Homeಕರ್ನಾಟಕರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ - ಭ್ರಷ್ಟಾಚಾರದ ವಾಸನೆ!

ರಾಯಚೂರು ನಗರಸಭೆ: ಸರ್ಕಾರದ ಅನುದಾನ ಬಳಕೆ ಮಾರ್ಗಸೂಚಿ ಉಲ್ಲಂಘನೆ – ಭ್ರಷ್ಟಾಚಾರದ ವಾಸನೆ!

ಅನುದಾನವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿದರೆ, ಗುತ್ತಿಗೆದಾರರಿಂದ ದೊಡ್ಡ ಮೊತ್ತದ ಕಮಿಷನ್ ಸಿಗುತ್ತದೆ ಎಂಬ ಕಾರಣದಿಂದ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -
- Advertisement -

15ನೇ ಹಣಕಾಸು ಯೋಜನೆ ಅನುದಾನ ಬಳಕೆಗೆಂದು ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಉಲ್ಲಂಘಿಸಿ ರಾಯಚೂರು ನಗರಸಭೆಯು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಇದರ ಹಿಂದೆ ಭ್ರಷ್ಟಾಚಾರ ನಡೆದಿದೆಯೆಂಬ ವ್ಯಾಪಕ ಆರೋಪ ಕೇಳಿಬಂದಿದೆ.

ರಾಯಚೂರು ನಗರಸಭೆ 2020-21ನೇ ಸಾಲಿನ 15ನೇ ಹಣಕಾಸು ಯೋಜನೆ ಅನುದಾನ ಬಳಕೆಯ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕ್ರಿಯಾ ಯೋಜನೆಯನ್ನು ತಯಾರಿಸಿದ್ದು, ನಗರದಲ್ಲಿನ ಘನತ್ಯಾಜ್ಯ ನಿರ್ವಹಣೆಗೆ ಕಡ್ಡಾಯವಾಗಿ ಮೀಸಲಿಡಬೇಕಾದ ಹಣವನ್ನು ರಸ್ತೆ ನಿರ್ಮಾಣ ಮತ್ತು ರಸ್ತೆ ಅಭಿವೃದ್ಧಿಗೆ ಬಳುಸುತ್ತಿದೆ ಎಂದು ಹೋರಾಟಗಾರರಾದ ರಝಾಕ್ ಉಸ್ತಾದ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

 

“ರಾಯಚೂರು ನಗರಸಭೆ 15ನೇ ಹಣಕಾಸು ಯೋಜನೆಯ ಅನುದಾನ ಬಳಕೆಯ ಮಾರ್ಗಸೂಚಿಯನ್ನು ಉಲ್ಲಂಘಿಸಿ ಕ್ರಿಯಾ ಯೋಜನೆಯನ್ನು ರೂಪಿಸಿದ್ದು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ನಗರಸಭೆಯ ಆಡಳಿತಾಧಿಕಾರಿಗಳು ಈಗಾಗಲೇ ಅನುಮೋದನೆಯನ್ನು ನೀಡಿದ್ದಾರೆ. ಈ ಮಾರ್ಗಸೂಚಿಯನ್ವಯ, ನಿರ್ಬಂಧಿತ ಅನುದಾನದ ಶೇ 25ರಷ್ಟನ್ನು ಕಡ್ಡಾಯವಾಗಿ ಘನತಾಜ್ಯ ನಿರ್ವಹಣೆಗೆ ಬಳಸಬೇಕಾದ 395.50 ಲಕ್ಷ ಅನುದಾನವನ್ನು ರಸ್ತೆಗಳ ನಿರ್ಮಾಣಕ್ಕೆ ಬಳಸಲು ಕ್ರಿಯಾ ಯೋಜನೆ ತಯಾರು ಮಾಡಲಾಗಿದೆ. ಇದರಿಂದ ರಾಯಚೂರು ನಗರದ ಘನತ್ಯಾಜ್ಯ ನಿರ್ವಹಣೆಗೆ ಹಿನ್ನಡೆಯಾಗಿ, ಅಸ್ವಚ್ಛ ವಾತಾವರಣದಲ್ಲಿ ನಗರದ ಜನತೆ ಬದುಕುವಂತಹ ಪರಿಸ್ಥಿತಿ ಬರಬಹುದು. ಈಗಾಗಲೇ ನಗರ ಪ್ರದೇಶದ ರಸ್ತೆಗಳು, ತಗ್ಗು ಗುಂಡಿಗಳು, ಮಳೆನೀರು ಚರಂಡಿಗಳು ಘನತಾಜ್ಯಗಳಿಂದ ತುಂಬಿ ಗಬ್ಬೆದ್ದು ನಾರುತ್ತಿದ್ದರೂ ಅದನ್ನು ಸೂಕ್ತ ಸ್ಥಳಗಳಿಗೆ ವಿಲೇವಾರಿ ಮಾಡದೇ ಇರುವುದರಿಂದ ಜನತೆ ನೋವನ್ನು ಅನುಭವಿಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಮಾರ್ಗಸೂಚಿ ಉಲ್ಲಂಘಿಸುವುದಾದರೆ ಅವುಗಳನ್ನು ಹೊರಡಿಸುವ ಅಗತ್ಯವಾದರೂ ಏನಿದೆ. ಇದರ ಬಗ್ಗೆ ನಾವು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದೆವು. ಪೌರಾಡಳಿತದ ನಿರ್ದೇಶಕರಿಗೂ ದೂರು ನೀಡಿದ್ದೆವು. ಆದರೆ ಇವರಿಬ್ಬರೂ ಸಹ ಇದನ್ನು ದೊಡ್ಡ ಸಮಸ್ಯೆ ಎಂದು ಪರಿಗಣಿಸಿದೆ ನಿರ್ಲಕ್ಷಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಎಲ್ಲಿ ನೋಡಿದರೂ ಕಸದ ರಾಶಿ ಕಾಣಿಸುತ್ತಿದೆ. ಇದನ್ನು ವಿಲೇವಾರಿ ಮಾಡಲು ಸರಿಯಾದ ವ್ಯಸ್ಥೆಯಿಲ್ಲ. ಇಂತಹ ಸಂದರ್ಭದಲ್ಲಿ ಇದು ನಗರದ ಸ್ವಚ್ಚತೆ, ಪರಿಸರ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಜಾಕ್‌ ಉಸ್ತಾದ್

