Homeಮುಖಪುಟಆದೇಶವನ್ನು ಉಲ್ಲಂಘಿಸಿ ಅಕ್ರಮ ಧ್ವಂಸ | ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಅಸ್ಸಾಂ ನಿವಾಸಿಗಳು

ಆದೇಶವನ್ನು ಉಲ್ಲಂಘಿಸಿ ಅಕ್ರಮ ಧ್ವಂಸ | ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಅಸ್ಸಾಂ ನಿವಾಸಿಗಳು

- Advertisement -
- Advertisement -

ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ದೇಶಾದ್ಯಂತ ಯಾವುದೇ ನೆಲಸಮ ಕಾರ್ಯಚಾರಣೆ ಮಾಡಬಾರದು ಎಂದು ನಿರ್ದೇಶಿಸುವ ಸೆಪ್ಟೆಂಬರ್ 17, 2024ರ ಸುಪ್ರೀಂಕೋರ್ಟ್‌ನ ಮಧ್ಯಂತರ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಅಸ್ಸಾಂನ 47 ನಿವಾಸಿಗಳು ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದಾರೆ.ಆದೇಶ ಉಲ್ಲಂಘಿಸಿ ಅಕ್ರಮ ಧ್ವಂಸ

ಈ ಆದೇಶವು ಸಾರ್ವಜನಿಕ ರಸ್ತೆಗಳು, ಫುಟ್‌ಪಾತ್‌ಗಳು, ರೈಲು ಮಾರ್ಗಗಳು ಅಥವಾ ಜಲಮೂಲಗಳ ಅತಿಕ್ರಮಣಗಳಿಗೆ ಅನ್ವಯಿಸುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಸ್ಸಾಂನ ಅಧಿಕಾರಿಗಳು ತಮ್ಮ ಮನೆಗಳನ್ನು ನೆಲಸಮಗೊಳಿಸಲು ಗುರುತು ಹಾಕುವ ಮೂಲಕ ಈ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಅಧಿಕಾರಿಗಳು ತಮ್ಮನ್ನು ಭೂ ಅತಿಕ್ರಮಣದಾರರು ಎಂದು ಆರೋಪಿಸಿ ಈ ಕೃತ್ಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಪ್ರಕರಣವನ್ನು ಸೋಮವಾರ ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠದ ಮುಂದೆ ಪಟ್ಟಿ ಮಾಡಲಾಗಿದೆ. ಆದೇಶ ಉಲ್ಲಂಘಿಸಿ ಅಕ್ರಮ ಧ್ವಂಸ

ಸೆಪ್ಟೆಂಬರ್ 20, 2024 ರಂದು ಗುವಾಹಟಿ ಹೈಕೋರ್ಟ್‌ನಲ್ಲಿ ಅಸ್ಸಾಂನ ಅಡ್ವೊಕೇಟ್ ಜನರಲ್ ಅವರು ಅರ್ಜಿದಾರರ ಮನವಿಗಳನ್ನು ಇತ್ಯರ್ಥಪಡಿಸುವವರೆಗೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದರು. ಹೀಗಿದ್ದರೂ ಅಧಿಕಾರಿಗಳು ಕೋರ್ಟ್‌ ಆದೇಶವನ್ನು ಉಲ್ಲಂಘಿಸಿ ಕೆಡವುವ ಕಾರ್ಯ ಮುಂದುವರಿಸಿದ್ದಾರೆ ಎನ್ನಲಾಗಿದೆ.

ಇದನ್ನೂಓದಿ:  ಉತ್ತರ ಪ್ರದೇಶ | ದುಡಿದ ಹಣ ನೀಡುವುದಾಗಿ ಕಚೇರಿಗೆ ಕರೆದು ದಲಿತ ಕಾರ್ಮಿಕರಿಗೆ ಥಳಿಸಿ, ಕೊಲೆ ಬೆದರಿಕೆ

