Homeಮುಖಪುಟಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

ಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

- Advertisement -
- Advertisement -

ಕೇರಳದ ಎಸ್‌ಸಿ,ಎಸ್‌ಟಿ ಕಲ್ಯಾಣ ಸಚಿವ ಕೆ. ರಾಧಾಕೃಷ್ಣನ್ ಅವರು ಕಣ್ಣೂರಿನ ದೇವಸ್ಥಾನದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದ್ದಾರೆ ಎಂದು ಹೇಳಿದ್ದು, ಅರ್ಚಕರು ಅವರಿಗೆ ದೀಪವನ್ನು ನೀಡಲು ಹಿಂಜರಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಅಖಿಲ ಕೇರಳ ತಂತ್ರಿ ಸಮಾಜಮ್ ಪ್ರತಿಕ್ರಿಯಿಸಿದ್ದು, ಈ ಘಟನೆಯು ಸಚಿವರ ತಪ್ಪು ತಿಳುವಳಿಕೆಯ ಭಾಗವಾಗಿದೆ ಮತ್ತು ದೇವಾಲಯಗಳಲ್ಲಿ ಯಾರಿಗೂ ತಾರತಮ್ಯ ಮಾಡಲಾಗಿಲ್ಲ ಎಂದು ಹೇಳಿದೆ.

ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯರಾದ ರಾಧಾಕೃಷ್ಣನ್ ಅವರು ಪಕ್ಷದ ಯುವ ಘಟಕವಾದ ಡಿವೈಎಫ್‌ಐನಿಂದ ರಾಜಕೀಯಕ್ಕೆ ಬಂದವರು. ಇವರು ಐದು ಬಾರಿ ಶಾಸಕರಾಗಿ  ಆಯ್ಕೆಯಾಗಿದ್ದು, ಪ್ರಸ್ತುತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೇರಳದಲ್ಲಿ ಪ್ರಮುಖ ದಲಿತ ನಾಯಕರಾಗಿರುವ ರಾಧಾಕೃಷ್ಣನ್, ಘಟನೆಯ ಬಗ್ಗೆ  ಮಾತನಾಡುತ್ತಾ, ದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯದಿಂದ ನಾನು ಹೇಳಿಕೆ ಕೊಟ್ಟಿದ್ದೇನೆ. ನಾನು ಹಲವು ರಾಜ್ಯಗಳಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕೇಳಿಕೊಂಡಿದ್ದು ನನಗೆ ನೋವು ತಂದಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೂಲಿ ಕೇಳಿದ್ದಕ್ಕೆ ದಲಿತನೊಬ್ಬನನ್ನು ಹೊಡೆದು ಕೊಲೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡರೊಬ್ಬರು ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಎಲ್ಲಾ ಘಟನೆಗಳು ದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರ ಬೆಳೆಯುತ್ತಿರುವುದನ್ನು ಸೂಚಿಸುತ್ತದೆ. ಈ ಘಟನೆಗಳು ಜಾತಿ ವ್ಯವಸ್ಥೆಯನ್ನು ಮರುಸ್ಥಾಪಿಸುವ ಸಂಘಪರಿವಾರದ ಅಜೆಂಡಾದ ಭಾಗವಾಗಿ ನಾನು ನೋಡುತ್ತೇನೆ ಎಂದು ರಾಧಾಕೃಷ್ಣನ್ ಅವರು ಹೇಳಿದ್ದಾರೆ.

ಇದು ಕೇರಳದಲ್ಲಿ ಅಥವಾ ಇಲ್ಲಿನ ದೇವಸ್ಥಾನಗಳಲ್ಲಿ ಮಾತ್ರ ನಡೆದ ಪ್ರತ್ಯೇಕ ಪ್ರಕರಣವೆಂದು ನಾನು ಭಾವಿಸುವುದಿಲ್ಲ. ಇಂತಹ ಘಟನೆಗಳು ಹಲವು ಕಡೆಗಳಲ್ಲಿ ನಡೆಯುತ್ತಿದೆ. ಕೇರಳದಲ್ಲಿ ಜಾತಿ ವ್ಯವಸ್ಥೆಯ ಅವಶೇಷಗಳು ಇನ್ನೂ ಕೆಲವು ಜನರ ಮನಸ್ಸಿನಲ್ಲಿ ಉಳಿದಿವೆ ಎಂದು ಸಚಿವರು ಹೇಳಿದ್ದಾರೆ.

ಕೇರಳವು ಜಾತಿ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಸಮಾನತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಹಲವಾರು ಚಳುವಳಿಗಳನ್ನು ಮಾಡಿದೆ. ನಾವು ಕೇರಳದಲ್ಲಿ ಹಲವಾರು ನವೋದಯ ಚಳುವಳಿಗಳನ್ನು ಮಾಡಿದ್ದೇವೆ. ದಲಿತರು ಅದರಿಂದ ಪ್ರಯೋಜನ ಪಡೆದಿದ್ದಾರೆ. ನಮ್ಮ ರಾಜ್ಯವು ಪ್ರಗತಿಪರ ಧೋರಣೆಯನ್ನು ಹೊಂದಿದೆ. ಆದರೆ ಸಮಕಾಲೀನ ಭಾರತೀಯ ಪರಿಸ್ಥಿತಿಗಳು ಇಂತಹ ಪ್ರತಿಗಾಮಿ ವರ್ತನೆಗಳಿಗೆ ಪ್ರಚೋದನೆಯನ್ನು ನೀಡುತ್ತವೆ ಎಂದು ರಾಧಾಕೃಷ್ಣನ್‌ ಅವರು ಹೇಳಿದ್ದಾರೆ.

ಈ ವಿಚಾರದಲ್ಲಿ ನಾನು ಸಮಾಜದ ಯಾವುದೇ ನಿರ್ದಿಷ್ಟ ವಿಭಾಗವನ್ನು ದೂಷಿಸಲು ಬಯಸುವುದಿಲ್ಲ. ಈ ತಾರತಮ್ಯಕ್ಕೆ ದೇವಸ್ಥಾನದ ಅರ್ಚಕರು ಮಾತ್ರ ಕಾರಣ ಎಂದು ನಾನು ಭಾವಿಸುವುದಿಲ್ಲ. ಜಾತಿ ವ್ಯವಸ್ಥೆಯ ವಿರುದ್ಧ ಸಂಘಟಿತ ಹೋರಾಟ ಇಂದಿನ ಅಗತ್ಯವಾಗಿದೆ. ನಮ್ಮ ಗುರಿ ಜಾತಿರಹಿತ ಸಮಾಜ, ಆದರೆ ಅದನ್ನು ರಾತ್ರೋರಾತ್ರಿ ಸಾಧಿಸಲು ಸಾಧ್ಯವಿಲ್ಲ. ಬದಲಾಗಿ ಆ ದೇವಸ್ಥಾನದಲ್ಲಿ ನಡೆದಂತಹ ಹೇಯ ಕೃತ್ಯಗಳ ವಿರುದ್ಧ ಸಾಮೂಹಿಕ ಚಳವಳಿಯ ಅಗತ್ಯವಿದೆ ಎಂದು ರಾಧಾಕೃಷ್ಣನ್‌ ಹೇಳಿದ್ದಾರೆ.

ಇದನ್ನು ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...