Homeಮುಖಪುಟಆದೇಶವನ್ನು ಉಲ್ಲಂಘಿಸಿ ಅಕ್ರಮ ಧ್ವಂಸ | ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಅಸ್ಸಾಂ ನಿವಾಸಿಗಳು

ಆದೇಶವನ್ನು ಉಲ್ಲಂಘಿಸಿ ಅಕ್ರಮ ಧ್ವಂಸ | ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಅಸ್ಸಾಂ ನಿವಾಸಿಗಳು

- Advertisement -
- Advertisement -

ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ದೇಶಾದ್ಯಂತ ಯಾವುದೇ ನೆಲಸಮ ಕಾರ್ಯಚಾರಣೆ ಮಾಡಬಾರದು ಎಂದು ನಿರ್ದೇಶಿಸುವ ಸೆಪ್ಟೆಂಬರ್ 17, 2024ರ ಸುಪ್ರೀಂಕೋರ್ಟ್‌ನ ಮಧ್ಯಂತರ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಅಸ್ಸಾಂನ 47 ನಿವಾಸಿಗಳು ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದಾರೆ.ಆದೇಶ ಉಲ್ಲಂಘಿಸಿ ಅಕ್ರಮ ಧ್ವಂಸ

ಈ ಆದೇಶವು ಸಾರ್ವಜನಿಕ ರಸ್ತೆಗಳು, ಫುಟ್‌ಪಾತ್‌ಗಳು, ರೈಲು ಮಾರ್ಗಗಳು ಅಥವಾ ಜಲಮೂಲಗಳ ಅತಿಕ್ರಮಣಗಳಿಗೆ ಅನ್ವಯಿಸುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಸ್ಸಾಂನ ಅಧಿಕಾರಿಗಳು ತಮ್ಮ ಮನೆಗಳನ್ನು ನೆಲಸಮಗೊಳಿಸಲು ಗುರುತು ಹಾಕುವ ಮೂಲಕ ಈ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಅಧಿಕಾರಿಗಳು ತಮ್ಮನ್ನು ಭೂ ಅತಿಕ್ರಮಣದಾರರು ಎಂದು ಆರೋಪಿಸಿ ಈ ಕೃತ್ಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಪ್ರಕರಣವನ್ನು ಸೋಮವಾರ ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠದ ಮುಂದೆ ಪಟ್ಟಿ ಮಾಡಲಾಗಿದೆ. ಆದೇಶ ಉಲ್ಲಂಘಿಸಿ ಅಕ್ರಮ ಧ್ವಂಸ

ಸೆಪ್ಟೆಂಬರ್ 20, 2024 ರಂದು ಗುವಾಹಟಿ ಹೈಕೋರ್ಟ್‌ನಲ್ಲಿ ಅಸ್ಸಾಂನ ಅಡ್ವೊಕೇಟ್ ಜನರಲ್ ಅವರು ಅರ್ಜಿದಾರರ ಮನವಿಗಳನ್ನು ಇತ್ಯರ್ಥಪಡಿಸುವವರೆಗೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದರು. ಹೀಗಿದ್ದರೂ ಅಧಿಕಾರಿಗಳು ಕೋರ್ಟ್‌ ಆದೇಶವನ್ನು ಉಲ್ಲಂಘಿಸಿ ಕೆಡವುವ ಕಾರ್ಯ ಮುಂದುವರಿಸಿದ್ದಾರೆ ಎನ್ನಲಾಗಿದೆ.

ಇದನ್ನೂಓದಿ:  ಉತ್ತರ ಪ್ರದೇಶ | ದುಡಿದ ಹಣ ನೀಡುವುದಾಗಿ ಕಚೇರಿಗೆ ಕರೆದು ದಲಿತ ಕಾರ್ಮಿಕರಿಗೆ ಥಳಿಸಿ, ಕೊಲೆ ಬೆದರಿಕೆ

