Homeಮುಖಪುಟದೆಹಲಿ ವಿಶ್ವವಿದ್ಯಾಲಯದಲ್ಲಿ SC/ ST ಮೀಸಲಾತಿ ನಿಯಮಗಳ ಉಲ್ಲಂಘನೆ; ಹಳೆಯ ರೋಸ್ಟರ್ ವ್ಯವಸ್ಥೆಗೆ ಮರಳಲು ಶಿಫಾರಸು

ದೆಹಲಿ ವಿಶ್ವವಿದ್ಯಾಲಯದಲ್ಲಿ SC/ ST ಮೀಸಲಾತಿ ನಿಯಮಗಳ ಉಲ್ಲಂಘನೆ; ಹಳೆಯ ರೋಸ್ಟರ್ ವ್ಯವಸ್ಥೆಗೆ ಮರಳಲು ಶಿಫಾರಸು

- Advertisement -
- Advertisement -

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದಲ್ಲಿ (DU) ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ನೀತಿಗಳ ಅನುಷ್ಠಾನದಲ್ಲಿ ಗಂಭೀರ ಲೋಪಗಳನ್ನು ಸಂಸದೀಯ ಸಮಿತಿಯೊಂದು ಎತ್ತಿ ತೋರಿಸಿದೆ. ರೋಸ್ಟರ್ ನಿರ್ವಹಣೆಯಲ್ಲಿ 2013ರ ಬದಲಾವಣೆಯು SC/ST ಪ್ರಾತಿನಿಧ್ಯದಲ್ಲಿ ಅಸಮತೋಲನಕ್ಕೆ ಕಾರಣವಾಗಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದ್ದು, ಈ ಸಮಸ್ಯೆಯನ್ನು ಸರಿಪಡಿಸಲು ಹಳೆಯ, ಇಲಾಖಾ ಮಟ್ಟದ ರೋಸ್ಟರ್ ವ್ಯವಸ್ಥೆಗೆ ಮರಳಬೇಕೆಂದು ಶಿಫಾರಸು ಮಾಡಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕುರಿತ ಈ ಸಮಿತಿಯು ತನ್ನ 50 ಪುಟಗಳ ವರದಿಯನ್ನು ಆಗಸ್ಟ್ 7 ರಂದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿದೆ. ಈ ವರದಿಯು, ಏಪ್ರಿಲ್ 11, 2025 ರಂದು ದೆಹಲಿ ವಿಶ್ವವಿದ್ಯಾಲಯದಲ್ಲಿ ನಡೆಸಿದ ಸ್ಥಳೀಯ ಅಧ್ಯಯನ ಮತ್ತು ಅಧಿಕಾರಿಗಳು, ಶಿಕ್ಷಕರ ಸಂಘಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಭೆಗಳ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ.

ರೋಸ್ಟರ್ ವ್ಯವಸ್ಥೆಯಲ್ಲಿನ ಲೋಪಗಳು:

2013 ರವರೆಗೆ, DU ನ ಪ್ರತಿಯೊಂದು ಶೈಕ್ಷಣಿಕ ವಿಭಾಗವು ತನ್ನದೇ ಆದ ಮೀಸಲಾತಿ ರೋಸ್ಟರ್ ಅನ್ನು ನಿರ್ವಹಿಸುತ್ತಿತ್ತು. ಆದರೆ, UGC ಮತ್ತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಸೂಚನೆಯ ಮೇರೆಗೆ, ವಿಶ್ವವಿದ್ಯಾಲಯ-ವ್ಯಾಪಿ ರೋಸ್ಟರ್ ವ್ಯವಸ್ಥೆಗೆ ಬದಲಾವಣೆ ಮಾಡಲಾಯಿತು. ಈ ಬದಲಾವಣೆಯು ಸಮಸ್ಯಾತ್ಮಕವಾಗಿದೆ ಎಂದು ಸಮಿತಿ ಹೇಳಿದೆ. ಹಳೆಯ ವ್ಯವಸ್ಥೆಯಲ್ಲಿ ಮೀಸಲು ಹುದ್ದೆಗಳು ಎಲ್ಲಾ ವಿಭಾಗಗಳಲ್ಲಿ ಹರಡಿದ್ದವು. ಆದರೆ ಹೊಸ ವ್ಯವಸ್ಥೆಯಲ್ಲಿ, ಮೀಸಲುರಹಿತ ಹುದ್ದೆಗಳನ್ನು ಮೀಸಲು ಹುದ್ದೆಗಳಾಗಿ ಪರಿವರ್ತಿಸಿದ್ದರಿಂದ ಕೆಲವು ಇಲಾಖೆಗಳಲ್ಲಿ ಮೀಸಲಾತಿ ಹುದ್ದೆಗಳ ಸಂಖ್ಯೆ ಹೆಚ್ಚಿ, ಮತ್ತೆ ಕೆಲವು ಇಲಾಖೆಗಳು ಪ್ರಾತಿನಿಧ್ಯವಿಲ್ಲದೆ ಉಳಿದಿವೆ ಎಂದು ವರದಿ ತಿಳಿಸಿದೆ.

