Homeಮುಖಪುಟವಾಕ್‌ ಸ್ವಾತಂತ್ರ್ಯದ ಉಲ್ಲಂಘನೆ: ನ್ಯಾಯಾಂಗ ನಿಂದನೆ ಕಾಯ್ದೆ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ವಾಕ್‌ ಸ್ವಾತಂತ್ರ್ಯದ ಉಲ್ಲಂಘನೆ: ನ್ಯಾಯಾಂಗ ನಿಂದನೆ ಕಾಯ್ದೆ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ವಿರುದ್ಧ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆಯ ಸ್ವಯಂ ಪ್ರಕರಣ ದಾಖಲಿಸಿಕೊಂಡ ಕೆಲವೇ ದಿನಗಳಲ್ಲಿ ಆ ಕಾಯ್ದೆಯನ್ನೇ ಪ್ರಶ್ನಿಸಲಾಗಿದೆ.

- Advertisement -
- Advertisement -

ಹಿರಿಯ ಪತ್ರಕರ್ತ ಎನ್ ರಾಮ್, ವಕೀಲ ಪ್ರಶಾಂತ್ ಭೂಷಣ್ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಶೌರಿಯವರು ನ್ಯಾಯಾಂಗ ನಿಂದನೆ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಇದು ಸಂವಿಧಾನವು ಖಾತರಿಪಡಿಸಿದ “ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ” ಎಂದು ಆರೋಪಿಸಿದ್ದಾರೆ.

1971ರ ನ್ಯಾಯಾಂಗ ನಿಂದನೆ ಕಾಯ್ದೆಯನ್ನು “ಅಸಂವಿಧಾನಿಕ ಮತ್ತು ಸಂವಿಧಾನದ ಮೂಲ ರಚನೆಗೆ ವಿರುದ್ಧವಾಗಿದೆ” ಎಂದು ವಿವರಿಸಿರುವ ಅರ್ಜಿದಾರರು ಕೆಲವು ನಿಬಂಧನೆಗಳನ್ನು ರದ್ದುಗೊಳಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

“ಆಪಾದಿತ ಉಪ-ವಿಭಾಗವು ಅಸಂವಿಧಾನಿಕವಾಗಿದೆ. ಸಂವಿಧಾನದ ಮುನ್ನಡಿಯ ಮೌಲ್ಯಗಳಿಗೆ ವಿರುದ್ಧವಾಗಿದೆ ಮತ್ತು ಸಂವಿಧಾನದ ಮೂಲ ಲಕ್ಷಣಗಳಿಗೆ ಹೊಂದಿಕೆಯಾಗುವುದಿಲ್ಲ. ಅದು ಅಸಂವಿಧಾನಿಕ, ಅಸಮರ್ಥ, ಅಸ್ಪಷ್ಟ ಮತ್ತು ಅನಿಯಂತ್ರಿತವಾಗಿದೆ” ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ನ್ಯಾಯಾಲಯದ ಟೀಕೆಯನ್ನು ಅಪರಾಧೀಕರಿಸುವ ಮೂಲಕ ಸಾರ್ವಜನಿಕ ಮತ್ತು ರಾಜಕೀಯ ಟೀಕೆಗಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಆರೋಪಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ವಿರುದ್ಧ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆಯ ಸ್ವಯಂ ಪ್ರಕರಣ ದಾಖಲಿಸಿಕೊಂಡ ಕೆಲವೇ ದಿನಗಳಲ್ಲಿ ಆ ಕಾಯ್ದೆಯನ್ನೇ ಪ್ರಶ್ನಿಸಲಾಗಿದೆ.

ಪ್ರಶಾಂತ್‌ ಭೂಷಣ್‌ರವರು ಪ್ರಜಾಪ್ರಭುತ್ವಕ್ಕೆ ಹಾನಿಯನ್ನುಂಟುಮಾಡುವಲ್ಲಿ ನ್ಯಾಯಾಂಗದ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದರು.

“ಪ್ರಶಾಂತ್ ಭೂಷಣ್ ಅವರ ಟ್ವೀಟ್‌ಗಳು ಸಾರ್ವಜನಿಕರ ದೃಷ್ಟಿಯಲ್ಲಿ ಸುಪ್ರೀಂ ಕೋರ್ಟ್‌ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಚೇರಿಯ ಘನತೆ ಮತ್ತು ಸ್ವಾಯುತ್ತ ಅಧಿಕಾರವನ್ನು ಹಾಳುಮಾಡುತ್ತವೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಈ ಕುರಿತು ಸುಪ್ರೀಂ ಕೋರ್ಟ್‌ ಸೇರಿದಂತೆ ಹಲವು ನ್ಯಾಯಾಲಯಗಳ ಮಾಜಿ ನ್ಯಾಯಾಧೀಶರು, ಲೇಖಕರು, ಮಾಜಿ ಸರ್ಕಾರಿ ಅಧಿಕಾರಿಗಳು ಮತ್ತು ಪತ್ರಕರ್ತರು ಸೇರಿದಂತೆ 131 ವ್ಯಕ್ತಿಗಳು ನ್ಯಾಯಾಲಯದ ಕ್ರಮವನ್ನು ವಿರೋಧಿಸಿ, ಪ್ರಶಾಂತ್ ಭೂಷಣ್ ವಿರುದ್ಧದ ವಿಚಾರಣೆಯನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

“ನ್ಯಾಯಾಲಯದ ಒಳಗೆ ಅಥವಾ ಹೊರಗೆ ನ್ಯಾಯಾಧೀಶರ ನಡವಳಿಕೆಯ ಬಗ್ಗೆ ಟೀಕೆಗಳ ಮಾತುಗಳಿಗೆ ಶಿಕ್ಷೆ ವಿಧಿಸುವ ನ್ಯಾಯಾಲಯದ ಅನಿಯಂತ್ರಿತ ಅಧಿಕಾರದ ಭಯದಲ್ಲಿ ನಾಗರಿಕರು ವಾಸಿಸುವ ಪರಿಸ್ಥಿತಿಯನ್ನು ನಾವು ಎದುರಿಸಲು ಸಾಧ್ಯವಿಲ್ಲ” ಎಂದು ನೂರಾರು ಪ್ರಗತಿಪರರು ಘೋಷಿಸಿದ್ದಾರೆ.

ಎನ್ ರಾಮ್ ಮತ್ತು ಅರುಣ್ ಶೌರಿಯವರ ಮೇಲೆ ಸಹ ಈ ಇಂದೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆದಿತ್ತು. ಕೊಲ್ಲಂ ಮದ್ಯ ದುರಂತ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಯನ್ನು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತ ಎನ್‌ ರಾಮ್‌ರವರು ಕೇರಳ ಹೈಕೋರ್ಟ್‌ನಿಂದ ನ್ಯಾಯಾಂಗ ನಿಂದನೆ ವಿಚಾರಣೆ ಎದುರಿಸಿದ್ದರು.  ನ್ಯಾಯಮೂರ್ತಿ ಕುಲದೀಪ್ ಸಿಂಗ್ ಆಯೋಗದ ಕುರಿತ ಲೇಖನವೊಂದರ ಬಗ್ಗೆ ಅರುಣ್ ಶೌರಿ ಮೇಲೆ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯವು ಅಂತಿಮವಾಗಿ ಲೇಖನವು ನ್ಯಾಯಾಂಗ ನಿಂದನೆಗೆ ಸಮನಾಗಿಲ್ಲ ಎಂದು ತೀರ್ಪು ನೀಡಿತ್ತು.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಪರ ನಿಂತ 8ಕ್ಕೂ ಹೆಚ್ಚು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...