Homeಮುಖಪುಟಆದೇಶವನ್ನು ಉಲ್ಲಂಘಿಸಿ ಅಕ್ರಮ ಧ್ವಂಸ | ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಅಸ್ಸಾಂ ನಿವಾಸಿಗಳು

ಆದೇಶವನ್ನು ಉಲ್ಲಂಘಿಸಿ ಅಕ್ರಮ ಧ್ವಂಸ | ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಅಸ್ಸಾಂ ನಿವಾಸಿಗಳು

- Advertisement -
- Advertisement -

ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ದೇಶಾದ್ಯಂತ ಯಾವುದೇ ನೆಲಸಮ ಕಾರ್ಯಚಾರಣೆ ಮಾಡಬಾರದು ಎಂದು ನಿರ್ದೇಶಿಸುವ ಸೆಪ್ಟೆಂಬರ್ 17, 2024ರ ಸುಪ್ರೀಂಕೋರ್ಟ್‌ನ ಮಧ್ಯಂತರ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಅಸ್ಸಾಂನ 47 ನಿವಾಸಿಗಳು ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದಾರೆ.ಆದೇಶ ಉಲ್ಲಂಘಿಸಿ ಅಕ್ರಮ ಧ್ವಂಸ

ಈ ಆದೇಶವು ಸಾರ್ವಜನಿಕ ರಸ್ತೆಗಳು, ಫುಟ್‌ಪಾತ್‌ಗಳು, ರೈಲು ಮಾರ್ಗಗಳು ಅಥವಾ ಜಲಮೂಲಗಳ ಅತಿಕ್ರಮಣಗಳಿಗೆ ಅನ್ವಯಿಸುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಸ್ಸಾಂನ ಅಧಿಕಾರಿಗಳು ತಮ್ಮ ಮನೆಗಳನ್ನು ನೆಲಸಮಗೊಳಿಸಲು ಗುರುತು ಹಾಕುವ ಮೂಲಕ ಈ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಅಧಿಕಾರಿಗಳು ತಮ್ಮನ್ನು ಭೂ ಅತಿಕ್ರಮಣದಾರರು ಎಂದು ಆರೋಪಿಸಿ ಈ ಕೃತ್ಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಪ್ರಕರಣವನ್ನು ಸೋಮವಾರ ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠದ ಮುಂದೆ ಪಟ್ಟಿ ಮಾಡಲಾಗಿದೆ. ಆದೇಶ ಉಲ್ಲಂಘಿಸಿ ಅಕ್ರಮ ಧ್ವಂಸ

ಸೆಪ್ಟೆಂಬರ್ 20, 2024 ರಂದು ಗುವಾಹಟಿ ಹೈಕೋರ್ಟ್‌ನಲ್ಲಿ ಅಸ್ಸಾಂನ ಅಡ್ವೊಕೇಟ್ ಜನರಲ್ ಅವರು ಅರ್ಜಿದಾರರ ಮನವಿಗಳನ್ನು ಇತ್ಯರ್ಥಪಡಿಸುವವರೆಗೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದರು. ಹೀಗಿದ್ದರೂ ಅಧಿಕಾರಿಗಳು ಕೋರ್ಟ್‌ ಆದೇಶವನ್ನು ಉಲ್ಲಂಘಿಸಿ ಕೆಡವುವ ಕಾರ್ಯ ಮುಂದುವರಿಸಿದ್ದಾರೆ ಎನ್ನಲಾಗಿದೆ.

ಇದನ್ನೂಓದಿ:  ಉತ್ತರ ಪ್ರದೇಶ | ದುಡಿದ ಹಣ ನೀಡುವುದಾಗಿ ಕಚೇರಿಗೆ ಕರೆದು ದಲಿತ ಕಾರ್ಮಿಕರಿಗೆ ಥಳಿಸಿ, ಕೊಲೆ ಬೆದರಿಕೆ

