Homeಕರ್ನಾಟಕಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

- Advertisement -
- Advertisement -

ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ ಕಲಂ 370ನ್ನು ರದ್ದುಪಡಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಷರಶಃ ಉಸಿರುಗಟ್ಟಿಸುವ ವಾತಾವರಣ ಮನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಕಣಿವೆ ರಾಜ್ಯದಲ್ಲಿ ಮೊಬೈಲ್, ಸ್ಥಿರ ದೂರವಾಣಿ, ಬಸ್ ಸೇವೆ ಇಲ್ಲದಂತೆ ಮಾಡಿ ಅಲ್ಲಿನ ಜನರ ಮೂಲಭೂತ ಹಕ್ಕುಗಳನ್ನೇ ಕಸಿಯಲಾಗಿದೆ. ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿರುವ ಬಗ್ಗೆ ಇದುವರೆಗೂ ಯಾವೊಂದು ಮಾಧ್ಯಮಗಳು ಕೇಂದ್ರದ ಗಮನ ಸೆಳೆದಿಲ್ಲ. ಕೇಸರಿ ನಾಡಿನ ಜನರ ಮೂಗಿನೊಳಗೆ ಕಮಲದೊಳಗಿನ ಹುಳುಗಳು ಸೇರಿಹೋಗಿ ಉಸಿರು ಬಿಡುವುದು ಕಷ್ಟವಾಗಿದೆ.

ಈ ದೇಶದ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳಿಗೆ ಚ್ಯುತಿಯಾದಾಗ ಸುಪ್ರೀಂ ಕೋರ್ಟ್ ಜನರ ನೆರವಿಗೆ ಬರಬೇಕು. ಆದರೆ ಇಂತಹ ಯಾವುದೇ ಕೆಲಸ ಸುಪ್ರೀಂಕೋರ್ಟ್‍ನಿಂದ ಆದಂತೆ ಕಂಡುಬಂದಿಲ್ಲ. ಸ್ವಾತಂತ್ರ್ಯದ ಹಕ್ಕು, ಸಭೆ ಸೇರುವ ಹಕ್ಕು, ಪ್ರತಿಭಟನೆ ನಡೆಸುವ ಹಕ್ಕು, ಮಾತನಾಡುವ ಮತ್ತು ಬರೆಯುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು, ಕೆಲಸದ ಹಕ್ಕು ಹೀಗೆ ಎಲ್ಲ ಮೂಲಭೂತ ಹಕ್ಕುಗಳು ಸಂಪೂರ್ಣ ಮೊಟುಕಾಗಿವೆ. ಇಂತಹ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಜ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಜನರ ಈ ಹಕ್ಕುಗಳನ್ನು ರಕ್ಷಣೆ ಮಾಡಿದೆ. ಅದರಂತೆ ಈಗಲೂ ಮಾಡಬೇಕಿದೆ.

ಭಾರತದ ಒಕ್ಕೂಟ ಸರ್ಕಾರ ಸಂವಿಧಾನದ 370ನೇ ವಿಧಿಯನ್ನು ಅಮಾನ್ಯಗೊಳಿಸಿರುವ ಸಂಬಂಧ ಸುಪ್ರೀಂಕೋರ್ಟ್‍ನಲ್ಲಿ ಸುಮಾರು 17ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳು ದಾಖಲಾಗಿವೆ. ಎಲ್ಲರೂ ಕೇವಲ ಸಂವಿಧಾನದ 370 ಮತ್ತು ಅದರಿಂದ ಪ್ರದತ್ತವಾದ 35 ಎ ಕಲಂ ರದ್ದುಗೊಳಿಸಿರುವುದನ್ನು ಮಾತ್ರ ಪ್ರಶ್ನಿಸಲಾಗಿದೆ. ಆದರೆ ಒಂದು ರಾಜ್ಯದ ಮೇಲೆ ಮಿಲಿಟರಿ ಪ್ರಯೋಗಿಸಿ ನಿರ್ಬಂಧ ವಿಧಿಸಿ ಉಸಿರುಗಟ್ಟಿಸುವಂತೆ ಮಾಡಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯೇ ಸರಿ. ಜಮ್ಮು-ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಿದ್ದರೂ ಅದನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರೂ ಶೀಘ್ರ ವಿಚಾರಣೆಯ ಜರೂರತ್ತು ಇಲ್ಲವೆಂದು ವಿಚಾರಣೆಯನ್ನು ಮುಂದೂಡಲಾಗಿದೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದಾಗಲೂ ಅದು ಭಾರತದ ಭಾಗವಾಗಿತ್ತು ಎಂಬುದನ್ನು ಮರೆಮಾಚಲಾಗುತ್ತಿದೆ. 370 ವಿಧಿಯನ್ನು ರದ್ದುಪಡಿಸಿದ್ದರಿಂದಲೇ ಅದು ಭಾರತದ ಭಾಗವಾಗಿದೆ ಎಂಬ ಭ್ರಮೆಗಳನ್ನು ಬಿತ್ತಲಾಗಿದ್ದು ಮೋದಿಶಾ ಜೋಡಿ ಮಹತ್ವದ ಸಾಧನೆಯನ್ನು ಮಾಡಿದ್ದೇವೆಂಬಂತೆ ಬೀಗುತ್ತಿದ್ದಾರೆ. ಆದರೆ ತಾವು ಇನ್ನೊಬ್ಬರ ಹಕ್ಕುಗಳನ್ನು ಕಸಿಯುತ್ತಿದ್ದೇವೆ ಎಂಬ ಕನಿಷ್ಠ ಜ್ಞಾನವೂ ಇಲ್ಲದಂತೆ ವರ್ತಿಸುತ್ತಿರುವುದು ಸೋಜಿಗವೇ ಸರಿ. ಅಲ್ಲಿ ಕೇವಲ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾತ್ರವಾಗಿಲ್ಲ. ಬದಲಿಗೆ ಬೇಸಿಕ್ ರೈಟ್ಸ್ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯೂ ಆಗಿದೆ. ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳನ್ನು ಕಸಿಯಲಾಗಿದೆ.

