Homeಕರ್ನಾಟಕಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ವರದಿಗಳನ್ನು ಮಾಡುತ್ತಿರುವ ಮಾಧ್ಯಮಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿವೆ. ತಡವಾಗಿಯಾದರೂ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಎಚ್ಚೆತ್ತುಕೊಂಡಿದೆ.

- Advertisement -
- Advertisement -

ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಮಾಡುತ್ತಿರುವ ವರದಿಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿರುವುದು ಸ್ಪಷ್ಟವಾಗುತ್ತಿದೆ. ದಿನದಿಂದ ದಿನಕ್ಕೆ ಪ್ರಕರಣ ದೊಡ್ಡದಾಗುತ್ತಿದ್ದರೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್‌) ಕಣ್ಣು ಮುಚ್ಚಿ ಕುಳಿತಿದೆಯೇ? ಅಧ್ಯಕ್ಷರು, ಸದಸ್ಯರು ಏನು ಮಾಡುತ್ತಿದ್ದಾರೆ? ಎಂಬ ಪ್ರಶ್ನೆಗಳು ಸಹಜವಾಗಿ ಮೂಡಿವೆ.

ಈ ಸಂಬಂಧ ಮಕ್ಕಳ ಹಕ್ಕುಗಳ ಆಯೋಗವನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ರಾಜ್ಯದಲ್ಲಾಗುತ್ತಿರುವ ಮಕ್ಕಳ ಹಕ್ಕುಗಳ ಉಲ್ಲಂಘನೆಗಳ ಕುರಿತು ಆಯೋಗದ ಸದಸ್ಯರು ಸಂಬಂಧಪಟ್ಟ ವಾಟ್ಸ್‌ಆಪ್‌ ಗ್ರೂಪ್‌ನಲ್ಲಿ ಅಧ್ಯಕ್ಷರೊಂದಿಗೆ ಚರ್ಚಿಸಿರುವುದು ತಿಳಿದುಬಂದಿದೆ. ಆದರೂ ಕ್ರಮ ಜರುಗಿಸುವಲ್ಲಿ ಆಯೋಗದ ಅಧ್ಯಕ್ಷರು ವಿಳಂಬ ಮಾಡಿರುವುದು ಮೇಲುನೋಟಕ್ಕೆ ಕಂಡುಬರುತ್ತದೆ.

ಆಯೋಗದ ಅಧ್ಯಕ್ಷರಾದ ಡಾ.ಜಯಲಕ್ಷ್ಮಿ ಅವರು ಪ್ರತಿಕ್ರಿಯೆ ನೀಡಿ, “ಕಾನೂನು ಸಲಹೆಗಾರರ ಬಳಿ ಮಾತನಾಡುತ್ತಿದ್ದೇವೆ. ಹೈಕೋರ್ಟ್‌ನಲ್ಲಿ ಕೇಸ್‌ ಇರುವಾಗ ನಾವು ಅಧಿಕೃತವಾಗಿ ಯಾವುದೇ ಹೇಳಿಕೆಯನ್ನು ಕೊಡಲು ಬರುವುದಿಲ್ಲ. ಆಯೋಗಕ್ಕೂ ಕೆಲವು ಮಿತಿಗಳಿವೆ” ಎಂದು ಹೇಳಿದರು.

ವಿವಾದಿತ ಕಾಲೇಜುಗಳಿಗೆ ಮಾತ್ರ ಅನ್ವಯವಾಗುವ ಹೈಕೋರ್ಟ್ ಆದೇಶವನ್ನು ಇಡೀ ರಾಜ್ಯದ ಎಲ್ಲ ಪ್ರೌಢಶಾಲೆ, ಕಾಲೇಜುಗಳಿಗೂ ಅನ್ವಯವಾಗುತ್ತದೆ ಎಂಬಂತೆ ಬಿಂಬಿಸಿತ್ತಾ ಮಾಧ್ಯಮಗಳು ತೋರಿಸುತ್ತಿವೆ. ಹಿಜಾಬ್ ಕೇಸರಿ ಶಾಲು ವಿವಾದವನ್ನು ಪಕ್ಕಕ್ಕಿಟ್ಟು ನೋಡಿದರೂ ಇಲ್ಲಿ ಮಾಧ್ಯಮಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿರುವುದು ಸ್ಪಷ್ಟ ಎಂಬ ಅಂಶವನ್ನು ಅಧ್ಯಕ್ಷರ ಗಮನಕ್ಕೆ ತರಲಾಯಿತು.