“ನ್ಯಾಯಾಲಯವು ಹಲವಾರು ಸಂದರ್ಭಗಳಲ್ಲಿ ಹೇಳಿರುವಂತೆ ವಸತಿ ಅಥವಾ ಆಶ್ರಯದ ಹಕ್ಕು ಮೂಲಭೂತ ಹಕ್ಕು ಮತ್ತು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಿದ ಹಕ್ಕಿನ ಅವಿಭಾಜ್ಯ ಅಂಗವಾಗಿದೆ. ಕಾನೂನಿನ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ನಾಗರಿಕರಿಂದ ಈ ಹಕ್ಕನ್ನು ಕಸಿದುಕೊಳ್ಳಲು ಅಥವಾ ಉಲ್ಲಂಘಿಸಲು ಸಾಧ್ಯವಿಲ್ಲ. ಆದ್ದರಿಂದ, ಆಪಾದಿತ ಅಪರಾಧಗಳಿಗೆ ದಂಡನಾತ್ಮಕ ಕ್ರಮವಾಗಿ ಆಸ್ತಿಗಳನ್ನು ಕೆಡವುವುದು ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಈ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹಲವಾರು ದಶಕಗಳಿಂದ ಕಮ್ರೂಪ್ ಮೆಟ್ರೋ ಜಿಲ್ಲೆಯ ಸೋನಪುರ್ ಮೌಜಾದಲ್ಲಿ ಕಚುಟೋಲಿ ಪಥರ್ ಮತ್ತು ಇತರ ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಸಿಸುತ್ತಿರುವ ಅರ್ಜಿದಾರರು, ಮೂಲ ಪಟ್ಟದಾರರು (ಭೂಮಾಲೀಕರು) ಜಾರಿಗೊಳಿಸಿದ ಅಟಾರ್ನಿ ಅಗ್ರಿಮೆಂಟ್ ಪ್ರಕಾರ ಅಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಅವರು ಭೂಮಿಯ ಮಾಲೀಕತ್ವ ತಮ್ಮದು ಎಂದು ವಾದಿಸದಿದ್ದರೂ, ತಮ್ಮ ವಾಸ ಕಾನೂನುಬದ್ಧವಾಗಿ ಮಾನ್ಯವಾಗಿದೆ ಮತ್ತು ಈ ಒಪ್ಪಂದಗಳಿಂದ ಗುರುತಿಸಲ್ಪಟ್ಟಿದೆ ಎಂದು ಅವರು ವಾದಿಸುತ್ತಿದ್ದಾರೆ.

ಅರ್ಜಿದಾರರನ್ನು ಜಿಲ್ಲಾಡಳಿತವು ಆದಿವಾಸಿಗಳ ಭೂಮಿಯನ್ನು “ಅಕ್ರಮ ಒತ್ತುವರಿ” ಮಾಡಿದವರು ಅಥವಾ “ಅತಿಕ್ರಮಣಕಾರರು” ಎಂದು ವರ್ಗೀಕರಿಸಿರುವುದನ್ನು ಅರ್ಜಿಯು ಪ್ರಶ್ನಿಸಿದೆ. ಸಂರಕ್ಷಿತ ಬುಡಕಟ್ಟು ವರ್ಗಕ್ಕೆ ಸೇರಿದ ಕೆಲವು ಮೂಲ ಪಟ್ಟಾದಾರರಿಂದ ಭೂಮಿಯಲ್ಲಿ ವಾಸಿಸಲು ಅನುಮತಿಸಲಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ಇದನ್ನೂಓದಿ:  ಹಿಜ್ಬುಲ್ಲಾ ಮುಖ್ಯಸ್ಥನ ಹತ್ಯೆ: ಯುಎನ್ ಭದ್ರತಾ ಮಂಡಳಿಯ ತುರ್ತು ಸಭೆಗೆ ಕರೆ ನೀಡಿದ ಇರಾನ್, ಪ್ರತೀಕಾರದ ಪ್ರತಿಜ್ಞೆ

ಅರ್ಜಿದಾರರು ಎಂದಿಗೂ ಮಾಲೀಕತ್ವದ ಹಕ್ಕುಗಳನ್ನು ಪ್ರತಿಪಾದಿಸಿಲ್ಲ ಮತ್ತು ಭೂಮಿಯ ಸ್ವರೂಪವನ್ನು ಬದಲಾಯಿಸಿಲ್ಲ ಎಂದು ಅರ್ಜಿಯು ಒತ್ತಿಹೇಳಿದೆ. ಅರ್ಜಿದಾರರು ಆಕ್ರಮಿಸಿಕೊಂಡಿರುವ ಭೂಮಿ 1920ರ ದಶಕದಿಂದಲೂ ಅವರ ಪೂರ್ವಜರ ಸ್ವಾಧೀನದಲ್ಲಿದೆ ಎಂದು ಅರ್ಜಿಯು ವಾದಿಸುತ್ತದೆ. ಆದರೆ 1950 ರಲ್ಲಿ ಸರ್ಕಾರದ ಅಧಿಸೂಚನೆಯ ಪ್ರಕಾರ ಈ ಪ್ರದೇಶದಲ್ಲಿ ಬುಡಕಟ್ಟು ಬೆಲ್ಟ್‌ಗಳನ್ನು ಸ್ಥಾಪಿಸಲಾಗಿತ್ತು.

