Homeಕರ್ನಾಟಕಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

- Advertisement -
- Advertisement -

ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ ಕಲಂ 370ನ್ನು ರದ್ದುಪಡಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಷರಶಃ ಉಸಿರುಗಟ್ಟಿಸುವ ವಾತಾವರಣ ಮನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಕಣಿವೆ ರಾಜ್ಯದಲ್ಲಿ ಮೊಬೈಲ್, ಸ್ಥಿರ ದೂರವಾಣಿ, ಬಸ್ ಸೇವೆ ಇಲ್ಲದಂತೆ ಮಾಡಿ ಅಲ್ಲಿನ ಜನರ ಮೂಲಭೂತ ಹಕ್ಕುಗಳನ್ನೇ ಕಸಿಯಲಾಗಿದೆ. ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿರುವ ಬಗ್ಗೆ ಇದುವರೆಗೂ ಯಾವೊಂದು ಮಾಧ್ಯಮಗಳು ಕೇಂದ್ರದ ಗಮನ ಸೆಳೆದಿಲ್ಲ. ಕೇಸರಿ ನಾಡಿನ ಜನರ ಮೂಗಿನೊಳಗೆ ಕಮಲದೊಳಗಿನ ಹುಳುಗಳು ಸೇರಿಹೋಗಿ ಉಸಿರು ಬಿಡುವುದು ಕಷ್ಟವಾಗಿದೆ.

ಈ ದೇಶದ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳಿಗೆ ಚ್ಯುತಿಯಾದಾಗ ಸುಪ್ರೀಂ ಕೋರ್ಟ್ ಜನರ ನೆರವಿಗೆ ಬರಬೇಕು. ಆದರೆ ಇಂತಹ ಯಾವುದೇ ಕೆಲಸ ಸುಪ್ರೀಂಕೋರ್ಟ್‍ನಿಂದ ಆದಂತೆ ಕಂಡುಬಂದಿಲ್ಲ. ಸ್ವಾತಂತ್ರ್ಯದ ಹಕ್ಕು, ಸಭೆ ಸೇರುವ ಹಕ್ಕು, ಪ್ರತಿಭಟನೆ ನಡೆಸುವ ಹಕ್ಕು, ಮಾತನಾಡುವ ಮತ್ತು ಬರೆಯುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು, ಕೆಲಸದ ಹಕ್ಕು ಹೀಗೆ ಎಲ್ಲ ಮೂಲಭೂತ ಹಕ್ಕುಗಳು ಸಂಪೂರ್ಣ ಮೊಟುಕಾಗಿವೆ. ಇಂತಹ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಜ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಜನರ ಈ ಹಕ್ಕುಗಳನ್ನು ರಕ್ಷಣೆ ಮಾಡಿದೆ. ಅದರಂತೆ ಈಗಲೂ ಮಾಡಬೇಕಿದೆ.

ಭಾರತದ ಒಕ್ಕೂಟ ಸರ್ಕಾರ ಸಂವಿಧಾನದ 370ನೇ ವಿಧಿಯನ್ನು ಅಮಾನ್ಯಗೊಳಿಸಿರುವ ಸಂಬಂಧ ಸುಪ್ರೀಂಕೋರ್ಟ್‍ನಲ್ಲಿ ಸುಮಾರು 17ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳು ದಾಖಲಾಗಿವೆ. ಎಲ್ಲರೂ ಕೇವಲ ಸಂವಿಧಾನದ 370 ಮತ್ತು ಅದರಿಂದ ಪ್ರದತ್ತವಾದ 35 ಎ ಕಲಂ ರದ್ದುಗೊಳಿಸಿರುವುದನ್ನು ಮಾತ್ರ ಪ್ರಶ್ನಿಸಲಾಗಿದೆ. ಆದರೆ ಒಂದು ರಾಜ್ಯದ ಮೇಲೆ ಮಿಲಿಟರಿ ಪ್ರಯೋಗಿಸಿ ನಿರ್ಬಂಧ ವಿಧಿಸಿ ಉಸಿರುಗಟ್ಟಿಸುವಂತೆ ಮಾಡಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯೇ ಸರಿ. ಜಮ್ಮು-ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಿದ್ದರೂ ಅದನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರೂ ಶೀಘ್ರ ವಿಚಾರಣೆಯ ಜರೂರತ್ತು ಇಲ್ಲವೆಂದು ವಿಚಾರಣೆಯನ್ನು ಮುಂದೂಡಲಾಗಿದೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದಾಗಲೂ ಅದು ಭಾರತದ ಭಾಗವಾಗಿತ್ತು ಎಂಬುದನ್ನು ಮರೆಮಾಚಲಾಗುತ್ತಿದೆ. 370 ವಿಧಿಯನ್ನು ರದ್ದುಪಡಿಸಿದ್ದರಿಂದಲೇ ಅದು ಭಾರತದ ಭಾಗವಾಗಿದೆ ಎಂಬ ಭ್ರಮೆಗಳನ್ನು ಬಿತ್ತಲಾಗಿದ್ದು ಮೋದಿಶಾ ಜೋಡಿ ಮಹತ್ವದ ಸಾಧನೆಯನ್ನು ಮಾಡಿದ್ದೇವೆಂಬಂತೆ ಬೀಗುತ್ತಿದ್ದಾರೆ. ಆದರೆ ತಾವು ಇನ್ನೊಬ್ಬರ ಹಕ್ಕುಗಳನ್ನು ಕಸಿಯುತ್ತಿದ್ದೇವೆ ಎಂಬ ಕನಿಷ್ಠ ಜ್ಞಾನವೂ ಇಲ್ಲದಂತೆ ವರ್ತಿಸುತ್ತಿರುವುದು ಸೋಜಿಗವೇ ಸರಿ. ಅಲ್ಲಿ ಕೇವಲ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾತ್ರವಾಗಿಲ್ಲ. ಬದಲಿಗೆ ಬೇಸಿಕ್ ರೈಟ್ಸ್ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯೂ ಆಗಿದೆ. ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳನ್ನು ಕಸಿಯಲಾಗಿದೆ.

