Homeಮುಖಪುಟಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

2021ರಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ನಡೆದಿರುವುದನ್ನು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ದಾಖಲಿಸಿದೆ. 102 ಪ್ರಕರಣಗಳು ಉತ್ತರ ಪ್ರದೇಶ ಒಂದರಲ್ಲೇ ವರದಿಯಾಗಿವೆ.

- Advertisement -
- Advertisement -

2011ರ ಜನಗಣತಿಯ ಪ್ರಕಾರ ಭಾರತದ ಎಲ್ಲಾ ರಾಜ್ಯಗಳ ಪೈಕಿ ಉತ್ತರ ಪ್ರದೇಶವು ಅತಿ ಕಡಿಮೆ ಪ್ರಮಾಣದಲ್ಲಿ ಕ್ರಿಶ್ಚಿಯನ್ನರನ್ನು ಹೊಂದಿರುವ ಎರಡನೇ ರಾಜ್ಯವಾಗಿದೆ. ಆದರೆ ಕ್ರಿಶ್ಚಿಯನ್ನರ ಮೇಲೆ ಅತಿಹೆಚ್ಚು ಹಲ್ಲೆಗಳಾಗುತ್ತಿರುವ ರಾಜ್ಯಗಳ ಪೈಕಿ ಉತ್ತರ ಪ್ರದೇಶ ಮುಂಚೂಣಿಯಲ್ಲಿದೆ.

65,000ಕ್ಕೂ ಹೆಚ್ಚು ಚರ್ಚ್‌ಗಳ ರಾಷ್ಟ್ರೀಯ ಒಕ್ಕೂಟವಾಗಿರುವ ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಉತ್ತರ ಪ್ರದೇಶದಲ್ಲಿ 2018 ಮತ್ತು 2019ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಅತಿ ಹೆಚ್ಚು ಹಿಂಸಾಚಾರದ ಪ್ರಕರಣಗಳು ದಾಖಲಾಗಿವೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

ಮಾನವ ಹಕ್ಕುಗಳ ಸಂಸ್ಥೆಯಾದ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (ಯುಸಿಎಫ್‌), ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರದ ಅಂಕಿಅಂಶಗಳನ್ನು ಸಂಗ್ರಹಿಸುತ್ತಿದೆ. 2021ರಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ನಡೆದಿರುವುದನ್ನು ಈ ಸಂಸ್ಥೆ ದಾಖಲಿಸಿದೆ. ಇವುಗಳಲ್ಲಿ 102 ಪ್ರಕರಣಗಳು ಉತ್ತರ ಪ್ರದೇಶ ಒಂದರಲ್ಲೇ ವರದಿಯಾಗಿವೆ.

“2021ರಲ್ಲಿ ಉತ್ತರ ಪ್ರದೇಶದಲ್ಲಿ ಗರಿಷ್ಠ ಸಂಖ್ಯೆಯ ಹಿಂಸಾಚಾರ ಪ್ರಕರಣಗಳು ದಾಖಲಾಗಿವೆ” ಎಂದು ಇಎಫ್‌ಐನ ರೆವರೆಂಡ್ ವಿಜಯೇಶ್ ಲಾಲ್ ಹೇಳಿದ್ದಾರೆ. ಸಾಮಾನ್ಯವಾಗಿ, ಭಾರತದಲ್ಲಿ ಕ್ರಿಶ್ಚಿಯನ್ನರ ವಿರುದ್ಧದ ಒಟ್ಟು ಹಿಂಸಾಚಾರದ ಪ್ರಕರಣಗಳ ಸಂಖ್ಯೆ 100 ಮತ್ತು 200ರ ನಡುವೆ ಸುಳಿದಾಡುತ್ತದೆ ಎನ್ನುವ ಅವರು, “2021ರಲ್ಲಿ, ಈ ಅಂಕಿ ಅಂಶವು ಎರಡು ಪಟ್ಟು ಹೆಚ್ಚಾಗಿದೆ. ಯುಪಿ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗಳು ಇರುವುದರಿಂದ ಈ ವರ್ಷ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ” ಎಂದು ತಿಳಿಸಿದ್ದಾರೆ.

ಏರುತ್ತಿರುವ ಗ್ರಾಫ್

1951ರಲ್ಲಿ ಸ್ಥಾಪನೆಯಾದ ಇಎಫ್‌ಐ, ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರದ ಪ್ರಕರಣಗಳ ದಾಖಲೆಯನ್ನು 1998ನೇ ಇಸವಿಯಿಂದಲೂ ನಿರ್ವಹಿಸುತ್ತಿದೆ. ಗುಜರಾತ್‌ನ ಡ್ಯಾಂಗ್ಸ್‌ನಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಮಾರಣಾಂತಿಕವಾಗಿ 1998ನೇ ಇಸವಿಯಲ್ಲಿ ದಾಳಿ ಮಾಡಲಾಗಿತ್ತು. ಜನವರಿ 1999ರಲ್ಲಿ, ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಪುತ್ರರನ್ನು ಒಡಿಶಾದಲ್ಲಿ ಬಜರಂಗದಳದ ಸದಸ್ಯರು ಸುಟ್ಟು ಕೊಂದಿದ್ದರು.

