Homeಮುಖಪುಟಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

ಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

- Advertisement -
- Advertisement -

ಕೇರಳದ ಎಸ್‌ಸಿ,ಎಸ್‌ಟಿ ಕಲ್ಯಾಣ ಸಚಿವ ಕೆ. ರಾಧಾಕೃಷ್ಣನ್ ಅವರು ಕಣ್ಣೂರಿನ ದೇವಸ್ಥಾನದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದ್ದಾರೆ ಎಂದು ಹೇಳಿದ್ದು, ಅರ್ಚಕರು ಅವರಿಗೆ ದೀಪವನ್ನು ನೀಡಲು ಹಿಂಜರಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಅಖಿಲ ಕೇರಳ ತಂತ್ರಿ ಸಮಾಜಮ್ ಪ್ರತಿಕ್ರಿಯಿಸಿದ್ದು, ಈ ಘಟನೆಯು ಸಚಿವರ ತಪ್ಪು ತಿಳುವಳಿಕೆಯ ಭಾಗವಾಗಿದೆ ಮತ್ತು ದೇವಾಲಯಗಳಲ್ಲಿ ಯಾರಿಗೂ ತಾರತಮ್ಯ ಮಾಡಲಾಗಿಲ್ಲ ಎಂದು ಹೇಳಿದೆ.

ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯರಾದ ರಾಧಾಕೃಷ್ಣನ್ ಅವರು ಪಕ್ಷದ ಯುವ ಘಟಕವಾದ ಡಿವೈಎಫ್‌ಐನಿಂದ ರಾಜಕೀಯಕ್ಕೆ ಬಂದವರು. ಇವರು ಐದು ಬಾರಿ ಶಾಸಕರಾಗಿ  ಆಯ್ಕೆಯಾಗಿದ್ದು, ಪ್ರಸ್ತುತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೇರಳದಲ್ಲಿ ಪ್ರಮುಖ ದಲಿತ ನಾಯಕರಾಗಿರುವ ರಾಧಾಕೃಷ್ಣನ್, ಘಟನೆಯ ಬಗ್ಗೆ  ಮಾತನಾಡುತ್ತಾ, ದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯದಿಂದ ನಾನು ಹೇಳಿಕೆ ಕೊಟ್ಟಿದ್ದೇನೆ. ನಾನು ಹಲವು ರಾಜ್ಯಗಳಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕೇಳಿಕೊಂಡಿದ್ದು ನನಗೆ ನೋವು ತಂದಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೂಲಿ ಕೇಳಿದ್ದಕ್ಕೆ ದಲಿತನೊಬ್ಬನನ್ನು ಹೊಡೆದು ಕೊಲೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡರೊಬ್ಬರು ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಎಲ್ಲಾ ಘಟನೆಗಳು ದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರ ಬೆಳೆಯುತ್ತಿರುವುದನ್ನು ಸೂಚಿಸುತ್ತದೆ. ಈ ಘಟನೆಗಳು ಜಾತಿ ವ್ಯವಸ್ಥೆಯನ್ನು ಮರುಸ್ಥಾಪಿಸುವ ಸಂಘಪರಿವಾರದ ಅಜೆಂಡಾದ ಭಾಗವಾಗಿ ನಾನು ನೋಡುತ್ತೇನೆ ಎಂದು ರಾಧಾಕೃಷ್ಣನ್ ಅವರು ಹೇಳಿದ್ದಾರೆ.

ಇದು ಕೇರಳದಲ್ಲಿ ಅಥವಾ ಇಲ್ಲಿನ ದೇವಸ್ಥಾನಗಳಲ್ಲಿ ಮಾತ್ರ ನಡೆದ ಪ್ರತ್ಯೇಕ ಪ್ರಕರಣವೆಂದು ನಾನು ಭಾವಿಸುವುದಿಲ್ಲ. ಇಂತಹ ಘಟನೆಗಳು ಹಲವು ಕಡೆಗಳಲ್ಲಿ ನಡೆಯುತ್ತಿದೆ. ಕೇರಳದಲ್ಲಿ ಜಾತಿ ವ್ಯವಸ್ಥೆಯ ಅವಶೇಷಗಳು ಇನ್ನೂ ಕೆಲವು ಜನರ ಮನಸ್ಸಿನಲ್ಲಿ ಉಳಿದಿವೆ ಎಂದು ಸಚಿವರು ಹೇಳಿದ್ದಾರೆ.

ಕೇರಳವು ಜಾತಿ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಸಮಾನತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಹಲವಾರು ಚಳುವಳಿಗಳನ್ನು ಮಾಡಿದೆ. ನಾವು ಕೇರಳದಲ್ಲಿ ಹಲವಾರು ನವೋದಯ ಚಳುವಳಿಗಳನ್ನು ಮಾಡಿದ್ದೇವೆ. ದಲಿತರು ಅದರಿಂದ ಪ್ರಯೋಜನ ಪಡೆದಿದ್ದಾರೆ. ನಮ್ಮ ರಾಜ್ಯವು ಪ್ರಗತಿಪರ ಧೋರಣೆಯನ್ನು ಹೊಂದಿದೆ. ಆದರೆ ಸಮಕಾಲೀನ ಭಾರತೀಯ ಪರಿಸ್ಥಿತಿಗಳು ಇಂತಹ ಪ್ರತಿಗಾಮಿ ವರ್ತನೆಗಳಿಗೆ ಪ್ರಚೋದನೆಯನ್ನು ನೀಡುತ್ತವೆ ಎಂದು ರಾಧಾಕೃಷ್ಣನ್‌ ಅವರು ಹೇಳಿದ್ದಾರೆ.

ಈ ವಿಚಾರದಲ್ಲಿ ನಾನು ಸಮಾಜದ ಯಾವುದೇ ನಿರ್ದಿಷ್ಟ ವಿಭಾಗವನ್ನು ದೂಷಿಸಲು ಬಯಸುವುದಿಲ್ಲ. ಈ ತಾರತಮ್ಯಕ್ಕೆ ದೇವಸ್ಥಾನದ ಅರ್ಚಕರು ಮಾತ್ರ ಕಾರಣ ಎಂದು ನಾನು ಭಾವಿಸುವುದಿಲ್ಲ. ಜಾತಿ ವ್ಯವಸ್ಥೆಯ ವಿರುದ್ಧ ಸಂಘಟಿತ ಹೋರಾಟ ಇಂದಿನ ಅಗತ್ಯವಾಗಿದೆ. ನಮ್ಮ ಗುರಿ ಜಾತಿರಹಿತ ಸಮಾಜ, ಆದರೆ ಅದನ್ನು ರಾತ್ರೋರಾತ್ರಿ ಸಾಧಿಸಲು ಸಾಧ್ಯವಿಲ್ಲ. ಬದಲಾಗಿ ಆ ದೇವಸ್ಥಾನದಲ್ಲಿ ನಡೆದಂತಹ ಹೇಯ ಕೃತ್ಯಗಳ ವಿರುದ್ಧ ಸಾಮೂಹಿಕ ಚಳವಳಿಯ ಅಗತ್ಯವಿದೆ ಎಂದು ರಾಧಾಕೃಷ್ಣನ್‌ ಹೇಳಿದ್ದಾರೆ.

ಇದನ್ನು ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...