ಇದನ್ನೂ ಓದಿರಿ: ಉಡುಪಿ: ಎಂಜಿಎಂ ವಿದ್ಯಾರ್ಥಿಗಳನ್ನು ಹಿಂಜಾವೇ, ಬಿಜೆಪಿ ಪ್ರಚೋದಿಸಿದ್ದು ಹೀಗೆ…

“ಮಾಧ್ಯಮಗಳಿಗೂ ಮಕ್ಕಳ ಹಕ್ಕುಗಳ ಕುರಿತು ಎಚ್ಚರಿಕೆ ಇರಬೇಕು. ಮಕ್ಕಳ ಹಕ್ಕುಗಳ ಜಿಲ್ಲಾ ಪ್ರತಿನಿಧಿಗಳಿಂದ ಅಧಿಕೃತ ಮಾಹಿತಿಗಳು ಬಂದಿಲ್ಲ. ಮಗುವನ್ನು ಓಡಿಸಿಕೊಂಡು ಹೋಗುತ್ತಿರುವುದು ಗಮನಕ್ಕೆ ಬಂದಿದೆ. ಒಂದು ವಿಡಿಯೊ ಬಂದ ತಕ್ಷಣ ಯಾರ ಮೇಲೆ ಸುಮೊಟೊ ಕೇಸ್‌ ದಾಖಲಿಸಬೇಕು ಹೇಳಿ? ಹೆಸರು ಕೊಡಿ, ನಾಳೆಯೇ ಅವರನ್ನು ಇಲ್ಲಿಗೆ ಕರೆಸಿಕೊಳ್ಳುತ್ತೇವೆ” ಎಂದರು.

“ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಲ್ಲರಿಗೂ ಕಾಣಿಸುತ್ತಿದೆ, ಮಕ್ಕಳ ಹಕ್ಕುಗಳ ಆಯೋಗಕ್ಕೆ ಕಾಣಿಸುವುದಿಲ್ಲವೆ?” ಎಂದು ಪ್ರಶ್ನಿಸಲಾಯಿತು.

“ಗಾದೆ ಮಾತನ್ನು ಎಲ್ಲರೂ ಹೇಳುತ್ತಾರೆ. ಹೆಣ್ಣು ಮಗುವನ್ನು ಓಡಿಸಿಕೊಂಡು ಹೋದನೆಂದ ತಕ್ಷಣ- ನಾವು ಯಾರ ಮೇಲೆ ಪ್ರಕರಣ ದಾಖಲಿಸಬೇಕು ಹೇಳಿ? ಅವರ ವಿವರಗಳನ್ನು ಕಲೆಹಾಕುತ್ತೇವೆ” ಎಂದರು.

“ಈ ಮಕ್ಕಳಿಗೆ ಪರೀಕ್ಷೆ ಬೇಡವಂತೆ, ಹಿಜಾಬ್ ಬೇಕಂತೆ ಎಂದು ದೊಡ್ಡ ದೊಡ್ಡ ಮಾಧ್ಯಮಗಳ ಸಂಪಾದಕರೂ ಮಾತನಾಡುತ್ತಿದ್ದಾರೆ. ಮಕ್ಕಳ ವಿರುದ್ಧ ಹೀಗೆ ದ್ವೇಷ ಸೃಷ್ಟಿಸಲು ಇವರಿಗೆ ಯಾವ ಹಕ್ಕಿದೆ?” ಎಂದು ಪ್ರಶ್ನೆಸಲಾಯಿತು.

“ಅವರಿಗೆ ಯಾವುದೇ ಹಕ್ಕಿಲ್ಲ” ಎಂದು ಆಯೋಗದ ಅಧ್ಯಕ್ಷರು ಸ್ಪಷ್ಟಪಡಿಸಿದರು.

