Homeಮುಖಪುಟಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

ಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

- Advertisement -
- Advertisement -

ಕೇರಳದ ಎಸ್‌ಸಿ,ಎಸ್‌ಟಿ ಕಲ್ಯಾಣ ಸಚಿವ ಕೆ. ರಾಧಾಕೃಷ್ಣನ್ ಅವರು ಕಣ್ಣೂರಿನ ದೇವಸ್ಥಾನದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದ್ದಾರೆ ಎಂದು ಹೇಳಿದ್ದು, ಅರ್ಚಕರು ಅವರಿಗೆ ದೀಪವನ್ನು ನೀಡಲು ಹಿಂಜರಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಅಖಿಲ ಕೇರಳ ತಂತ್ರಿ ಸಮಾಜಮ್ ಪ್ರತಿಕ್ರಿಯಿಸಿದ್ದು, ಈ ಘಟನೆಯು ಸಚಿವರ ತಪ್ಪು ತಿಳುವಳಿಕೆಯ ಭಾಗವಾಗಿದೆ ಮತ್ತು ದೇವಾಲಯಗಳಲ್ಲಿ ಯಾರಿಗೂ ತಾರತಮ್ಯ ಮಾಡಲಾಗಿಲ್ಲ ಎಂದು ಹೇಳಿದೆ.

ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯರಾದ ರಾಧಾಕೃಷ್ಣನ್ ಅವರು ಪಕ್ಷದ ಯುವ ಘಟಕವಾದ ಡಿವೈಎಫ್‌ಐನಿಂದ ರಾಜಕೀಯಕ್ಕೆ ಬಂದವರು. ಇವರು ಐದು ಬಾರಿ ಶಾಸಕರಾಗಿ  ಆಯ್ಕೆಯಾಗಿದ್ದು, ಪ್ರಸ್ತುತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೇರಳದಲ್ಲಿ ಪ್ರಮುಖ ದಲಿತ ನಾಯಕರಾಗಿರುವ ರಾಧಾಕೃಷ್ಣನ್, ಘಟನೆಯ ಬಗ್ಗೆ  ಮಾತನಾಡುತ್ತಾ, ದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯದಿಂದ ನಾನು ಹೇಳಿಕೆ ಕೊಟ್ಟಿದ್ದೇನೆ. ನಾನು ಹಲವು ರಾಜ್ಯಗಳಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕೇಳಿಕೊಂಡಿದ್ದು ನನಗೆ ನೋವು ತಂದಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೂಲಿ ಕೇಳಿದ್ದಕ್ಕೆ ದಲಿತನೊಬ್ಬನನ್ನು ಹೊಡೆದು ಕೊಲೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡರೊಬ್ಬರು ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಎಲ್ಲಾ ಘಟನೆಗಳು ದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರ ಬೆಳೆಯುತ್ತಿರುವುದನ್ನು ಸೂಚಿಸುತ್ತದೆ. ಈ ಘಟನೆಗಳು ಜಾತಿ ವ್ಯವಸ್ಥೆಯನ್ನು ಮರುಸ್ಥಾಪಿಸುವ ಸಂಘಪರಿವಾರದ ಅಜೆಂಡಾದ ಭಾಗವಾಗಿ ನಾನು ನೋಡುತ್ತೇನೆ ಎಂದು ರಾಧಾಕೃಷ್ಣನ್ ಅವರು ಹೇಳಿದ್ದಾರೆ.

ಇದು ಕೇರಳದಲ್ಲಿ ಅಥವಾ ಇಲ್ಲಿನ ದೇವಸ್ಥಾನಗಳಲ್ಲಿ ಮಾತ್ರ ನಡೆದ ಪ್ರತ್ಯೇಕ ಪ್ರಕರಣವೆಂದು ನಾನು ಭಾವಿಸುವುದಿಲ್ಲ. ಇಂತಹ ಘಟನೆಗಳು ಹಲವು ಕಡೆಗಳಲ್ಲಿ ನಡೆಯುತ್ತಿದೆ. ಕೇರಳದಲ್ಲಿ ಜಾತಿ ವ್ಯವಸ್ಥೆಯ ಅವಶೇಷಗಳು ಇನ್ನೂ ಕೆಲವು ಜನರ ಮನಸ್ಸಿನಲ್ಲಿ ಉಳಿದಿವೆ ಎಂದು ಸಚಿವರು ಹೇಳಿದ್ದಾರೆ.

ಕೇರಳವು ಜಾತಿ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಸಮಾನತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಹಲವಾರು ಚಳುವಳಿಗಳನ್ನು ಮಾಡಿದೆ. ನಾವು ಕೇರಳದಲ್ಲಿ ಹಲವಾರು ನವೋದಯ ಚಳುವಳಿಗಳನ್ನು ಮಾಡಿದ್ದೇವೆ. ದಲಿತರು ಅದರಿಂದ ಪ್ರಯೋಜನ ಪಡೆದಿದ್ದಾರೆ. ನಮ್ಮ ರಾಜ್ಯವು ಪ್ರಗತಿಪರ ಧೋರಣೆಯನ್ನು ಹೊಂದಿದೆ. ಆದರೆ ಸಮಕಾಲೀನ ಭಾರತೀಯ ಪರಿಸ್ಥಿತಿಗಳು ಇಂತಹ ಪ್ರತಿಗಾಮಿ ವರ್ತನೆಗಳಿಗೆ ಪ್ರಚೋದನೆಯನ್ನು ನೀಡುತ್ತವೆ ಎಂದು ರಾಧಾಕೃಷ್ಣನ್‌ ಅವರು ಹೇಳಿದ್ದಾರೆ.

ಈ ವಿಚಾರದಲ್ಲಿ ನಾನು ಸಮಾಜದ ಯಾವುದೇ ನಿರ್ದಿಷ್ಟ ವಿಭಾಗವನ್ನು ದೂಷಿಸಲು ಬಯಸುವುದಿಲ್ಲ. ಈ ತಾರತಮ್ಯಕ್ಕೆ ದೇವಸ್ಥಾನದ ಅರ್ಚಕರು ಮಾತ್ರ ಕಾರಣ ಎಂದು ನಾನು ಭಾವಿಸುವುದಿಲ್ಲ. ಜಾತಿ ವ್ಯವಸ್ಥೆಯ ವಿರುದ್ಧ ಸಂಘಟಿತ ಹೋರಾಟ ಇಂದಿನ ಅಗತ್ಯವಾಗಿದೆ. ನಮ್ಮ ಗುರಿ ಜಾತಿರಹಿತ ಸಮಾಜ, ಆದರೆ ಅದನ್ನು ರಾತ್ರೋರಾತ್ರಿ ಸಾಧಿಸಲು ಸಾಧ್ಯವಿಲ್ಲ. ಬದಲಾಗಿ ಆ ದೇವಸ್ಥಾನದಲ್ಲಿ ನಡೆದಂತಹ ಹೇಯ ಕೃತ್ಯಗಳ ವಿರುದ್ಧ ಸಾಮೂಹಿಕ ಚಳವಳಿಯ ಅಗತ್ಯವಿದೆ ಎಂದು ರಾಧಾಕೃಷ್ಣನ್‌ ಹೇಳಿದ್ದಾರೆ.

ಇದನ್ನು ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...