Homeಮುಖಪುಟ‘ನ್ಯಾಯಮೂರ್ತಿಗಳ ನೇಮಕದಲ್ಲಿ ನಿಯಮ ಉಲ್ಲಂಘನೆ’- ನ್ಯಾಯಾಂಗದ ವಿರುದ್ದ ತಿರುಗಿ ಬಿದ್ದ ಕೇಂದ್ರ

‘ನ್ಯಾಯಮೂರ್ತಿಗಳ ನೇಮಕದಲ್ಲಿ ನಿಯಮ ಉಲ್ಲಂಘನೆ’- ನ್ಯಾಯಾಂಗದ ವಿರುದ್ದ ತಿರುಗಿ ಬಿದ್ದ ಕೇಂದ್ರ

- Advertisement -
- Advertisement -

ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿ ವಿಳಂಬವಾಗುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ಇತ್ತೀಚೆಗೆ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು. ಇದಕ್ಕೆ ಮಂಗಳವಾರ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಹೈಕೋರ್ಟ್ ನ್ಯಾಯಮೂರ್ತಿಗಳ ಹುದ್ದೆಗಳು ಖಾಲಿಯಾಗುವ ಆರು ತಿಂಗಳು ಮುಂಚಿತವಾಗಿಯೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂಬ ವಿಧಿವಿಧಾನಗಳ ಒಡಂಬಡಿಕೆ (ಎಂಓಪಿ)ಯನ್ನು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳು ಉಲ್ಲಂಘಿಸಿವೆ ಎಂದು ಹೇಳುವ ಮೂಲಕ ನ್ಯಾಯಾಂಗದ ವಿರುದ್ದವೆ ತಿರುಗಿ ಬಿದ್ದಿದೆ.

ಎಂಒಪಿ ಎನ್ನುವುದು, ಸಂವಿಧಾನಾತ್ಮಕ ನ್ಯಾಯಾಲಯದ ನ್ಯಾಯಾಧೀಶರ ನೇಮಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವಿನ ಲಿಖಿತ ಒಪ್ಪಂದವಾಗಿದೆ. “ಮಾರ್ಚ್ 26 ರ ಹೊತ್ತಿಗೆ ಖಾಲಿಯಿರುವ 410 ನ್ಯಾಯಾಧೀಶರ ಹುದ್ದೆಗಳಲ್ಲಿ, ಹೈಕೋರ್ಟ್ ಕೊಲಾಜಿಯಮ್ 214 ಹುದ್ದೆಗಳಿಗೆ ಶಿಫಾರಸುಗಳನ್ನು ಮಾಡಿಲ್ಲ” ಎಂದು ನ್ಯಾಯಾಂಗದ ಮೂಲಗಳನ್ನು ಉಲ್ಲೇಖಿಸಿ TOI ವರದಿ ಮಾಡಿದೆ.

ಇದನ್ನೂ ಓದಿ: ಗಂಡಾಳಿಕೆಯನ್ನು ಬಿಂಬಿಸುವ ಕೋರ್ಟುಗಳಿಗೆ ’ಸುಪ್ರೀಮ್’ ಕಡಿವಾಣ

ಮಾರ್ಚ್ 27 ರಂದು ಭಾರತದ ಮುಖ್ಯನ್ಯಾಯಮೂರ್ತಿ ಎಸ್.‌ಎ. ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಸೂರ್ಯಕಾಂತ್ ಅವರ ನ್ಯಾಯಪೀಠವು, “ಹೈಕೋರ್ಟ್ ಕೊಲಾಜಿಯಮ್ ಶಿಫಾರಸ್ಸು ಮಾಡಿದ 45 ಮಂದಿಯ ಕಡತಗಳ ಮೇಲೆ ಕೇಂದ್ರ ಸರ್ಕಾರ ಯಾಕೆ ಕುಳಿತುಕೊಂಡಿದೆ.ಈ ಕಡತಗಳು 6-14 ತಿಂಗಳಿನಿಂದ ಬಾಕಿ ಉಳಿದಿವೆ, ಇದರ ಬಗ್ಗೆ ಎಪ್ರಿಲ್ 8 ರಂದು ವಿವರಿಸಬೇಕು” ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೊಪಾಲ್ ಅವರನ್ನು ಕೋರಿತ್ತು.

7 ರಿಂದ 19 ತಿಂಗಳವರೆಗಿನ ಅವಧಿಯವರೆಗೆ ಹೈಕೋರ್ಟ್ ನ್ಯಾಯಾಧೀಶರ ನೇಮಕಕ್ಕಾಗಿ ಸುಪ್ರೀಂಕೋರ್ಟ್‌ ಕೊಲಾಜಿಯಮ್‌‌ ಶಿಫಾರಸ್ಸು ಮಾಡಿದ್ದ 10 ಕ್ಕೂ ಹೆಚ್ಚು ಮಂದಿಯ ಕಡತಗಳ ಕುರಿತು ಇನ್ನುಕೇಂದ್ರ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು ಹೇಳಿ ನ್ಯಾಯಮೂರ್ತಿ ಕೌಲ್ ಗಮನಸೆಳೆದಿದ್ದರು. ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಐದು ವಕೀಲರನ್ನು ನೇಮಕ ಮಾಡಲು ಸುಪ್ರೀಂಕೋರ್ಟ್‌ ಕೊಲಾಜಿಯಮ್ ಶಿಫಾರಸನ್ನು 2019 ರ ಜುಲೈ 25 ರಂದು ಸರ್ಕಾರಕ್ಕೆ ಕಳುಹಿಸಲಾಗಿದೆ ಮತ್ತು ಇವುಗಳನ್ನು ಸರ್ಕಾರ ಪರಿಗಣಿಸಿಲ್ಲ ಎಂದು ಅವರು ಹೇಳಿದ್ದಾರೆ. ಅಂತೆಯೇ, ಜಮ್ಮುಕಾಶ್ಮೀರ ಹೈಕೋರ್ಟ್‌ ನ್ಯಾಯಾಧೀಶರ ನೇಮಕಾತಿಗಾಗಿ ವಕೀಲರ ಹೆಸರನ್ನು 17 ತಿಂಗಳುಗಳಿಂದ ಬಾಕಿ ಉಳಿದಿದೆ ಎಂದು ಹೇಳಿದ್ದಾರೆ.

ಕಾನೂನು ಸಚಿವಾಲಯ ಇತ್ತೀಚೆಗೆ ವಿವಿಧ ಹೈಕೋರ್ಟ್ ಕೊಲಾಜಿಯಮ್‌ಗಳು ಶಿಫಾರಸು ಮಾಡಿದ 45 ಹೆಸರುಗಳನ್ನು ಸುಪ್ರೀಂಕೊರ್ಟ್‌ ಕೊಲಾಜಿಯಮ್‌ಗೆ ಪರಿಶೀಲನೆಗಾಗಿ ಕಳುಹಿಸಿದೆ. ಏಪ್ರಿಲ್ 8 ರಂದು ನ್ಯಾಯಾಧೀಶರ ನೇಮಕ ವಿಳಂಬಕ್ಕೆ ಸಂಬಂಧಿಸಿದ ಪ್ರಕರಣವನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಪೀಠ ನಿರ್ಧರಿಸಿದೆ.


ಇದನ್ನೂ ಓದಿ: ಬಹುಜನ ಭಾರತ: ಬಂಧನದಲ್ಲಿ ಕಳೆದುಹೋಗುವ ಮುಸಲ್ಮಾನ ಬದುಕುಗಳು- ಪರಿಹಾರ ಇಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...