“ನ್ಯಾಯಾಲಯವು ಹಲವಾರು ಸಂದರ್ಭಗಳಲ್ಲಿ ಹೇಳಿರುವಂತೆ ವಸತಿ ಅಥವಾ ಆಶ್ರಯದ ಹಕ್ಕು ಮೂಲಭೂತ ಹಕ್ಕು ಮತ್ತು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಿದ ಹಕ್ಕಿನ ಅವಿಭಾಜ್ಯ ಅಂಗವಾಗಿದೆ. ಕಾನೂನಿನ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ನಾಗರಿಕರಿಂದ ಈ ಹಕ್ಕನ್ನು ಕಸಿದುಕೊಳ್ಳಲು ಅಥವಾ ಉಲ್ಲಂಘಿಸಲು ಸಾಧ್ಯವಿಲ್ಲ. ಆದ್ದರಿಂದ, ಆಪಾದಿತ ಅಪರಾಧಗಳಿಗೆ ದಂಡನಾತ್ಮಕ ಕ್ರಮವಾಗಿ ಆಸ್ತಿಗಳನ್ನು ಕೆಡವುವುದು ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಈ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹಲವಾರು ದಶಕಗಳಿಂದ ಕಮ್ರೂಪ್ ಮೆಟ್ರೋ ಜಿಲ್ಲೆಯ ಸೋನಪುರ್ ಮೌಜಾದಲ್ಲಿ ಕಚುಟೋಲಿ ಪಥರ್ ಮತ್ತು ಇತರ ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಸಿಸುತ್ತಿರುವ ಅರ್ಜಿದಾರರು, ಮೂಲ ಪಟ್ಟದಾರರು (ಭೂಮಾಲೀಕರು) ಜಾರಿಗೊಳಿಸಿದ ಅಟಾರ್ನಿ ಅಗ್ರಿಮೆಂಟ್ ಪ್ರಕಾರ ಅಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಅವರು ಭೂಮಿಯ ಮಾಲೀಕತ್ವ ತಮ್ಮದು ಎಂದು ವಾದಿಸದಿದ್ದರೂ, ತಮ್ಮ ವಾಸ ಕಾನೂನುಬದ್ಧವಾಗಿ ಮಾನ್ಯವಾಗಿದೆ ಮತ್ತು ಈ ಒಪ್ಪಂದಗಳಿಂದ ಗುರುತಿಸಲ್ಪಟ್ಟಿದೆ ಎಂದು ಅವರು ವಾದಿಸುತ್ತಿದ್ದಾರೆ.

ಅರ್ಜಿದಾರರನ್ನು ಜಿಲ್ಲಾಡಳಿತವು ಆದಿವಾಸಿಗಳ ಭೂಮಿಯನ್ನು “ಅಕ್ರಮ ಒತ್ತುವರಿ” ಮಾಡಿದವರು ಅಥವಾ “ಅತಿಕ್ರಮಣಕಾರರು” ಎಂದು ವರ್ಗೀಕರಿಸಿರುವುದನ್ನು ಅರ್ಜಿಯು ಪ್ರಶ್ನಿಸಿದೆ. ಸಂರಕ್ಷಿತ ಬುಡಕಟ್ಟು ವರ್ಗಕ್ಕೆ ಸೇರಿದ ಕೆಲವು ಮೂಲ ಪಟ್ಟಾದಾರರಿಂದ ಭೂಮಿಯಲ್ಲಿ ವಾಸಿಸಲು ಅನುಮತಿಸಲಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ಇದನ್ನೂಓದಿ:  ಹಿಜ್ಬುಲ್ಲಾ ಮುಖ್ಯಸ್ಥನ ಹತ್ಯೆ: ಯುಎನ್ ಭದ್ರತಾ ಮಂಡಳಿಯ ತುರ್ತು ಸಭೆಗೆ ಕರೆ ನೀಡಿದ ಇರಾನ್, ಪ್ರತೀಕಾರದ ಪ್ರತಿಜ್ಞೆ

ಅರ್ಜಿದಾರರು ಎಂದಿಗೂ ಮಾಲೀಕತ್ವದ ಹಕ್ಕುಗಳನ್ನು ಪ್ರತಿಪಾದಿಸಿಲ್ಲ ಮತ್ತು ಭೂಮಿಯ ಸ್ವರೂಪವನ್ನು ಬದಲಾಯಿಸಿಲ್ಲ ಎಂದು ಅರ್ಜಿಯು ಒತ್ತಿಹೇಳಿದೆ. ಅರ್ಜಿದಾರರು ಆಕ್ರಮಿಸಿಕೊಂಡಿರುವ ಭೂಮಿ 1920ರ ದಶಕದಿಂದಲೂ ಅವರ ಪೂರ್ವಜರ ಸ್ವಾಧೀನದಲ್ಲಿದೆ ಎಂದು ಅರ್ಜಿಯು ವಾದಿಸುತ್ತದೆ. ಆದರೆ 1950 ರಲ್ಲಿ ಸರ್ಕಾರದ ಅಧಿಸೂಚನೆಯ ಪ್ರಕಾರ ಈ ಪ್ರದೇಶದಲ್ಲಿ ಬುಡಕಟ್ಟು ಬೆಲ್ಟ್‌ಗಳನ್ನು ಸ್ಥಾಪಿಸಲಾಗಿತ್ತು.

