Homeಮುಖಪುಟಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

2021ರಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ನಡೆದಿರುವುದನ್ನು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ದಾಖಲಿಸಿದೆ. 102 ಪ್ರಕರಣಗಳು ಉತ್ತರ ಪ್ರದೇಶ ಒಂದರಲ್ಲೇ ವರದಿಯಾಗಿವೆ.

- Advertisement -
- Advertisement -

2011ರ ಜನಗಣತಿಯ ಪ್ರಕಾರ ಭಾರತದ ಎಲ್ಲಾ ರಾಜ್ಯಗಳ ಪೈಕಿ ಉತ್ತರ ಪ್ರದೇಶವು ಅತಿ ಕಡಿಮೆ ಪ್ರಮಾಣದಲ್ಲಿ ಕ್ರಿಶ್ಚಿಯನ್ನರನ್ನು ಹೊಂದಿರುವ ಎರಡನೇ ರಾಜ್ಯವಾಗಿದೆ. ಆದರೆ ಕ್ರಿಶ್ಚಿಯನ್ನರ ಮೇಲೆ ಅತಿಹೆಚ್ಚು ಹಲ್ಲೆಗಳಾಗುತ್ತಿರುವ ರಾಜ್ಯಗಳ ಪೈಕಿ ಉತ್ತರ ಪ್ರದೇಶ ಮುಂಚೂಣಿಯಲ್ಲಿದೆ.

65,000ಕ್ಕೂ ಹೆಚ್ಚು ಚರ್ಚ್‌ಗಳ ರಾಷ್ಟ್ರೀಯ ಒಕ್ಕೂಟವಾಗಿರುವ ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಉತ್ತರ ಪ್ರದೇಶದಲ್ಲಿ 2018 ಮತ್ತು 2019ರಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಅತಿ ಹೆಚ್ಚು ಹಿಂಸಾಚಾರದ ಪ್ರಕರಣಗಳು ದಾಖಲಾಗಿವೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

ಮಾನವ ಹಕ್ಕುಗಳ ಸಂಸ್ಥೆಯಾದ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (ಯುಸಿಎಫ್‌), ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರದ ಅಂಕಿಅಂಶಗಳನ್ನು ಸಂಗ್ರಹಿಸುತ್ತಿದೆ. 2021ರಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ನಡೆದಿರುವುದನ್ನು ಈ ಸಂಸ್ಥೆ ದಾಖಲಿಸಿದೆ. ಇವುಗಳಲ್ಲಿ 102 ಪ್ರಕರಣಗಳು ಉತ್ತರ ಪ್ರದೇಶ ಒಂದರಲ್ಲೇ ವರದಿಯಾಗಿವೆ.

“2021ರಲ್ಲಿ ಉತ್ತರ ಪ್ರದೇಶದಲ್ಲಿ ಗರಿಷ್ಠ ಸಂಖ್ಯೆಯ ಹಿಂಸಾಚಾರ ಪ್ರಕರಣಗಳು ದಾಖಲಾಗಿವೆ” ಎಂದು ಇಎಫ್‌ಐನ ರೆವರೆಂಡ್ ವಿಜಯೇಶ್ ಲಾಲ್ ಹೇಳಿದ್ದಾರೆ. ಸಾಮಾನ್ಯವಾಗಿ, ಭಾರತದಲ್ಲಿ ಕ್ರಿಶ್ಚಿಯನ್ನರ ವಿರುದ್ಧದ ಒಟ್ಟು ಹಿಂಸಾಚಾರದ ಪ್ರಕರಣಗಳ ಸಂಖ್ಯೆ 100 ಮತ್ತು 200ರ ನಡುವೆ ಸುಳಿದಾಡುತ್ತದೆ ಎನ್ನುವ ಅವರು, “2021ರಲ್ಲಿ, ಈ ಅಂಕಿ ಅಂಶವು ಎರಡು ಪಟ್ಟು ಹೆಚ್ಚಾಗಿದೆ. ಯುಪಿ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗಳು ಇರುವುದರಿಂದ ಈ ವರ್ಷ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ” ಎಂದು ತಿಳಿಸಿದ್ದಾರೆ.

ಏರುತ್ತಿರುವ ಗ್ರಾಫ್

1951ರಲ್ಲಿ ಸ್ಥಾಪನೆಯಾದ ಇಎಫ್‌ಐ, ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರದ ಪ್ರಕರಣಗಳ ದಾಖಲೆಯನ್ನು 1998ನೇ ಇಸವಿಯಿಂದಲೂ ನಿರ್ವಹಿಸುತ್ತಿದೆ. ಗುಜರಾತ್‌ನ ಡ್ಯಾಂಗ್ಸ್‌ನಲ್ಲಿ ಕ್ರಿಶ್ಚಿಯನ್ನರ ವಿರುದ್ಧ ಮಾರಣಾಂತಿಕವಾಗಿ 1998ನೇ ಇಸವಿಯಲ್ಲಿ ದಾಳಿ ಮಾಡಲಾಗಿತ್ತು. ಜನವರಿ 1999ರಲ್ಲಿ, ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಪುತ್ರರನ್ನು ಒಡಿಶಾದಲ್ಲಿ ಬಜರಂಗದಳದ ಸದಸ್ಯರು ಸುಟ್ಟು ಕೊಂದಿದ್ದರು.