“ಇಷ್ಟೆಲ್ಲ ಆದರೂ ಮಕ್ಕಳ ಹಕ್ಕುಗಳ ಆಯೋಗ ಒಂದು ಹೇಳಿಕೆಯನ್ನೂ ನೀಡುವುದಿಲ್ಲ?” ಎಂದು ಕೇಳಿದರೆ, “ಏನು ಹೇಳಿಕೆ ನೀಡಬೇಕೆಂದು ನೀವೇ ಹೇಳಿ” ಎಂದರು.

“ನಾವು ಹೇಳುವುದಲ್ಲ. ನೀವು ಅದನ್ನು ಗಮನಿಸಬೇಕಲ್ಲ?” ಎಂದು ಪ್ರಶ್ನಿಸಿದಾಗ,  “ನಾವು ಸೂಕ್ಷ್ಮವಾಗಿ ಗಮನಿಸುತ್ತಲೇ ಇದ್ದೇವೆ. ತುಂಬಾ ಸೂಕ್ಷ್ಮವಾದ ವಿಚಾರವಿದು. ಮಕ್ಕಳನ್ನು ಟಾರ್ಗೆಟ್‌ ಮಾಡಲು ಯಾವುದೇ ಅಧಿಕಾರವಿಲ್ಲ. ನಿನ್ನೆ ಒಂದು ವಿಡಿಯೊ ವೈರಲ್ ಆಗಿದೆ. ಪರಿಶೀಲಿಸಲು ಹೇಳಿದ್ದೇವೆ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಹಿಜಾಬ್ ಧರಿಸಿದ ಪುಟಾಣಿಯನ್ನು ಓಡಿಸಿಕೊಂಡು ಹೋಗುತ್ತಿರುವ ವಿಡಿಯೊ ವೈರಲ್‌

“ಇದೊಂದೇ ಪ್ರಕರಣವಲ್ಲ, ಮಕ್ಕಳ ಹಕ್ಕುಗಳನ್ನು ಹಲವು ಮಾಧ್ಯಮಗಳು ಉಲ್ಲಂಘಿಸಿವೆ” ಎಂದು ಅವರ ಗಮನಕ್ಕೆ ತರಲಾಯಿತು. “ಮಕ್ಕಳ ಹಕ್ಕುಗಳ ಆಯೋಗ ಈ ರೀತಿಯ ವರದಿಗಳ ವಿರುದ್ಧ ಕ್ರಮ ಜರುಗಿಸಲಿದೆ” ಎಂದು ಅಧ್ಯಕ್ಷರು ಎಚ್ಚರಿಸಿದ್ದಾರೆ.

ಆಯೋಗ ಸುಮ್ಮನೆ ಕುಳಿತು ನೋಡುವುದಿಲ್ಲ: ಪರಶುರಾಮ್‌

ನಾನುಗೌರಿ.ಕಾಂ ಜೊತೆ ಮಾತನಾಡಿದ ಆಯೋಗದ ಸದಸ್ಯರಾದ ಪರಶುರಾಮ್‌, “ಹಿಜಾಬ್‌ ವಿಚಾರ ಆಗಿರಲಿ, ಸಮವಸ್ತ್ರದ ವಿಚಾರವಾಗಿರಲಿ, ಸರ್ಕಾರವೇ ತೀರ್ಮಾನ ತೆಗೆದುಕೊಳ್ಳದೆ ಇರುವ ಸಂದರ್ಭದಲ್ಲಿ, ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ಮಕ್ಕಳನ್ನು ಪೀಡಿಸಬಾರದು. ಹೀಗೆ ಮಾಡಿದರೆ ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆಯ ಉಲ್ಲಂಘನೆಯಾಗುತ್ತದೆ. ಈ ಬೆಳವಣಿಗೆಗಳನ್ನು ಮಕ್ಕಳ ಮೇಲಿನ ಕ್ರೌರ್ಯ ಎಂದೇ ಭಾವಿಸಲಾಗುವುದು” ಎಂದು ತಿಳಿಸಿದರು.

