Homeಮುಖಪುಟದೆಹಲಿ ವಿಶ್ವವಿದ್ಯಾಲಯದಲ್ಲಿ SC/ ST ಮೀಸಲಾತಿ ನಿಯಮಗಳ ಉಲ್ಲಂಘನೆ; ಹಳೆಯ ರೋಸ್ಟರ್ ವ್ಯವಸ್ಥೆಗೆ ಮರಳಲು ಶಿಫಾರಸು

ದೆಹಲಿ ವಿಶ್ವವಿದ್ಯಾಲಯದಲ್ಲಿ SC/ ST ಮೀಸಲಾತಿ ನಿಯಮಗಳ ಉಲ್ಲಂಘನೆ; ಹಳೆಯ ರೋಸ್ಟರ್ ವ್ಯವಸ್ಥೆಗೆ ಮರಳಲು ಶಿಫಾರಸು

- Advertisement -
- Advertisement -

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದಲ್ಲಿ (DU) ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ನೀತಿಗಳ ಅನುಷ್ಠಾನದಲ್ಲಿ ಗಂಭೀರ ಲೋಪಗಳನ್ನು ಸಂಸದೀಯ ಸಮಿತಿಯೊಂದು ಎತ್ತಿ ತೋರಿಸಿದೆ. ರೋಸ್ಟರ್ ನಿರ್ವಹಣೆಯಲ್ಲಿ 2013ರ ಬದಲಾವಣೆಯು SC/ST ಪ್ರಾತಿನಿಧ್ಯದಲ್ಲಿ ಅಸಮತೋಲನಕ್ಕೆ ಕಾರಣವಾಗಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದ್ದು, ಈ ಸಮಸ್ಯೆಯನ್ನು ಸರಿಪಡಿಸಲು ಹಳೆಯ, ಇಲಾಖಾ ಮಟ್ಟದ ರೋಸ್ಟರ್ ವ್ಯವಸ್ಥೆಗೆ ಮರಳಬೇಕೆಂದು ಶಿಫಾರಸು ಮಾಡಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕುರಿತ ಈ ಸಮಿತಿಯು ತನ್ನ 50 ಪುಟಗಳ ವರದಿಯನ್ನು ಆಗಸ್ಟ್ 7 ರಂದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿದೆ. ಈ ವರದಿಯು, ಏಪ್ರಿಲ್ 11, 2025 ರಂದು ದೆಹಲಿ ವಿಶ್ವವಿದ್ಯಾಲಯದಲ್ಲಿ ನಡೆಸಿದ ಸ್ಥಳೀಯ ಅಧ್ಯಯನ ಮತ್ತು ಅಧಿಕಾರಿಗಳು, ಶಿಕ್ಷಕರ ಸಂಘಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಭೆಗಳ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ.

ರೋಸ್ಟರ್ ವ್ಯವಸ್ಥೆಯಲ್ಲಿನ ಲೋಪಗಳು:

2013 ರವರೆಗೆ, DU ನ ಪ್ರತಿಯೊಂದು ಶೈಕ್ಷಣಿಕ ವಿಭಾಗವು ತನ್ನದೇ ಆದ ಮೀಸಲಾತಿ ರೋಸ್ಟರ್ ಅನ್ನು ನಿರ್ವಹಿಸುತ್ತಿತ್ತು. ಆದರೆ, UGC ಮತ್ತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಸೂಚನೆಯ ಮೇರೆಗೆ, ವಿಶ್ವವಿದ್ಯಾಲಯ-ವ್ಯಾಪಿ ರೋಸ್ಟರ್ ವ್ಯವಸ್ಥೆಗೆ ಬದಲಾವಣೆ ಮಾಡಲಾಯಿತು. ಈ ಬದಲಾವಣೆಯು ಸಮಸ್ಯಾತ್ಮಕವಾಗಿದೆ ಎಂದು ಸಮಿತಿ ಹೇಳಿದೆ. ಹಳೆಯ ವ್ಯವಸ್ಥೆಯಲ್ಲಿ ಮೀಸಲು ಹುದ್ದೆಗಳು ಎಲ್ಲಾ ವಿಭಾಗಗಳಲ್ಲಿ ಹರಡಿದ್ದವು. ಆದರೆ ಹೊಸ ವ್ಯವಸ್ಥೆಯಲ್ಲಿ, ಮೀಸಲುರಹಿತ ಹುದ್ದೆಗಳನ್ನು ಮೀಸಲು ಹುದ್ದೆಗಳಾಗಿ ಪರಿವರ್ತಿಸಿದ್ದರಿಂದ ಕೆಲವು ಇಲಾಖೆಗಳಲ್ಲಿ ಮೀಸಲಾತಿ ಹುದ್ದೆಗಳ ಸಂಖ್ಯೆ ಹೆಚ್ಚಿ, ಮತ್ತೆ ಕೆಲವು ಇಲಾಖೆಗಳು ಪ್ರಾತಿನಿಧ್ಯವಿಲ್ಲದೆ ಉಳಿದಿವೆ ಎಂದು ವರದಿ ತಿಳಿಸಿದೆ.