ಇಎಫ್‌ಐನ ದಾಖಲೆಗಳು ಸಾಮಾನ್ಯವಾಗಿ ಯುಸಿಎಫ್‌‌ಗಿಂತ ಹೆಚ್ಚಿನ ಸಂಖ್ಯೆಯನ್ನು ತೋರಿಸುತ್ತವೆ. ಯುಸಿಎಫ್‌‌ 2015 ರಿಂದ ಈ ಡೇಟಾವನ್ನು ಸಂಗ್ರಹಿಸುತ್ತಿದೆ. ಇಎಫ್‌ಐ ಒಂದು ದೊಡ್ಡ ಸಂಸ್ಥೆಯಾಗಿರುವುದರಿಂದ ಹಿಂಸಾಚಾರದ ಹೆಚ್ಚಿನ ಪ್ರಕರಣಗಳನ್ನು ಪರಿಶೀಲಿಸಲು ಸಾಧ್ಯವಾಗಿದೆ ಎನ್ನುತ್ತಾರೆ ಯುಸಿಎಫ್‌ ಸಂಸ್ಥಾಪಕ ಎ.ಸಿ.ಮೈಕೆಲ್‌. ಯುಸಿಎಫ್‌‌ ಮತ್ತು ಇಎಫ್‌ಐನ ಎರಡೂ ದಾಖಲೆಗಳ ಗ್ರಾಫ್ ಮಾತ್ರ ಸ್ಥಿರವಾಗಿ ಏರುತ್ತಿದೆ.

“ಹೆಚ್ಚಿನ ದಾಖಲಾದ ಘಟನೆಗಳು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತವೆ. ಸಾಮಾನ್ಯವಾಗಿ ಪ್ರಾರ್ಥನಾ ಕೂಟಗಳ ಸಮಯದಲ್ಲಿ ಸಂಭವಿಸುತ್ತವೆ. 2021ರಲ್ಲಿ ದೃಢೀಕರಿಸಲ್ಪಟ್ಟ 505 ಹಿಂಸಾಚಾರದ ಪ್ರಕರಣಗಳ ಪೈಕಿ 420 ಪ್ರಕರಣಗಳು ಗ್ರಾಮೀಣ ಪ್ರದೇಶಗಳಲ್ಲಿ ದಾಖಲಾಗಿವೆ” ಎನ್ನುತ್ತಾರೆ ಮೈಕೆಲ್‌.

“ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಮಧ್ಯಪ್ರದೇಶದ ನಾಲ್ಕು ರಾಜ್ಯಗಳಲ್ಲಿ ಅತಿ ಹೆಚ್ಚು ದಾಳಿಗಳು ದಾಖಲಾಗಿವೆ” ಎನ್ನುತ್ತಾರೆ ಅವರು.

ಉತ್ತರ ಪ್ರದೇಶದಲ್ಲಿ 2018ರಿಂದ ಕ್ರಿಶ್ಚಿಯನ್ನರ ವಿರುದ್ಧದ ಹಿಂಸಾಚಾರ ಏರಿಕೆಯಾಗಿರುವುದನ್ನು ಇಎಫ್‌ಐ ಅಂಕಿಅಂಶಗಳು ತೆರೆದಿಟ್ಟಿವೆ. 2020 ಮತ್ತು 2021ರ ಅಂಕಿ-ಅಂಶಗಳನ್ನು ಇಎಫ್‌ಐ ಇನ್ನೂ ಬಿಡುಗಡೆ ಮಾಡಿಲ್ಲ.

ದಾಖಲೆ ಸೃಷ್ಟಿಸುತ್ತಿದೆ

ಲಾಲ್ ಅವರ ಪ್ರಕಾರ, ಇಎಫ್‌ಐ ದಾಖಲಿಸಿದ ಪ್ರಕರಣಗಳಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಥಮ ಮಾಹಿತಿ ವರದಿಯನ್ನು ಆಧರಿಸಿವೆ.

“ದಾಳಿಗೊಳಗಾದ ಕ್ರಿಶ್ಚಿಯನ್ನರು ಈ ನೆಲದಲ್ಲೇ ಬದುಕಬೇಕಾದ್ದರಿಂದ ಎಫ್‌ಐಆರ್‌ ದಾಖಲಿಸಲು ಭಯಬೀಳುತ್ತಾರೆ. ಎಫ್‌ಐಆರ್‌ ದಾಖಲಾಗದೆ ಇರುವುದಕ್ಕೆ ಪೊಲೀಸರ ಅಸಹಕಾರವು ಎರಡನೇ ಕಾರಣವಾಗಿದೆ. ಪೊಲೀಸರು ಎಲ್ಲವನ್ನೂ ಮುಚ್ಚಿಹಾಕಿ ಸಂತ್ರಸ್ತರಿಗೆ ರಾಜಿ ಮಾಡಿಕೊಳ್ಳಲು ಹೇಳುವುದರಲ್ಲಿ ಉತ್ಸುಕರಾಗಿದ್ದಾರೆ. ಬಲಿಪಶುವಾದ ಕ್ರಿಶ್ಚಿಯನ್ನರ ವಿರುದ್ಧ ಆರೋಪಗಳನ್ನು ಹೊರಿಸಿದ ನಂತರ ರಾಜೀ ಸಂಧಾನ ನಡೆಸುವುದನ್ನು ಕಾಣಬಹುದು” ಎನ್ನುತ್ತಾರೆ ಲಾಲ್‌.

ವರದಿ ಕೃಪೆ: ನ್ಯೂಸ್‌ಲಾಂಡ್ರಿ


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...