Homeಕರ್ನಾಟಕಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

- Advertisement -
- Advertisement -

ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ ಕಲಂ 370ನ್ನು ರದ್ದುಪಡಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಷರಶಃ ಉಸಿರುಗಟ್ಟಿಸುವ ವಾತಾವರಣ ಮನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಕಣಿವೆ ರಾಜ್ಯದಲ್ಲಿ ಮೊಬೈಲ್, ಸ್ಥಿರ ದೂರವಾಣಿ, ಬಸ್ ಸೇವೆ ಇಲ್ಲದಂತೆ ಮಾಡಿ ಅಲ್ಲಿನ ಜನರ ಮೂಲಭೂತ ಹಕ್ಕುಗಳನ್ನೇ ಕಸಿಯಲಾಗಿದೆ. ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿರುವ ಬಗ್ಗೆ ಇದುವರೆಗೂ ಯಾವೊಂದು ಮಾಧ್ಯಮಗಳು ಕೇಂದ್ರದ ಗಮನ ಸೆಳೆದಿಲ್ಲ. ಕೇಸರಿ ನಾಡಿನ ಜನರ ಮೂಗಿನೊಳಗೆ ಕಮಲದೊಳಗಿನ ಹುಳುಗಳು ಸೇರಿಹೋಗಿ ಉಸಿರು ಬಿಡುವುದು ಕಷ್ಟವಾಗಿದೆ.

ಈ ದೇಶದ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳಿಗೆ ಚ್ಯುತಿಯಾದಾಗ ಸುಪ್ರೀಂ ಕೋರ್ಟ್ ಜನರ ನೆರವಿಗೆ ಬರಬೇಕು. ಆದರೆ ಇಂತಹ ಯಾವುದೇ ಕೆಲಸ ಸುಪ್ರೀಂಕೋರ್ಟ್‍ನಿಂದ ಆದಂತೆ ಕಂಡುಬಂದಿಲ್ಲ. ಸ್ವಾತಂತ್ರ್ಯದ ಹಕ್ಕು, ಸಭೆ ಸೇರುವ ಹಕ್ಕು, ಪ್ರತಿಭಟನೆ ನಡೆಸುವ ಹಕ್ಕು, ಮಾತನಾಡುವ ಮತ್ತು ಬರೆಯುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು, ಕೆಲಸದ ಹಕ್ಕು ಹೀಗೆ ಎಲ್ಲ ಮೂಲಭೂತ ಹಕ್ಕುಗಳು ಸಂಪೂರ್ಣ ಮೊಟುಕಾಗಿವೆ. ಇಂತಹ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಜ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಜನರ ಈ ಹಕ್ಕುಗಳನ್ನು ರಕ್ಷಣೆ ಮಾಡಿದೆ. ಅದರಂತೆ ಈಗಲೂ ಮಾಡಬೇಕಿದೆ.

ಭಾರತದ ಒಕ್ಕೂಟ ಸರ್ಕಾರ ಸಂವಿಧಾನದ 370ನೇ ವಿಧಿಯನ್ನು ಅಮಾನ್ಯಗೊಳಿಸಿರುವ ಸಂಬಂಧ ಸುಪ್ರೀಂಕೋರ್ಟ್‍ನಲ್ಲಿ ಸುಮಾರು 17ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳು ದಾಖಲಾಗಿವೆ. ಎಲ್ಲರೂ ಕೇವಲ ಸಂವಿಧಾನದ 370 ಮತ್ತು ಅದರಿಂದ ಪ್ರದತ್ತವಾದ 35 ಎ ಕಲಂ ರದ್ದುಗೊಳಿಸಿರುವುದನ್ನು ಮಾತ್ರ ಪ್ರಶ್ನಿಸಲಾಗಿದೆ. ಆದರೆ ಒಂದು ರಾಜ್ಯದ ಮೇಲೆ ಮಿಲಿಟರಿ ಪ್ರಯೋಗಿಸಿ ನಿರ್ಬಂಧ ವಿಧಿಸಿ ಉಸಿರುಗಟ್ಟಿಸುವಂತೆ ಮಾಡಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯೇ ಸರಿ. ಜಮ್ಮು-ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಿದ್ದರೂ ಅದನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರೂ ಶೀಘ್ರ ವಿಚಾರಣೆಯ ಜರೂರತ್ತು ಇಲ್ಲವೆಂದು ವಿಚಾರಣೆಯನ್ನು ಮುಂದೂಡಲಾಗಿದೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದಾಗಲೂ ಅದು ಭಾರತದ ಭಾಗವಾಗಿತ್ತು ಎಂಬುದನ್ನು ಮರೆಮಾಚಲಾಗುತ್ತಿದೆ. 370 ವಿಧಿಯನ್ನು ರದ್ದುಪಡಿಸಿದ್ದರಿಂದಲೇ ಅದು ಭಾರತದ ಭಾಗವಾಗಿದೆ ಎಂಬ ಭ್ರಮೆಗಳನ್ನು ಬಿತ್ತಲಾಗಿದ್ದು ಮೋದಿಶಾ ಜೋಡಿ ಮಹತ್ವದ ಸಾಧನೆಯನ್ನು ಮಾಡಿದ್ದೇವೆಂಬಂತೆ ಬೀಗುತ್ತಿದ್ದಾರೆ. ಆದರೆ ತಾವು ಇನ್ನೊಬ್ಬರ ಹಕ್ಕುಗಳನ್ನು ಕಸಿಯುತ್ತಿದ್ದೇವೆ ಎಂಬ ಕನಿಷ್ಠ ಜ್ಞಾನವೂ ಇಲ್ಲದಂತೆ ವರ್ತಿಸುತ್ತಿರುವುದು ಸೋಜಿಗವೇ ಸರಿ. ಅಲ್ಲಿ ಕೇವಲ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾತ್ರವಾಗಿಲ್ಲ. ಬದಲಿಗೆ ಬೇಸಿಕ್ ರೈಟ್ಸ್ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯೂ ಆಗಿದೆ. ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳನ್ನು ಕಸಿಯಲಾಗಿದೆ.

