Homeಮುಖಪುಟರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗೀಕಾರ: ಬಹುಮತವಿಲ್ಲದೆ ನಿಯಮಗಳ ಉಲ್ಲಂಘನೆ..?

ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗೀಕಾರ: ಬಹುಮತವಿಲ್ಲದೆ ನಿಯಮಗಳ ಉಲ್ಲಂಘನೆ..?

ಮಸೂದೆಗಳನ್ನು ಆಯ್ಕೆ ಸಮಿತಿಗೆ ಕಳುಹಿಸಲು ಮುಂದಾದಾಗ ಮತಗಳ ವಿಭಜನೆಗೆ ಒತ್ತಾಯಿಸಿದ ಮೂವರು ಸಂಸದರಲ್ಲಿ ಕನಿಷ್ಠ ಇಬ್ಬರು ಅವರ ಸ್ಥಾನಗಳಲ್ಲಿದ್ದರು ಎಂದು ದೃಶ್ಯಾವಳಿಗಳು ತೋರಿಸುತ್ತವೆ.

- Advertisement -
- Advertisement -

ದೇಶಾದ್ಯಂತ ರೈತ ಸಂಘಟನೆಗಳು, ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸೆಪ್ಟಂಬರ್ 20 ರಂದು ಕೃಷಿ ಮಸೂದೆಗಳನ್ನು ಅಂಗೀಕರಿಸಿದೆ. ಆದರೆ ಅಂದು ರಾಜ್ಯಸಭೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕೃಷಿ ಮಸೂದೆಗಳ ಅಂಗೀಕಾರದಲ್ಲಿ ಎಲ್ಲಾ ನಿಯಮಗಳನ್ನು ಪಾಲಿಸಿ ಬಹುಮತದೊಂದಿಗೆ ಅಂಗೀಕರಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕೃಷಿ ಮಸೂದೆಗಳು ಅಂಗೀಕಾರವಾದ ದಿನ ಅಂದರೆ ಸೆಪ್ಟೆಂಬರ್‌ 20ರಂದು ರಾಜ್ಯಸಭಾದಲ್ಲಿ ನಡೆದ ಘಟನೆಗಳ ವಿಡಿಯೋ ದೃಶ್ಯಾವಳಿಗಳು ಬೇರೆಯದ್ದೇ ಕಥೆ ಹೇಳುತ್ತಿವೆ.

ಕೃಷಿ ಮಸೂದೆಗಳನ್ನು ಮಂಡಿಸುವ ವೇಳೆ ಸದನದ ಸಮಯ ವಿಸ್ತರಿಸಲು ಸರ್ವಾನುಮತ ಒಪ್ಪಿಗೆ ಪಡೆದಿಲ್ಲ ಮತ್ತು ಧ್ವನಿ ಮತದ ಮೂಲಕ ಮತಗಳ ವಿಭಜನೆಗೆ ಕರೆ ಕೊಟ್ಟಾಗ ವಿರೋಧ ಪಕ್ಷಗಳ ಸದಸ್ಯರು ತಮ್ಮ ಆಸನಗಳಲ್ಲಿ ಇರಲಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಇದು ಸುಳ್ಳು ಎಂದು ಎನ್‌ಡಿಟಿವಿ ಬಿಡುಗಡೆಮಾಡಿರುವ ವಿಡಿಯೋ ದೃಶ್ಯಾವಳಿಗಳು ಸಾಕ್ಷ್ಯಾ ನೀಡುತ್ತಿವೆ.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ ವಿರುದ್ದ ರಾಜ್ಯದಾದ್ಯಂತ ಪ್ರತಿಭಟನೆ; ಹೋರಾಟದ ಝಲಕ್

ಈ  ಮಸೂದೆಗಳ ಅಂಗೀಕಾರವು ಭಾರಿ ಗದ್ದಲ, ಗಲಾಟೆಗೆ ಕಾರಣವಾಗಿದ್ದು, ಸದನದಲ್ಲಿ ಕೋಲಾಹಲ ಎಬ್ಬಿಸಿ, ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಎಂಟು ಸದಸ್ಯರನ್ನು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು  ಅಮಾನತುಗೊಳಿಸಿದ್ದರು. ನಂತರ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಸಿಂಗ್ ಧ್ವನಿಮತದ ಮೂಲಕ ಮಸೂದೆ ಅಂಗೀಕರಿಸಿದರು. “ಸರ್ಕಾರಕ್ಕೆ ಬಹುಮತವಿಲ್ಲದ ಕಾರಣ ಮಸೂದೆಗಳನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ. ಧ್ವನಿ ಮತದ ಬದಲು ಭೌತಿಕ ಮತ ಚಲಾಯಿಸಿದ್ದರೆ” ಸರ್ಕಾರಕ್ಕೆ ಸೋಲಾಗುತ್ತಿತ್ತು ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಇತ್ತ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಹರಿವಂಶ್ ಸಿಂಗ್ ಭೌತಿಕ ಮತದಾನಕ್ಕೆ ಒತ್ತಾಯಿಸಿದಾಗ ಪ್ರತಿಪಕ್ಷದ ಸದಸ್ಯರು ತಮ್ಮ ಸ್ಥಾನಗಳಲ್ಲಿ ಇರಲಿಲ್ಲ. ಹಾಗಾಗಿ ಧ್ವನಿ ಮತದ ಮೂಲಕ ಮಸೂದೆ ಅಂಗೀಕರಿಸಲಾಯಿತು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸಂಸದರು
ಅಮಾನತುಗೊಂಡ 8 ಸಂಸದರು ಅಹೋರಾತ್ರಿ ಧರಣಿ ನಡೆಸುತ್ತಿರುವುದು. PC: PTI

