Homeಕರ್ನಾಟಕಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

- Advertisement -
- Advertisement -

ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ ಕಲಂ 370ನ್ನು ರದ್ದುಪಡಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಷರಶಃ ಉಸಿರುಗಟ್ಟಿಸುವ ವಾತಾವರಣ ಮನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಕಣಿವೆ ರಾಜ್ಯದಲ್ಲಿ ಮೊಬೈಲ್, ಸ್ಥಿರ ದೂರವಾಣಿ, ಬಸ್ ಸೇವೆ ಇಲ್ಲದಂತೆ ಮಾಡಿ ಅಲ್ಲಿನ ಜನರ ಮೂಲಭೂತ ಹಕ್ಕುಗಳನ್ನೇ ಕಸಿಯಲಾಗಿದೆ. ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿರುವ ಬಗ್ಗೆ ಇದುವರೆಗೂ ಯಾವೊಂದು ಮಾಧ್ಯಮಗಳು ಕೇಂದ್ರದ ಗಮನ ಸೆಳೆದಿಲ್ಲ. ಕೇಸರಿ ನಾಡಿನ ಜನರ ಮೂಗಿನೊಳಗೆ ಕಮಲದೊಳಗಿನ ಹುಳುಗಳು ಸೇರಿಹೋಗಿ ಉಸಿರು ಬಿಡುವುದು ಕಷ್ಟವಾಗಿದೆ.

ಈ ದೇಶದ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳಿಗೆ ಚ್ಯುತಿಯಾದಾಗ ಸುಪ್ರೀಂ ಕೋರ್ಟ್ ಜನರ ನೆರವಿಗೆ ಬರಬೇಕು. ಆದರೆ ಇಂತಹ ಯಾವುದೇ ಕೆಲಸ ಸುಪ್ರೀಂಕೋರ್ಟ್‍ನಿಂದ ಆದಂತೆ ಕಂಡುಬಂದಿಲ್ಲ. ಸ್ವಾತಂತ್ರ್ಯದ ಹಕ್ಕು, ಸಭೆ ಸೇರುವ ಹಕ್ಕು, ಪ್ರತಿಭಟನೆ ನಡೆಸುವ ಹಕ್ಕು, ಮಾತನಾಡುವ ಮತ್ತು ಬರೆಯುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು, ಕೆಲಸದ ಹಕ್ಕು ಹೀಗೆ ಎಲ್ಲ ಮೂಲಭೂತ ಹಕ್ಕುಗಳು ಸಂಪೂರ್ಣ ಮೊಟುಕಾಗಿವೆ. ಇಂತಹ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಜ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಜನರ ಈ ಹಕ್ಕುಗಳನ್ನು ರಕ್ಷಣೆ ಮಾಡಿದೆ. ಅದರಂತೆ ಈಗಲೂ ಮಾಡಬೇಕಿದೆ.

ಭಾರತದ ಒಕ್ಕೂಟ ಸರ್ಕಾರ ಸಂವಿಧಾನದ 370ನೇ ವಿಧಿಯನ್ನು ಅಮಾನ್ಯಗೊಳಿಸಿರುವ ಸಂಬಂಧ ಸುಪ್ರೀಂಕೋರ್ಟ್‍ನಲ್ಲಿ ಸುಮಾರು 17ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳು ದಾಖಲಾಗಿವೆ. ಎಲ್ಲರೂ ಕೇವಲ ಸಂವಿಧಾನದ 370 ಮತ್ತು ಅದರಿಂದ ಪ್ರದತ್ತವಾದ 35 ಎ ಕಲಂ ರದ್ದುಗೊಳಿಸಿರುವುದನ್ನು ಮಾತ್ರ ಪ್ರಶ್ನಿಸಲಾಗಿದೆ. ಆದರೆ ಒಂದು ರಾಜ್ಯದ ಮೇಲೆ ಮಿಲಿಟರಿ ಪ್ರಯೋಗಿಸಿ ನಿರ್ಬಂಧ ವಿಧಿಸಿ ಉಸಿರುಗಟ್ಟಿಸುವಂತೆ ಮಾಡಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯೇ ಸರಿ. ಜಮ್ಮು-ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಿದ್ದರೂ ಅದನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರೂ ಶೀಘ್ರ ವಿಚಾರಣೆಯ ಜರೂರತ್ತು ಇಲ್ಲವೆಂದು ವಿಚಾರಣೆಯನ್ನು ಮುಂದೂಡಲಾಗಿದೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದಾಗಲೂ ಅದು ಭಾರತದ ಭಾಗವಾಗಿತ್ತು ಎಂಬುದನ್ನು ಮರೆಮಾಚಲಾಗುತ್ತಿದೆ. 370 ವಿಧಿಯನ್ನು ರದ್ದುಪಡಿಸಿದ್ದರಿಂದಲೇ ಅದು ಭಾರತದ ಭಾಗವಾಗಿದೆ ಎಂಬ ಭ್ರಮೆಗಳನ್ನು ಬಿತ್ತಲಾಗಿದ್ದು ಮೋದಿಶಾ ಜೋಡಿ ಮಹತ್ವದ ಸಾಧನೆಯನ್ನು ಮಾಡಿದ್ದೇವೆಂಬಂತೆ ಬೀಗುತ್ತಿದ್ದಾರೆ. ಆದರೆ ತಾವು ಇನ್ನೊಬ್ಬರ ಹಕ್ಕುಗಳನ್ನು ಕಸಿಯುತ್ತಿದ್ದೇವೆ ಎಂಬ ಕನಿಷ್ಠ ಜ್ಞಾನವೂ ಇಲ್ಲದಂತೆ ವರ್ತಿಸುತ್ತಿರುವುದು ಸೋಜಿಗವೇ ಸರಿ. ಅಲ್ಲಿ ಕೇವಲ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾತ್ರವಾಗಿಲ್ಲ. ಬದಲಿಗೆ ಬೇಸಿಕ್ ರೈಟ್ಸ್ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯೂ ಆಗಿದೆ. ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳನ್ನು ಕಸಿಯಲಾಗಿದೆ.