ಅರ್ಜಿದಾರರಿಗೆ ಅವರ ನಿವಾಸದ ಆಧಾರದ ಮೇಲೆ ವಿದ್ಯುತ್, ಪಡಿತರ ಚೀಟಿಗಳು, ಆಧಾರ್ ಕಾರ್ಡ್‌ಗಳು ಮತ್ತು ಮತದಾರರ ಗುರುತಿನ ಚೀಟಿಗಳಂತಹ ಅಗತ್ಯ ಸೇವೆಗಳನ್ನು ಒದಗಿಸಲಾಗಿದೆ ಎಂದು ಅರ್ಜಿಯಲ್ಲಿ ಎತ್ತಿ ತೋರಿಸಲಾಗಿದೆ. ಅವರು ಭೂಮಿಯ ಸ್ವರೂಪವನ್ನು ಬದಲಾಯಿಸದ ಕಾರಣ ಅವರು ಅಸ್ಸಾಂ ಭೂಮಿ ಮತ್ತು ಕಂದಾಯ ನಿಯಂತ್ರಣ, 1886 ಅನ್ನು ಉಲ್ಲಂಘಿಸಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಅರ್ಜಿದಾರರು ಕಳೆದ ಏಳು, ಎಂಟು ದಶಕಗಳಿಂದ ಸುಮಾರು ತಲೆಮಾರುಗಳಿಂದ ಈ ನಿಗದಿತ ಭೂಮಿಯಲ್ಲಿ ನೆಲೆಸಿದ್ದಾರೆ. ಆದರೆ ಅವರು ಎಂದಿಗೂ ಯಾವುದೇ ವಿವಾದ ಅಥವಾ ಬುಡಕಟ್ಟು ಅಥವಾ ಪಕ್ಕದ ಪ್ರದೇಶಗಳಲ್ಲಿ ವಾಸಿಸುವ ಸಂರಕ್ಷಿತ ಜನರೊಂದಿಗೆ ಘರ್ಷಣೆಯಲ್ಲಿ ತೊಡಗಿಲ್ಲ. ಅವರು ಶಾಂತಿಯುತವಾಗಿ ಮತ್ತು ಎಲ್ಲಾ ಸಮುದಾಯಗಳಿಗೆ ಸೇರಿದ ಜನರೊಂದಿಗೆ ಸರಿಯಾದ ಸಂಬಂಧದ ಮೂಲಕ ಬದುಕುತ್ತಿದ್ದಾರೆ” ಎಂದು ಅರ್ಜಿಯು ಹೇಳಿದೆ.

ಇದನ್ನೂಓದಿ: ಎಂಸಿಡಿ ಸ್ಥಾಯಿ ಸಮಿತಿ ಚುನಾವಣೆ ಫಲಿತಾಂಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಆಮ್ ಆದ್ಮಿ ಪಕ್ಷ

“ಅದು ಸಾಮಾಜಿಕ ಅಥವಾ ವ್ಯಾಪಾರ ಸಂಬಂಧವಾಗಿರಬಹುದು, ಬುಡಕಟ್ಟು ಜನರಿಂದ ಅರ್ಜಿದಾರರು ಮತ್ತು ಇತರ ಇದೇ ರೀತಿಯ ಜನರ ವಿರುದ್ಧ ಯಾವುದೇ ಪ್ರತಿಭಟನೆಗಳು ಅಥವಾ ದಂಗೆಗಳು ಎಂದಿಗೂ ನಡೆದಿಲ್ಲ. ಹಾಗಾಗಿ, ಅರ್ಜಿದಾರರ ಹೊರಹಾಕುವಿಕೆಯು ಅರ್ಜಿದಾರರ ಮನೆಗಳು ಮತ್ತು ಜೀವನೋಪಾಯವನ್ನು ವಂಚಿತಗೊಳಿಸುತ್ತದೆ ಅಲ್ಲದೆ, ಪ್ರದೇಶದ ಸಾಮಾಜಿಕ ರಚನೆಯನ್ನು ಅಡ್ಡಿಪಡಿಸುತ್ತದೆ ”ಎಂದು ಅರ್ಜಿಯು ಹೇಳಿದೆ.

ಸರ್ಕಾರಿ ಅಧಿಕಾರಿಗಳು ಯಾವುದೇ ಪೂರ್ವ ಸೂಚನೆ ನೀಡದೆ ಅರ್ಜಿದಾರರ ಮನೆಗಳನ್ನು ಕೆಡವಲು ಕೆಂಪು ಸ್ಟಿಕ್ಕರ್‌ಗಳನ್ನು ಹಾಕಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಈ ಕ್ರಮವು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ನಿರ್ದಿಷ್ಟವಾಗಿ ಅಸ್ಸಾಂ ಭೂ ಮತ್ತು ಕಂದಾಯ ನಿಯಂತ್ರಣದ ಅಧ್ಯಾಯ X ನ ಸೆಕ್ಷನ್ 165(3) ಪ್ರಕಾರ, ಯಾವುದೇ ಉರುಳಿಸುವಿಕೆ ನಡೆಯುವ ಮೊದಲು ಖಾಲಿ ಮಾಡಲು ಅಧಿಕಾರಿಗಳು ತೆರವು ಸೂಚನೆಯನ್ನು ನೀಡಬೇಕು ಮತ್ತು ನಿವಾಸಿಗಳಿಗೆ ಒಂದು ತಿಂಗಳ ಅವಧಿಯನ್ನು ಒದಗಿಸಬೇಕಿತ್ತು ಎಂದು ಅರ್ಜಿದಾರರು ವಾದಿಸಿದ್ದಾರೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...