ರೋಸ್ಟರ್ ಬದಲಾವಣೆಯ ನಂತರ ಮೀಸಲುರಹಿತ ಹುದ್ದೆಗಳು 522 ರಿಂದ 402ಕ್ಕೆ ಇಳಿದಿವೆ. ಅದೇ ಸಮಯದಲ್ಲಿ, SC ಹುದ್ದೆಗಳು 98 ರಿಂದ 119 ಕ್ಕೆ ಮತ್ತು ST ಹುದ್ದೆಗಳು 40 ರಿಂದ 59 ಕ್ಕೆ ಏರಿವೆ. ಈ ಹುದ್ದೆಗಳ ಸಂಖ್ಯೆ ಹೆಚ್ಚಾಗಿದ್ದರೂ, ಅನೇಕ ಹುದ್ದೆಗಳು ಇನ್ನೂ ಖಾಲಿಯಾಗಿಯೇ ಉಳಿದಿವೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಸೂಚನೆ:

ವರ್ಷಗಳಿಂದ ಭರ್ತಿಯಾಗದೆ ಉಳಿದಿರುವ SC/ST ಬ್ಯಾಕ್‌ಲಾಗ್ ಹುದ್ದೆಗಳ ಕುರಿತು ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. ಮೀಸಲಾತಿಯ ಉದ್ದೇಶವನ್ನು ಈ ವಿಳಂಬಗಳು ದುರ್ಬಲಗೊಳಿಸುತ್ತಿವೆ ಎಂದು ಹೇಳಿರುವ ಸಮಿತಿಯು, “ಎಲ್ಲಾ ಬ್ಯಾಕ್‌ಲಾಗ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮೂರು ತಿಂಗಳೊಳಗೆ ವಿಶೇಷ ನೇಮಕಾತಿ ಅಭಿಯಾನಗಳನ್ನು ನಡೆಸಬೇಕು” ಎಂದು ಕಟ್ಟುನಿಟ್ಟಾಗಿ ಶಿಫಾರಸು ಮಾಡಿದೆ.

ಅಲ್ಲದೆ, ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಟು ಅಡ್-ಹಾಕ್ ಬೋಧಕವರ್ಗ ಹುದ್ದೆಗಳಲ್ಲಿ SC/ST ಪ್ರಾತಿನಿಧ್ಯ ಇಲ್ಲದಿರುವ ಬಗ್ಗೆ ಸಮಿತಿ ಗಮನ ಸೆಳೆದಿದೆ. ಇಂತಹ ಹುದ್ದೆಗಳನ್ನು ನಿಯಮಿತಗೊಳಿಸುವಾಗ SC/ST ಅಭ್ಯರ್ಥಿಗಳಿಗೆ ವಯಸ್ಸು ಮತ್ತು ಅರ್ಹತೆಯಲ್ಲಿ ಸಡಿಲಿಕೆಗಳನ್ನು ನೀಡುವಂತೆ ಸಮಿತಿ ಶಿಫಾರಸು ಮಾಡಿದೆ.

