Homeಕರ್ನಾಟಕಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

- Advertisement -
- Advertisement -

ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ ಕಲಂ 370ನ್ನು ರದ್ದುಪಡಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಷರಶಃ ಉಸಿರುಗಟ್ಟಿಸುವ ವಾತಾವರಣ ಮನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಕಣಿವೆ ರಾಜ್ಯದಲ್ಲಿ ಮೊಬೈಲ್, ಸ್ಥಿರ ದೂರವಾಣಿ, ಬಸ್ ಸೇವೆ ಇಲ್ಲದಂತೆ ಮಾಡಿ ಅಲ್ಲಿನ ಜನರ ಮೂಲಭೂತ ಹಕ್ಕುಗಳನ್ನೇ ಕಸಿಯಲಾಗಿದೆ. ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿರುವ ಬಗ್ಗೆ ಇದುವರೆಗೂ ಯಾವೊಂದು ಮಾಧ್ಯಮಗಳು ಕೇಂದ್ರದ ಗಮನ ಸೆಳೆದಿಲ್ಲ. ಕೇಸರಿ ನಾಡಿನ ಜನರ ಮೂಗಿನೊಳಗೆ ಕಮಲದೊಳಗಿನ ಹುಳುಗಳು ಸೇರಿಹೋಗಿ ಉಸಿರು ಬಿಡುವುದು ಕಷ್ಟವಾಗಿದೆ.

ಈ ದೇಶದ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳಿಗೆ ಚ್ಯುತಿಯಾದಾಗ ಸುಪ್ರೀಂ ಕೋರ್ಟ್ ಜನರ ನೆರವಿಗೆ ಬರಬೇಕು. ಆದರೆ ಇಂತಹ ಯಾವುದೇ ಕೆಲಸ ಸುಪ್ರೀಂಕೋರ್ಟ್‍ನಿಂದ ಆದಂತೆ ಕಂಡುಬಂದಿಲ್ಲ. ಸ್ವಾತಂತ್ರ್ಯದ ಹಕ್ಕು, ಸಭೆ ಸೇರುವ ಹಕ್ಕು, ಪ್ರತಿಭಟನೆ ನಡೆಸುವ ಹಕ್ಕು, ಮಾತನಾಡುವ ಮತ್ತು ಬರೆಯುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು, ಕೆಲಸದ ಹಕ್ಕು ಹೀಗೆ ಎಲ್ಲ ಮೂಲಭೂತ ಹಕ್ಕುಗಳು ಸಂಪೂರ್ಣ ಮೊಟುಕಾಗಿವೆ. ಇಂತಹ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಜ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಜನರ ಈ ಹಕ್ಕುಗಳನ್ನು ರಕ್ಷಣೆ ಮಾಡಿದೆ. ಅದರಂತೆ ಈಗಲೂ ಮಾಡಬೇಕಿದೆ.

ಭಾರತದ ಒಕ್ಕೂಟ ಸರ್ಕಾರ ಸಂವಿಧಾನದ 370ನೇ ವಿಧಿಯನ್ನು ಅಮಾನ್ಯಗೊಳಿಸಿರುವ ಸಂಬಂಧ ಸುಪ್ರೀಂಕೋರ್ಟ್‍ನಲ್ಲಿ ಸುಮಾರು 17ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳು ದಾಖಲಾಗಿವೆ. ಎಲ್ಲರೂ ಕೇವಲ ಸಂವಿಧಾನದ 370 ಮತ್ತು ಅದರಿಂದ ಪ್ರದತ್ತವಾದ 35 ಎ ಕಲಂ ರದ್ದುಗೊಳಿಸಿರುವುದನ್ನು ಮಾತ್ರ ಪ್ರಶ್ನಿಸಲಾಗಿದೆ. ಆದರೆ ಒಂದು ರಾಜ್ಯದ ಮೇಲೆ ಮಿಲಿಟರಿ ಪ್ರಯೋಗಿಸಿ ನಿರ್ಬಂಧ ವಿಧಿಸಿ ಉಸಿರುಗಟ್ಟಿಸುವಂತೆ ಮಾಡಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯೇ ಸರಿ. ಜಮ್ಮು-ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಿದ್ದರೂ ಅದನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರೂ ಶೀಘ್ರ ವಿಚಾರಣೆಯ ಜರೂರತ್ತು ಇಲ್ಲವೆಂದು ವಿಚಾರಣೆಯನ್ನು ಮುಂದೂಡಲಾಗಿದೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದಾಗಲೂ ಅದು ಭಾರತದ ಭಾಗವಾಗಿತ್ತು ಎಂಬುದನ್ನು ಮರೆಮಾಚಲಾಗುತ್ತಿದೆ. 370 ವಿಧಿಯನ್ನು ರದ್ದುಪಡಿಸಿದ್ದರಿಂದಲೇ ಅದು ಭಾರತದ ಭಾಗವಾಗಿದೆ ಎಂಬ ಭ್ರಮೆಗಳನ್ನು ಬಿತ್ತಲಾಗಿದ್ದು ಮೋದಿಶಾ ಜೋಡಿ ಮಹತ್ವದ ಸಾಧನೆಯನ್ನು ಮಾಡಿದ್ದೇವೆಂಬಂತೆ ಬೀಗುತ್ತಿದ್ದಾರೆ. ಆದರೆ ತಾವು ಇನ್ನೊಬ್ಬರ ಹಕ್ಕುಗಳನ್ನು ಕಸಿಯುತ್ತಿದ್ದೇವೆ ಎಂಬ ಕನಿಷ್ಠ ಜ್ಞಾನವೂ ಇಲ್ಲದಂತೆ ವರ್ತಿಸುತ್ತಿರುವುದು ಸೋಜಿಗವೇ ಸರಿ. ಅಲ್ಲಿ ಕೇವಲ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾತ್ರವಾಗಿಲ್ಲ. ಬದಲಿಗೆ ಬೇಸಿಕ್ ರೈಟ್ಸ್ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯೂ ಆಗಿದೆ. ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳನ್ನು ಕಸಿಯಲಾಗಿದೆ.

