Homeಮುಖಪುಟಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

2021ರಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ನಡೆದಿರುವುದನ್ನು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ದಾಖಲಿಸಿದೆ. 102 ಪ್ರಕರಣಗಳು ಉತ್ತರ ಪ್ರದೇಶ ಒಂದರಲ್ಲೇ ವರದಿಯಾಗಿವೆ.

- Advertisement -
- Advertisement -

2011ರ ಜನಗಣತಿಯ ಪ್ರಕಾರ ಭಾರತದ ಎಲ್ಲಾ ರಾಜ್ಯಗಳ ಪೈಕಿ ಉತ್ತರ ಪ್ರದೇಶವು ಅತಿ ಕಡಿಮೆ ಪ್ರಮಾಣದಲ್ಲಿ ಕ್ರಿಶ್ಚಿಯನ್ನರನ್ನು ಹೊಂದಿರುವ ಎರಡನೇ ರಾಜ್ಯವಾಗಿದೆ. ಆದರೆ ಕ್ರಿಶ್ಚಿಯನ್ನರ ಮೇಲೆ ಅತಿಹೆಚ್ಚು ಹಲ್ಲೆಗಳಾಗುತ್ತಿರುವ ರಾಜ್ಯಗಳ ಪೈಕಿ ಉತ್ತರ ಪ್ರದೇಶ ಮುಂಚೂಣಿಯಲ್ಲಿದೆ.

65,000ಕ್ಕೂ ಹೆಚ್ಚು ಚರ್ಚ್‌ಗಳ ರಾಷ್ಟ್ರೀಯ ಒಕ್ಕೂಟವಾಗಿರುವ ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಉತ್ತರ ಪ್ರದೇಶದಲ್ಲಿ 2018 ಮತ್ತು 2019ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಅತಿ ಹೆಚ್ಚು ಹಿಂಸಾಚಾರದ ಪ್ರಕರಣಗಳು ದಾಖಲಾಗಿವೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

ಮಾನವ ಹಕ್ಕುಗಳ ಸಂಸ್ಥೆಯಾದ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (ಯುಸಿಎಫ್‌), ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರದ ಅಂಕಿಅಂಶಗಳನ್ನು ಸಂಗ್ರಹಿಸುತ್ತಿದೆ. 2021ರಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ನಡೆದಿರುವುದನ್ನು ಈ ಸಂಸ್ಥೆ ದಾಖಲಿಸಿದೆ. ಇವುಗಳಲ್ಲಿ 102 ಪ್ರಕರಣಗಳು ಉತ್ತರ ಪ್ರದೇಶ ಒಂದರಲ್ಲೇ ವರದಿಯಾಗಿವೆ.

“2021ರಲ್ಲಿ ಉತ್ತರ ಪ್ರದೇಶದಲ್ಲಿ ಗರಿಷ್ಠ ಸಂಖ್ಯೆಯ ಹಿಂಸಾಚಾರ ಪ್ರಕರಣಗಳು ದಾಖಲಾಗಿವೆ” ಎಂದು ಇಎಫ್‌ಐನ ರೆವರೆಂಡ್ ವಿಜಯೇಶ್ ಲಾಲ್ ಹೇಳಿದ್ದಾರೆ. ಸಾಮಾನ್ಯವಾಗಿ, ಭಾರತದಲ್ಲಿ ಕ್ರಿಶ್ಚಿಯನ್ನರ ವಿರುದ್ಧದ ಒಟ್ಟು ಹಿಂಸಾಚಾರದ ಪ್ರಕರಣಗಳ ಸಂಖ್ಯೆ 100 ಮತ್ತು 200ರ ನಡುವೆ ಸುಳಿದಾಡುತ್ತದೆ ಎನ್ನುವ ಅವರು, “2021ರಲ್ಲಿ, ಈ ಅಂಕಿ ಅಂಶವು ಎರಡು ಪಟ್ಟು ಹೆಚ್ಚಾಗಿದೆ. ಯುಪಿ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗಳು ಇರುವುದರಿಂದ ಈ ವರ್ಷ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ” ಎಂದು ತಿಳಿಸಿದ್ದಾರೆ.

ಏರುತ್ತಿರುವ ಗ್ರಾಫ್

1951ರಲ್ಲಿ ಸ್ಥಾಪನೆಯಾದ ಇಎಫ್‌ಐ, ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರದ ಪ್ರಕರಣಗಳ ದಾಖಲೆಯನ್ನು 1998ನೇ ಇಸವಿಯಿಂದಲೂ ನಿರ್ವಹಿಸುತ್ತಿದೆ. ಗುಜರಾತ್‌ನ ಡ್ಯಾಂಗ್ಸ್‌ನಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಮಾರಣಾಂತಿಕವಾಗಿ 1998ನೇ ಇಸವಿಯಲ್ಲಿ ದಾಳಿ ಮಾಡಲಾಗಿತ್ತು. ಜನವರಿ 1999ರಲ್ಲಿ, ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಪುತ್ರರನ್ನು ಒಡಿಶಾದಲ್ಲಿ ಬಜರಂಗದಳದ ಸದಸ್ಯರು ಸುಟ್ಟು ಕೊಂದಿದ್ದರು.