ವಿದ್ಯಾರ್ಥಿ ಪ್ರವೇಶಾತಿ ಮತ್ತು ಬೋಧಕ ಸಿಬ್ಬಂದಿಯ ಸ್ಥಿತಿಗತಿ:

ವಿದ್ಯಾರ್ಥಿಗಳ ಪ್ರವೇಶಾತಿಯಲ್ಲಿ ವಿಶ್ವವಿದ್ಯಾಲಯವು ಸರ್ಕಾರಿ ನಿಯಮಗಳನ್ನು ಸಾಮಾನ್ಯವಾಗಿ ಪಾಲಿಸುತ್ತಿದೆ. 2024-25 ರ ಅಂಕಿಅಂಶಗಳ ಪ್ರಕಾರ, ಪದವಿಪೂರ್ವ ಪ್ರವೇಶಾತಿಯಲ್ಲಿ SC ವಿದ್ಯಾರ್ಥಿಗಳು 15.44% ಮತ್ತು ST ವಿದ್ಯಾರ್ಥಿಗಳು 4.14% ಇದ್ದಾರೆ. ಸ್ನಾತಕೋತ್ತರ ಮತ್ತು ಪಿಎಚ್‌ಡಿ ಹಂತಗಳಲ್ಲಿಯೂ ಮೀಸಲಾತಿ ನಿಯಮಗಳನ್ನು ಪಾಲಿಸಲಾಗಿದೆ. ಆದರೆ ಕೆಲವು ಕಾರ್ಯಕ್ರಮಗಳಲ್ಲಿ ಇನ್ನೂ ಅಂತರಗಳಿವೆ ಎಂದು ವರದಿ ಹೇಳಿದೆ.

ಮಾರ್ಚ್ 31, 2025 ರಂತೆ, DU ನಲ್ಲಿ 995 ಬೋಧಕ ಸಿಬ್ಬಂದಿಯಿದ್ದು, ಅವರಲ್ಲಿ 129 (12.96%) SC ಮತ್ತು 56 (5.62%) ST ಆಗಿದ್ದಾರೆ. ಪ್ರಾಧ್ಯಾಪಕರ ಹಂತದಲ್ಲಿ SC ಪ್ರಾತಿನಿಧ್ಯ 9.09% ಮತ್ತು ST ಪ್ರಾತಿನಿಧ್ಯ ಕೇವಲ 1.51% ರಷ್ಟಿದೆ. ಇದಕ್ಕೆ ಕಾರಣ “ST ಅಭ್ಯರ್ಥಿಗಳಿಂದ ಸೀಮಿತ ಅರ್ಜಿಗಳು” ಎಂದು ಬೋಧಕವರ್ಗದ ಸ್ಥಿತಿಯ ಕುರಿತು ಸಮಿತಿ ಉಲ್ಲೇಖಿಸಿದೆ.

ಕುಂದುಕೊರತೆ ನಿವಾರಣೆಗೆ SC/ST ಸೆಲ್ ಕಡ್ಡಾಯ:

DU ನಲ್ಲಿ SC/ST ಸೆಲ್ ಕಾರ್ಯನಿರ್ವಹಿಸುತ್ತಿದ್ದರೂ, ಅದರ ಅಂಗಸಂಸ್ಥೆ ಮತ್ತು ಘಟಕ ಕಾಲೇಜುಗಳಲ್ಲಿ ಇಂತಹ ಯಾವುದೇ ಘಟಕವಿಲ್ಲದಿರುವುದು ಸಮಿತಿಯ ಕಳವಳಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಕುಂದುಕೊರತೆಗಳನ್ನು ನಿವಾರಿಸಲು ಮತ್ತು ಮೀಸಲಾತಿ ಜಾರಿಗೊಳಿಸಲು “ಎಲ್ಲಾ ಅಂಗಸಂಸ್ಥೆ ಕಾಲೇಜುಗಳಲ್ಲಿ SC/ST ಸೆಲ್‌ಗಳನ್ನು ಕಡ್ಡಾಯಗೊಳಿಸಬೇಕು” ಎಂದು ಸಮಿತಿ ಶಿಫಾರಸು ಮಾಡಿದೆ.

