Homeಮುಖಪುಟಆದೇಶವನ್ನು ಉಲ್ಲಂಘಿಸಿ ಅಕ್ರಮ ಧ್ವಂಸ | ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಅಸ್ಸಾಂ ನಿವಾಸಿಗಳು

ಆದೇಶವನ್ನು ಉಲ್ಲಂಘಿಸಿ ಅಕ್ರಮ ಧ್ವಂಸ | ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಅಸ್ಸಾಂ ನಿವಾಸಿಗಳು

- Advertisement -
- Advertisement -

ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ದೇಶಾದ್ಯಂತ ಯಾವುದೇ ನೆಲಸಮ ಕಾರ್ಯಚಾರಣೆ ಮಾಡಬಾರದು ಎಂದು ನಿರ್ದೇಶಿಸುವ ಸೆಪ್ಟೆಂಬರ್ 17, 2024ರ ಸುಪ್ರೀಂಕೋರ್ಟ್‌ನ ಮಧ್ಯಂತರ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಅಸ್ಸಾಂನ 47 ನಿವಾಸಿಗಳು ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದಾರೆ.ಆದೇಶ ಉಲ್ಲಂಘಿಸಿ ಅಕ್ರಮ ಧ್ವಂಸ

ಈ ಆದೇಶವು ಸಾರ್ವಜನಿಕ ರಸ್ತೆಗಳು, ಫುಟ್‌ಪಾತ್‌ಗಳು, ರೈಲು ಮಾರ್ಗಗಳು ಅಥವಾ ಜಲಮೂಲಗಳ ಅತಿಕ್ರಮಣಗಳಿಗೆ ಅನ್ವಯಿಸುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಸ್ಸಾಂನ ಅಧಿಕಾರಿಗಳು ತಮ್ಮ ಮನೆಗಳನ್ನು ನೆಲಸಮಗೊಳಿಸಲು ಗುರುತು ಹಾಕುವ ಮೂಲಕ ಈ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಅಧಿಕಾರಿಗಳು ತಮ್ಮನ್ನು ಭೂ ಅತಿಕ್ರಮಣದಾರರು ಎಂದು ಆರೋಪಿಸಿ ಈ ಕೃತ್ಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಪ್ರಕರಣವನ್ನು ಸೋಮವಾರ ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠದ ಮುಂದೆ ಪಟ್ಟಿ ಮಾಡಲಾಗಿದೆ. ಆದೇಶ ಉಲ್ಲಂಘಿಸಿ ಅಕ್ರಮ ಧ್ವಂಸ

ಸೆಪ್ಟೆಂಬರ್ 20, 2024 ರಂದು ಗುವಾಹಟಿ ಹೈಕೋರ್ಟ್‌ನಲ್ಲಿ ಅಸ್ಸಾಂನ ಅಡ್ವೊಕೇಟ್ ಜನರಲ್ ಅವರು ಅರ್ಜಿದಾರರ ಮನವಿಗಳನ್ನು ಇತ್ಯರ್ಥಪಡಿಸುವವರೆಗೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದರು. ಹೀಗಿದ್ದರೂ ಅಧಿಕಾರಿಗಳು ಕೋರ್ಟ್‌ ಆದೇಶವನ್ನು ಉಲ್ಲಂಘಿಸಿ ಕೆಡವುವ ಕಾರ್ಯ ಮುಂದುವರಿಸಿದ್ದಾರೆ ಎನ್ನಲಾಗಿದೆ.

ಇದನ್ನೂಓದಿ:  ಉತ್ತರ ಪ್ರದೇಶ | ದುಡಿದ ಹಣ ನೀಡುವುದಾಗಿ ಕಚೇರಿಗೆ ಕರೆದು ದಲಿತ ಕಾರ್ಮಿಕರಿಗೆ ಥಳಿಸಿ, ಕೊಲೆ ಬೆದರಿಕೆ

