ರಿ ಶರ್ಮಾ, ರಾಜ್ಯ ಪ್ರವಾಸೋದ್ಯಮ ಸಚಿವ ಜಯಂತ ಮಲ್ಲ ಬರುವಾ ಮತ್ತು ಇತರರನ್ನು ತಕ್ಷಣವೇ ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ, ಕಾನೂನಿನ ಉಲ್ಲಂಘನೆ ಮಾಡಿರುವ ಕುರಿತು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರವಾಸಿಗರಿಗೆ ನಿಗದಿತ ಸಮಯ ಮುಗಿದ ನಂತರ, ಉದ್ಯಾನವನದೊಳಗೆ ಪ್ರವೇಶಿಸಿ ಹೆಡ್‌ಲೈಟ್‌ಗಳನ್ನು ಹಾಕಿಕೊಂಡು ಜೀಪ್ ಓಡಿಸುತ್ತಿದ್ದ ಜಗ್ಗಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ.

ಜಗ್ಗಿ ವಾಸುದೇವ್‌ ಕಾನೂನು ಉಲ್ಲಂಘಿಸಿದ ಇತಿಹಾಸ

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್ ಅವರು ಈ ಹಿಂದೆಯೂ ಪರಿಸರ ಕಾನೂನು ಉಲ್ಲಂಘನೆ ಮಾಡಿದ ಆರೋಪಗಳನ್ನು ಎದುರಿಸಿದ್ದಾರೆ. ಈ ಕುರಿತು ಬಿಬಿಸಿ ಮಾಧ್ಯಮ ಪ್ರಶ್ನಿಸಿದ್ದಾಗ, ಮೈಕ್ ಕಿತ್ತು ಎಸೆದು ಸಂದರ್ಶನವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ ಘಟನೆ ಕೆಲವು ತಿಂಗಳ ಹಿಂದೆ ನಡೆದಿತ್ತು.

ಕೊಯಮತ್ತೂರು ಜಿಲ್ಲೆಯ ಬೂಲುವಾಪಟ್ಟಿ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿರ್ಮಾಣ ಮುಗಿದ ಸುಮಾರು ಮೂರು ವರ್ಷಗಳ ನಂತರ ಅಗತ್ಯವಿರುವ ಅನುಮತಿಗಳನ್ನು ಕೇಳಲಾಗಿದೆ ಎಂದು 2018ರಲ್ಲಿ ಸದ್ಗುರುಗಳ ಇಶಾ ಫೌಂಡೇಶನ್ ವಿರುದ್ಧ ಕಂಟ್ರೋಲರ್ ಮತ್ತು ಆಡಿಟರ್ ಜನರಲ್‌‌ (ಸಿಎಜೆ) ಗಂಭೀರ ಆರೋಪಗಳನ್ನು ಮಾಡಿದ್ದರು.

ಗ್ರಾಮದಲ್ಲಿ 32,856 ಚದರ ಅಡಿ ವಿಸ್ತೀರ್ಣದ ವಿವಿಧ ಕಟ್ಟಡಗಳನ್ನು 1994 ರಿಂದ 2008 ರ ನಡುವೆ ಸೂಕ್ತ ಅನುಮತಿಯೊಂದಿಗೆ ನಿರ್ಮಿಸಲಾಗಿದೆ ಎಂದು ಸಿಎಜಿ ಹೇಳಿದ್ದರು. ಆದರೆ 2005 ಮತ್ತು 2008ರ ನಡುವೆ ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯದೆ ಕಟ್ಟಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು. ಈಶಾ ಸಂಸ್ಥೆಯು 2011ರಲ್ಲಿ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯನ್ನು ಕೋರಿತ್ತು.

ಇದನ್ನೂ ಓದಿರಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

“ಕಟ್ಟಡಗಳ ನಿರ್ಮಾಣಕ್ಕೆ ಅನುಮತಿಯನ್ನು ಪಡೆದಿಲ್ಲ ಎಂಬ ಆರೋಪದ ಬಗ್ಗೆ ಸದ್ಗುರುಗಳ ಅಭಿಪ್ರಾಯವೇನು?” ಎಂದು ಬಿಬಿಸಿ ಸಂದರ್ಶನದಲ್ಲಿ ಕೇಳಲಾಗಿತ್ತು. ಇದರಿಂದ ತಾಳ್ಮೆ ಕಳೆದುಕೊಂಡ ಸದ್ಗುರು, ‘ಇದನ್ನು ಎಷ್ಟು ಬಾರಿ ಕೇಳುತ್ತೀರಿ?’ ಎಂದಿದ್ದರು.

ಮಾತು ಮುಂದುವರಿಸಲು ಹೊರಟ ಪತ್ರಕರ್ತನನ್ನು ತಡೆದು, “ನೀವು ಸುದ್ದಿ ನೋಡುತ್ತಿದ್ದೀರಾ, ಸರ್ಕಾರಿ ಇಲಾಖೆ ಹೇಳುವುದನ್ನು, ನ್ಯಾಯಾಲಯ ಹೇಳಿದ್ದನ್ನು ನೋಡಿದ್ದೀರಿ? ಅಥವಾ ನೀವು ಅರೆಬೆಂದ ವ್ಯಕ್ತಿಯ ಮಾತನ್ನು ಕೇಳುತ್ತಿದ್ದೀರಾ?” ಎಂದು ಪ್ರಶ್ನೆಗಳನ್ನು ಕೇಳಿದ್ದರು. ಜೊತೆಗೆ ಸಂದರ್ಶನವನ್ನು ಅರ್ಧಕ್ಕೆ ಮೊಟುಕುಗೊಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....