Homeಮುಖಪುಟರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗೀಕಾರ: ಬಹುಮತವಿಲ್ಲದೆ ನಿಯಮಗಳ ಉಲ್ಲಂಘನೆ..?

ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗೀಕಾರ: ಬಹುಮತವಿಲ್ಲದೆ ನಿಯಮಗಳ ಉಲ್ಲಂಘನೆ..?

ಮಸೂದೆಗಳನ್ನು ಆಯ್ಕೆ ಸಮಿತಿಗೆ ಕಳುಹಿಸಲು ಮುಂದಾದಾಗ ಮತಗಳ ವಿಭಜನೆಗೆ ಒತ್ತಾಯಿಸಿದ ಮೂವರು ಸಂಸದರಲ್ಲಿ ಕನಿಷ್ಠ ಇಬ್ಬರು ಅವರ ಸ್ಥಾನಗಳಲ್ಲಿದ್ದರು ಎಂದು ದೃಶ್ಯಾವಳಿಗಳು ತೋರಿಸುತ್ತವೆ.

- Advertisement -
- Advertisement -

ದೇಶಾದ್ಯಂತ ರೈತ ಸಂಘಟನೆಗಳು, ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸೆಪ್ಟಂಬರ್ 20 ರಂದು ಕೃಷಿ ಮಸೂದೆಗಳನ್ನು ಅಂಗೀಕರಿಸಿದೆ. ಆದರೆ ಅಂದು ರಾಜ್ಯಸಭೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕೃಷಿ ಮಸೂದೆಗಳ ಅಂಗೀಕಾರದಲ್ಲಿ ಎಲ್ಲಾ ನಿಯಮಗಳನ್ನು ಪಾಲಿಸಿ ಬಹುಮತದೊಂದಿಗೆ ಅಂಗೀಕರಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕೃಷಿ ಮಸೂದೆಗಳು ಅಂಗೀಕಾರವಾದ ದಿನ ಅಂದರೆ ಸೆಪ್ಟೆಂಬರ್‌ 20ರಂದು ರಾಜ್ಯಸಭಾದಲ್ಲಿ ನಡೆದ ಘಟನೆಗಳ ವಿಡಿಯೋ ದೃಶ್ಯಾವಳಿಗಳು ಬೇರೆಯದ್ದೇ ಕಥೆ ಹೇಳುತ್ತಿವೆ.

ಕೃಷಿ ಮಸೂದೆಗಳನ್ನು ಮಂಡಿಸುವ ವೇಳೆ ಸದನದ ಸಮಯ ವಿಸ್ತರಿಸಲು ಸರ್ವಾನುಮತ ಒಪ್ಪಿಗೆ ಪಡೆದಿಲ್ಲ ಮತ್ತು ಧ್ವನಿ ಮತದ ಮೂಲಕ ಮತಗಳ ವಿಭಜನೆಗೆ ಕರೆ ಕೊಟ್ಟಾಗ ವಿರೋಧ ಪಕ್ಷಗಳ ಸದಸ್ಯರು ತಮ್ಮ ಆಸನಗಳಲ್ಲಿ ಇರಲಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಇದು ಸುಳ್ಳು ಎಂದು ಎನ್‌ಡಿಟಿವಿ ಬಿಡುಗಡೆಮಾಡಿರುವ ವಿಡಿಯೋ ದೃಶ್ಯಾವಳಿಗಳು ಸಾಕ್ಷ್ಯಾ ನೀಡುತ್ತಿವೆ.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ ವಿರುದ್ದ ರಾಜ್ಯದಾದ್ಯಂತ ಪ್ರತಿಭಟನೆ; ಹೋರಾಟದ ಝಲಕ್

ಈ  ಮಸೂದೆಗಳ ಅಂಗೀಕಾರವು ಭಾರಿ ಗದ್ದಲ, ಗಲಾಟೆಗೆ ಕಾರಣವಾಗಿದ್ದು, ಸದನದಲ್ಲಿ ಕೋಲಾಹಲ ಎಬ್ಬಿಸಿ, ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಎಂಟು ಸದಸ್ಯರನ್ನು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು  ಅಮಾನತುಗೊಳಿಸಿದ್ದರು. ನಂತರ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಸಿಂಗ್ ಧ್ವನಿಮತದ ಮೂಲಕ ಮಸೂದೆ ಅಂಗೀಕರಿಸಿದರು. “ಸರ್ಕಾರಕ್ಕೆ ಬಹುಮತವಿಲ್ಲದ ಕಾರಣ ಮಸೂದೆಗಳನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ. ಧ್ವನಿ ಮತದ ಬದಲು ಭೌತಿಕ ಮತ ಚಲಾಯಿಸಿದ್ದರೆ” ಸರ್ಕಾರಕ್ಕೆ ಸೋಲಾಗುತ್ತಿತ್ತು ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಇತ್ತ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಹರಿವಂಶ್ ಸಿಂಗ್ ಭೌತಿಕ ಮತದಾನಕ್ಕೆ ಒತ್ತಾಯಿಸಿದಾಗ ಪ್ರತಿಪಕ್ಷದ ಸದಸ್ಯರು ತಮ್ಮ ಸ್ಥಾನಗಳಲ್ಲಿ ಇರಲಿಲ್ಲ. ಹಾಗಾಗಿ ಧ್ವನಿ ಮತದ ಮೂಲಕ ಮಸೂದೆ ಅಂಗೀಕರಿಸಲಾಯಿತು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸಂಸದರು
ಅಮಾನತುಗೊಂಡ 8 ಸಂಸದರು ಅಹೋರಾತ್ರಿ ಧರಣಿ ನಡೆಸುತ್ತಿರುವುದು. PC: PTI

