Homeಕರ್ನಾಟಕರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ - ಭ್ರಷ್ಟಾಚಾರದ ವಾಸನೆ!

ರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ – ಭ್ರಷ್ಟಾಚಾರದ ವಾಸನೆ!

ಅನುದಾನವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿದರೆ, ಗುತ್ತಿಗೆದಾರರಿಂದ ದೊಡ್ಡ ಮೊತ್ತದ ಕಮಿಷನ್ ಸಿಗುತ್ತದೆ ಎಂಬ ಕಾರಣದಿಂದ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -
- Advertisement -

15ನೇ ಹಣಕಾಸು ಯೋಜನೆ ಅನುದಾನ ಬಳಕೆಗೆಂದು ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಉಲ್ಲಂಘಿಸಿ ರಾಯಚೂರು ನಗರಸಭೆಯು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಇದರ ಹಿಂದೆ ಭ್ರಷ್ಟಾಚಾರ ನಡೆದಿದೆಯೆಂಬ ವ್ಯಾಪಕ ಆರೋಪ ಕೇಳಿಬಂದಿದೆ.

ರಾಯಚೂರು ನಗರಸಭೆ 2020-21ನೇ ಸಾಲಿನ 15ನೇ ಹಣಕಾಸು ಯೋಜನೆ ಅನುದಾನ ಬಳಕೆಯ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕ್ರಿಯಾ ಯೋಜನೆಯನ್ನು ತಯಾರಿಸಿದ್ದು, ನಗರದಲ್ಲಿನ ಘನತ್ಯಾಜ್ಯ ನಿರ್ವಹಣೆಗೆ ಕಡ್ಡಾಯವಾಗಿ ಮೀಸಲಿಡಬೇಕಾದ ಹಣವನ್ನು ರಸ್ತೆ ನಿರ್ಮಾಣ ಮತ್ತು ರಸ್ತೆ ಅಭಿವೃದ್ಧಿಗೆ ಬಳುಸುತ್ತಿದೆ ಎಂದು ಹೋರಾಟಗಾರರಾದ ರಝಾಕ್ ಉಸ್ತಾದ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

 

“ರಾಯಚೂರು ನಗರಸಭೆ 15ನೇ ಹಣಕಾಸು ಯೋಜನೆಯ ಅನುದಾನ ಬಳಕೆಯ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕ್ರಿಯಾ ಯೋಜನೆಯನ್ನು ರೂಪಿಸಿದ್ದು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ನಗರಸಭೆಯ ಆಡಳಿತಾಧಿಕಾರಿಗಳು ಈಗಾಗಲೇ ಅನುಮೋದನೆಯನ್ನು ನೀಡಿದ್ದಾರೆ. ಈ ಮಾರ್ಗಸೂಚಿಯನ್ವಯ, ನಿರ್ಬಂಧಿತ ಅನುದಾನದ ಶೇ 25ರಷ್ಟನ್ನು ಕಡ್ಡಾಯವಾಗಿ ಘನತಾಜ್ಯ ನಿರ್ವಹಣೆಗೆ ಬಳಸಬೇಕಾದ 395.50 ಲಕ್ಷ ಅನುದಾನವನ್ನು ರಸ್ತೆಗಳ ನಿರ್ಮಾಣಕ್ಕೆ ಬಳಸಲು ಕ್ರಿಯಾ ಯೋಜನೆ ತಯಾರು ಮಾಡಲಾಗಿದೆ. ಇದರಿಂದ ರಾಯಚೂರು ನಗರದ ಘನತ್ಯಾಜ್ಯ ನಿರ್ವಹಣೆಗೆ ಹಿನ್ನಡೆಯಾಗಿ, ಅಸ್ವಚ್ಛ ವಾತಾವರಣದಲ್ಲಿ ನಗರದ ಜನತೆ ಬದುಕುವಂತಹ ಪರಿಸ್ಥಿತಿ ಬರಬಹುದು. ಈಗಾಗಲೇ ನಗರ ಪ್ರದೇಶದ ರಸ್ತೆಗಳು, ತಗ್ಗು ಗುಂಡಿಗಳು, ಮಳೆನೀರು ಚರಂಡಿಗಳು ಘನತಾಜ್ಯಗಳಿಂದ ತುಂಬಿ ಗಬ್ಬೆದ್ದು ನಾರುತ್ತಿದ್ದರೂ ಅದನ್ನು ಸೂಕ್ತ ಸ್ಥಳಗಳಿಗೆ ವಿಲೇವಾರಿ ಮಾಡದೇ ಇರುವುದರಿಂದ ಜನತೆ ನೋವನ್ನು ಅನುಭವಿಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಮಾರ್ಗಸೂಚಿ ಉಲ್ಲಂಘಿಸುವುದಾದರೆ ಅವುಗಳನ್ನು ಹೊರಡಿಸುವ ಅಗತ್ಯವಾದರೂ ಏನಿದೆ. ಇದರ ಬಗ್ಗೆ ನಾವು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದೆವು. ಪೌರಾಡಳಿತದ ನಿರ್ದೇಶಕರಿಗೂ ದೂರು ನೀಡಿದ್ದೆವು. ಆದರೆ ಇವರಿಬ್ಬರೂ ಸಹ ಇದನ್ನು ದೊಡ್ಡ ಸಮಸ್ಯೆ ಎಂದು ಪರಿಗಣಿಸಿದೆ ನಿರ್ಲಕ್ಷಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಎಲ್ಲಿ ನೋಡಿದರೂ ಕಸದ ರಾಶಿ ಕಾಣಿಸುತ್ತಿದೆ. ಇದನ್ನು ವಿಲೇವಾರಿ ಮಾಡಲು ಸರಿಯಾದ ವ್ಯಸ್ಥೆಯಿಲ್ಲ. ಇಂತಹ ಸಂದರ್ಭದಲ್ಲಿ ಇದು ನಗರದ ಸ್ವಚ್ಚತೆ, ಪರಿಸರ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಜಾಕ್‌ ಉಸ್ತಾದ್