ಕಳೆದ ಎರಡು ತಿಂಗಳಿಂದಲೂ ಅಲ್ಲಿನ ಜನರು ಕೆಲಸಕ್ಕೆ ಹೋಗದಂತಹ ವಾತಾವರಣ ಸೃಷ್ಟಿಯಾಗಿದೆ. ಕೂಲಿಕಾರ್ಮಿಕರು, ರೈತರು, ಸಣ್ಣಪುಟ್ಟ ವ್ಯಾಪಾರಿಗಳು ಎಲ್ಲ ಕೆಲಸಗಳನ್ನು ಬದಿಗೊತ್ತಿ ಮನೆಯಲ್ಲೇ ಕುಳಿತು ದಿನದೂಡುವಂತಹ ಪರಿಸ್ಥಿತಿ ಇದೆ. ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ವಿಷಯ ಸದ್ದು ಮಾಡುತ್ತಿದೆ. ಆದರೂ ಮೋದಿ ಸರ್ಕಾರ ಜನರು ಹಕ್ಕುಗಳಿಂದ ವಂಚಿತರಾದರೂ ಚಿಂತೆ ಇಲ್ಲ, ವಿಜೃಂಭಣೆಯಿಂದ ಅಧಿಕಾರ ಅನುಭವಿಸಬೇಕು ಎಂಬ ಅಮಲಿನಲ್ಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಹೀಗಾಗಿ ಆ ರಾಜ್ಯ ಮತ್ತೆ ಚೇತರಿಸಿಕೊಳ್ಳಬೇಕೆಂದು ಹಲವು ವರ್ಷಗಳೇ ಕಳೆಯಬೇಕು. ಸೇಬು, ಕೇಸರಿ ವ್ಯಾಪಾರಿಗಳು ಸಾಕಷ್ಟು ನಷ್ಟಕ್ಕೆ ಗುರಿಯಾಗಿದ್ದಾರೆ. ಆದರೆ ಜೆಕೆಯಲ್ಲಿ ಏನೂ ಆಗಿಲ್ಲವೆಂದೇ ಕೇಂದ್ರ ಸರ್ಕಾರ ಭಂಡ ವಾದ ಮಾಡುತ್ತಿದೆ. ನಾಗರಿಕ ಸಂಘಟನೆಗಳು, ಪ್ರಗತಿಪರರು, ಸಾಹಿತಿಗಳು, ಕಲಾವಿದರು ದೊಡ್ಡ ಮಟ್ಟದಲ್ಲಿ ದನಿ ಎತ್ತಿ ಮೂಲಭೂತ ಹಕ್ಕುಗಳು, ಮಾನವ ಹಕ್ಕುಗಳು, ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಕುರಿತು ಹೋರಾಟಕ್ಕೆ ಸಜ್ಜಾಗಬೇಕಾಗಿದೆ. ಇಂತಹ ಕ್ರಮಗಳಿಂದ ರಾಜ್ಯಗಳ ಅಧಿಕಾರವನ್ನು ಮೊಟುಕುಗೊಳಿಸುವ ಹುನ್ನಾರ ಕೇಂದ್ರ ಸರ್ಕಾರದ ಕ್ರಮದಲ್ಲಿ ಅಡಗಿದೆ ಎಂಬುದನ್ನು ಅರಿತುಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...