Homeಮುಖಪುಟವಾಕ್‌ ಸ್ವಾತಂತ್ರ್ಯದ ಉಲ್ಲಂಘನೆ: ನ್ಯಾಯಾಂಗ ನಿಂದನೆ ಕಾಯ್ದೆ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ವಾಕ್‌ ಸ್ವಾತಂತ್ರ್ಯದ ಉಲ್ಲಂಘನೆ: ನ್ಯಾಯಾಂಗ ನಿಂದನೆ ಕಾಯ್ದೆ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ವಿರುದ್ಧ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆಯ ಸ್ವಯಂ ಪ್ರಕರಣ ದಾಖಲಿಸಿಕೊಂಡ ಕೆಲವೇ ದಿನಗಳಲ್ಲಿ ಆ ಕಾಯ್ದೆಯನ್ನೇ ಪ್ರಶ್ನಿಸಲಾಗಿದೆ.

- Advertisement -
- Advertisement -

ಹಿರಿಯ ಪತ್ರಕರ್ತ ಎನ್ ರಾಮ್, ವಕೀಲ ಪ್ರಶಾಂತ್ ಭೂಷಣ್ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಶೌರಿಯವರು ನ್ಯಾಯಾಂಗ ನಿಂದನೆ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಇದು ಸಂವಿಧಾನವು ಖಾತರಿಪಡಿಸಿದ “ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ” ಎಂದು ಆರೋಪಿಸಿದ್ದಾರೆ.

1971ರ ನ್ಯಾಯಾಂಗ ನಿಂದನೆ ಕಾಯ್ದೆಯನ್ನು “ಅಸಂವಿಧಾನಿಕ ಮತ್ತು ಸಂವಿಧಾನದ ಮೂಲ ರಚನೆಗೆ ವಿರುದ್ಧವಾಗಿದೆ” ಎಂದು ವಿವರಿಸಿರುವ ಅರ್ಜಿದಾರರು ಕೆಲವು ನಿಬಂಧನೆಗಳನ್ನು ರದ್ದುಗೊಳಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

“ಆಪಾದಿತ ಉಪ-ವಿಭಾಗವು ಅಸಂವಿಧಾನಿಕವಾಗಿದೆ. ಸಂವಿಧಾನದ ಮುನ್ನಡಿಯ ಮೌಲ್ಯಗಳಿಗೆ ವಿರುದ್ಧವಾಗಿದೆ ಮತ್ತು ಸಂವಿಧಾನದ ಮೂಲ ಲಕ್ಷಣಗಳಿಗೆ ಹೊಂದಿಕೆಯಾಗುವುದಿಲ್ಲ. ಅದು ಅಸಂವಿಧಾನಿಕ, ಅಸಮರ್ಥ, ಅಸ್ಪಷ್ಟ ಮತ್ತು ಅನಿಯಂತ್ರಿತವಾಗಿದೆ” ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ನ್ಯಾಯಾಲಯದ ಟೀಕೆಯನ್ನು ಅಪರಾಧೀಕರಿಸುವ ಮೂಲಕ ಸಾರ್ವಜನಿಕ ಮತ್ತು ರಾಜಕೀಯ ಟೀಕೆಗಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಆರೋಪಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ವಿರುದ್ಧ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆಯ ಸ್ವಯಂ ಪ್ರಕರಣ ದಾಖಲಿಸಿಕೊಂಡ ಕೆಲವೇ ದಿನಗಳಲ್ಲಿ ಆ ಕಾಯ್ದೆಯನ್ನೇ ಪ್ರಶ್ನಿಸಲಾಗಿದೆ.

ಪ್ರಶಾಂತ್‌ ಭೂಷಣ್‌ರವರು ಪ್ರಜಾಪ್ರಭುತ್ವಕ್ಕೆ ಹಾನಿಯನ್ನುಂಟುಮಾಡುವಲ್ಲಿ ನ್ಯಾಯಾಂಗದ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದರು.

“ಪ್ರಶಾಂತ್ ಭೂಷಣ್ ಅವರ ಟ್ವೀಟ್‌ಗಳು ಸಾರ್ವಜನಿಕರ ದೃಷ್ಟಿಯಲ್ಲಿ ಸುಪ್ರೀಂ ಕೋರ್ಟ್‌ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಚೇರಿಯ ಘನತೆ ಮತ್ತು ಸ್ವಾಯುತ್ತ ಅಧಿಕಾರವನ್ನು ಹಾಳುಮಾಡುತ್ತವೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಈ ಕುರಿತು ಸುಪ್ರೀಂ ಕೋರ್ಟ್‌ ಸೇರಿದಂತೆ ಹಲವು ನ್ಯಾಯಾಲಯಗಳ ಮಾಜಿ ನ್ಯಾಯಾಧೀಶರು, ಲೇಖಕರು, ಮಾಜಿ ಸರ್ಕಾರಿ ಅಧಿಕಾರಿಗಳು ಮತ್ತು ಪತ್ರಕರ್ತರು ಸೇರಿದಂತೆ 131 ವ್ಯಕ್ತಿಗಳು ನ್ಯಾಯಾಲಯದ ಕ್ರಮವನ್ನು ವಿರೋಧಿಸಿ, ಪ್ರಶಾಂತ್ ಭೂಷಣ್ ವಿರುದ್ಧದ ವಿಚಾರಣೆಯನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

“ನ್ಯಾಯಾಲಯದ ಒಳಗೆ ಅಥವಾ ಹೊರಗೆ ನ್ಯಾಯಾಧೀಶರ ನಡವಳಿಕೆಯ ಬಗ್ಗೆ ಟೀಕೆಗಳ ಮಾತುಗಳಿಗೆ ಶಿಕ್ಷೆ ವಿಧಿಸುವ ನ್ಯಾಯಾಲಯದ ಅನಿಯಂತ್ರಿತ ಅಧಿಕಾರದ ಭಯದಲ್ಲಿ ನಾಗರಿಕರು ವಾಸಿಸುವ ಪರಿಸ್ಥಿತಿಯನ್ನು ನಾವು ಎದುರಿಸಲು ಸಾಧ್ಯವಿಲ್ಲ” ಎಂದು ನೂರಾರು ಪ್ರಗತಿಪರರು ಘೋಷಿಸಿದ್ದಾರೆ.

ಎನ್ ರಾಮ್ ಮತ್ತು ಅರುಣ್ ಶೌರಿಯವರ ಮೇಲೆ ಸಹ ಈ ಇಂದೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆದಿತ್ತು. ಕೊಲ್ಲಂ ಮದ್ಯ ದುರಂತ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಯನ್ನು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತ ಎನ್‌ ರಾಮ್‌ರವರು ಕೇರಳ ಹೈಕೋರ್ಟ್‌ನಿಂದ ನ್ಯಾಯಾಂಗ ನಿಂದನೆ ವಿಚಾರಣೆ ಎದುರಿಸಿದ್ದರು.  ನ್ಯಾಯಮೂರ್ತಿ ಕುಲದೀಪ್ ಸಿಂಗ್ ಆಯೋಗದ ಕುರಿತ ಲೇಖನವೊಂದರ ಬಗ್ಗೆ ಅರುಣ್ ಶೌರಿ ಮೇಲೆ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯವು ಅಂತಿಮವಾಗಿ ಲೇಖನವು ನ್ಯಾಯಾಂಗ ನಿಂದನೆಗೆ ಸಮನಾಗಿಲ್ಲ ಎಂದು ತೀರ್ಪು ನೀಡಿತ್ತು.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಪರ ನಿಂತ 8ಕ್ಕೂ ಹೆಚ್ಚು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...