“ಉಡುವ ಬಟ್ಟೆಗಿಂತ ಉಣ್ಣುವ ತಟ್ಟೆಗಳು ಬರಿದಾಗಿವೆ. ಹಸಿವು ಹೊಟ್ಟೆಯಲ್ಲಿ ಬರುವ ಮಕ್ಕಳ ಯೋಗಕ್ಷೇಮವನ್ನು ತತ್‌ಕ್ಷಣ ನೋಡಬೇಕಾಗಿದೆ. ಪ್ರತಿಯೊಂದು ಶಾಲೆಯಲ್ಲೂ ಭಿನ್ನ ರೂಪದ ವಸ್ತ್ರ ಸಂಹಿತೆ ಇರುವಾಗ ತಮ್ಮ ಮಕ್ಕಳು ತಮಗೆ ಇಷ್ಟವಾದದ್ದನ್ನು ತೊಡುತ್ತಿರುವಾಗ ಇದುವರೆಗೆ ಇಲ್ಲದ ಭಿನ್ನ ಕಾರಣವನ್ನು ಮಕ್ಕಳ ವಿಷಯದಲ್ಲಿ ತರುವುದು ಸರಿಯಲ್ಲ” ಎಂದು ಅಭಿಪ್ರಾಯಪಡುತ್ತಾರೆ ಪರಶುರಾಮ್‌.

“ಪೈಗಂಬರ್‌, ಕ್ರಿಸ್ತ, ಕೃಷ್ಣ, ರಾಮದ ವಿಚಾರಗಳು ಪಠ್ಯದಲ್ಲಿ ತತ್ವಗಳಾಗಿರುವಾಗ, ಇನ್ನು ಮುಂದೆ ಇಂತಹದ್ದೇ ಓದಬೇಕು, ಇಂತಹ ಧರ್ಮದ ಕುರಿತೇ ಓದಬೇಕು ಎಂಬ ಭಾವನೆ ಮಕ್ಕಳಲ್ಲಿ ಮೂಡಿದರೆ ಹೇಗೆ? ಭಿನ್ನ ಸಂಸ್ಕೃತಿ, ಭಿನ್ನ ವಿಚಾರ, ವಿವಿಧತೆಯಲ್ಲಿ ಏಕತೆಯನ್ನು ಭಾರತ ಹೊಂದಿದೆ. ಈ ಕಾರಣವನ್ನು ತತ್‌ಕ್ಷಣ ಪರಿಶೀಲಿಸಬೇಕು. ಕೆಲವು ಮಾಧ್ಯಮಗಳು ಮಕ್ಕಳ ಮೇಲೆ ಸವಾರಿ ಮಾಡಿರುವುದು ಗಮನಕ್ಕೆ ಬಂದಿದೆ. ಹೀಗೆ ಮಾಡಿದರೆ ಆಯೋಗವು ಸುಮ್ಮನೆ ಕುಳಿತು ನೋಡುವುದಿಲ್ಲ. ಮಕ್ಕಳ ಹಕ್ಕುಗಳ ಕಾಯ್ದೆ ಅಡಿಯಲ್ಲಿ ಸೂಕ್ತ ವಿಲೇವಾರಿ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆಯಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

“ಸದುದ್ದೇಶಕ್ಕಾಗಿ, ಮಕ್ಕಳ ಹಕ್ಕುಗಳ ಪ್ರತಿಪಾದನೆಗಾಗಿ ಮಾಧ್ಯಮಗಳು ವರದಿ ಮಾಡುವುದು ಬೇರೆ. ಆದರೆ ಅಸಹಾಯಕ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಮಕ್ಕಳ ಭಾವನೆಯನ್ನು ದುಪಯೋಗ ಮಾಡಿಕೊಳ್ಳಬಾರದು. ಮಕ್ಕಳ ಹಕ್ಕುಗಳ ಕಾಯ್ದೆಯನ್ನು ಜಾರಿಗೊಳಿಸುವುದು ಆಯೋಗದ ಕರ್ತವ್ಯವಾಗಿದೆ” ಎಂದರು.

