Homeಮುಖಪುಟರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗೀಕಾರ: ಬಹುಮತವಿಲ್ಲದೆ ನಿಯಮಗಳ ಉಲ್ಲಂಘನೆ..?

ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗೀಕಾರ: ಬಹುಮತವಿಲ್ಲದೆ ನಿಯಮಗಳ ಉಲ್ಲಂಘನೆ..?

ಮಸೂದೆಗಳನ್ನು ಆಯ್ಕೆ ಸಮಿತಿಗೆ ಕಳುಹಿಸಲು ಮುಂದಾದಾಗ ಮತಗಳ ವಿಭಜನೆಗೆ ಒತ್ತಾಯಿಸಿದ ಮೂವರು ಸಂಸದರಲ್ಲಿ ಕನಿಷ್ಠ ಇಬ್ಬರು ಅವರ ಸ್ಥಾನಗಳಲ್ಲಿದ್ದರು ಎಂದು ದೃಶ್ಯಾವಳಿಗಳು ತೋರಿಸುತ್ತವೆ.

- Advertisement -
- Advertisement -

ದೇಶಾದ್ಯಂತ ರೈತ ಸಂಘಟನೆಗಳು, ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸೆಪ್ಟಂಬರ್ 20 ರಂದು ಕೃಷಿ ಮಸೂದೆಗಳನ್ನು ಅಂಗೀಕರಿಸಿದೆ. ಆದರೆ ಅಂದು ರಾಜ್ಯಸಭೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕೃಷಿ ಮಸೂದೆಗಳ ಅಂಗೀಕಾರದಲ್ಲಿ ಎಲ್ಲಾ ನಿಯಮಗಳನ್ನು ಪಾಲಿಸಿ ಬಹುಮತದೊಂದಿಗೆ ಅಂಗೀಕರಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕೃಷಿ ಮಸೂದೆಗಳು ಅಂಗೀಕಾರವಾದ ದಿನ ಅಂದರೆ ಸೆಪ್ಟೆಂಬರ್‌ 20ರಂದು ರಾಜ್ಯಸಭಾದಲ್ಲಿ ನಡೆದ ಘಟನೆಗಳ ವಿಡಿಯೋ ದೃಶ್ಯಾವಳಿಗಳು ಬೇರೆಯದ್ದೇ ಕಥೆ ಹೇಳುತ್ತಿವೆ.

ಕೃಷಿ ಮಸೂದೆಗಳನ್ನು ಮಂಡಿಸುವ ವೇಳೆ ಸದನದ ಸಮಯ ವಿಸ್ತರಿಸಲು ಸರ್ವಾನುಮತ ಒಪ್ಪಿಗೆ ಪಡೆದಿಲ್ಲ ಮತ್ತು ಧ್ವನಿ ಮತದ ಮೂಲಕ ಮತಗಳ ವಿಭಜನೆಗೆ ಕರೆ ಕೊಟ್ಟಾಗ ವಿರೋಧ ಪಕ್ಷಗಳ ಸದಸ್ಯರು ತಮ್ಮ ಆಸನಗಳಲ್ಲಿ ಇರಲಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಇದು ಸುಳ್ಳು ಎಂದು ಎನ್‌ಡಿಟಿವಿ ಬಿಡುಗಡೆಮಾಡಿರುವ ವಿಡಿಯೋ ದೃಶ್ಯಾವಳಿಗಳು ಸಾಕ್ಷ್ಯಾ ನೀಡುತ್ತಿವೆ.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ ವಿರುದ್ದ ರಾಜ್ಯದಾದ್ಯಂತ ಪ್ರತಿಭಟನೆ; ಹೋರಾಟದ ಝಲಕ್

ಈ  ಮಸೂದೆಗಳ ಅಂಗೀಕಾರವು ಭಾರಿ ಗದ್ದಲ, ಗಲಾಟೆಗೆ ಕಾರಣವಾಗಿದ್ದು, ಸದನದಲ್ಲಿ ಕೋಲಾಹಲ ಎಬ್ಬಿಸಿ, ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಎಂಟು ಸದಸ್ಯರನ್ನು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು  ಅಮಾನತುಗೊಳಿಸಿದ್ದರು. ನಂತರ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಸಿಂಗ್ ಧ್ವನಿಮತದ ಮೂಲಕ ಮಸೂದೆ ಅಂಗೀಕರಿಸಿದರು. “ಸರ್ಕಾರಕ್ಕೆ ಬಹುಮತವಿಲ್ಲದ ಕಾರಣ ಮಸೂದೆಗಳನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ. ಧ್ವನಿ ಮತದ ಬದಲು ಭೌತಿಕ ಮತ ಚಲಾಯಿಸಿದ್ದರೆ” ಸರ್ಕಾರಕ್ಕೆ ಸೋಲಾಗುತ್ತಿತ್ತು ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಇತ್ತ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಹರಿವಂಶ್ ಸಿಂಗ್ ಭೌತಿಕ ಮತದಾನಕ್ಕೆ ಒತ್ತಾಯಿಸಿದಾಗ ಪ್ರತಿಪಕ್ಷದ ಸದಸ್ಯರು ತಮ್ಮ ಸ್ಥಾನಗಳಲ್ಲಿ ಇರಲಿಲ್ಲ. ಹಾಗಾಗಿ ಧ್ವನಿ ಮತದ ಮೂಲಕ ಮಸೂದೆ ಅಂಗೀಕರಿಸಲಾಯಿತು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸಂಸದರು
ಅಮಾನತುಗೊಂಡ 8 ಸಂಸದರು ಅಹೋರಾತ್ರಿ ಧರಣಿ ನಡೆಸುತ್ತಿರುವುದು. PC: PTI