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ವಿರೋಧಿಸಿ ಗದ್ದಲ: ಅಧಿವೇಶನದಿಂದ 8 ಸಂಸದರ ಅಮಾನತು

ಸಂಸತ್ತಿನ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಸ್ತಾವನೆಯ ಮೇರೆಗೆ ಉಪಸಭಾಪತಿ ಸದನದ ಒಮ್ಮತವನ್ನು ತೆಗೆದುಕೊಳ್ಳದೆ ಸದನದ ಅವಧಿಯನ್ನು ವಿಸ್ತರಿಸಿದ್ದಾರೆ ಎಂದು ಪ್ರತಿಪಕ್ಷಗಳು ಗದ್ದಲ ಮಾಡಿದ್ದಾ ಮಧ್ಯಾಹ್ನ 1 ಗಂಟೆ ಆಗಿತ್ತು. ಎನ್‌ಡಿಟಿವಿ ಪ್ರಸಾರ ಮಾಡಿರುವ ರಾಜ್ಯಸಭಾ ನಡಾವಳಿಗಳ ವಿಡಿಯೋದಲ್ಲಿ ಮಧ್ಯಾಹ್ನ 1.03 ರ ಸುಮಾರಿಗೆ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ “ಯಾವುದೇ ಕಾರಣಕ್ಕೂ ಸದನದ ಅವಧಿಯನ್ನು ವಿಸ್ತರಿಸಬಾರದು. ಇಂದು ಮತ್ತು ನಾಳೆ ಪ್ರಶ್ನೆಗಳಿಗೆ ಉತ್ತರಿಸಬಹದು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತವೆ” ಎಂದಿದ್ದಾರೆ.

ಕಳೆದ ಎರಡು ದಶಕಗಳಿಂದ ಸಂಸತ್ ಸದಸ್ಯರಾಗಿರುವ ಡಿಎಂಕೆ ಸಂಸದ ತಿರುಚಿ ಶಿವ “ಸಾಮಾನ್ಯವಾಗಿ, ಸದನದ ಒಮ್ಮತವನ್ನು ತೆಗೆದುಕೊಂಡ ನಂತರ ಸದನದ ಅವಧಿ ವಿಸ್ತರಿಸಲಾಗುತ್ತದೆ. ಆದರೆ ಈ ಬಾರಿ ನಮ್ಮ ಕಡೆ ನೋಡದೆ, 12 ವಿರೋಧ ಪಕ್ಷಗಳ ಸದಸ್ಯರು ತಮ್ಮ ಸದನ ಮುಂದೂಡಬೇಕೆಂದು ಕೇಳಿಕೊಳ್ಳುತ್ತಿದ್ದರೂ ಸಹ, ಸದನದ ಅವಧಿ ವಿಸ್ತರಣೆ ಮಾಡಲಾಯಿತು. ಇದು ರಾಜ್ಯಸಭಾ ನಿಯಮ 37 ರ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದಿದ್ದಾರೆ ಎಂದು ಎನ್‌ಡಿಟಿವಿ ವರದಿಮಾಡಿದೆ.

ಇದನ್ನೂ ಓದಿ: ಸೆ.28ಕ್ಕೆ ಕರ್ನಾಟಕ ಬಂದ್: ಪಂಜಾಬ್‌ನಲ್ಲಿ ಸೆ. 29ರವರೆಗೆ ’ರೈಲ್ ರೋಕೋ’

ಎನ್‌ಡಿಟಿವಿ ಪರಿಶೀಲಿಸಿದ ರಾಜ್ಯಸಭಾ ದೃಶ್ಯಾವಳಿಗಳು, ಮಸೂದೆಗಳನ್ನು ಆಯ್ಕೆ ಸಮಿತಿಗೆ ಕಳುಹಿಸಲು ಮುಂದಾದಾಗ ಮತಗಳ ವಿಭಜನೆಗೆ ಒತ್ತಾಯಿಸಿದ ಮೂವರು ಸಂಸದರಲ್ಲಿ ಕನಿಷ್ಠ ಇಬ್ಬರು ಅವರ ಸ್ಥಾನಗಳಲ್ಲಿ ಕುಳಿತಿದ್ದರು ಎಂದು ತೋರಿಸುತ್ತದೆ.