ಜೆ.ಜೆ. ಕಾಯ್ದೆಯ ಉಲ್ಲಂಘನೆ: ಶಂಕರಪ್ಪ

ಆಯೋಗದ ಮತ್ತೊಬ್ಬ ಸದಸ್ಯರಾದ ಶಂಕರಪ್ಪ ಅವರು ಮಾತನಾಡಿ, “ಆಯೋಗದ ಸಂಬಂಧಪಟ್ಟ ಗ್ರೂಪ್‌ನಲ್ಲಿ ಈ ಕುರಿತು ಚರ್ಚಿಸಲಾಗಿದೆ. ಕಾನೂನು ಉಲ್ಲಂಘನೆಯನ್ನು ಯಾರೇ ಮಾಡಿದರೂ ಉಲ್ಲಂಘನೆಯೇ. ಮಕ್ಕಳನ್ನು ಚಿತ್ರಿಸಬಾರದು. ಬಾಲನ್ಯಾಯ ಕಾಯ್ದೆಯ ಪ್ರಕಾರವೂ ಇದು ಉಲ್ಲಂಘನೆಯೆಂಬುದೂ ತೋರುತ್ತದೆ” ಎಂದು ಹೇಳಿದರು.

“ಈ ವಿಚಾರವನ್ನು ಇಟ್ಟುಕೊಂಡು ವೈಭವೀಕರಣ ಮಾಡುವುದು ಅಕ್ಷ್ಯಮ್ಯ. ಹಿಜಾಬ್‌ ಕುರಿತು ಕೋರ್ಟ್ ನಿರ್ಧಾರ ಮಾಡುತ್ತದೆ. ಮಾಧ್ಯಮಗಳು ಹೀಗೆಲ್ಲ ವರದಿ ಮಾಡಬಾರದು. ಮಕ್ಕಳ ಕುರಿತು ಮಾಧ್ಯಮಗಳು ಒಳ್ಳೆಯ ವಿಚಾರಗಳನ್ನು ತೋರಿಸಬೇಕು. ಹೀಗೆ ನೇರವಾಗಿ ಚಿತ್ರೀಕರಣ ಮಾಡಿದರೆ ಆ ಮಕ್ಕಳನ್ನು ಟಾರ್ಗೆಟ್ ಮಾಡುತ್ತಾರೆ. ಜವಾಬ್ದಾರಿ ನಾಗರಿಕರು ಮಕ್ಕಳ ವಿಚಾರದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಳ್ಳಬಾರದು” ಎಂದು ಮನವಿ ಮಾಡಿದರು.

 ಗಂಭೀರತೆಯನ್ನು ಊಹಿಸಲಾಗಿತ್ತು: ರಾಘವೇಂದ್ರ

“ಪ್ರಕರಣ ಕೋರ್ಟ್ ಮೆಟ್ಟಿಲೇರುವ ಮುನ್ನವೇ ಪ್ರಕರಣ ಗಂಭೀರತೆಯನ್ನು ಯೋಚಿಸಿ, ಸುಮೊಟೊ ಕೇಸ್‌ ದಾಖಲಿಸುವ ಪ್ರಸ್ತಾಪವನ್ನು ಮಾಡಲಾಗಿತ್ತು” ಎಂದು ಮಕ್ಕಳ ಹಕ್ಕುಗಳ ಆಯೋಗ ಶಿಕ್ಷಣ ಕ್ಷೇತ್ರದ ಉಸ್ತುವಾರಿ ರಾಘವೇಂದ್ರ ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಮಕ್ಕಳ ವಿಚಾರವಾಗಿ 20 ವರ್ಷಗಳಿಂದ ವರ್ಷಗಳಿಂದ ಕೆಲಸ ಮಾಡಿದ್ದೇನೆ. ಹಿಜಾಬ್‌ ಹಾಕಿಸುತ್ತಾರಾ, ತೆಗೆಸುತ್ತಾರಾ ಎಂಬುದು ಮುಖ್ಯವಲ್ಲ. ಮಕ್ಕಳ ಹಕ್ಕುಗಳ ಕಾಪಾಡುವುದು ನಮ್ಮ ಕರ್ತವ್ಯ” ಎಂದು ಹೇಳಿದರು.

“ಹೈಕೋರ್ಟ್ ಆದೇಶ ಸ್ಪಷ್ಟವಾಗಿದೆ. ಸಮಸ್ಯೆ ಇರುವ ಕಾಲೇಜಿಗೆ ಮಾತ್ರ ಮಧ್ಯಂತರ ಆದೇಶ ಅನ್ವಯವಾಗುತ್ತದೆ. ಮಾಧ್ಯಮಗಳು ಇಡೀ ರಾಜ್ಯಕ್ಕೆ ಅನ್ವಯವಾಗುತ್ತದೆ ಎಂದು ತೋರಿಸಿ, ಮಕ್ಕಳು ಪರೀಕ್ಷೆಯಿಂದ ಹೊರಗುಳಿಯುವಂತೆ ಮಾಡಿ, ಬಹಳ ನಿರ್ದಾಕ್ಷಿಣ್ಯವಾಗಿ ವರ್ತಿಸಿವೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಬಹಳ ನೋವಿನ ಸಂಗತಿ” ಎಂದು ವಿಷಾದಿಸಿದರು.