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ವಿರೋಧಿಸಿ ಗದ್ದಲ: ಅಧಿವೇಶನದಿಂದ 8 ಸಂಸದರ ಅಮಾನತು

ಸಂಸತ್ತಿನ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಉಪಸಭಾಪತಿ ಸದನದ ಒಮ್ಮತವನ್ನು ತೆಗೆದುಕೊಳ್ಳದೆ ಸದನದ ಅವಧಿಯನ್ನು ವಿಸ್ತರಿಸಿದ್ದಾರೆ ಎಂದು ಪ್ರತಿಪಕ್ಷಗಳು ಗದ್ದಲ ಮಾಡಿದ್ದಾ ಮಧ್ಯಾಹ್ನ 1 ಗಂಟೆ ಆಗಿತ್ತು. ಎನ್‌ಡಿಟಿವಿ ಪ್ರಸಾರ ಮಾಡಿರುವ ರಾಜ್ಯಸಭಾ ನಡಾವಳಿಗಳ ವಿಡಿಯೋದಲ್ಲಿ ಮಧ್ಯಾಹ್ನ 1.03 ರ ಸುಮಾರಿಗೆ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ “ಯಾವುದೇ ಕಾರಣಕ್ಕೂ ಸದನದ ಅವಧಿಯನ್ನು ವಿಸ್ತರಿಸಬಾರದು. ಇಂದು ಮತ್ತು ನಾಳೆ ಪ್ರಶ್ನೆಗಳಿಗೆ ಉತ್ತರಿಸಬಹದು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತವೆ” ಎಂದಿದ್ದಾರೆ.

ಕಳೆದ ಎರಡು ದಶಕಗಳಿಂದ ಸಂಸತ್ ಸದಸ್ಯರಾಗಿರುವ ಡಿಎಂಕೆ ಸಂಸದ ತಿರುಚಿ ಶಿವ “ಸಾಮಾನ್ಯವಾಗಿ, ಸದನದ ಒಮ್ಮತವನ್ನು ತೆಗೆದುಕೊಂಡ ನಂತರ ಸದನದ ಅವಧಿ ವಿಸ್ತರಿಸಲಾಗುತ್ತದೆ. ಆದರೆ ಈ ಬಾರಿ ನಮ್ಮ ಕಡೆ ನೋಡದೆ, 12 ವಿರೋಧ ಪಕ್ಷಗಳ ಸದಸ್ಯರು ತಮ್ಮ ಸದನ ಮುಂದೂಡಬೇಕೆಂದು ಕೇಳಿಕೊಳ್ಳುತ್ತಿದ್ದರೂ ಸಹ, ಸದನದ ಅವಧಿ ವಿಸ್ತರಣೆ ಮಾಡಲಾಯಿತು. ಇದು ರಾಜ್ಯಸಭಾ ನಿಯಮ 37 ರ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದಿದ್ದಾರೆ ಎಂದು ಎನ್‌ಡಿಟಿವಿ ವರದಿಮಾಡಿದೆ.

ಇದನ್ನೂ ಓದಿ: ಸೆ.28ಕ್ಕೆ ಕರ್ನಾಟಕ ಬಂದ್: ಪಂಜಾಬ್‌ನಲ್ಲಿ ಸೆ. 29ರವರೆಗೆ ’ರೈಲ್ ರೋಕೋ’

ಎನ್‌ಡಿಟಿವಿ ಪರಿಶೀಲಿಸಿದ ರಾಜ್ಯಸಭಾ ದೃಶ್ಯಾವಳಿಗಳು, ಮಸೂದೆಗಳನ್ನು ಆಯ್ಕೆ ಸಮಿತಿಗೆ ಕಳುಹಿಸಲು ಮುಂದಾದಾಗ ಮತಗಳ ವಿಭಜನೆಗೆ ಒತ್ತಾಯಿಸಿದ ಮೂವರು ಸಂಸದರಲ್ಲಿ ಕನಿಷ್ಠ ಇಬ್ಬರು ಅವರ ಸ್ಥಾನಗಳಲ್ಲಿ ಕುಳಿತಿದ್ದರು ಎಂದು ತೋರಿಸುತ್ತದೆ.