ಕಳೆದ ಎರಡು ತಿಂಗಳಿಂದಲೂ ಅಲ್ಲಿನ ಜನರು ಕೆಲಸಕ್ಕೆ ಹೋಗದಂತಹ ವಾತಾವರಣ ಸೃಷ್ಟಿಯಾಗಿದೆ. ಕೂಲಿಕಾರ್ಮಿಕರು, ರೈತರು, ಸಣ್ಣಪುಟ್ಟ ವ್ಯಾಪಾರಿಗಳು ಎಲ್ಲ ಕೆಲಸಗಳನ್ನು ಬದಿಗೊತ್ತಿ ಮನೆಯಲ್ಲೇ ಕುಳಿತು ದಿನದೂಡುವಂತಹ ಪರಿಸ್ಥಿತಿ ಇದೆ. ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ವಿಷಯ ಸದ್ದು ಮಾಡುತ್ತಿದೆ. ಆದರೂ ಮೋದಿ ಸರ್ಕಾರ ಜನರು ಹಕ್ಕುಗಳಿಂದ ವಂಚಿತರಾದರೂ ಚಿಂತೆ ಇಲ್ಲ, ವಿಜೃಂಭಣೆಯಿಂದ ಅಧಿಕಾರ ಅನುಭವಿಸಬೇಕು ಎಂಬ ಅಮಲಿನಲ್ಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಹೀಗಾಗಿ ಆ ರಾಜ್ಯ ಮತ್ತೆ ಚೇತರಿಸಿಕೊಳ್ಳಬೇಕೆಂದು ಹಲವು ವರ್ಷಗಳೇ ಕಳೆಯಬೇಕು. ಸೇಬು, ಕೇಸರಿ ವ್ಯಾಪಾರಿಗಳು ಸಾಕಷ್ಟು ನಷ್ಟಕ್ಕೆ ಗುರಿಯಾಗಿದ್ದಾರೆ. ಆದರೆ ಜೆಕೆಯಲ್ಲಿ ಏನೂ ಆಗಿಲ್ಲವೆಂದೇ ಕೇಂದ್ರ ಸರ್ಕಾರ ಭಂಡ ವಾದ ಮಾಡುತ್ತಿದೆ. ನಾಗರಿಕ ಸಂಘಟನೆಗಳು, ಪ್ರಗತಿಪರರು, ಸಾಹಿತಿಗಳು, ಕಲಾವಿದರು ದೊಡ್ಡ ಮಟ್ಟದಲ್ಲಿ ದನಿ ಎತ್ತಿ ಮೂಲಭೂತ ಹಕ್ಕುಗಳು, ಮಾನವ ಹಕ್ಕುಗಳು, ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಕುರಿತು ಹೋರಾಟಕ್ಕೆ ಸಜ್ಜಾಗಬೇಕಾಗಿದೆ. ಇಂತಹ ಕ್ರಮಗಳಿಂದ ರಾಜ್ಯಗಳ ಅಧಿಕಾರವನ್ನು ಮೊಟುಕುಗೊಳಿಸುವ ಹುನ್ನಾರ ಕೇಂದ್ರ ಸರ್ಕಾರದ ಕ್ರಮದಲ್ಲಿ ಅಡಗಿದೆ ಎಂಬುದನ್ನು ಅರಿತುಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...