Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಅಪರಾಜಿತಾ ಸಾರಂಗಿಯನ್ನು ಹಲವು ಮಹಿಳೆಯರು ಸುತ್ತುವರೆದಿದ್ದು, ಅವರು ಮಾಸ್ಕ್‌ಗಳನ್ನು ಧರಿಸಲಿಲ್ಲ, ಮತ್ತು ಸಾಮಾಜಿಕ ಅಂತರವನ್ನು ಪಾಲಿಸಿರಲಿಲ್ಲ ಎಂಬುದು ಸ್ಪಷ್ಟವಾಗಿ ದಾಖಲಾಗಿದೆ

- Advertisement -
- Advertisement -

ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಒಡಿಶಾ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದ ಒಂದು ದಿನದ ನಂತರ ಬಿಜೆಪಿ ರಾಷ್ಟ್ರೀಯ ವಕ್ತಾರರಾದ, ಸಂಸದೆ ಅಪರಾಜಿತಾ ಸಾರಂಗಿ ಅವರ ಕಚೇರಿಯನ್ನು ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ (BMC) ಸೀಲ್ ಮಾಡಿದೆ.

BMC ವಲಯ ಉಪ ಆಯುಕ್ತ (ನೈರುತ್ಯ) ರಬಿನಾರಾಯಣ್ ಜೆಥಿ ನೇತೃತ್ವದ ತಂಡವು ಕಚೇರಿಯನ್ನು 15 ದಿನಗಳ ಕಾಲ ಸೀಲ್ ಮಾಡಿದೆ.

ಇದನ್ನೂ ಓದಿ: ಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ 20-25 ಕೋಟಿ ರೂ. ಖರ್ಚು ಮಾಡಿದ ಬಿಬಿಎಂಪಿ!

“ಕೋವಿಡ್ ಮಾನದಂಡಗಳ ಉಲ್ಲಂಘನೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. 15 ದಿನಗಳ ನಂತರ ಕಛೇರಿಯನ್ನು ಮತ್ತೆ ತೆರೆಯುವ ಮೊದಲು ಸ್ವಚ್ಚಗೊಳಿಸಲಾಗುವುದು” ಎಂದು ರಬಿನಾರಾಯಣ್ ಜೆಥಿ ಹೇಳಿದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಕ್ಟೋಬರ್ 8 ರಂದು ನಗರದಲ್ಲಿ ನಡೆದ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭುವನೇಶ್ವರದ ಸಂಸದರು ಕೋವಿಡ್ -19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ರಾಜ್ಯ ಸಚಿವ (ಗೃಹ) ದಿಬ್ಯಾ ಶಂಕರ್ ಮಿಶ್ರಾ ಆರೋಪಿಸಿ, ಕೇಂದ್ರ ರಾಜ್ಯ ಸಚಿವ (ಗೃಹ) ನಿತ್ಯಾನಂದ್ ರೈ ಅವರಿಗೆ ಪತ್ರ ಬರೆದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಲಜ್ಜೆಗೆಟ್ಟ, ಕರೆಪ್ಟ್ ಪೊಲಿಟಿಕಲ್ ಪಾರ್ಟಿ: ಸಿದ್ದರಾಮಯ್ಯ ಟೀಕೆ

ಈ ಘಟನೆಯ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಅಪರಾಜಿತಾ ಸಾರಂಗಿಯನ್ನು ಹಲವು ಮಹಿಳೆಯರು ಸುತ್ತುವರೆದಿದ್ದು, ಅವರು ಮಾಸ್ಕ್‌ಗಳನ್ನು ಧರಿಸಲಿಲ್ಲ, ಮತ್ತು ಸಾಮಾಜಿಕ ಅಂತರವನ್ನು ಪಾಲಿಸಿರಲಿಲ್ಲ ಎಂಬುದು ಸ್ಪಷ್ಟವಾಗಿ ದಾಖಲಾಗಿದೆ. ಇದನ್ನು ತನಿಖೆಗೆ ಒಳಪಡಿಸಿದಾಗ, ಈ ಸ್ಥಳವು ಪಾಲಸ್‌ಪಲ್ಲಿಯ ಸಂಸದರ ಕಛೇರಿ ಎಂದು ತಿಳಿಯಿತು ಎಂದು ರಬಿನಾರಾಯಣ್ ಜೆಥಿ

ಆದರೆ ಈ ಕ್ರಮವನ್ನು ಸಂಸದೆ, ‘ಪ್ರತೀಕಾರಕ’ ಎಂದು ಹೇಳಿದ್ದಾರೆ. ಶೀಘ್ರದಲ್ಲೇ ಅವರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಇದನ್ನೂ ಓದಿ: ಒಂದು ಭಾರತದೊಳಗೆ ಹಲವು ಭಾರತಗಳಿವೆ; ಇದು ಬಿಜೆಪಿಯವರಿಗೆ ಗೊತ್ತಿಲ್ಲ

ದಿವಂಗತ ಪ್ರದೀಪ್ ಮಹಾರಾತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ, ಶಾಲಾ ಶಿಕ್ಷಣ ಸಚಿವ ಸಮೀರ್ ದಾಶ್ ಮತ್ತು ಬಿಜೆಡಿ ಶಾಸಕ ಉಮಾಕಾಂತ್ ಸಮಂತ್ರೇ ಅವರ ವಿಷಯದಲ್ಲಿ ರಾಜ್ಯ ಸರ್ಕಾರ ಏಕೆ ಮೌನವಾಗಿದೆ. ಮಾನದಂಡಗಳು ಎಲ್ಲರಿಗೂ ಒಂದೇ ಇರಬೇಕು” ಎಂದು ತಮ್ಮ ವಿರುದ್ಧದ ದೂರಿಗೆ ಪ್ರತಿಕ್ರಿಯೆಯಾಗಿ ಹೇಳಿದ್ದಾರೆ.

ಕುತೂಹಲಕಾರಿಯೆಂಬಂತೆ, ಸಂಸದೆ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ, ಬಿಜೆಡಿ ಶಾಸಕ ಉಮಾಕಾಂತ್ ಸಮಂತ್ರೇ ಅವರು ಶನಿವಾರ ವೀಡಿಯೊ ಸಂದೇಶವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪ್ರದೀಪ್ ಮಹಾರಾತಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ.

“ಇದು ಭಾವನಾತ್ಮಕ ಪ್ರತಿಕ್ರಿಯೆಯಾಗಿದೆ. ಆದರೆ ಕಾನೂನಿನ ಪ್ರಕಾರ ಯಾವುದೇ ಕ್ರಮವನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ. ಕಾನೂನಿನ ದೃಷ್ಟಿಯಲ್ಲಿ ಯಾರೂ ಮೇಲಲ್ಲ. ನಾನು ಕಾನೂನಿನ ನಿಯಮಕ್ಕೆ ಬದ್ಧನಾಗಿರುತ್ತೇನೆ” ಎಂದು ವೀಡಿಯೋದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...