ಕಳೆದ ಎರಡು ತಿಂಗಳಿಂದಲೂ ಅಲ್ಲಿನ ಜನರು ಕೆಲಸಕ್ಕೆ ಹೋಗದಂತಹ ವಾತಾವರಣ ಸೃಷ್ಟಿಯಾಗಿದೆ. ಕೂಲಿಕಾರ್ಮಿಕರು, ರೈತರು, ಸಣ್ಣಪುಟ್ಟ ವ್ಯಾಪಾರಿಗಳು ಎಲ್ಲ ಕೆಲಸಗಳನ್ನು ಬದಿಗೊತ್ತಿ ಮನೆಯಲ್ಲೇ ಕುಳಿತು ದಿನದೂಡುವಂತಹ ಪರಿಸ್ಥಿತಿ ಇದೆ. ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ವಿಷಯ ಸದ್ದು ಮಾಡುತ್ತಿದೆ. ಆದರೂ ಮೋದಿ ಸರ್ಕಾರ ಜನರು ಹಕ್ಕುಗಳಿಂದ ವಂಚಿತರಾದರೂ ಚಿಂತೆ ಇಲ್ಲ, ವಿಜೃಂಭಣೆಯಿಂದ ಅಧಿಕಾರ ಅನುಭವಿಸಬೇಕು ಎಂಬ ಅಮಲಿನಲ್ಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಹೀಗಾಗಿ ಆ ರಾಜ್ಯ ಮತ್ತೆ ಚೇತರಿಸಿಕೊಳ್ಳಬೇಕೆಂದು ಹಲವು ವರ್ಷಗಳೇ ಕಳೆಯಬೇಕು. ಸೇಬು, ಕೇಸರಿ ವ್ಯಾಪಾರಿಗಳು ಸಾಕಷ್ಟು ನಷ್ಟಕ್ಕೆ ಗುರಿಯಾಗಿದ್ದಾರೆ. ಆದರೆ ಜೆಕೆಯಲ್ಲಿ ಏನೂ ಆಗಿಲ್ಲವೆಂದೇ ಕೇಂದ್ರ ಸರ್ಕಾರ ಭಂಡ ವಾದ ಮಾಡುತ್ತಿದೆ. ನಾಗರಿಕ ಸಂಘಟನೆಗಳು, ಪ್ರಗತಿಪರರು, ಸಾಹಿತಿಗಳು, ಕಲಾವಿದರು ದೊಡ್ಡ ಮಟ್ಟದಲ್ಲಿ ದನಿ ಎತ್ತಿ ಮೂಲಭೂತ ಹಕ್ಕುಗಳು, ಮಾನವ ಹಕ್ಕುಗಳು, ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಕುರಿತು ಹೋರಾಟಕ್ಕೆ ಸಜ್ಜಾಗಬೇಕಾಗಿದೆ. ಇಂತಹ ಕ್ರಮಗಳಿಂದ ರಾಜ್ಯಗಳ ಅಧಿಕಾರವನ್ನು ಮೊಟುಕುಗೊಳಿಸುವ ಹುನ್ನಾರ ಕೇಂದ್ರ ಸರ್ಕಾರದ ಕ್ರಮದಲ್ಲಿ ಅಡಗಿದೆ ಎಂಬುದನ್ನು ಅರಿತುಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...