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

“ನಗರದ ಶಾಸಕರು ಆಡಳಿತ ಪಕ್ಷದವರಾಗಿದ್ದು, ಅವರಿಗೆ ತಕ್ಕಂತೆ ಆಡಳಿತಾಂಗ ಕೆಲಸ ಮಾಡುತ್ತಿದೆ. ಮೀಸಲಿಟ್ಟಿರುವ ಹಣವನ್ನು ಘನತ್ಯಾಜ್ಯ ನಿರ್ವಹಣೆಗೆ ಬಳಸಿದರೆ ಅದರಲ್ಲಿ ರಾಜಕಾರಣಿಗಳಿಗೆ ಮತ್ತು ಅಧೀನ ಅಧಿಕಾರಿಗಳಿಗೆ ಹೆಚ್ಚಿನ ಲಾಭವೇನೂ ಸಿಗುವುದಿಲ್ಲ. ಹಾಗಾಗಿ ಈ ಹಣವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿದರೆ, ಅದನ್ನು ಗುತ್ತಿಗೆ ಪಡೆಯುವವರಿಗೆ 50/50 ಕಮಿಷನ್ ಎಂದು ಒಪ್ಪಂದವಾಗುತ್ತದೆ. ಇದರಿಂದ ಕಮಿಷನ್ ಹಣ ಪಡೆಯಬಹುದು. ಹಾಗಾಗಿಯೇ ಇಂತಹ ರಾಜ್ಯದ್ರೋಹಿ ಕೆಲಸಗಳನ್ನು ಮಾಡುತ್ತಿದ್ದಾರೆ. ಕೇವಲ ರಾಯಚೂರಿನಲ್ಲಿಯೇ ಇಂತಹ ಪರಿಸ್ಥಿತಿಯಾದರೆ, ಇನ್ನು ರಾಜ್ಯದ ವಿವಿಧ ಜಿಲ್ಲೆಗಳ ಪರಿಸ್ಥಿತಿ ಏನಿದೆಯೋ? ಒಟ್ಟಿನಲ್ಲಿ ಈ ಸಮಸ್ಯೆಯನ್ನು ಈಗಲೇ ನಿವಾರಿಸದಿದ್ದರೆ ಭವಿಷ್ಯದಲ್ಲಿ ಇದರ ಕೆಟ್ಟ ಪರಿಣಾಮವನ್ನು ನಾವೆಲ್ಲರೂ ಎದುರಿಸಬೇಕಾಗುತ್ತದೆ” ಎಂದು ರಜಾಕ್ ಉಸ್ತಾದ್ ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ಲೀಗಲ್ ನೋಟಿಸ್

 

ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅದಕ್ಷ ಅಧಿಕಾರಿಗಳು ಶಾಮೀಲಾಗಿರುವ ಇಂತಹ ಕೃತ್ಯಗಳು ಇನ್ನೂ ಬೆಳಕಿಗೆ ಬಾರದಿರುವುದು ದುರದೃಷ್ಟಕರ. ರಾಜ್ಯ ಸರ್ಕಾರ ಈ ಕೂಡಲೇ ಇತ್ತ ಗಮನಹರಿಸಿ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಈ ಸಮಸ್ಯೆ ಮತ್ತು ಕಸದ ರಾಶಿ ಹೆಮ್ಮರವಾಗಿ ಬೆಳೆಯಬಹುದು.