ಕಳೆದ ಎರಡು ತಿಂಗಳಿಂದಲೂ ಅಲ್ಲಿನ ಜನರು ಕೆಲಸಕ್ಕೆ ಹೋಗದಂತಹ ವಾತಾವರಣ ಸೃಷ್ಟಿಯಾಗಿದೆ. ಕೂಲಿಕಾರ್ಮಿಕರು, ರೈತರು, ಸಣ್ಣಪುಟ್ಟ ವ್ಯಾಪಾರಿಗಳು ಎಲ್ಲ ಕೆಲಸಗಳನ್ನು ಬದಿಗೊತ್ತಿ ಮನೆಯಲ್ಲೇ ಕುಳಿತು ದಿನದೂಡುವಂತಹ ಪರಿಸ್ಥಿತಿ ಇದೆ. ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ವಿಷಯ ಸದ್ದು ಮಾಡುತ್ತಿದೆ. ಆದರೂ ಮೋದಿ ಸರ್ಕಾರ ಜನರು ಹಕ್ಕುಗಳಿಂದ ವಂಚಿತರಾದರೂ ಚಿಂತೆ ಇಲ್ಲ, ವಿಜೃಂಭಣೆಯಿಂದ ಅಧಿಕಾರ ಅನುಭವಿಸಬೇಕು ಎಂಬ ಅಮಲಿನಲ್ಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಹೀಗಾಗಿ ಆ ರಾಜ್ಯ ಮತ್ತೆ ಚೇತರಿಸಿಕೊಳ್ಳಬೇಕೆಂದು ಹಲವು ವರ್ಷಗಳೇ ಕಳೆಯಬೇಕು. ಸೇಬು, ಕೇಸರಿ ವ್ಯಾಪಾರಿಗಳು ಸಾಕಷ್ಟು ನಷ್ಟಕ್ಕೆ ಗುರಿಯಾಗಿದ್ದಾರೆ. ಆದರೆ ಜೆಕೆಯಲ್ಲಿ ಏನೂ ಆಗಿಲ್ಲವೆಂದೇ ಕೇಂದ್ರ ಸರ್ಕಾರ ಭಂಡ ವಾದ ಮಾಡುತ್ತಿದೆ. ನಾಗರಿಕ ಸಂಘಟನೆಗಳು, ಪ್ರಗತಿಪರರು, ಸಾಹಿತಿಗಳು, ಕಲಾವಿದರು ದೊಡ್ಡ ಮಟ್ಟದಲ್ಲಿ ದನಿ ಎತ್ತಿ ಮೂಲಭೂತ ಹಕ್ಕುಗಳು, ಮಾನವ ಹಕ್ಕುಗಳು, ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಕುರಿತು ಹೋರಾಟಕ್ಕೆ ಸಜ್ಜಾಗಬೇಕಾಗಿದೆ. ಇಂತಹ ಕ್ರಮಗಳಿಂದ ರಾಜ್ಯಗಳ ಅಧಿಕಾರವನ್ನು ಮೊಟುಕುಗೊಳಿಸುವ ಹುನ್ನಾರ ಕೇಂದ್ರ ಸರ್ಕಾರದ ಕ್ರಮದಲ್ಲಿ ಅಡಗಿದೆ ಎಂಬುದನ್ನು ಅರಿತುಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...