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ವಿರೋಧಿಸಿ ಗದ್ದಲ: ಅಧಿವೇಶನದಿಂದ 8 ಸಂಸದರ ಅಮಾನತು

ಸಂಸತ್ತಿನ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಉಪಸಭಾಪತಿ ಸದನದ ಒಮ್ಮತವನ್ನು ತೆಗೆದುಕೊಳ್ಳದೆ ಸದನದ ಅವಧಿಯನ್ನು ವಿಸ್ತರಿಸಿದ್ದಾರೆ ಎಂದು ಪ್ರತಿಪಕ್ಷಗಳು ಗದ್ದಲ ಮಾಡಿದ್ದಾ ಮಧ್ಯಾಹ್ನ 1 ಗಂಟೆ ಆಗಿತ್ತು. ಎನ್‌ಡಿಟಿವಿ ಪ್ರಸಾರ ಮಾಡಿರುವ ರಾಜ್ಯಸಭಾ ನಡಾವಳಿಗಳ ವಿಡಿಯೋದಲ್ಲಿ ಮಧ್ಯಾಹ್ನ 1.03 ರ ಸುಮಾರಿಗೆ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ “ಯಾವುದೇ ಕಾರಣಕ್ಕೂ ಸದನದ ಅವಧಿಯನ್ನು ವಿಸ್ತರಿಸಬಾರದು. ಇಂದು ಮತ್ತು ನಾಳೆ ಪ್ರಶ್ನೆಗಳಿಗೆ ಉತ್ತರಿಸಬಹದು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತವೆ” ಎಂದಿದ್ದಾರೆ.

ಕಳೆದ ಎರಡು ದಶಕಗಳಿಂದ ಸಂಸತ್ ಸದಸ್ಯರಾಗಿರುವ ಡಿಎಂಕೆ ಸಂಸದ ತಿರುಚಿ ಶಿವ “ಸಾಮಾನ್ಯವಾಗಿ, ಸದನದ ಒಮ್ಮತವನ್ನು ತೆಗೆದುಕೊಂಡ ನಂತರ ಸದನದ ಅವಧಿ ವಿಸ್ತರಿಸಲಾಗುತ್ತದೆ. ಆದರೆ ಈ ಬಾರಿ ನಮ್ಮ ಕಡೆ ನೋಡದೆ, 12 ವಿರೋಧ ಪಕ್ಷಗಳ ಸದಸ್ಯರು ತಮ್ಮ ಸದನ ಮುಂದೂಡಬೇಕೆಂದು ಕೇಳಿಕೊಳ್ಳುತ್ತಿದ್ದರೂ ಸಹ, ಸದನದ ಅವಧಿ ವಿಸ್ತರಣೆ ಮಾಡಲಾಯಿತು. ಇದು ರಾಜ್ಯಸಭಾ ನಿಯಮ 37 ರ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದಿದ್ದಾರೆ ಎಂದು ಎನ್‌ಡಿಟಿವಿ ವರದಿಮಾಡಿದೆ.

ಇದನ್ನೂ ಓದಿ: ಸೆ.28ಕ್ಕೆ ಕರ್ನಾಟಕ ಬಂದ್: ಪಂಜಾಬ್‌ನಲ್ಲಿ ಸೆ. 29ರವರೆಗೆ ’ರೈಲ್ ರೋಕೋ’

ಎನ್‌ಡಿಟಿವಿ ಪರಿಶೀಲಿಸಿದ ರಾಜ್ಯಸಭಾ ದೃಶ್ಯಾವಳಿಗಳು, ಮಸೂದೆಗಳನ್ನು ಆಯ್ಕೆ ಸಮಿತಿಗೆ ಕಳುಹಿಸಲು ಮುಂದಾದಾಗ ಮತಗಳ ವಿಭಜನೆಗೆ ಒತ್ತಾಯಿಸಿದ ಮೂವರು ಸಂಸದರಲ್ಲಿ ಕನಿಷ್ಠ ಇಬ್ಬರು ಅವರ ಸ್ಥಾನಗಳಲ್ಲಿ ಕುಳಿತಿದ್ದರು ಎಂದು ತೋರಿಸುತ್ತದೆ.