ರೋಸ್ಟರ್ ಬದಲಾವಣೆಯ ನಂತರ ಮೀಸಲುರಹಿತ ಹುದ್ದೆಗಳು 522 ರಿಂದ 402ಕ್ಕೆ ಇಳಿದಿವೆ. ಅದೇ ಸಮಯದಲ್ಲಿ, SC ಹುದ್ದೆಗಳು 98 ರಿಂದ 119 ಕ್ಕೆ ಮತ್ತು ST ಹುದ್ದೆಗಳು 40 ರಿಂದ 59 ಕ್ಕೆ ಏರಿವೆ. ಈ ಹುದ್ದೆಗಳ ಸಂಖ್ಯೆ ಹೆಚ್ಚಾಗಿದ್ದರೂ, ಅನೇಕ ಹುದ್ದೆಗಳು ಇನ್ನೂ ಖಾಲಿಯಾಗಿಯೇ ಉಳಿದಿವೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಸೂಚನೆ:

ವರ್ಷಗಳಿಂದ ಭರ್ತಿಯಾಗದೆ ಉಳಿದಿರುವ SC/ST ಬ್ಯಾಕ್‌ಲಾಗ್ ಹುದ್ದೆಗಳ ಕುರಿತು ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. ಮೀಸಲಾತಿಯ ಉದ್ದೇಶವನ್ನು ಈ ವಿಳಂಬಗಳು ದುರ್ಬಲಗೊಳಿಸುತ್ತಿವೆ ಎಂದು ಹೇಳಿರುವ ಸಮಿತಿಯು, “ಎಲ್ಲಾ ಬ್ಯಾಕ್‌ಲಾಗ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮೂರು ತಿಂಗಳೊಳಗೆ ವಿಶೇಷ ನೇಮಕಾತಿ ಅಭಿಯಾನಗಳನ್ನು ನಡೆಸಬೇಕು” ಎಂದು ಕಟ್ಟುನಿಟ್ಟಾಗಿ ಶಿಫಾರಸು ಮಾಡಿದೆ.

ಅಲ್ಲದೆ, ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಟು ಅಡ್-ಹಾಕ್ ಬೋಧಕವರ್ಗ ಹುದ್ದೆಗಳಲ್ಲಿ SC/ST ಪ್ರಾತಿನಿಧ್ಯ ಇಲ್ಲದಿರುವ ಬಗ್ಗೆ ಸಮಿತಿ ಗಮನ ಸೆಳೆದಿದೆ. ಇಂತಹ ಹುದ್ದೆಗಳನ್ನು ನಿಯಮಿತಗೊಳಿಸುವಾಗ SC/ST ಅಭ್ಯರ್ಥಿಗಳಿಗೆ ವಯಸ್ಸು ಮತ್ತು ಅರ್ಹತೆಯಲ್ಲಿ ಸಡಿಲಿಕೆಗಳನ್ನು ನೀಡುವಂತೆ ಸಮಿತಿ ಶಿಫಾರಸು ಮಾಡಿದೆ.