ಆಯ್ಕೆ ಸಮಿತಿಗೆ ಮಸೂದೆಗಳನ್ನು ಕಳುಹಿಸಲು ಉಪಾಧ್ಯಕ್ಷರು ತಿರುಚಿ ಶಿವ, ಕೆ.ಕೆ.ರಾಗೇಶ್ ಅವರನ್ನು ಗಣನೆಗೆ ತೆಗೆದುಕೊಂಡಾಗ, ಇಬ್ಬರೂ ತಮ್ಮ ತಮ್ಮ ಸ್ಥಾನದಲ್ಲಿ ಇದ್ದುಕೊಂಡು ಮತಗಳ ವಿಭಜನೆಗೆ ಒತ್ತಾಯಿಸಿದ್ದಾರೆ.  ಆಗ ಸಮಯ ಮಧ್ಯಾಹ್ನ 1.10, 1.11. ಇಬ್ಬರ ಮಾತನ್ನು ಧ್ವನಿ ಮತದ ಮೂಲಕ ನಿರಾಕರಿಸಲಾಗಿದೆ.

ಇದನ್ನೂ ಓದಿ: ಕೃಷಿ ಕಾನೂನುಗಳು ನಮ್ಮ ರೈತರನ್ನು ಗುಲಾಮರನ್ನಾಗಿಸುತ್ತವೆ: ರಾಹುಲ್ ಗಾಂಧಿ

ಎನ್‌ಡಿಟಿವಿಯೊಂದಿಗೆ ಮಾತನಾಡಿದ ಸಂಸದ ಕೆ.ಕೆ.ರಾಗೇಶ್, ಮತಗಳ ವಿಭಜನೆಗೆ ಕರೆ ಕೊಟ್ಟಾಗ ಸದಸ್ಯರು ತಮ್ಮ ಸ್ಥಾನಗಳಲ್ಲಿಲ್ಲ ಎಂಬ ಸರ್ಕಾರದ ಆರೋಪವು ’ಶುದ್ಧ ಸುಳ್ಳು’ ಎಂದು ಹೇಳಿದ್ದಾರೆ.

“ಸದನದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಸದಸ್ಯನು ತನ್ನ ಸ್ಥಾನದಿಂದ ವಿಭಜನೆ ಕೇಳಿದಾಗ, ವಿಭಜನೆ ಮೂಲಕ ಮತ ಚಲಾಯಿಸಬೇಕಾಗಿತ್ತು. ಆದರೆ ಉಪಾಧ್ಯಕ್ಷರು ನಾನು ನನ್ನ ಸ್ಥಾನದಲ್ಲಿಲ್ಲ ಎಂದು ಹೇಳುವ ಮೂಲಕ ನನ್ನ ಬೇಡಿಕೆಯನ್ನು ತಿರಸ್ಕರಿಸಿದರು. ರಾಜ್ಯಸಭಾ ಟಿವಿಯ ದೃಶ್ಯಗಳು ಸತ್ಯವನ್ನು ತೋರಿಸುತ್ತದೆ. ನನ್ನ ಸಾಂವಿಧಾನಿಕ ಮತ್ತು ಸದನದ ಹಕ್ಕುಗಳನ್ನು ನಿರಾಕರಿಸಲಾಗಿದೆ. ಸತ್ಯವೆಂದರೆ ಸರ್ಕಾರವು  ಬಹುಮತ ಹೊಂದಿರಲಿಲ್ಲ” ಎಂದು ಸಂಸದ ಕೆ.ಕೆ.ರಾಗೇಶ್ ಹೇಳಿದರು.

ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಸಿಂಗ್ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಪ್ರತಿಪಕ್ಷಗಳು ಅವರ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ್ದು, ಇದನ್ನು ಮೇಲ್ಮನೆ ಅಧ್ಯಕ್ಷ ವೆಂಕಯ್ಯ ನಾಯ್ಡು ನಿರಾಕರಿಸಿದ್ದಾರೆ.

ರಾಜ್ಯಸಭಾ ಟಿವಿ ದೃಶ್ಯಗಳು ಸದನದಲ್ಲಿ ಮಸೂದೆ ಅಂಗೀಕರಿಸುವಾಗ ವಿಪಕ್ಷಗಳನ್ನು ಗಣನೆಗೆ ತೆಗೆದುಕೊಳ್ಳದೇ ಇರುವುದು, ಅವರ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ಅಮಾನತು ಮಾಡಿರುವುದನ್ನು ತೋರಿಸುತ್ತದೆ. ಹಾಗಾದರೇ ಕೃಷಿ ಮಸೂದೆಗಳ ಜಾರಿಗೆ ಬಹುಮತವಿರಲಿಲ್ಲವೇ..? ಧ್ವನಿ ಮತಕ್ಕೆ ಅಷ್ಟು ವಿರೋಧವಿದ್ದರೂ ಅದನ್ನೇ ಮಾನ್ಯ ಮಾಡಿದ್ದು ಯಾಕೆ ಎಂಬ ಪ್ರಶ್ನೆಗಳು ಮತ್ತಷ್ಟು ಅನುಮಾನಗಳನ್ನು ಹುಟ್ಟುಹಾಕಿವೆ.


ಇದನ್ನೂ ಓದಿ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...