ಆಯ್ಕೆ ಸಮಿತಿಗೆ ಮಸೂದೆಗಳನ್ನು ಕಳುಹಿಸಲು ಉಪಾಧ್ಯಕ್ಷರು ತಿರುಚಿ ಶಿವ, ಕೆ.ಕೆ.ರಾಗೇಶ್ ಅವರನ್ನು ಗಣನೆಗೆ ತೆಗೆದುಕೊಂಡಾಗ, ಇಬ್ಬರೂ ತಮ್ಮ ತಮ್ಮ ಸ್ಥಾನದಲ್ಲಿ ಇದ್ದುಕೊಂಡು ಮತಗಳ ವಿಭಜನೆಗೆ ಒತ್ತಾಯಿಸಿದ್ದಾರೆ.  ಆಗ ಸಮಯ ಮಧ್ಯಾಹ್ನ 1.10, 1.11. ಇಬ್ಬರ ಮಾತನ್ನು ಧ್ವನಿ ಮತದ ಮೂಲಕ ನಿರಾಕರಿಸಲಾಗಿದೆ.

ಇದನ್ನೂ ಓದಿ: ಕೃಷಿ ಕಾನೂನುಗಳು ನಮ್ಮ ರೈತರನ್ನು ಗುಲಾಮರನ್ನಾಗಿಸುತ್ತವೆ: ರಾಹುಲ್ ಗಾಂಧಿ

ಎನ್‌ಡಿಟಿವಿಯೊಂದಿಗೆ ಮಾತನಾಡಿದ ಸಂಸದ ಕೆ.ಕೆ.ರಾಗೇಶ್, ಮತಗಳ ವಿಭಜನೆಗೆ ಕರೆ ಕೊಟ್ಟಾಗ ಸದಸ್ಯರು ತಮ್ಮ ಸ್ಥಾನಗಳಲ್ಲಿಲ್ಲ ಎಂಬ ಸರ್ಕಾರದ ಆರೋಪವು ’ಶುದ್ಧ ಸುಳ್ಳು’ ಎಂದು ಹೇಳಿದ್ದಾರೆ.

“ಸದನದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಸದಸ್ಯನು ತನ್ನ ಸ್ಥಾನದಿಂದ ವಿಭಜನೆ ಕೇಳಿದಾಗ, ವಿಭಜನೆ ಮೂಲಕ ಮತ ಚಲಾಯಿಸಬೇಕಾಗಿತ್ತು. ಆದರೆ ಉಪಾಧ್ಯಕ್ಷರು ನಾನು ನನ್ನ ಸ್ಥಾನದಲ್ಲಿಲ್ಲ ಎಂದು ಹೇಳುವ ಮೂಲಕ ನನ್ನ ಬೇಡಿಕೆಯನ್ನು ತಿರಸ್ಕರಿಸಿದರು. ರಾಜ್ಯಸಭಾ ಟಿವಿಯ ದೃಶ್ಯಗಳು ಸತ್ಯವನ್ನು ತೋರಿಸುತ್ತದೆ. ನನ್ನ ಸಾಂವಿಧಾನಿಕ ಮತ್ತು ಸದನದ ಹಕ್ಕುಗಳನ್ನು ನಿರಾಕರಿಸಲಾಗಿದೆ. ಸತ್ಯವೆಂದರೆ ಸರ್ಕಾರವು  ಬಹುಮತ ಹೊಂದಿರಲಿಲ್ಲ” ಎಂದು ಸಂಸದ ಕೆ.ಕೆ.ರಾಗೇಶ್ ಹೇಳಿದರು.

ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಸಿಂಗ್ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಪ್ರತಿಪಕ್ಷಗಳು ಅವರ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ್ದು, ಇದನ್ನು ಮೇಲ್ಮನೆ ಅಧ್ಯಕ್ಷ ವೆಂಕಯ್ಯ ನಾಯ್ಡು ನಿರಾಕರಿಸಿದ್ದಾರೆ.

ರಾಜ್ಯಸಭಾ ಟಿವಿ ದೃಶ್ಯಗಳು ಸದನದಲ್ಲಿ ಮಸೂದೆ ಅಂಗೀಕರಿಸುವಾಗ ವಿಪಕ್ಷಗಳನ್ನು ಗಣನೆಗೆ ತೆಗೆದುಕೊಳ್ಳದೇ ಇರುವುದು, ಅವರ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ಅಮಾನತು ಮಾಡಿರುವುದನ್ನು ತೋರಿಸುತ್ತದೆ. ಹಾಗಾದರೇ ಕೃಷಿ ಮಸೂದೆಗಳ ಜಾರಿಗೆ ಬಹುಮತವಿರಲಿಲ್ಲವೇ..? ಧ್ವನಿ ಮತಕ್ಕೆ ಅಷ್ಟು ವಿರೋಧವಿದ್ದರೂ ಅದನ್ನೇ ಮಾನ್ಯ ಮಾಡಿದ್ದು ಯಾಕೆ ಎಂಬ ಪ್ರಶ್ನೆಗಳು ಮತ್ತಷ್ಟು ಅನುಮಾನಗಳನ್ನು ಹುಟ್ಟುಹಾಕಿವೆ.


ಇದನ್ನೂ ಓದಿ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...