Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಅಪರಾಜಿತಾ ಸಾರಂಗಿಯನ್ನು ಹಲವು ಮಹಿಳೆಯರು ಸುತ್ತುವರೆದಿದ್ದು, ಅವರು ಮಾಸ್ಕ್‌ಗಳನ್ನು ಧರಿಸಲಿಲ್ಲ, ಮತ್ತು ಸಾಮಾಜಿಕ ಅಂತರವನ್ನು ಪಾಲಿಸಿರಲಿಲ್ಲ ಎಂಬುದು ಸ್ಪಷ್ಟವಾಗಿ ದಾಖಲಾಗಿದೆ

- Advertisement -
- Advertisement -

ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಒಡಿಶಾ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದ ಒಂದು ದಿನದ ನಂತರ ಬಿಜೆಪಿ ರಾಷ್ಟ್ರೀಯ ವಕ್ತಾರರಾದ, ಸಂಸದೆ ಅಪರಾಜಿತಾ ಸಾರಂಗಿ ಅವರ ಕಚೇರಿಯನ್ನು ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ (BMC) ಸೀಲ್ ಮಾಡಿದೆ.

BMC ವಲಯ ಉಪ ಆಯುಕ್ತ (ನೈರುತ್ಯ) ರಬಿನಾರಾಯಣ್ ಜೆಥಿ ನೇತೃತ್ವದ ತಂಡವು ಕಚೇರಿಯನ್ನು 15 ದಿನಗಳ ಕಾಲ ಸೀಲ್ ಮಾಡಿದೆ.

ಇದನ್ನೂ ಓದಿ: ಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ 20-25 ಕೋಟಿ ರೂ. ಖರ್ಚು ಮಾಡಿದ ಬಿಬಿಎಂಪಿ!

“ಕೋವಿಡ್ ಮಾನದಂಡಗಳ ಉಲ್ಲಂಘನೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. 15 ದಿನಗಳ ನಂತರ ಕಛೇರಿಯನ್ನು ಮತ್ತೆ ತೆರೆಯುವ ಮೊದಲು ಸ್ವಚ್ಚಗೊಳಿಸಲಾಗುವುದು” ಎಂದು ರಬಿನಾರಾಯಣ್ ಜೆಥಿ ಹೇಳಿದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಕ್ಟೋಬರ್ 8 ರಂದು ನಗರದಲ್ಲಿ ನಡೆದ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭುವನೇಶ್ವರದ ಸಂಸದರು ಕೋವಿಡ್ -19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ರಾಜ್ಯ ಸಚಿವ (ಗೃಹ) ದಿಬ್ಯಾ ಶಂಕರ್ ಮಿಶ್ರಾ ಆರೋಪಿಸಿ, ಕೇಂದ್ರ ರಾಜ್ಯ ಸಚಿವ (ಗೃಹ) ನಿತ್ಯಾನಂದ್ ರೈ ಅವರಿಗೆ ಪತ್ರ ಬರೆದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಲಜ್ಜೆಗೆಟ್ಟ, ಕರೆಪ್ಟ್ ಪೊಲಿಟಿಕಲ್ ಪಾರ್ಟಿ: ಸಿದ್ದರಾಮಯ್ಯ ಟೀಕೆ

ಈ ಘಟನೆಯ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಅಪರಾಜಿತಾ ಸಾರಂಗಿಯನ್ನು ಹಲವು ಮಹಿಳೆಯರು ಸುತ್ತುವರೆದಿದ್ದು, ಅವರು ಮಾಸ್ಕ್‌ಗಳನ್ನು ಧರಿಸಲಿಲ್ಲ, ಮತ್ತು ಸಾಮಾಜಿಕ ಅಂತರವನ್ನು ಪಾಲಿಸಿರಲಿಲ್ಲ ಎಂಬುದು ಸ್ಪಷ್ಟವಾಗಿ ದಾಖಲಾಗಿದೆ. ಇದನ್ನು ತನಿಖೆಗೆ ಒಳಪಡಿಸಿದಾಗ, ಈ ಸ್ಥಳವು ಪಾಲಸ್‌ಪಲ್ಲಿಯ ಸಂಸದರ ಕಛೇರಿ ಎಂದು ತಿಳಿಯಿತು ಎಂದು ರಬಿನಾರಾಯಣ್ ಜೆಥಿ

ಆದರೆ ಈ ಕ್ರಮವನ್ನು ಸಂಸದೆ, ‘ಪ್ರತೀಕಾರಕ’ ಎಂದು ಹೇಳಿದ್ದಾರೆ. ಶೀಘ್ರದಲ್ಲೇ ಅವರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಇದನ್ನೂ ಓದಿ: ಒಂದು ಭಾರತದೊಳಗೆ ಹಲವು ಭಾರತಗಳಿವೆ; ಇದು ಬಿಜೆಪಿಯವರಿಗೆ ಗೊತ್ತಿಲ್ಲ

ದಿವಂಗತ ಪ್ರದೀಪ್ ಮಹಾರಾತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ, ಶಾಲಾ ಶಿಕ್ಷಣ ಸಚಿವ ಸಮೀರ್ ದಾಶ್ ಮತ್ತು ಬಿಜೆಡಿ ಶಾಸಕ ಉಮಾಕಾಂತ್ ಸಮಂತ್ರೇ ಅವರ ವಿಷಯದಲ್ಲಿ ರಾಜ್ಯ ಸರ್ಕಾರ ಏಕೆ ಮೌನವಾಗಿದೆ. ಮಾನದಂಡಗಳು ಎಲ್ಲರಿಗೂ ಒಂದೇ ಇರಬೇಕು” ಎಂದು ತಮ್ಮ ವಿರುದ್ಧದ ದೂರಿಗೆ ಪ್ರತಿಕ್ರಿಯೆಯಾಗಿ ಹೇಳಿದ್ದಾರೆ.

ಕುತೂಹಲಕಾರಿಯೆಂಬಂತೆ, ಸಂಸದೆ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ, ಬಿಜೆಡಿ ಶಾಸಕ ಉಮಾಕಾಂತ್ ಸಮಂತ್ರೇ ಅವರು ಶನಿವಾರ ವೀಡಿಯೊ ಸಂದೇಶವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪ್ರದೀಪ್ ಮಹಾರಾತಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ.

“ಇದು ಭಾವನಾತ್ಮಕ ಪ್ರತಿಕ್ರಿಯೆಯಾಗಿದೆ. ಆದರೆ ಕಾನೂನಿನ ಪ್ರಕಾರ ಯಾವುದೇ ಕ್ರಮವನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ. ಕಾನೂನಿನ ದೃಷ್ಟಿಯಲ್ಲಿ ಯಾರೂ ಮೇಲಲ್ಲ. ನಾನು ಕಾನೂನಿನ ನಿಯಮಕ್ಕೆ ಬದ್ಧನಾಗಿರುತ್ತೇನೆ” ಎಂದು ವೀಡಿಯೋದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...