ವಿದ್ಯಾರ್ಥಿ ಪ್ರವೇಶಾತಿ ಮತ್ತು ಬೋಧಕ ಸಿಬ್ಬಂದಿಯ ಸ್ಥಿತಿಗತಿ:

ವಿದ್ಯಾರ್ಥಿಗಳ ಪ್ರವೇಶಾತಿಯಲ್ಲಿ ವಿಶ್ವವಿದ್ಯಾಲಯವು ಸರ್ಕಾರಿ ನಿಯಮಗಳನ್ನು ಸಾಮಾನ್ಯವಾಗಿ ಪಾಲಿಸುತ್ತಿದೆ. 2024-25 ರ ಅಂಕಿಅಂಶಗಳ ಪ್ರಕಾರ, ಪದವಿಪೂರ್ವ ಪ್ರವೇಶಾತಿಯಲ್ಲಿ SC ವಿದ್ಯಾರ್ಥಿಗಳು 15.44% ಮತ್ತು ST ವಿದ್ಯಾರ್ಥಿಗಳು 4.14% ಇದ್ದಾರೆ. ಸ್ನಾತಕೋತ್ತರ ಮತ್ತು ಪಿಎಚ್‌ಡಿ ಹಂತಗಳಲ್ಲಿಯೂ ಮೀಸಲಾತಿ ನಿಯಮಗಳನ್ನು ಪಾಲಿಸಲಾಗಿದೆ. ಆದರೆ ಕೆಲವು ಕಾರ್ಯಕ್ರಮಗಳಲ್ಲಿ ಇನ್ನೂ ಅಂತರಗಳಿವೆ ಎಂದು ವರದಿ ಹೇಳಿದೆ.

ಮಾರ್ಚ್ 31, 2025 ರಂತೆ, DU ನಲ್ಲಿ 995 ಬೋಧಕ ಸಿಬ್ಬಂದಿಯಿದ್ದು, ಅವರಲ್ಲಿ 129 (12.96%) SC ಮತ್ತು 56 (5.62%) ST ಆಗಿದ್ದಾರೆ. ಪ್ರಾಧ್ಯಾಪಕರ ಹಂತದಲ್ಲಿ SC ಪ್ರಾತಿನಿಧ್ಯ 9.09% ಮತ್ತು ST ಪ್ರಾತಿನಿಧ್ಯ ಕೇವಲ 1.51% ರಷ್ಟಿದೆ. ಇದಕ್ಕೆ ಕಾರಣ “ST ಅಭ್ಯರ್ಥಿಗಳಿಂದ ಸೀಮಿತ ಅರ್ಜಿಗಳು” ಎಂದು ಬೋಧಕವರ್ಗದ ಸ್ಥಿತಿಯ ಕುರಿತು ಸಮಿತಿ ಉಲ್ಲೇಖಿಸಿದೆ.

ಕುಂದುಕೊರತೆ ನಿವಾರಣೆಗೆ SC/ST ಸೆಲ್ ಕಡ್ಡಾಯ:

DU ನಲ್ಲಿ SC/ST ಸೆಲ್ ಕಾರ್ಯನಿರ್ವಹಿಸುತ್ತಿದ್ದರೂ, ಅದರ ಅಂಗಸಂಸ್ಥೆ ಮತ್ತು ಘಟಕ ಕಾಲೇಜುಗಳಲ್ಲಿ ಇಂತಹ ಯಾವುದೇ ಘಟಕವಿಲ್ಲದಿರುವುದು ಸಮಿತಿಯ ಕಳವಳಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಕುಂದುಕೊರತೆಗಳನ್ನು ನಿವಾರಿಸಲು ಮತ್ತು ಮೀಸಲಾತಿ ಜಾರಿಗೊಳಿಸಲು “ಎಲ್ಲಾ ಅಂಗಸಂಸ್ಥೆ ಕಾಲೇಜುಗಳಲ್ಲಿ SC/ST ಸೆಲ್‌ಗಳನ್ನು ಕಡ್ಡಾಯಗೊಳಿಸಬೇಕು” ಎಂದು ಸಮಿತಿ ಶಿಫಾರಸು ಮಾಡಿದೆ.