ಇಎಫ್‌ಐನ ದಾಖಲೆಗಳು ಸಾಮಾನ್ಯವಾಗಿ ಯುಸಿಎಫ್‌‌ಗಿಂತ ಹೆಚ್ಚಿನ ಸಂಖ್ಯೆಯನ್ನು ತೋರಿಸುತ್ತವೆ. ಯುಸಿಎಫ್‌‌ 2015 ರಿಂದ ಈ ಡೇಟಾವನ್ನು ಸಂಗ್ರಹಿಸುತ್ತಿದೆ. ಇಎಫ್‌ಐ ಒಂದು ದೊಡ್ಡ ಸಂಸ್ಥೆಯಾಗಿರುವುದರಿಂದ ಹಿಂಸಾಚಾರದ ಹೆಚ್ಚಿನ ಪ್ರಕರಣಗಳನ್ನು ಪರಿಶೀಲಿಸಲು ಸಾಧ್ಯವಾಗಿದೆ ಎನ್ನುತ್ತಾರೆ ಯುಸಿಎಫ್‌ ಸಂಸ್ಥಾಪಕ ಎ.ಸಿ.ಮೈಕೆಲ್‌. ಯುಸಿಎಫ್‌‌ ಮತ್ತು ಇಎಫ್‌ಐನ ಎರಡೂ ದಾಖಲೆಗಳ ಗ್ರಾಫ್ ಮಾತ್ರ ಸ್ಥಿರವಾಗಿ ಏರುತ್ತಿದೆ.

“ಹೆಚ್ಚಿನ ದಾಖಲಾದ ಘಟನೆಗಳು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತವೆ. ಸಾಮಾನ್ಯವಾಗಿ ಪ್ರಾರ್ಥನಾ ಕೂಟಗಳ ಸಮಯದಲ್ಲಿ ಸಂಭವಿಸುತ್ತವೆ. 2021ರಲ್ಲಿ ದೃಢೀಕರಿಸಲ್ಪಟ್ಟ 505 ಹಿಂಸಾಚಾರದ ಪ್ರಕರಣಗಳ ಪೈಕಿ 420 ಪ್ರಕರಣಗಳು ಗ್ರಾಮೀಣ ಪ್ರದೇಶಗಳಲ್ಲಿ ದಾಖಲಾಗಿವೆ” ಎನ್ನುತ್ತಾರೆ ಮೈಕೆಲ್‌.

“ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಮಧ್ಯಪ್ರದೇಶದ ನಾಲ್ಕು ರಾಜ್ಯಗಳಲ್ಲಿ ಅತಿ ಹೆಚ್ಚು ದಾಳಿಗಳು ದಾಖಲಾಗಿವೆ” ಎನ್ನುತ್ತಾರೆ ಅವರು.

ಉತ್ತರ ಪ್ರದೇಶದಲ್ಲಿ 2018ರಿಂದ ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರ ಏರಿಕೆಯಾಗಿರುವುದನ್ನು ಇಎಫ್‌ಐ ಅಂಕಿಅಂಶಗಳು ತೆರೆದಿಟ್ಟಿವೆ. 2020 ಮತ್ತು 2021ರ ಅಂಕಿ-ಅಂಶಗಳನ್ನು ಇಎಫ್‌ಐ ಇನ್ನೂ ಬಿಡುಗಡೆ ಮಾಡಿಲ್ಲ.

ದಾಖಲೆ ಸೃಷ್ಟಿಸುತ್ತಿದೆ

ಲಾಲ್ ಅವರ ಪ್ರಕಾರ, ಇಎಫ್‌ಐ ದಾಖಲಿಸಿದ ಪ್ರಕರಣಗಳಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಥಮ ಮಾಹಿತಿ ವರದಿಯನ್ನು ಆಧರಿಸಿವೆ.

“ದಾಳಿಗೊಳಗಾದ ಕ್ರಿಶ್ಚಿಯನ್ನರು ಈ ನೆಲದಲ್ಲೇ ಬದುಕಬೇಕಾದ್ದರಿಂದ ಎಫ್‌ಐಆರ್‌ ದಾಖಲಿಸಲು ಭಯಬೀಳುತ್ತಾರೆ. ಎಫ್‌ಐಆರ್‌ ದಾಖಲಾಗದೆ ಇರುವುದಕ್ಕೆ ಪೊಲೀಸರ ಅಸಹಕಾರವು ಎರಡನೇ ಕಾರಣವಾಗಿದೆ. ಪೊಲೀಸರು ಎಲ್ಲವನ್ನೂ ಮುಚ್ಚಿಹಾಕಿ ಸಂತ್ರಸ್ತರಿಗೆ ರಾಜಿ ಮಾಡಿಕೊಳ್ಳಲು ಹೇಳುವುದರಲ್ಲಿ ಉತ್ಸುಕರಾಗಿದ್ದಾರೆ. ಬಲಿಪಶುವಾದ ಕ್ರಿಶ್ಚಿಯನ್ನರ ವಿರುದ್ಧ ಆರೋಪಗಳನ್ನು ಹೊರಿಸಿದ ನಂತರ ರಾಜೀ ಸಂಧಾನ ನಡೆಸುವುದನ್ನು ಕಾಣಬಹುದು” ಎನ್ನುತ್ತಾರೆ ಲಾಲ್‌.

ವರದಿ ಕೃಪೆ: ನ್ಯೂಸ್‌ಲಾಂಡ್ರಿ


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...