“ನ್ಯಾಯಾಲಯವು ಹಲವಾರು ಸಂದರ್ಭಗಳಲ್ಲಿ ಹೇಳಿರುವಂತೆ ವಸತಿ ಅಥವಾ ಆಶ್ರಯದ ಹಕ್ಕು ಮೂಲಭೂತ ಹಕ್ಕು ಮತ್ತು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಿದ ಹಕ್ಕಿನ ಅವಿಭಾಜ್ಯ ಅಂಗವಾಗಿದೆ. ಕಾನೂನಿನ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ನಾಗರಿಕರಿಂದ ಈ ಹಕ್ಕನ್ನು ಕಸಿದುಕೊಳ್ಳಲು ಅಥವಾ ಉಲ್ಲಂಘಿಸಲು ಸಾಧ್ಯವಿಲ್ಲ. ಆದ್ದರಿಂದ, ಆಪಾದಿತ ಅಪರಾಧಗಳಿಗೆ ದಂಡನಾತ್ಮಕ ಕ್ರಮವಾಗಿ ಆಸ್ತಿಗಳನ್ನು ಕೆಡವುವುದು ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಈ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹಲವಾರು ದಶಕಗಳಿಂದ ಕಮ್ರೂಪ್ ಮೆಟ್ರೋ ಜಿಲ್ಲೆಯ ಸೋನಪುರ್ ಮೌಜಾದಲ್ಲಿ ಕಚುಟೋಲಿ ಪಥರ್ ಮತ್ತು ಇತರ ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಸಿಸುತ್ತಿರುವ ಅರ್ಜಿದಾರರು, ಮೂಲ ಪಟ್ಟದಾರರು (ಭೂಮಾಲೀಕರು) ಜಾರಿಗೊಳಿಸಿದ ಅಟಾರ್ನಿ ಅಗ್ರಿಮೆಂಟ್ ಪ್ರಕಾರ ಅಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಅವರು ಭೂಮಿಯ ಮಾಲೀಕತ್ವ ತಮ್ಮದು ಎಂದು ವಾದಿಸದಿದ್ದರೂ, ತಮ್ಮ ವಾಸ ಕಾನೂನುಬದ್ಧವಾಗಿ ಮಾನ್ಯವಾಗಿದೆ ಮತ್ತು ಈ ಒಪ್ಪಂದಗಳಿಂದ ಗುರುತಿಸಲ್ಪಟ್ಟಿದೆ ಎಂದು ಅವರು ವಾದಿಸುತ್ತಿದ್ದಾರೆ.

ಅರ್ಜಿದಾರರನ್ನು ಜಿಲ್ಲಾಡಳಿತವು ಆದಿವಾಸಿಗಳ ಭೂಮಿಯನ್ನು “ಅಕ್ರಮ ಒತ್ತುವರಿ” ಮಾಡಿದವರು ಅಥವಾ “ಅತಿಕ್ರಮಣಕಾರರು” ಎಂದು ವರ್ಗೀಕರಿಸಿರುವುದನ್ನು ಅರ್ಜಿಯು ಪ್ರಶ್ನಿಸಿದೆ. ಸಂರಕ್ಷಿತ ಬುಡಕಟ್ಟು ವರ್ಗಕ್ಕೆ ಸೇರಿದ ಕೆಲವು ಮೂಲ ಪಟ್ಟಾದಾರರಿಂದ ಭೂಮಿಯಲ್ಲಿ ವಾಸಿಸಲು ಅನುಮತಿಸಲಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ಇದನ್ನೂಓದಿ:  ಹಿಜ್ಬುಲ್ಲಾ ಮುಖ್ಯಸ್ಥನ ಹತ್ಯೆ: ಯುಎನ್ ಭದ್ರತಾ ಮಂಡಳಿಯ ತುರ್ತು ಸಭೆಗೆ ಕರೆ ನೀಡಿದ ಇರಾನ್, ಪ್ರತೀಕಾರದ ಪ್ರತಿಜ್ಞೆ

ಅರ್ಜಿದಾರರು ಎಂದಿಗೂ ಮಾಲೀಕತ್ವದ ಹಕ್ಕುಗಳನ್ನು ಪ್ರತಿಪಾದಿಸಿಲ್ಲ ಮತ್ತು ಭೂಮಿಯ ಸ್ವರೂಪವನ್ನು ಬದಲಾಯಿಸಿಲ್ಲ ಎಂದು ಅರ್ಜಿಯು ಒತ್ತಿಹೇಳಿದೆ. ಅರ್ಜಿದಾರರು ಆಕ್ರಮಿಸಿಕೊಂಡಿರುವ ಭೂಮಿ 1920ರ ದಶಕದಿಂದಲೂ ಅವರ ಪೂರ್ವಜರ ಸ್ವಾಧೀನದಲ್ಲಿದೆ ಎಂದು ಅರ್ಜಿಯು ವಾದಿಸುತ್ತದೆ. ಆದರೆ 1950 ರಲ್ಲಿ ಸರ್ಕಾರದ ಅಧಿಸೂಚನೆಯ ಪ್ರಕಾರ ಈ ಪ್ರದೇಶದಲ್ಲಿ ಬುಡಕಟ್ಟು ಬೆಲ್ಟ್‌ಗಳನ್ನು ಸ್ಥಾಪಿಸಲಾಗಿತ್ತು.