ಸಮಿತಿಯ ಶಿಫಾರಸುಗಳು ಈಗ ಕೇಂದ್ರ ಶಿಕ್ಷಣ ಸಚಿವಾಲಯದ ಪರಿಶೀಲನೆಗೆ ಹೋಗಿದ್ದು, ಸಚಿವಾಲಯವು ಇದರ ಬಗ್ಗೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವ ನಿರೀಕ್ಷೆಯಿದೆ. ಈ ಶಿಫಾರಸುಗಳು ಜಾರಿಯಾದರೆ, ದೆಹಲಿ ವಿಶ್ವವಿದ್ಯಾಲಯದ ನೇಮಕಾತಿ ಮತ್ತು ಪ್ರವೇಶಾತಿ ನೀತಿಗಳಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಇದು ಇದೇ ರೀತಿಯ ನೀತಿಗಳನ್ನು ಅನುಸರಿಸುತ್ತಿರುವ ಇತರ ಕೇಂದ್ರ ಸಂಸ್ಥೆಗಳ ಮೇಲೂ ಪರಿಣಾಮ ಬೀರಬಹುದು.

ಸಮಿತಿಯ ಪ್ರಮುಖ ಶಿಫಾರಸುಗಳು

ಈ ಸಮಸ್ಯೆಗಳನ್ನು ಪರಿಹರಿಸಲು ಸಮಿತಿಯು ಕೆಲವು ಶಿಫಾರಸುಗಳನ್ನು ಮಾಡಿದೆ:

*ಕಟ್-ಆಫ್ ಮಾರ್ಕ್‌ಗಳನ್ನು ಕಡಿಮೆ ಮಾಡುವುದು: ಮೀಸಲಾತಿ ಹುದ್ದೆಗಳು ಖಾಲಿ ಉಳಿಯದಂತೆ ಪ್ರವೇಶ ಕಟ್-ಆಫ್ ಮಾರ್ಕ್‌ಗಳನ್ನು “ಗಮನಾರ್ಹವಾಗಿ” ಕಡಿಮೆ ಮಾಡಬೇಕು.

*ಎಸ್‌ಸಿ/ಎಸ್‌ಟಿ ಸೆಲ್ ಸುಧಾರಣೆ: ವಿಶ್ವವಿದ್ಯಾಲಯಕ್ಕೆ ಕೇವಲ ಒಂದು ಎಸ್‌ಸಿ/ಎಸ್‌ಟಿ ಸೆಲ್ ಇದ್ದು, ಅದಕ್ಕೆ ಸಿಬ್ಬಂದಿ ಕೊರತೆ ಇದೆ. ಇದನ್ನು ಬಲಪಡಿಸುವಂತೆ ಸಮಿತಿ ಹೇಳಿದೆ.

*ಶುಲ್ಕ ಮನ್ನಾ: ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಅಗತ್ಯವಿದ್ದರೆ, ಸರ್ಕಾರವು ಎಲ್ಲಾ ಬೋಧನಾ ಶುಲ್ಕ ಮತ್ತು ಇತರೆ ಶುಲ್ಕಗಳನ್ನು ಮನ್ನಾ ಮಾಡಬೇಕು.

*ಗ್ರೀವಾನ್ಸ್ ಕಮಿಟಿ ರಚನೆ: ಕಾಲೇಜು ಮತ್ತು ವಿಶ್ವವಿದ್ಯಾಲಯ ಮಟ್ಟದಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಪ್ರವೇಶ ಕುಂದುಕೊರತೆ ಸಮಿತಿಗಳನ್ನು ರಚಿಸಬೇಕು.

ಒಳಮೀಸಲಾತಿ ತಕ್ಷಣ ಜಾರಿಗೆ ಆಗ್ರಹ: ಮುಖ್ಯಮಂತ್ರಿಯವರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...