ಇಎಫ್‌ಐನ ದಾಖಲೆಗಳು ಸಾಮಾನ್ಯವಾಗಿ ಯುಸಿಎಫ್‌‌ಗಿಂತ ಹೆಚ್ಚಿನ ಸಂಖ್ಯೆಯನ್ನು ತೋರಿಸುತ್ತವೆ. ಯುಸಿಎಫ್‌‌ 2015 ರಿಂದ ಈ ಡೇಟಾವನ್ನು ಸಂಗ್ರಹಿಸುತ್ತಿದೆ. ಇಎಫ್‌ಐ ಒಂದು ದೊಡ್ಡ ಸಂಸ್ಥೆಯಾಗಿರುವುದರಿಂದ ಹಿಂಸಾಚಾರದ ಹೆಚ್ಚಿನ ಪ್ರಕರಣಗಳನ್ನು ಪರಿಶೀಲಿಸಲು ಸಾಧ್ಯವಾಗಿದೆ ಎನ್ನುತ್ತಾರೆ ಯುಸಿಎಫ್‌ ಸಂಸ್ಥಾಪಕ ಎ.ಸಿ.ಮೈಕೆಲ್‌. ಯುಸಿಎಫ್‌‌ ಮತ್ತು ಇಎಫ್‌ಐನ ಎರಡೂ ದಾಖಲೆಗಳ ಗ್ರಾಫ್ ಮಾತ್ರ ಸ್ಥಿರವಾಗಿ ಏರುತ್ತಿದೆ.

“ಹೆಚ್ಚಿನ ದಾಖಲಾದ ಘಟನೆಗಳು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತವೆ. ಸಾಮಾನ್ಯವಾಗಿ ಪ್ರಾರ್ಥನಾ ಕೂಟಗಳ ಸಮಯದಲ್ಲಿ ಸಂಭವಿಸುತ್ತವೆ. 2021ರಲ್ಲಿ ದೃಢೀಕರಿಸಲ್ಪಟ್ಟ 505 ಹಿಂಸಾಚಾರದ ಪ್ರಕರಣಗಳ ಪೈಕಿ 420 ಪ್ರಕರಣಗಳು ಗ್ರಾಮೀಣ ಪ್ರದೇಶಗಳಲ್ಲಿ ದಾಖಲಾಗಿವೆ” ಎನ್ನುತ್ತಾರೆ ಮೈಕೆಲ್‌.

“ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಮಧ್ಯಪ್ರದೇಶದ ನಾಲ್ಕು ರಾಜ್ಯಗಳಲ್ಲಿ ಅತಿ ಹೆಚ್ಚು ದಾಳಿಗಳು ದಾಖಲಾಗಿವೆ” ಎನ್ನುತ್ತಾರೆ ಅವರು.

ಉತ್ತರ ಪ್ರದೇಶದಲ್ಲಿ 2018ರಿಂದ ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರ ಏರಿಕೆಯಾಗಿರುವುದನ್ನು ಇಎಫ್‌ಐ ಅಂಕಿಅಂಶಗಳು ತೆರೆದಿಟ್ಟಿವೆ. 2020 ಮತ್ತು 2021ರ ಅಂಕಿ-ಅಂಶಗಳನ್ನು ಇಎಫ್‌ಐ ಇನ್ನೂ ಬಿಡುಗಡೆ ಮಾಡಿಲ್ಲ.

ದಾಖಲೆ ಸೃಷ್ಟಿಸುತ್ತಿದೆ

ಲಾಲ್ ಅವರ ಪ್ರಕಾರ, ಇಎಫ್‌ಐ ದಾಖಲಿಸಿದ ಪ್ರಕರಣಗಳಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಥಮ ಮಾಹಿತಿ ವರದಿಯನ್ನು ಆಧರಿಸಿವೆ.

“ದಾಳಿಗೊಳಗಾದ ಕ್ರಿಶ್ಚಿಯನ್ನರು ಈ ನೆಲದಲ್ಲೇ ಬದುಕಬೇಕಾದ್ದರಿಂದ ಎಫ್‌ಐಆರ್‌ ದಾಖಲಿಸಲು ಭಯಬೀಳುತ್ತಾರೆ. ಎಫ್‌ಐಆರ್‌ ದಾಖಲಾಗದೆ ಇರುವುದಕ್ಕೆ ಪೊಲೀಸರ ಅಸಹಕಾರವು ಎರಡನೇ ಕಾರಣವಾಗಿದೆ. ಪೊಲೀಸರು ಎಲ್ಲವನ್ನೂ ಮುಚ್ಚಿಹಾಕಿ ಸಂತ್ರಸ್ತರಿಗೆ ರಾಜಿ ಮಾಡಿಕೊಳ್ಳಲು ಹೇಳುವುದರಲ್ಲಿ ಉತ್ಸುಕರಾಗಿದ್ದಾರೆ. ಬಲಿಪಶುವಾದ ಕ್ರಿಶ್ಚಿಯನ್ನರ ವಿರುದ್ಧ ಆರೋಪಗಳನ್ನು ಹೊರಿಸಿದ ನಂತರ ರಾಜೀ ಸಂಧಾನ ನಡೆಸುವುದನ್ನು ಕಾಣಬಹುದು” ಎನ್ನುತ್ತಾರೆ ಲಾಲ್‌.

ವರದಿ ಕೃಪೆ: ನ್ಯೂಸ್‌ಲಾಂಡ್ರಿ


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...