Homeಕರ್ನಾಟಕರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ - ಭ್ರಷ್ಟಾಚಾರದ ವಾಸನೆ!

ರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ – ಭ್ರಷ್ಟಾಚಾರದ ವಾಸನೆ!

ಅನುದಾನವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿದರೆ, ಗುತ್ತಿಗೆದಾರರಿಂದ ದೊಡ್ಡ ಮೊತ್ತದ ಕಮಿಷನ್ ಸಿಗುತ್ತದೆ ಎಂಬ ಕಾರಣದಿಂದ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -
- Advertisement -

15ನೇ ಹಣಕಾಸು ಯೋಜನೆ ಅನುದಾನ ಬಳಕೆಗೆಂದು ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಉಲ್ಲಂಘಿಸಿ ರಾಯಚೂರು ನಗರಸಭೆಯು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಇದರ ಹಿಂದೆ ಭ್ರಷ್ಟಾಚಾರ ನಡೆದಿದೆಯೆಂಬ ವ್ಯಾಪಕ ಆರೋಪ ಕೇಳಿಬಂದಿದೆ.

ರಾಯಚೂರು ನಗರಸಭೆ 2020-21ನೇ ಸಾಲಿನ 15ನೇ ಹಣಕಾಸು ಯೋಜನೆ ಅನುದಾನ ಬಳಕೆಯ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕ್ರಿಯಾ ಯೋಜನೆಯನ್ನು ತಯಾರಿಸಿದ್ದು, ನಗರದಲ್ಲಿನ ಘನತ್ಯಾಜ್ಯ ನಿರ್ವಹಣೆಗೆ ಕಡ್ಡಾಯವಾಗಿ ಮೀಸಲಿಡಬೇಕಾದ ಹಣವನ್ನು ರಸ್ತೆ ನಿರ್ಮಾಣ ಮತ್ತು ರಸ್ತೆ ಅಭಿವೃದ್ಧಿಗೆ ಬಳುಸುತ್ತಿದೆ ಎಂದು ಹೋರಾಟಗಾರರಾದ ರಝಾಕ್ ಉಸ್ತಾದ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

 

“ರಾಯಚೂರು ನಗರಸಭೆ 15ನೇ ಹಣಕಾಸು ಯೋಜನೆಯ ಅನುದಾನ ಬಳಕೆಯ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕ್ರಿಯಾ ಯೋಜನೆಯನ್ನು ರೂಪಿಸಿದ್ದು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ನಗರಸಭೆಯ ಆಡಳಿತಾಧಿಕಾರಿಗಳು ಈಗಾಗಲೇ ಅನುಮೋದನೆಯನ್ನು ನೀಡಿದ್ದಾರೆ. ಈ ಮಾರ್ಗಸೂಚಿಯನ್ವಯ, ನಿರ್ಬಂಧಿತ ಅನುದಾನದ ಶೇ 25ರಷ್ಟನ್ನು ಕಡ್ಡಾಯವಾಗಿ ಘನತಾಜ್ಯ ನಿರ್ವಹಣೆಗೆ ಬಳಸಬೇಕಾದ 395.50 ಲಕ್ಷ ಅನುದಾನವನ್ನು ರಸ್ತೆಗಳ ನಿರ್ಮಾಣಕ್ಕೆ ಬಳಸಲು ಕ್ರಿಯಾ ಯೋಜನೆ ತಯಾರು ಮಾಡಲಾಗಿದೆ. ಇದರಿಂದ ರಾಯಚೂರು ನಗರದ ಘನತ್ಯಾಜ್ಯ ನಿರ್ವಹಣೆಗೆ ಹಿನ್ನಡೆಯಾಗಿ, ಅಸ್ವಚ್ಛ ವಾತಾವರಣದಲ್ಲಿ ನಗರದ ಜನತೆ ಬದುಕುವಂತಹ ಪರಿಸ್ಥಿತಿ ಬರಬಹುದು. ಈಗಾಗಲೇ ನಗರ ಪ್ರದೇಶದ ರಸ್ತೆಗಳು, ತಗ್ಗು ಗುಂಡಿಗಳು, ಮಳೆನೀರು ಚರಂಡಿಗಳು ಘನತಾಜ್ಯಗಳಿಂದ ತುಂಬಿ ಗಬ್ಬೆದ್ದು ನಾರುತ್ತಿದ್ದರೂ ಅದನ್ನು ಸೂಕ್ತ ಸ್ಥಳಗಳಿಗೆ ವಿಲೇವಾರಿ ಮಾಡದೇ ಇರುವುದರಿಂದ ಜನತೆ ನೋವನ್ನು ಅನುಭವಿಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಮಾರ್ಗಸೂಚಿ ಉಲ್ಲಂಘಿಸುವುದಾದರೆ ಅವುಗಳನ್ನು ಹೊರಡಿಸುವ ಅಗತ್ಯವಾದರೂ ಏನಿದೆ. ಇದರ ಬಗ್ಗೆ ನಾವು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದೆವು. ಪೌರಾಡಳಿತದ ನಿರ್ದೇಶಕರಿಗೂ ದೂರು ನೀಡಿದ್ದೆವು. ಆದರೆ ಇವರಿಬ್ಬರೂ ಸಹ ಇದನ್ನು ದೊಡ್ಡ ಸಮಸ್ಯೆ ಎಂದು ಪರಿಗಣಿಸಿದೆ ನಿರ್ಲಕ್ಷಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಎಲ್ಲಿ ನೋಡಿದರೂ ಕಸದ ರಾಶಿ ಕಾಣಿಸುತ್ತಿದೆ. ಇದನ್ನು ವಿಲೇವಾರಿ ಮಾಡಲು ಸರಿಯಾದ ವ್ಯಸ್ಥೆಯಿಲ್ಲ. ಇಂತಹ ಸಂದರ್ಭದಲ್ಲಿ ಇದು ನಗರದ ಸ್ವಚ್ಚತೆ, ಪರಿಸರ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಜಾಕ್‌ ಉಸ್ತಾದ್