“ನ್ಯಾಯಾಲಯವು ಹಲವಾರು ಸಂದರ್ಭಗಳಲ್ಲಿ ಹೇಳಿರುವಂತೆ ವಸತಿ ಅಥವಾ ಆಶ್ರಯದ ಹಕ್ಕು ಮೂಲಭೂತ ಹಕ್ಕು ಮತ್ತು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಿದ ಹಕ್ಕಿನ ಅವಿಭಾಜ್ಯ ಅಂಗವಾಗಿದೆ. ಕಾನೂನಿನ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ನಾಗರಿಕರಿಂದ ಈ ಹಕ್ಕನ್ನು ಕಸಿದುಕೊಳ್ಳಲು ಅಥವಾ ಉಲ್ಲಂಘಿಸಲು ಸಾಧ್ಯವಿಲ್ಲ. ಆದ್ದರಿಂದ, ಆಪಾದಿತ ಅಪರಾಧಗಳಿಗೆ ದಂಡನಾತ್ಮಕ ಕ್ರಮವಾಗಿ ಆಸ್ತಿಗಳನ್ನು ಕೆಡವುವುದು ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಈ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹಲವಾರು ದಶಕಗಳಿಂದ ಕಮ್ರೂಪ್ ಮೆಟ್ರೋ ಜಿಲ್ಲೆಯ ಸೋನಪುರ್ ಮೌಜಾದಲ್ಲಿ ಕಚುಟೋಲಿ ಪಥರ್ ಮತ್ತು ಇತರ ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಸಿಸುತ್ತಿರುವ ಅರ್ಜಿದಾರರು, ಮೂಲ ಪಟ್ಟದಾರರು (ಭೂಮಾಲೀಕರು) ಜಾರಿಗೊಳಿಸಿದ ಅಟಾರ್ನಿ ಅಗ್ರಿಮೆಂಟ್ ಪ್ರಕಾರ ಅಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಅವರು ಭೂಮಿಯ ಮಾಲೀಕತ್ವ ತಮ್ಮದು ಎಂದು ವಾದಿಸದಿದ್ದರೂ, ತಮ್ಮ ವಾಸ ಕಾನೂನುಬದ್ಧವಾಗಿ ಮಾನ್ಯವಾಗಿದೆ ಮತ್ತು ಈ ಒಪ್ಪಂದಗಳಿಂದ ಗುರುತಿಸಲ್ಪಟ್ಟಿದೆ ಎಂದು ಅವರು ವಾದಿಸುತ್ತಿದ್ದಾರೆ.

ಅರ್ಜಿದಾರರನ್ನು ಜಿಲ್ಲಾಡಳಿತವು ಆದಿವಾಸಿಗಳ ಭೂಮಿಯನ್ನು “ಅಕ್ರಮ ಒತ್ತುವರಿ” ಮಾಡಿದವರು ಅಥವಾ “ಅತಿಕ್ರಮಣಕಾರರು” ಎಂದು ವರ್ಗೀಕರಿಸಿರುವುದನ್ನು ಅರ್ಜಿಯು ಪ್ರಶ್ನಿಸಿದೆ. ಸಂರಕ್ಷಿತ ಬುಡಕಟ್ಟು ವರ್ಗಕ್ಕೆ ಸೇರಿದ ಕೆಲವು ಮೂಲ ಪಟ್ಟಾದಾರರಿಂದ ಭೂಮಿಯಲ್ಲಿ ವಾಸಿಸಲು ಅನುಮತಿಸಲಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ಇದನ್ನೂಓದಿ:  ಹಿಜ್ಬುಲ್ಲಾ ಮುಖ್ಯಸ್ಥನ ಹತ್ಯೆ: ಯುಎನ್ ಭದ್ರತಾ ಮಂಡಳಿಯ ತುರ್ತು ಸಭೆಗೆ ಕರೆ ನೀಡಿದ ಇರಾನ್, ಪ್ರತೀಕಾರದ ಪ್ರತಿಜ್ಞೆ

ಅರ್ಜಿದಾರರು ಎಂದಿಗೂ ಮಾಲೀಕತ್ವದ ಹಕ್ಕುಗಳನ್ನು ಪ್ರತಿಪಾದಿಸಿಲ್ಲ ಮತ್ತು ಭೂಮಿಯ ಸ್ವರೂಪವನ್ನು ಬದಲಾಯಿಸಿಲ್ಲ ಎಂದು ಅರ್ಜಿಯು ಒತ್ತಿಹೇಳಿದೆ. ಅರ್ಜಿದಾರರು ಆಕ್ರಮಿಸಿಕೊಂಡಿರುವ ಭೂಮಿ 1920ರ ದಶಕದಿಂದಲೂ ಅವರ ಪೂರ್ವಜರ ಸ್ವಾಧೀನದಲ್ಲಿದೆ ಎಂದು ಅರ್ಜಿಯು ವಾದಿಸುತ್ತದೆ. ಆದರೆ 1950 ರಲ್ಲಿ ಸರ್ಕಾರದ ಅಧಿಸೂಚನೆಯ ಪ್ರಕಾರ ಈ ಪ್ರದೇಶದಲ್ಲಿ ಬುಡಕಟ್ಟು ಬೆಲ್ಟ್‌ಗಳನ್ನು ಸ್ಥಾಪಿಸಲಾಗಿತ್ತು.

