Homeಮುಖಪುಟಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

2021ರಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ನಡೆದಿರುವುದನ್ನು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ದಾಖಲಿಸಿದೆ. 102 ಪ್ರಕರಣಗಳು ಉತ್ತರ ಪ್ರದೇಶ ಒಂದರಲ್ಲೇ ವರದಿಯಾಗಿವೆ.

- Advertisement -
- Advertisement -

2011ರ ಜನಗಣತಿಯ ಪ್ರಕಾರ ಭಾರತದ ಎಲ್ಲಾ ರಾಜ್ಯಗಳ ಪೈಕಿ ಉತ್ತರ ಪ್ರದೇಶವು ಅತಿ ಕಡಿಮೆ ಪ್ರಮಾಣದಲ್ಲಿ ಕ್ರಿಶ್ಚಿಯನ್ನರನ್ನು ಹೊಂದಿರುವ ಎರಡನೇ ರಾಜ್ಯವಾಗಿದೆ. ಆದರೆ ಕ್ರಿಶ್ಚಿಯನ್ನರ ಮೇಲೆ ಅತಿಹೆಚ್ಚು ಹಲ್ಲೆಗಳಾಗುತ್ತಿರುವ ರಾಜ್ಯಗಳ ಪೈಕಿ ಉತ್ತರ ಪ್ರದೇಶ ಮುಂಚೂಣಿಯಲ್ಲಿದೆ.

65,000ಕ್ಕೂ ಹೆಚ್ಚು ಚರ್ಚ್‌ಗಳ ರಾಷ್ಟ್ರೀಯ ಒಕ್ಕೂಟವಾಗಿರುವ ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಉತ್ತರ ಪ್ರದೇಶದಲ್ಲಿ 2018 ಮತ್ತು 2019ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಅತಿ ಹೆಚ್ಚು ಹಿಂಸಾಚಾರದ ಪ್ರಕರಣಗಳು ದಾಖಲಾಗಿವೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

ಮಾನವ ಹಕ್ಕುಗಳ ಸಂಸ್ಥೆಯಾದ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (ಯುಸಿಎಫ್‌), ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರದ ಅಂಕಿಅಂಶಗಳನ್ನು ಸಂಗ್ರಹಿಸುತ್ತಿದೆ. 2021ರಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ನಡೆದಿರುವುದನ್ನು ಈ ಸಂಸ್ಥೆ ದಾಖಲಿಸಿದೆ. ಇವುಗಳಲ್ಲಿ 102 ಪ್ರಕರಣಗಳು ಉತ್ತರ ಪ್ರದೇಶ ಒಂದರಲ್ಲೇ ವರದಿಯಾಗಿವೆ.

“2021ರಲ್ಲಿ ಉತ್ತರ ಪ್ರದೇಶದಲ್ಲಿ ಗರಿಷ್ಠ ಸಂಖ್ಯೆಯ ಹಿಂಸಾಚಾರ ಪ್ರಕರಣಗಳು ದಾಖಲಾಗಿವೆ” ಎಂದು ಇಎಫ್‌ಐನ ರೆವರೆಂಡ್ ವಿಜಯೇಶ್ ಲಾಲ್ ಹೇಳಿದ್ದಾರೆ. ಸಾಮಾನ್ಯವಾಗಿ, ಭಾರತದಲ್ಲಿ ಕ್ರಿಶ್ಚಿಯನ್ನರ ವಿರುದ್ಧದ ಒಟ್ಟು ಹಿಂಸಾಚಾರದ ಪ್ರಕರಣಗಳ ಸಂಖ್ಯೆ 100 ಮತ್ತು 200ರ ನಡುವೆ ಸುಳಿದಾಡುತ್ತದೆ ಎನ್ನುವ ಅವರು, “2021ರಲ್ಲಿ, ಈ ಅಂಕಿ ಅಂಶವು ಎರಡು ಪಟ್ಟು ಹೆಚ್ಚಾಗಿದೆ. ಯುಪಿ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗಳು ಇರುವುದರಿಂದ ಈ ವರ್ಷ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ” ಎಂದು ತಿಳಿಸಿದ್ದಾರೆ.

ಏರುತ್ತಿರುವ ಗ್ರಾಫ್

1951ರಲ್ಲಿ ಸ್ಥಾಪನೆಯಾದ ಇಎಫ್‌ಐ, ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರದ ಪ್ರಕರಣಗಳ ದಾಖಲೆಯನ್ನು 1998ನೇ ಇಸವಿಯಿಂದಲೂ ನಿರ್ವಹಿಸುತ್ತಿದೆ. ಗುಜರಾತ್‌ನ ಡ್ಯಾಂಗ್ಸ್‌ನಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಮಾರಣಾಂತಿಕವಾಗಿ 1998ನೇ ಇಸವಿಯಲ್ಲಿ ದಾಳಿ ಮಾಡಲಾಗಿತ್ತು. ಜನವರಿ 1999ರಲ್ಲಿ, ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಪುತ್ರರನ್ನು ಒಡಿಶಾದಲ್ಲಿ ಬಜರಂಗದಳದ ಸದಸ್ಯರು ಸುಟ್ಟು ಕೊಂದಿದ್ದರು.