ಬಾಲನ್ಯಾಯ ಕಾಯ್ದೆ ಹೇಳುವುದೇನು?

ರಾಜ್ಯದಲ್ಲಿ ಉಲ್ಲಂಘನೆಯಾಗುತ್ತಿರುವ ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ಆಯೋಗ ಸದಸ್ಯರಾದ ಪರಶುರಾಮ್‌ ವಿವರಿಸಿದ್ದಾರೆ.

“ಬಾಲನ್ಯಾಯ ಕಾಯ್ದೆ 2015 ರ ಅನ್ವಯ, ಮಕ್ಕಳ ಪಾಲನೆ ಮತ್ತು ಸಂರಕ್ಷಣೆಯನ್ನು ಶಾಲೆಗಳಲ್ಲಿ, ಸಂಸ್ಥೆಗಳಲ್ಲಿ ಮಾಡುವುದು ಆದ್ಯ ಕರ್ತವ್ಯವಾಗಿದೆ. ಬಾಲನ್ಯಾಯ ಕಾಯ್ದೆ ಕಾಲಂ 9ರಲ್ಲಿ ಹೇಳಿರುವಂತೆ, ಮಗುವಿನ ಅತ್ಯುತ್ತಮ ಹಿತಾಶಕ್ತಿಯನ್ನು ಕಾಪಾಡುವುದರ ಜೊತೆಗೆ ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕುಗಳು ಉಲ್ಲಂಘನೆ ಆಗಕೂಡದು, ಹಾಗೆಯೇ ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 14(x) ರ ಪ್ರಕಾರ ಮಗುವಿನ ಸಂರಕ್ಷಣೆಯನ್ನು ಅನೀತಿಯ ಲಾಭಕ್ಕಾಗಿ ಮಗುವನ್ನು ಹಿಂಸೆಗೆ ಒಳಪಡಿಸಬಾರದು. ಹಾಗೆಯೇ ಬಾಲನ್ಯಾಯ ಕಾಯ್ದೆ 2015 ಸೆಕ್ಷನ್15 ಅನ್ವಯ ಶಿಶು – ಸ್ನೇಹ ( child friendly ) ರೀತಿಯಲ್ಲಿ ಶಾಲೆಗಳು ಇರಬೇಕಾಗಿದೆ. ಅಭ್ಯಾಸ, ನಡತೆ , ನಡವಳಿಕೆ, ಮನಪ್ರವೃತ್ತಿ, ಹೊಂದಿಕೊಳ್ಳುವ ಪರಿಸರ ವ್ಯವಸ್ಥೆಯನ್ನು ಮಗುವಿಗೆ ನೀಡುವ ರೀತಿಯಲ್ಲಿ ವ್ಯವಸ್ಥೆಗಳು ಕಾರ್ಯನಿರ್ವಹಿಸಬೇಕಾಗಿದೆ. ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 76 (1) ಮಗುವಿಗೆ ಕಿರುಕುಳ ಅಥವಾ ಶೋಷಣೆ ಉಂಟು ಮಾಡಬಾರದೆಂದು ಕಾಯ್ದೆ ತಿಳಿಸುತ್ತದೆ. ಮಕ್ಕಳು ಶಾಲೆಗೆ ಹೋಗುವುದಕ್ಕೆ ಭಯದ ವಾತಾವರಣ ನಿರ್ಮಾಣವಾಗಿರುವುದು ಭಾರತದ ಸಂಸ್ಕೃತಿಗೆ ಶೋಭೆ ತರುವಂತದ್ದಲ್ಲ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿರಿ: ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕನ್ನಡ ಮಾಧ್ಯಮಗಳು ಹಿಜಾಬ್ ವಿಚಾರದಲ್ಲಿ ಒಂದು ಪಕ್ಷದ ಪರವಾಗಿ ವಾದ ಮಾಡುತ್ತಿವೆ. ಮೂಲ ಹುಡುಕಿದರೆ ಇದು ಇಷ್ಟೊಂದು ಬೆಳೆಯುವ ಸಮಸ್ಯೆ ಅಲ್ಲವೆ ಅಲ್ಲಾ… ಮಾಧ್ಯಮಗಳು ಹಗಲು ರಾತ್ರೀ ಹೇಳಿದ್ದನ್ನೇ ಹೇಳಿ ಜನರಿಗೆ ಪ್ರಚೋದನೆ ನೀಡಲು ಕಾರಣವಾಗಿವೆ. ಆದ್ದರಿಂದ ಈ ಮೂಲಕವಾದರೂ ಈ ಕನ್ನಡ ಮಾಧ್ಯಮಗಳಿಗೆ ಮೂಗುದಾರ ಹಾಕಬೇಕಾಗಿದೆ. ಒಂದು ಹೆಡ್ಡಿಂಗ್ ಹಾಕಿ ಅದರ ಮುಂದಿ ಒಂದು ಪ್ರಶ್ನಾರ್ಥಕ ಚಿಹ್ನೆ ಇಟ್ಟರೆ ಅವರು ಬಚಾವ್…ಇನ್ನು ಮಕ್ಕಳ ಹಕ್ಕು ಆಯೋಗವಂತೂ ಗಾಢ ನಿದ್ರೆಯಲ್ಲಿದೆ ಬಿಡಿ..