ಒಂದು ನಗರ ಸ್ವಚ್ಚವಾಗಿದೆ ಎಂದರೆ, ಅಲ್ಲಿ ಚರಂಡಿ ವ್ಯವಸ್ಥೆ ಮತ್ತು ಘನತ್ಯಾಜ್ಯ ನಿರ್ವಹಣೆ ಉತ್ತಮವಾಗಿರಬೇಕು. ಹಾಗಾಗಿಯೇ ಸರ್ಕಾರ ಬಿಡುಗಡೆ ಮಾಡುವ ಹಣದಲ್ಲಿ ಶೇ 25ರಷ್ಟನ್ನು ಇದರ ನಿರ್ವಹಣೆಗೆ ಬಳಸಬೇಕು ಎಂದು ನಿಯಮಾವಳಿಗಳು ಹೇಳುತ್ತವೆ. ಆದರೆ, ಇಂತಹ ನಿರ್ಲಕ್ಷಿತ ಮನೋಭಾವನೆಯ ಅಧಿಕಾರಿಗಳು ಮತ್ತು ಭ್ರಷ್ಟ ಜನಪ್ರತಿನಿಧಿಗಳಿಂದ ಇದು ಪಾಲನೆಯಾಗುತ್ತಿಲ್ಲ.

ಇದನ್ನೂ ಓದಿ: ಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೊಗೆಯುತ್ತೇನೆ ಎನ್ನುವವರು ಇದನ್ನು ಕಂಡರೂ ಕಾಣದಂತೆ ಕುಳಿತಿರುವುದು, ಇಂತಹ ಹೀನ ಕೆಲಸಗಳಿಗೆ ಅವರು ಸಮ್ಮತಿಯನ್ನು ಸೂಚಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಇದು ಕೇವಲ ಒಂದು ಉದಾಹರಣೆಯಷ್ಟೆ. ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ದಿಕ್ಕುತಪ್ಪಿಸಿ, ಉದ್ದೇಶಿತ ಯೋಜನೆಗೆ ಬಳಸದೇ ಹೆಚ್ಚಿನ ಲಾಭ ಬರುವ ಅಥವಾ ಹೆಚ್ಚಿನ ಪಾಲು ಬರುವ ಯೋಜನೆಗಳಿಗೆ ತೊಡಗಿಸಿಕೊಂಡು ರಾಜ್ಯ ಮತ್ತು ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸಲಾಗುತ್ತಿದೆ. ವಿಪರ್ಯಾಸವೆಂದರೆ, ಇದರಲ್ಲಿ ತಳಮಟ್ಟದ ಅಧಿಕಾರಿಗಳಿಂದ ಹಿಡಿದು, ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳವರೆಗೆ ಪಾಲು ಹಂಚಿಕೆಯಾಗುತ್ತದೆ. ಇದು ಎಲ್ಲರಿಗೂ ಗೊತ್ತಿರುವ ನಗ್ನ ಸತ್ಯ. ಈ ಹಿನ್ನೆಲೆ ಸದರಿ ಪ್ರಕರಣದ ಕುರಿತು ಸಮರ್ಪಕ ತನಿಖೆಯಾಗಬೇಕು. ಭ್ರಷ್ಟರಿಗೆ ಶಿಕ್ಷೆಯಾಗಬೇಕೆಂಬುದು ಪ್ರಜ್ಞಾವಂತರ ಆಗ್ರಹವಾಗಿದೆ.


ಇದನ್ನೂ ಓದಿ: ಕೊರೋನಾ ಕಾಲದ ಭ್ರಷ್ಟಾಚಾರದ ತನಿಖೆಗೆ ಸ್ಪೀಕರ್ ಅಡ್ಡಿ: ದಾಖಲೆಗಳೇನು ಹೇಳುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...