ಇಎಫ್‌ಐನ ದಾಖಲೆಗಳು ಸಾಮಾನ್ಯವಾಗಿ ಯುಸಿಎಫ್‌‌ಗಿಂತ ಹೆಚ್ಚಿನ ಸಂಖ್ಯೆಯನ್ನು ತೋರಿಸುತ್ತವೆ. ಯುಸಿಎಫ್‌‌ 2015 ರಿಂದ ಈ ಡೇಟಾವನ್ನು ಸಂಗ್ರಹಿಸುತ್ತಿದೆ. ಇಎಫ್‌ಐ ಒಂದು ದೊಡ್ಡ ಸಂಸ್ಥೆಯಾಗಿರುವುದರಿಂದ ಹಿಂಸಾಚಾರದ ಹೆಚ್ಚಿನ ಪ್ರಕರಣಗಳನ್ನು ಪರಿಶೀಲಿಸಲು ಸಾಧ್ಯವಾಗಿದೆ ಎನ್ನುತ್ತಾರೆ ಯುಸಿಎಫ್‌ ಸಂಸ್ಥಾಪಕ ಎ.ಸಿ.ಮೈಕೆಲ್‌. ಯುಸಿಎಫ್‌‌ ಮತ್ತು ಇಎಫ್‌ಐನ ಎರಡೂ ದಾಖಲೆಗಳ ಗ್ರಾಫ್ ಮಾತ್ರ ಸ್ಥಿರವಾಗಿ ಏರುತ್ತಿದೆ.

“ಹೆಚ್ಚಿನ ದಾಖಲಾದ ಘಟನೆಗಳು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತವೆ. ಸಾಮಾನ್ಯವಾಗಿ ಪ್ರಾರ್ಥನಾ ಕೂಟಗಳ ಸಮಯದಲ್ಲಿ ಸಂಭವಿಸುತ್ತವೆ. 2021ರಲ್ಲಿ ದೃಢೀಕರಿಸಲ್ಪಟ್ಟ 505 ಹಿಂಸಾಚಾರದ ಪ್ರಕರಣಗಳ ಪೈಕಿ 420 ಪ್ರಕರಣಗಳು ಗ್ರಾಮೀಣ ಪ್ರದೇಶಗಳಲ್ಲಿ ದಾಖಲಾಗಿವೆ” ಎನ್ನುತ್ತಾರೆ ಮೈಕೆಲ್‌.

“ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಮಧ್ಯಪ್ರದೇಶದ ನಾಲ್ಕು ರಾಜ್ಯಗಳಲ್ಲಿ ಅತಿ ಹೆಚ್ಚು ದಾಳಿಗಳು ದಾಖಲಾಗಿವೆ” ಎನ್ನುತ್ತಾರೆ ಅವರು.

ಉತ್ತರ ಪ್ರದೇಶದಲ್ಲಿ 2018ರಿಂದ ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರ ಏರಿಕೆಯಾಗಿರುವುದನ್ನು ಇಎಫ್‌ಐ ಅಂಕಿಅಂಶಗಳು ತೆರೆದಿಟ್ಟಿವೆ. 2020 ಮತ್ತು 2021ರ ಅಂಕಿ-ಅಂಶಗಳನ್ನು ಇಎಫ್‌ಐ ಇನ್ನೂ ಬಿಡುಗಡೆ ಮಾಡಿಲ್ಲ.

ದಾಖಲೆ ಸೃಷ್ಟಿಸುತ್ತಿದೆ

ಲಾಲ್ ಅವರ ಪ್ರಕಾರ, ಇಎಫ್‌ಐ ದಾಖಲಿಸಿದ ಪ್ರಕರಣಗಳಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಥಮ ಮಾಹಿತಿ ವರದಿಯನ್ನು ಆಧರಿಸಿವೆ.

“ದಾಳಿಗೊಳಗಾದ ಕ್ರಿಶ್ಚಿಯನ್ನರು ಈ ನೆಲದಲ್ಲೇ ಬದುಕಬೇಕಾದ್ದರಿಂದ ಎಫ್‌ಐಆರ್‌ ದಾಖಲಿಸಲು ಭಯಬೀಳುತ್ತಾರೆ. ಎಫ್‌ಐಆರ್‌ ದಾಖಲಾಗದೆ ಇರುವುದಕ್ಕೆ ಪೊಲೀಸರ ಅಸಹಕಾರವು ಎರಡನೇ ಕಾರಣವಾಗಿದೆ. ಪೊಲೀಸರು ಎಲ್ಲವನ್ನೂ ಮುಚ್ಚಿಹಾಕಿ ಸಂತ್ರಸ್ತರಿಗೆ ರಾಜಿ ಮಾಡಿಕೊಳ್ಳಲು ಹೇಳುವುದರಲ್ಲಿ ಉತ್ಸುಕರಾಗಿದ್ದಾರೆ. ಬಲಿಪಶುವಾದ ಕ್ರಿಶ್ಚಿಯನ್ನರ ವಿರುದ್ಧ ಆರೋಪಗಳನ್ನು ಹೊರಿಸಿದ ನಂತರ ರಾಜೀ ಸಂಧಾನ ನಡೆಸುವುದನ್ನು ಕಾಣಬಹುದು” ಎನ್ನುತ್ತಾರೆ ಲಾಲ್‌.

ವರದಿ ಕೃಪೆ: ನ್ಯೂಸ್‌ಲಾಂಡ್ರಿ


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....