  2. ಸರಕಾರದ ಹಂಗಿನಲ್ಲಿರುವ ಸಂಸ್ಥೆಗಳು ರಾಜ್ಯಪಾಲ,
    ರಾಷ್ಟ್ರಪತಿ,ಸ್ಪೀಕರ್ ತರ ಕಾರ್ಯ
    ನಿರ್ವಹಿಸುತ್ತವೆ. ಇವೆಲ್ಲಾ ಆಳುವವರ ಪರ ಇರುವವರಿಗೆ ಉದ್ಯೋಗ ಸೃಷ್ಟಿ ಕೇಂದ್ರಗಳು

  3. ಯಾರ್ರೀ ಅದು ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರು ,ಬೇರೆಯವರು ಹೇಳಿದರೆ ಮಾತ್ರಾನಾ ? ಕ್ರಮ ಕೈಗೊಳ್ಳದೆ ನ್ಯಾಯಾಲಯದಲ್ಲಿ ಇದೆ ಪ್ರಕರಣ ಅಂತ ನೆಪ ಹೇಳೋದು ,ನಿಮ್ಮ ಕರ್ತವ್ಯ ನೀವೂ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ನಾಲಾಯಕ್ ಅಧ್ಯಕ್ಷರು ಸದಸ್ಯರು.

  4. ಹಕ್ಕುಗಳ ಬಗ್ಗೆ ಮಾತ್ರ ಮಾತನಾಡಿದರೆ ತಪ್ಪಾಗುತ್ತದೆ. ಜವಾಬ್ದಾರಿ ಮತ್ತು ಹೊಣೆಗಾರಿಕೆಗಳೂ ಸಹ ಅಷ್ಟೇ ಮುಖ್ಯ. ಇರುವ ಒಂದೇ ದೇವರಿಗೆ ಬೇರೆಬೇರೆ ಹೆಸರಿಟ್ಟು, ಒಂದೊಂದು ಹೆಸರಿನಲ್ಲಿ ಹಿಜಾಬ್, ಕೇಸರಿ ಶಾಲು,ಪೇಟ, ಉಡುದಾರ, ಜನಿವಾರ, ಅಥವಾ ಇನ್ನಾವುದೇ ದಾರಗಳು ಇವುಗಳನ್ನು ಧರಿಸುವುದು ಮೌಢ್ಯತೆಯ ಬೇರೆಬೇರೆ ಮುಖಗಳು. ಇವುಗಳ ಹೆಸರು ಹೇಳಿಕೊಂಡು ವಾದ ಮಾಡುವುದು, ಕಿತ್ತಾಡುವುದು, ಹೊಡೆದಾಡುವುದು ಮೂರ್ಖತನವಾದೀತು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...