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

“ನಗರದ ಶಾಸಕರು ಆಡಳಿತ ಪಕ್ಷದವರಾಗಿದ್ದು, ಅವರಿಗೆ ತಕ್ಕಂತೆ ಆಡಳಿತಾಂಗ ಕೆಲಸ ಮಾಡುತ್ತಿದೆ. ಮೀಸಲಿಟ್ಟಿರುವ ಹಣವನ್ನು ಘನತ್ಯಾಜ್ಯ ನಿರ್ವಹಣೆಗೆ ಬಳಸಿದರೆ ಅದರಲ್ಲಿ ರಾಜಕಾರಣಿಗಳಿಗೆ ಮತ್ತು ಅಧೀನ ಅಧಿಕಾರಿಗಳಿಗೆ ಹೆಚ್ಚಿನ ಲಾಭವೇನೂ ಸಿಗುವುದಿಲ್ಲ. ಹಾಗಾಗಿ ಈ ಹಣವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿದರೆ, ಅದನ್ನು ಗುತ್ತಿಗೆ ಪಡೆಯುವವರಿಗೆ 50/50 ಕಮಿಷನ್ ಎಂದು ಒಪ್ಪಂದವಾಗುತ್ತದೆ. ಇದರಿಂದ ಕಮಿಷನ್ ಹಣ ಪಡೆಯಬಹುದು. ಹಾಗಾಗಿಯೇ ಇಂತಹ ರಾಜ್ಯದ್ರೋಹಿ ಕೆಲಸಗಳನ್ನು ಮಾಡುತ್ತಿದ್ದಾರೆ. ಕೇವಲ ರಾಯಚೂರಿನಲ್ಲಿಯೇ ಇಂತಹ ಪರಿಸ್ಥಿತಿಯಾದರೆ, ಇನ್ನು ರಾಜ್ಯದ ವಿವಿಧ ಜಿಲ್ಲೆಗಳ ಪರಿಸ್ಥಿತಿ ಏನಿದೆಯೋ? ಒಟ್ಟಿನಲ್ಲಿ ಈ ಸಮಸ್ಯೆಯನ್ನು ಈಗಲೇ ನಿವಾರಿಸದಿದ್ದರೆ ಭವಿಷ್ಯದಲ್ಲಿ ಇದರ ಕೆಟ್ಟ ಪರಿಣಾಮವನ್ನು ನಾವೆಲ್ಲರೂ ಎದುರಿಸಬೇಕಾಗುತ್ತದೆ” ಎಂದು ರಜಾಕ್ ಉಸ್ತಾದ್ ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ಲೀಗಲ್ ನೋಟಿಸ್