ಅರ್ಜಿದಾರರಿಗೆ ಅವರ ನಿವಾಸದ ಆಧಾರದ ಮೇಲೆ ವಿದ್ಯುತ್, ಪಡಿತರ ಚೀಟಿಗಳು, ಆಧಾರ್ ಕಾರ್ಡ್‌ಗಳು ಮತ್ತು ಮತದಾರರ ಗುರುತಿನ ಚೀಟಿಗಳಂತಹ ಅಗತ್ಯ ಸೇವೆಗಳನ್ನು ಒದಗಿಸಲಾಗಿದೆ ಎಂದು ಅರ್ಜಿಯಲ್ಲಿ ಎತ್ತಿ ತೋರಿಸಲಾಗಿದೆ. ಅವರು ಭೂಮಿಯ ಸ್ವರೂಪವನ್ನು ಬದಲಾಯಿಸದ ಕಾರಣ ಅವರು ಅಸ್ಸಾಂ ಭೂಮಿ ಮತ್ತು ಕಂದಾಯ ನಿಯಂತ್ರಣ, 1886 ಅನ್ನು ಉಲ್ಲಂಘಿಸಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಅರ್ಜಿದಾರರು ಕಳೆದ ಏಳು, ಎಂಟು ದಶಕಗಳಿಂದ ಸುಮಾರು ತಲೆಮಾರುಗಳಿಂದ ಈ ನಿಗದಿತ ಭೂಮಿಯಲ್ಲಿ ನೆಲೆಸಿದ್ದಾರೆ. ಆದರೆ ಅವರು ಎಂದಿಗೂ ಯಾವುದೇ ವಿವಾದ ಅಥವಾ ಬುಡಕಟ್ಟು ಅಥವಾ ಪಕ್ಕದ ಪ್ರದೇಶಗಳಲ್ಲಿ ವಾಸಿಸುವ ಸಂರಕ್ಷಿತ ಜನರೊಂದಿಗೆ ಘರ್ಷಣೆಯಲ್ಲಿ ತೊಡಗಿಲ್ಲ. ಅವರು ಶಾಂತಿಯುತವಾಗಿ ಮತ್ತು ಎಲ್ಲಾ ಸಮುದಾಯಗಳಿಗೆ ಸೇರಿದ ಜನರೊಂದಿಗೆ ಸರಿಯಾದ ಸಂಬಂಧದ ಮೂಲಕ ಬದುಕುತ್ತಿದ್ದಾರೆ” ಎಂದು ಅರ್ಜಿಯು ಹೇಳಿದೆ.

ಇದನ್ನೂಓದಿ: ಎಂಸಿಡಿ ಸ್ಥಾಯಿ ಸಮಿತಿ ಚುನಾವಣೆ ಫಲಿತಾಂಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಆಮ್ ಆದ್ಮಿ ಪಕ್ಷ

“ಅದು ಸಾಮಾಜಿಕ ಅಥವಾ ವ್ಯಾಪಾರ ಸಂಬಂಧವಾಗಿರಬಹುದು, ಬುಡಕಟ್ಟು ಜನರಿಂದ ಅರ್ಜಿದಾರರು ಮತ್ತು ಇತರ ಇದೇ ರೀತಿಯ ಜನರ ವಿರುದ್ಧ ಯಾವುದೇ ಪ್ರತಿಭಟನೆಗಳು ಅಥವಾ ದಂಗೆಗಳು ಎಂದಿಗೂ ನಡೆದಿಲ್ಲ. ಹಾಗಾಗಿ, ಅರ್ಜಿದಾರರ ಹೊರಹಾಕುವಿಕೆಯು ಅರ್ಜಿದಾರರ ಮನೆಗಳು ಮತ್ತು ಜೀವನೋಪಾಯವನ್ನು ವಂಚಿತಗೊಳಿಸುತ್ತದೆ ಅಲ್ಲದೆ, ಪ್ರದೇಶದ ಸಾಮಾಜಿಕ ರಚನೆಯನ್ನು ಅಡ್ಡಿಪಡಿಸುತ್ತದೆ ”ಎಂದು ಅರ್ಜಿಯು ಹೇಳಿದೆ.

ಸರ್ಕಾರಿ ಅಧಿಕಾರಿಗಳು ಯಾವುದೇ ಪೂರ್ವ ಸೂಚನೆ ನೀಡದೆ ಅರ್ಜಿದಾರರ ಮನೆಗಳನ್ನು ಕೆಡವಲು ಕೆಂಪು ಸ್ಟಿಕ್ಕರ್‌ಗಳನ್ನು ಹಾಕಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಈ ಕ್ರಮವು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ನಿರ್ದಿಷ್ಟವಾಗಿ ಅಸ್ಸಾಂ ಭೂ ಮತ್ತು ಕಂದಾಯ ನಿಯಂತ್ರಣದ ಅಧ್ಯಾಯ X ನ ಸೆಕ್ಷನ್ 165(3) ಪ್ರಕಾರ, ಯಾವುದೇ ಉರುಳಿಸುವಿಕೆ ನಡೆಯುವ ಮೊದಲು ಖಾಲಿ ಮಾಡಲು ಅಧಿಕಾರಿಗಳು ತೆರವು ಸೂಚನೆಯನ್ನು ನೀಡಬೇಕು ಮತ್ತು ನಿವಾಸಿಗಳಿಗೆ ಒಂದು ತಿಂಗಳ ಅವಧಿಯನ್ನು ಒದಗಿಸಬೇಕಿತ್ತು ಎಂದು ಅರ್ಜಿದಾರರು ವಾದಿಸಿದ್ದಾರೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...