ಅರ್ಜಿದಾರರಿಗೆ ಅವರ ನಿವಾಸದ ಆಧಾರದ ಮೇಲೆ ವಿದ್ಯುತ್, ಪಡಿತರ ಚೀಟಿಗಳು, ಆಧಾರ್ ಕಾರ್ಡ್‌ಗಳು ಮತ್ತು ಮತದಾರರ ಗುರುತಿನ ಚೀಟಿಗಳಂತಹ ಅಗತ್ಯ ಸೇವೆಗಳನ್ನು ಒದಗಿಸಲಾಗಿದೆ ಎಂದು ಅರ್ಜಿಯಲ್ಲಿ ಎತ್ತಿ ತೋರಿಸಲಾಗಿದೆ. ಅವರು ಭೂಮಿಯ ಸ್ವರೂಪವನ್ನು ಬದಲಾಯಿಸದ ಕಾರಣ ಅವರು ಅಸ್ಸಾಂ ಭೂಮಿ ಮತ್ತು ಕಂದಾಯ ನಿಯಂತ್ರಣ, 1886 ಅನ್ನು ಉಲ್ಲಂಘಿಸಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಅರ್ಜಿದಾರರು ಕಳೆದ ಏಳು, ಎಂಟು ದಶಕಗಳಿಂದ ಸುಮಾರು ತಲೆಮಾರುಗಳಿಂದ ಈ ನಿಗದಿತ ಭೂಮಿಯಲ್ಲಿ ನೆಲೆಸಿದ್ದಾರೆ. ಆದರೆ ಅವರು ಎಂದಿಗೂ ಯಾವುದೇ ವಿವಾದ ಅಥವಾ ಬುಡಕಟ್ಟು ಅಥವಾ ಪಕ್ಕದ ಪ್ರದೇಶಗಳಲ್ಲಿ ವಾಸಿಸುವ ಸಂರಕ್ಷಿತ ಜನರೊಂದಿಗೆ ಘರ್ಷಣೆಯಲ್ಲಿ ತೊಡಗಿಲ್ಲ. ಅವರು ಶಾಂತಿಯುತವಾಗಿ ಮತ್ತು ಎಲ್ಲಾ ಸಮುದಾಯಗಳಿಗೆ ಸೇರಿದ ಜನರೊಂದಿಗೆ ಸರಿಯಾದ ಸಂಬಂಧದ ಮೂಲಕ ಬದುಕುತ್ತಿದ್ದಾರೆ” ಎಂದು ಅರ್ಜಿಯು ಹೇಳಿದೆ.

ಇದನ್ನೂಓದಿ: ಎಂಸಿಡಿ ಸ್ಥಾಯಿ ಸಮಿತಿ ಚುನಾವಣೆ ಫಲಿತಾಂಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಆಮ್ ಆದ್ಮಿ ಪಕ್ಷ

“ಅದು ಸಾಮಾಜಿಕ ಅಥವಾ ವ್ಯಾಪಾರ ಸಂಬಂಧವಾಗಿರಬಹುದು, ಬುಡಕಟ್ಟು ಜನರಿಂದ ಅರ್ಜಿದಾರರು ಮತ್ತು ಇತರ ಇದೇ ರೀತಿಯ ಜನರ ವಿರುದ್ಧ ಯಾವುದೇ ಪ್ರತಿಭಟನೆಗಳು ಅಥವಾ ದಂಗೆಗಳು ಎಂದಿಗೂ ನಡೆದಿಲ್ಲ. ಹಾಗಾಗಿ, ಅರ್ಜಿದಾರರ ಹೊರಹಾಕುವಿಕೆಯು ಅರ್ಜಿದಾರರ ಮನೆಗಳು ಮತ್ತು ಜೀವನೋಪಾಯವನ್ನು ವಂಚಿತಗೊಳಿಸುತ್ತದೆ ಅಲ್ಲದೆ, ಪ್ರದೇಶದ ಸಾಮಾಜಿಕ ರಚನೆಯನ್ನು ಅಡ್ಡಿಪಡಿಸುತ್ತದೆ ”ಎಂದು ಅರ್ಜಿಯು ಹೇಳಿದೆ.

ಸರ್ಕಾರಿ ಅಧಿಕಾರಿಗಳು ಯಾವುದೇ ಪೂರ್ವ ಸೂಚನೆ ನೀಡದೆ ಅರ್ಜಿದಾರರ ಮನೆಗಳನ್ನು ಕೆಡವಲು ಕೆಂಪು ಸ್ಟಿಕ್ಕರ್‌ಗಳನ್ನು ಹಾಕಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಈ ಕ್ರಮವು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ನಿರ್ದಿಷ್ಟವಾಗಿ ಅಸ್ಸಾಂ ಭೂ ಮತ್ತು ಕಂದಾಯ ನಿಯಂತ್ರಣದ ಅಧ್ಯಾಯ X ನ ಸೆಕ್ಷನ್ 165(3) ಪ್ರಕಾರ, ಯಾವುದೇ ಉರುಳಿಸುವಿಕೆ ನಡೆಯುವ ಮೊದಲು ಖಾಲಿ ಮಾಡಲು ಅಧಿಕಾರಿಗಳು ತೆರವು ಸೂಚನೆಯನ್ನು ನೀಡಬೇಕು ಮತ್ತು ನಿವಾಸಿಗಳಿಗೆ ಒಂದು ತಿಂಗಳ ಅವಧಿಯನ್ನು ಒದಗಿಸಬೇಕಿತ್ತು ಎಂದು ಅರ್ಜಿದಾರರು ವಾದಿಸಿದ್ದಾರೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...