 

ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅದಕ್ಷ ಅಧಿಕಾರಿಗಳು ಶಾಮೀಲಾಗಿರುವ ಇಂತಹ ಕೃತ್ಯಗಳು ಇನ್ನೂ ಬೆಳಕಿಗೆ ಬಾರದಿರುವುದು ದುರದೃಷ್ಟಕರ. ರಾಜ್ಯ ಸರ್ಕಾರ ಈ ಕೂಡಲೇ ಇತ್ತ ಗಮನಹರಿಸಿ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಈ ಸಮಸ್ಯೆ ಮತ್ತು ಕಸದ ರಾಶಿ ಹೆಮ್ಮರವಾಗಿ ಬೆಳೆಯಬಹುದು.

ಒಂದು ನಗರ ಸ್ವಚ್ಚವಾಗಿದೆ ಎಂದರೆ, ಅಲ್ಲಿ ಚರಂಡಿ ವ್ಯವಸ್ಥೆ ಮತ್ತು ಘನತ್ಯಾಜ್ಯ ನಿರ್ವಹಣೆ ಉತ್ತಮವಾಗಿರಬೇಕು. ಹಾಗಾಗಿಯೇ ಸರ್ಕಾರ ಬಿಡುಗಡೆ ಮಾಡುವ ಹಣದಲ್ಲಿ ಶೇ 25ರಷ್ಟನ್ನು ಇದರ ನಿರ್ವಹಣೆಗೆ ಬಳಸಬೇಕು ಎಂದು ನಿಯಮಾವಳಿಗಳು ಹೇಳುತ್ತವೆ. ಆದರೆ, ಇಂತಹ ನಿರ್ಲಕ್ಷಿತ ಮನೋಭಾವನೆಯ ಅಧಿಕಾರಿಗಳು ಮತ್ತು ಭ್ರಷ್ಟ ಜನಪ್ರತಿನಿಧಿಗಳಿಂದ ಇದು ಪಾಲನೆಯಾಗುತ್ತಿಲ್ಲ.

ಇದನ್ನೂ ಓದಿ: ಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೊಗೆಯುತ್ತೇನೆ ಎನ್ನುವವರು ಇದನ್ನು ಕಂಡರೂ ಕಾಣದಂತೆ ಕುಳಿತಿರುವುದು, ಇಂತಹ ಹೀನ ಕೆಲಸಗಳಿಗೆ ಅವರು ಸಮ್ಮತಿಯನ್ನು ಸೂಚಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಇದು ಕೇವಲ ಒಂದು ಉದಾಹರಣೆಯಷ್ಟೆ. ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ದಿಕ್ಕುತಪ್ಪಿಸಿ, ಉದ್ದೇಶಿತ ಯೋಜನೆಗೆ ಬಳಸದೇ ಹೆಚ್ಚಿನ ಲಾಭ ಬರುವ ಅಥವಾ ಹೆಚ್ಚಿನ ಪಾಲು ಬರುವ ಯೋಜನೆಗಳಿಗೆ ತೊಡಗಿಸಿಕೊಂಡು ರಾಜ್ಯ ಮತ್ತು ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸಲಾಗುತ್ತಿದೆ. ವಿಪರ್ಯಾಸವೆಂದರೆ, ಇದರಲ್ಲಿ ತಳಮಟ್ಟದ ಅಧಿಕಾರಿಗಳಿಂದ ಹಿಡಿದು, ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳವರೆಗೆ ಪಾಲು ಹಂಚಿಕೆಯಾಗುತ್ತದೆ. ಇದು ಎಲ್ಲರಿಗೂ ಗೊತ್ತಿರುವ ನಗ್ನ ಸತ್ಯ. ಈ ಹಿನ್ನೆಲೆ ಸದರಿ ಪ್ರಕರಣದ ಕುರಿತು ಸಮರ್ಪಕ ತನಿಖೆಯಾಗಬೇಕು. ಭ್ರಷ್ಟರಿಗೆ ಶಿಕ್ಷೆಯಾಗಬೇಕೆಂಬುದು ಪ್ರಜ್ಞಾವಂತರ ಆಗ್ರಹವಾಗಿದೆ.


ಇದನ್ನೂ ಓದಿ: ಕೊರೋನಾ ಕಾಲದ ಭ್ರಷ್ಟಾಚಾರದ ತನಿಖೆಗೆ ಸ್ಪೀಕರ್ ಅಡ್ಡಿ: ದಾಖಲೆಗಳೇನು ಹೇಳುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...