ಕಳೆದ ಎರಡು ತಿಂಗಳಿಂದಲೂ ಅಲ್ಲಿನ ಜನರು ಕೆಲಸಕ್ಕೆ ಹೋಗದಂತಹ ವಾತಾವರಣ ಸೃಷ್ಟಿಯಾಗಿದೆ. ಕೂಲಿಕಾರ್ಮಿಕರು, ರೈತರು, ಸಣ್ಣಪುಟ್ಟ ವ್ಯಾಪಾರಿಗಳು ಎಲ್ಲ ಕೆಲಸಗಳನ್ನು ಬದಿಗೊತ್ತಿ ಮನೆಯಲ್ಲೇ ಕುಳಿತು ದಿನದೂಡುವಂತಹ ಪರಿಸ್ಥಿತಿ ಇದೆ. ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ವಿಷಯ ಸದ್ದು ಮಾಡುತ್ತಿದೆ. ಆದರೂ ಮೋದಿ ಸರ್ಕಾರ ಜನರು ಹಕ್ಕುಗಳಿಂದ ವಂಚಿತರಾದರೂ ಚಿಂತೆ ಇಲ್ಲ, ವಿಜೃಂಭಣೆಯಿಂದ ಅಧಿಕಾರ ಅನುಭವಿಸಬೇಕು ಎಂಬ ಅಮಲಿನಲ್ಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಹೀಗಾಗಿ ಆ ರಾಜ್ಯ ಮತ್ತೆ ಚೇತರಿಸಿಕೊಳ್ಳಬೇಕೆಂದು ಹಲವು ವರ್ಷಗಳೇ ಕಳೆಯಬೇಕು. ಸೇಬು, ಕೇಸರಿ ವ್ಯಾಪಾರಿಗಳು ಸಾಕಷ್ಟು ನಷ್ಟಕ್ಕೆ ಗುರಿಯಾಗಿದ್ದಾರೆ. ಆದರೆ ಜೆಕೆಯಲ್ಲಿ ಏನೂ ಆಗಿಲ್ಲವೆಂದೇ ಕೇಂದ್ರ ಸರ್ಕಾರ ಭಂಡ ವಾದ ಮಾಡುತ್ತಿದೆ. ನಾಗರಿಕ ಸಂಘಟನೆಗಳು, ಪ್ರಗತಿಪರರು, ಸಾಹಿತಿಗಳು, ಕಲಾವಿದರು ದೊಡ್ಡ ಮಟ್ಟದಲ್ಲಿ ದನಿ ಎತ್ತಿ ಮೂಲಭೂತ ಹಕ್ಕುಗಳು, ಮಾನವ ಹಕ್ಕುಗಳು, ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಕುರಿತು ಹೋರಾಟಕ್ಕೆ ಸಜ್ಜಾಗಬೇಕಾಗಿದೆ. ಇಂತಹ ಕ್ರಮಗಳಿಂದ ರಾಜ್ಯಗಳ ಅಧಿಕಾರವನ್ನು ಮೊಟುಕುಗೊಳಿಸುವ ಹುನ್ನಾರ ಕೇಂದ್ರ ಸರ್ಕಾರದ ಕ್ರಮದಲ್ಲಿ ಅಡಗಿದೆ ಎಂಬುದನ್ನು ಅರಿತುಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...