ಅರ್ಜಿದಾರರಿಗೆ ಅವರ ನಿವಾಸದ ಆಧಾರದ ಮೇಲೆ ವಿದ್ಯುತ್, ಪಡಿತರ ಚೀಟಿಗಳು, ಆಧಾರ್ ಕಾರ್ಡ್‌ಗಳು ಮತ್ತು ಮತದಾರರ ಗುರುತಿನ ಚೀಟಿಗಳಂತಹ ಅಗತ್ಯ ಸೇವೆಗಳನ್ನು ಒದಗಿಸಲಾಗಿದೆ ಎಂದು ಅರ್ಜಿಯಲ್ಲಿ ಎತ್ತಿ ತೋರಿಸಲಾಗಿದೆ. ಅವರು ಭೂಮಿಯ ಸ್ವರೂಪವನ್ನು ಬದಲಾಯಿಸದ ಕಾರಣ ಅವರು ಅಸ್ಸಾಂ ಭೂಮಿ ಮತ್ತು ಕಂದಾಯ ನಿಯಂತ್ರಣ, 1886 ಅನ್ನು ಉಲ್ಲಂಘಿಸಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಅರ್ಜಿದಾರರು ಕಳೆದ ಏಳು, ಎಂಟು ದಶಕಗಳಿಂದ ಸುಮಾರು ತಲೆಮಾರುಗಳಿಂದ ಈ ನಿಗದಿತ ಭೂಮಿಯಲ್ಲಿ ನೆಲೆಸಿದ್ದಾರೆ. ಆದರೆ ಅವರು ಎಂದಿಗೂ ಯಾವುದೇ ವಿವಾದ ಅಥವಾ ಬುಡಕಟ್ಟು ಅಥವಾ ಪಕ್ಕದ ಪ್ರದೇಶಗಳಲ್ಲಿ ವಾಸಿಸುವ ಸಂರಕ್ಷಿತ ಜನರೊಂದಿಗೆ ಘರ್ಷಣೆಯಲ್ಲಿ ತೊಡಗಿಲ್ಲ. ಅವರು ಶಾಂತಿಯುತವಾಗಿ ಮತ್ತು ಎಲ್ಲಾ ಸಮುದಾಯಗಳಿಗೆ ಸೇರಿದ ಜನರೊಂದಿಗೆ ಸರಿಯಾದ ಸಂಬಂಧದ ಮೂಲಕ ಬದುಕುತ್ತಿದ್ದಾರೆ” ಎಂದು ಅರ್ಜಿಯು ಹೇಳಿದೆ.

ಇದನ್ನೂಓದಿ: ಎಂಸಿಡಿ ಸ್ಥಾಯಿ ಸಮಿತಿ ಚುನಾವಣೆ ಫಲಿತಾಂಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಆಮ್ ಆದ್ಮಿ ಪಕ್ಷ

“ಅದು ಸಾಮಾಜಿಕ ಅಥವಾ ವ್ಯಾಪಾರ ಸಂಬಂಧವಾಗಿರಬಹುದು, ಬುಡಕಟ್ಟು ಜನರಿಂದ ಅರ್ಜಿದಾರರು ಮತ್ತು ಇತರ ಇದೇ ರೀತಿಯ ಜನರ ವಿರುದ್ಧ ಯಾವುದೇ ಪ್ರತಿಭಟನೆಗಳು ಅಥವಾ ದಂಗೆಗಳು ಎಂದಿಗೂ ನಡೆದಿಲ್ಲ. ಹಾಗಾಗಿ, ಅರ್ಜಿದಾರರ ಹೊರಹಾಕುವಿಕೆಯು ಅರ್ಜಿದಾರರ ಮನೆಗಳು ಮತ್ತು ಜೀವನೋಪಾಯವನ್ನು ವಂಚಿತಗೊಳಿಸುತ್ತದೆ ಅಲ್ಲದೆ, ಪ್ರದೇಶದ ಸಾಮಾಜಿಕ ರಚನೆಯನ್ನು ಅಡ್ಡಿಪಡಿಸುತ್ತದೆ ”ಎಂದು ಅರ್ಜಿಯು ಹೇಳಿದೆ.

ಸರ್ಕಾರಿ ಅಧಿಕಾರಿಗಳು ಯಾವುದೇ ಪೂರ್ವ ಸೂಚನೆ ನೀಡದೆ ಅರ್ಜಿದಾರರ ಮನೆಗಳನ್ನು ಕೆಡವಲು ಕೆಂಪು ಸ್ಟಿಕ್ಕರ್‌ಗಳನ್ನು ಹಾಕಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಈ ಕ್ರಮವು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ನಿರ್ದಿಷ್ಟವಾಗಿ ಅಸ್ಸಾಂ ಭೂ ಮತ್ತು ಕಂದಾಯ ನಿಯಂತ್ರಣದ ಅಧ್ಯಾಯ X ನ ಸೆಕ್ಷನ್ 165(3) ಪ್ರಕಾರ, ಯಾವುದೇ ಉರುಳಿಸುವಿಕೆ ನಡೆಯುವ ಮೊದಲು ಖಾಲಿ ಮಾಡಲು ಅಧಿಕಾರಿಗಳು ತೆರವು ಸೂಚನೆಯನ್ನು ನೀಡಬೇಕು ಮತ್ತು ನಿವಾಸಿಗಳಿಗೆ ಒಂದು ತಿಂಗಳ ಅವಧಿಯನ್ನು ಒದಗಿಸಬೇಕಿತ್ತು ಎಂದು ಅರ್ಜಿದಾರರು ವಾದಿಸಿದ್ದಾರೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...