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

“ನಗರದ ಶಾಸಕರು ಆಡಳಿತ ಪಕ್ಷದವರಾಗಿದ್ದು, ಅವರಿಗೆ ತಕ್ಕಂತೆ ಆಡಳಿತಾಂಗ ಕೆಲಸ ಮಾಡುತ್ತಿದೆ. ಮೀಸಲಿಟ್ಟಿರುವ ಹಣವನ್ನು ಘನತ್ಯಾಜ್ಯ ನಿರ್ವಹಣೆಗೆ ಬಳಸಿದರೆ ಅದರಲ್ಲಿ ರಾಜಕಾರಣಿಗಳಿಗೆ ಮತ್ತು ಅಧೀನ ಅಧಿಕಾರಿಗಳಿಗೆ ಹೆಚ್ಚಿನ ಲಾಭವೇನೂ ಸಿಗುವುದಿಲ್ಲ. ಹಾಗಾಗಿ ಈ ಹಣವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿದರೆ, ಅದನ್ನು ಗುತ್ತಿಗೆ ಪಡೆಯುವವರಿಗೆ 50/50 ಕಮಿಷನ್ ಎಂದು ಒಪ್ಪಂದವಾಗುತ್ತದೆ. ಇದರಿಂದ ಕಮಿಷನ್ ಹಣ ಪಡೆಯಬಹುದು. ಹಾಗಾಗಿಯೇ ಇಂತಹ ರಾಜ್ಯದ್ರೋಹಿ ಕೆಲಸಗಳನ್ನು ಮಾಡುತ್ತಿದ್ದಾರೆ. ಕೇವಲ ರಾಯಚೂರಿನಲ್ಲಿಯೇ ಇಂತಹ ಪರಿಸ್ಥಿತಿಯಾದರೆ, ಇನ್ನು ರಾಜ್ಯದ ವಿವಿಧ ಜಿಲ್ಲೆಗಳ ಪರಿಸ್ಥಿತಿ ಏನಿದೆಯೋ? ಒಟ್ಟಿನಲ್ಲಿ ಈ ಸಮಸ್ಯೆಯನ್ನು ಈಗಲೇ ನಿವಾರಿಸದಿದ್ದರೆ ಭವಿಷ್ಯದಲ್ಲಿ ಇದರ ಕೆಟ್ಟ ಪರಿಣಾಮವನ್ನು ನಾವೆಲ್ಲರೂ ಎದುರಿಸಬೇಕಾಗುತ್ತದೆ” ಎಂದು ರಜಾಕ್ ಉಸ್ತಾದ್ ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ಲೀಗಲ್ ನೋಟಿಸ್

 

ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅದಕ್ಷ ಅಧಿಕಾರಿಗಳು ಶಾಮೀಲಾಗಿರುವ ಇಂತಹ ಕೃತ್ಯಗಳು ಇನ್ನೂ ಬೆಳಕಿಗೆ ಬಾರದಿರುವುದು ದುರದೃಷ್ಟಕರ. ರಾಜ್ಯ ಸರ್ಕಾರ ಈ ಕೂಡಲೇ ಇತ್ತ ಗಮನಹರಿಸಿ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಈ ಸಮಸ್ಯೆ ಮತ್ತು ಕಸದ ರಾಶಿ ಹೆಮ್ಮರವಾಗಿ ಬೆಳೆಯಬಹುದು.