ಸಮಿತಿಯ ಶಿಫಾರಸುಗಳು ಈಗ ಕೇಂದ್ರ ಶಿಕ್ಷಣ ಸಚಿವಾಲಯದ ಪರಿಶೀಲನೆಗೆ ಹೋಗಿದ್ದು, ಸಚಿವಾಲಯವು ಇದರ ಬಗ್ಗೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವ ನಿರೀಕ್ಷೆಯಿದೆ. ಈ ಶಿಫಾರಸುಗಳು ಜಾರಿಯಾದರೆ, ದೆಹಲಿ ವಿಶ್ವವಿದ್ಯಾಲಯದ ನೇಮಕಾತಿ ಮತ್ತು ಪ್ರವೇಶಾತಿ ನೀತಿಗಳಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಇದು ಇದೇ ರೀತಿಯ ನೀತಿಗಳನ್ನು ಅನುಸರಿಸುತ್ತಿರುವ ಇತರ ಕೇಂದ್ರ ಸಂಸ್ಥೆಗಳ ಮೇಲೂ ಪರಿಣಾಮ ಬೀರಬಹುದು.

ಸಮಿತಿಯ ಪ್ರಮುಖ ಶಿಫಾರಸುಗಳು

ಈ ಸಮಸ್ಯೆಗಳನ್ನು ಪರಿಹರಿಸಲು ಸಮಿತಿಯು ಕೆಲವು ಶಿಫಾರಸುಗಳನ್ನು ಮಾಡಿದೆ:

*ಕಟ್-ಆಫ್ ಮಾರ್ಕ್‌ಗಳನ್ನು ಕಡಿಮೆ ಮಾಡುವುದು: ಮೀಸಲಾತಿ ಹುದ್ದೆಗಳು ಖಾಲಿ ಉಳಿಯದಂತೆ ಪ್ರವೇಶ ಕಟ್-ಆಫ್ ಮಾರ್ಕ್‌ಗಳನ್ನು “ಗಮನಾರ್ಹವಾಗಿ” ಕಡಿಮೆ ಮಾಡಬೇಕು.

*ಎಸ್‌ಸಿ/ಎಸ್‌ಟಿ ಸೆಲ್ ಸುಧಾರಣೆ: ವಿಶ್ವವಿದ್ಯಾಲಯಕ್ಕೆ ಕೇವಲ ಒಂದು ಎಸ್‌ಸಿ/ಎಸ್‌ಟಿ ಸೆಲ್ ಇದ್ದು, ಅದಕ್ಕೆ ಸಿಬ್ಬಂದಿ ಕೊರತೆ ಇದೆ. ಇದನ್ನು ಬಲಪಡಿಸುವಂತೆ ಸಮಿತಿ ಹೇಳಿದೆ.

*ಶುಲ್ಕ ಮನ್ನಾ: ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಅಗತ್ಯವಿದ್ದರೆ, ಸರ್ಕಾರವು ಎಲ್ಲಾ ಬೋಧನಾ ಶುಲ್ಕ ಮತ್ತು ಇತರೆ ಶುಲ್ಕಗಳನ್ನು ಮನ್ನಾ ಮಾಡಬೇಕು.

*ಗ್ರೀವಾನ್ಸ್ ಕಮಿಟಿ ರಚನೆ: ಕಾಲೇಜು ಮತ್ತು ವಿಶ್ವವಿದ್ಯಾಲಯ ಮಟ್ಟದಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಪ್ರವೇಶ ಕುಂದುಕೊರತೆ ಸಮಿತಿಗಳನ್ನು ರಚಿಸಬೇಕು.

ಒಳಮೀಸಲಾತಿ ತಕ್ಷಣ ಜಾರಿಗೆ ಆಗ್ರಹ: ಮುಖ್ಯಮಂತ್ರಿಯವರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...