ಆಯ್ಕೆ ಸಮಿತಿಗೆ ಮಸೂದೆಗಳನ್ನು ಕಳುಹಿಸಲು ಉಪಾಧ್ಯಕ್ಷರು ತಿರುಚಿ ಶಿವ, ಕೆ.ಕೆ.ರಾಗೇಶ್ ಅವರನ್ನು ಗಣನೆಗೆ ತೆಗೆದುಕೊಂಡಾಗ, ಇಬ್ಬರೂ ತಮ್ಮ ತಮ್ಮ ಸ್ಥಾನದಲ್ಲಿ ಇದ್ದುಕೊಂಡು ಮತಗಳ ವಿಭಜನೆಗೆ ಒತ್ತಾಯಿಸಿದ್ದಾರೆ.  ಆಗ ಸಮಯ ಮಧ್ಯಾಹ್ನ 1.10, 1.11. ಇಬ್ಬರ ಮಾತನ್ನು ಧ್ವನಿ ಮತದ ಮೂಲಕ ನಿರಾಕರಿಸಲಾಗಿದೆ.

ಇದನ್ನೂ ಓದಿ: ಕೃಷಿ ಕಾನೂನುಗಳು ನಮ್ಮ ರೈತರನ್ನು ಗುಲಾಮರನ್ನಾಗಿಸುತ್ತವೆ: ರಾಹುಲ್ ಗಾಂಧಿ

ಎನ್‌ಡಿಟಿವಿಯೊಂದಿಗೆ ಮಾತನಾಡಿದ ಸಂಸದ ಕೆ.ಕೆ.ರಾಗೇಶ್, ಮತಗಳ ವಿಭಜನೆಗೆ ಕರೆ ಕೊಟ್ಟಾಗ ಸದಸ್ಯರು ತಮ್ಮ ಸ್ಥಾನಗಳಲ್ಲಿಲ್ಲ ಎಂಬ ಸರ್ಕಾರದ ಆರೋಪವು ’ಶುದ್ಧ ಸುಳ್ಳು’ ಎಂದು ಹೇಳಿದ್ದಾರೆ.

“ಸದನದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಸದಸ್ಯನು ತನ್ನ ಸ್ಥಾನದಿಂದ ವಿಭಜನೆ ಕೇಳಿದಾಗ, ವಿಭಜನೆ ಮೂಲಕ ಮತ ಚಲಾಯಿಸಬೇಕಾಗಿತ್ತು. ಆದರೆ ಉಪಾಧ್ಯಕ್ಷರು ನಾನು ನನ್ನ ಸ್ಥಾನದಲ್ಲಿಲ್ಲ ಎಂದು ಹೇಳುವ ಮೂಲಕ ನನ್ನ ಬೇಡಿಕೆಯನ್ನು ತಿರಸ್ಕರಿಸಿದರು. ರಾಜ್ಯಸಭಾ ಟಿವಿಯ ದೃಶ್ಯಗಳು ಸತ್ಯವನ್ನು ತೋರಿಸುತ್ತದೆ. ನನ್ನ ಸಾಂವಿಧಾನಿಕ ಮತ್ತು ಸದನದ ಹಕ್ಕುಗಳನ್ನು ನಿರಾಕರಿಸಲಾಗಿದೆ. ಸತ್ಯವೆಂದರೆ ಸರ್ಕಾರವು  ಬಹುಮತ ಹೊಂದಿರಲಿಲ್ಲ” ಎಂದು ಸಂಸದ ಕೆ.ಕೆ.ರಾಗೇಶ್ ಹೇಳಿದರು.

ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಸಿಂಗ್ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಪ್ರತಿಪಕ್ಷಗಳು ಅವರ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ್ದು, ಇದನ್ನು ಮೇಲ್ಮನೆ ಅಧ್ಯಕ್ಷ ವೆಂಕಯ್ಯ ನಾಯ್ಡು ನಿರಾಕರಿಸಿದ್ದಾರೆ.

ರಾಜ್ಯಸಭಾ ಟಿವಿ ದೃಶ್ಯಗಳು ಸದನದಲ್ಲಿ ಮಸೂದೆ ಅಂಗೀಕರಿಸುವಾಗ ವಿಪಕ್ಷಗಳನ್ನು ಗಣನೆಗೆ ತೆಗೆದುಕೊಳ್ಳದೇ ಇರುವುದು, ಅವರ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ಅಮಾನತು ಮಾಡಿರುವುದನ್ನು ತೋರಿಸುತ್ತದೆ. ಹಾಗಾದರೇ ಕೃಷಿ ಮಸೂದೆಗಳ ಜಾರಿಗೆ ಬಹುಮತವಿರಲಿಲ್ಲವೇ..? ಧ್ವನಿ ಮತಕ್ಕೆ ಅಷ್ಟು ವಿರೋಧವಿದ್ದರೂ ಅದನ್ನೇ ಮಾನ್ಯ ಮಾಡಿದ್ದು ಯಾಕೆ ಎಂಬ ಪ್ರಶ್ನೆಗಳು ಮತ್ತಷ್ಟು ಅನುಮಾನಗಳನ್ನು ಹುಟ್ಟುಹಾಕಿವೆ.


ಇದನ್ನೂ ಓದಿ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...