ಒಂದು ನಗರ ಸ್ವಚ್ಚವಾಗಿದೆ ಎಂದರೆ, ಅಲ್ಲಿ ಚರಂಡಿ ವ್ಯವಸ್ಥೆ ಮತ್ತು ಘನತ್ಯಾಜ್ಯ ನಿರ್ವಹಣೆ ಉತ್ತಮವಾಗಿರಬೇಕು. ಹಾಗಾಗಿಯೇ ಸರ್ಕಾರ ಬಿಡುಗಡೆ ಮಾಡುವ ಹಣದಲ್ಲಿ ಶೇ 25ರಷ್ಟನ್ನು ಇದರ ನಿರ್ವಹಣೆಗೆ ಬಳಸಬೇಕು ಎಂದು ನಿಯಮಾವಳಿಗಳು ಹೇಳುತ್ತವೆ. ಆದರೆ, ಇಂತಹ ನಿರ್ಲಕ್ಷಿತ ಮನೋಭಾವನೆಯ ಅಧಿಕಾರಿಗಳು ಮತ್ತು ಭ್ರಷ್ಟ ಜನಪ್ರತಿನಿಧಿಗಳಿಂದ ಇದು ಪಾಲನೆಯಾಗುತ್ತಿಲ್ಲ.

ಇದನ್ನೂ ಓದಿ: ಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೊಗೆಯುತ್ತೇನೆ ಎನ್ನುವವರು ಇದನ್ನು ಕಂಡರೂ ಕಾಣದಂತೆ ಕುಳಿತಿರುವುದು, ಇಂತಹ ಹೀನ ಕೆಲಸಗಳಿಗೆ ಅವರು ಸಮ್ಮತಿಯನ್ನು ಸೂಚಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಇದು ಕೇವಲ ಒಂದು ಉದಾಹರಣೆಯಷ್ಟೆ. ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ದಿಕ್ಕುತಪ್ಪಿಸಿ, ಉದ್ದೇಶಿತ ಯೋಜನೆಗೆ ಬಳಸದೇ ಹೆಚ್ಚಿನ ಲಾಭ ಬರುವ ಅಥವಾ ಹೆಚ್ಚಿನ ಪಾಲು ಬರುವ ಯೋಜನೆಗಳಿಗೆ ತೊಡಗಿಸಿಕೊಂಡು ರಾಜ್ಯ ಮತ್ತು ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸಲಾಗುತ್ತಿದೆ. ವಿಪರ್ಯಾಸವೆಂದರೆ, ಇದರಲ್ಲಿ ತಳಮಟ್ಟದ ಅಧಿಕಾರಿಗಳಿಂದ ಹಿಡಿದು, ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳವರೆಗೆ ಪಾಲು ಹಂಚಿಕೆಯಾಗುತ್ತದೆ. ಇದು ಎಲ್ಲರಿಗೂ ಗೊತ್ತಿರುವ ನಗ್ನ ಸತ್ಯ. ಈ ಹಿನ್ನೆಲೆ ಸದರಿ ಪ್ರಕರಣದ ಕುರಿತು ಸಮರ್ಪಕ ತನಿಖೆಯಾಗಬೇಕು. ಭ್ರಷ್ಟರಿಗೆ ಶಿಕ್ಷೆಯಾಗಬೇಕೆಂಬುದು ಪ್ರಜ್ಞಾವಂತರ ಆಗ್ರಹವಾಗಿದೆ.


ಇದನ್ನೂ ಓದಿ: ಕೊರೋನಾ ಕಾಲದ ಭ್ರಷ್ಟಾಚಾರದ ತನಿಖೆಗೆ ಸ್ಪೀಕರ್ ಅಡ್ಡಿ: ದಾಖಲೆಗಳೇನು ಹೇಳುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...