Homeಮುಖಪುಟಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

ಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

- Advertisement -
- Advertisement -

ಕೇರಳದ ಎಸ್‌ಸಿ,ಎಸ್‌ಟಿ ಕಲ್ಯಾಣ ಸಚಿವ ಕೆ. ರಾಧಾಕೃಷ್ಣನ್ ಅವರು ಕಣ್ಣೂರಿನ ದೇವಸ್ಥಾನದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದ್ದಾರೆ ಎಂದು ಹೇಳಿದ್ದು, ಅರ್ಚಕರು ಅವರಿಗೆ ದೀಪವನ್ನು ನೀಡಲು ಹಿಂಜರಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಅಖಿಲ ಕೇರಳ ತಂತ್ರಿ ಸಮಾಜಮ್ ಪ್ರತಿಕ್ರಿಯಿಸಿದ್ದು, ಈ ಘಟನೆಯು ಸಚಿವರ ತಪ್ಪು ತಿಳುವಳಿಕೆಯ ಭಾಗವಾಗಿದೆ ಮತ್ತು ದೇವಾಲಯಗಳಲ್ಲಿ ಯಾರಿಗೂ ತಾರತಮ್ಯ ಮಾಡಲಾಗಿಲ್ಲ ಎಂದು ಹೇಳಿದೆ.

ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯರಾದ ರಾಧಾಕೃಷ್ಣನ್ ಅವರು ಪಕ್ಷದ ಯುವ ಘಟಕವಾದ ಡಿವೈಎಫ್‌ಐನಿಂದ ರಾಜಕೀಯಕ್ಕೆ ಬಂದವರು. ಇವರು ಐದು ಬಾರಿ ಶಾಸಕರಾಗಿ  ಆಯ್ಕೆಯಾಗಿದ್ದು, ಪ್ರಸ್ತುತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೇರಳದಲ್ಲಿ ಪ್ರಮುಖ ದಲಿತ ನಾಯಕರಾಗಿರುವ ರಾಧಾಕೃಷ್ಣನ್, ಘಟನೆಯ ಬಗ್ಗೆ  ಮಾತನಾಡುತ್ತಾ, ದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯದಿಂದ ನಾನು ಹೇಳಿಕೆ ಕೊಟ್ಟಿದ್ದೇನೆ. ನಾನು ಹಲವು ರಾಜ್ಯಗಳಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕೇಳಿಕೊಂಡಿದ್ದು ನನಗೆ ನೋವು ತಂದಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೂಲಿ ಕೇಳಿದ್ದಕ್ಕೆ ದಲಿತನೊಬ್ಬನನ್ನು ಹೊಡೆದು ಕೊಲೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡರೊಬ್ಬರು ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಎಲ್ಲಾ ಘಟನೆಗಳು ದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರ ಬೆಳೆಯುತ್ತಿರುವುದನ್ನು ಸೂಚಿಸುತ್ತದೆ. ಈ ಘಟನೆಗಳು ಜಾತಿ ವ್ಯವಸ್ಥೆಯನ್ನು ಮರುಸ್ಥಾಪಿಸುವ ಸಂಘಪರಿವಾರದ ಅಜೆಂಡಾದ ಭಾಗವಾಗಿ ನಾನು ನೋಡುತ್ತೇನೆ ಎಂದು ರಾಧಾಕೃಷ್ಣನ್ ಅವರು ಹೇಳಿದ್ದಾರೆ.

ಇದು ಕೇರಳದಲ್ಲಿ ಅಥವಾ ಇಲ್ಲಿನ ದೇವಸ್ಥಾನಗಳಲ್ಲಿ ಮಾತ್ರ ನಡೆದ ಪ್ರತ್ಯೇಕ ಪ್ರಕರಣವೆಂದು ನಾನು ಭಾವಿಸುವುದಿಲ್ಲ. ಇಂತಹ ಘಟನೆಗಳು ಹಲವು ಕಡೆಗಳಲ್ಲಿ ನಡೆಯುತ್ತಿದೆ. ಕೇರಳದಲ್ಲಿ ಜಾತಿ ವ್ಯವಸ್ಥೆಯ ಅವಶೇಷಗಳು ಇನ್ನೂ ಕೆಲವು ಜನರ ಮನಸ್ಸಿನಲ್ಲಿ ಉಳಿದಿವೆ ಎಂದು ಸಚಿವರು ಹೇಳಿದ್ದಾರೆ.

ಕೇರಳವು ಜಾತಿ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಸಮಾನತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಹಲವಾರು ಚಳುವಳಿಗಳನ್ನು ಮಾಡಿದೆ. ನಾವು ಕೇರಳದಲ್ಲಿ ಹಲವಾರು ನವೋದಯ ಚಳುವಳಿಗಳನ್ನು ಮಾಡಿದ್ದೇವೆ. ದಲಿತರು ಅದರಿಂದ ಪ್ರಯೋಜನ ಪಡೆದಿದ್ದಾರೆ. ನಮ್ಮ ರಾಜ್ಯವು ಪ್ರಗತಿಪರ ಧೋರಣೆಯನ್ನು ಹೊಂದಿದೆ. ಆದರೆ ಸಮಕಾಲೀನ ಭಾರತೀಯ ಪರಿಸ್ಥಿತಿಗಳು ಇಂತಹ ಪ್ರತಿಗಾಮಿ ವರ್ತನೆಗಳಿಗೆ ಪ್ರಚೋದನೆಯನ್ನು ನೀಡುತ್ತವೆ ಎಂದು ರಾಧಾಕೃಷ್ಣನ್‌ ಅವರು ಹೇಳಿದ್ದಾರೆ.

ಈ ವಿಚಾರದಲ್ಲಿ ನಾನು ಸಮಾಜದ ಯಾವುದೇ ನಿರ್ದಿಷ್ಟ ವಿಭಾಗವನ್ನು ದೂಷಿಸಲು ಬಯಸುವುದಿಲ್ಲ. ಈ ತಾರತಮ್ಯಕ್ಕೆ ದೇವಸ್ಥಾನದ ಅರ್ಚಕರು ಮಾತ್ರ ಕಾರಣ ಎಂದು ನಾನು ಭಾವಿಸುವುದಿಲ್ಲ. ಜಾತಿ ವ್ಯವಸ್ಥೆಯ ವಿರುದ್ಧ ಸಂಘಟಿತ ಹೋರಾಟ ಇಂದಿನ ಅಗತ್ಯವಾಗಿದೆ. ನಮ್ಮ ಗುರಿ ಜಾತಿರಹಿತ ಸಮಾಜ, ಆದರೆ ಅದನ್ನು ರಾತ್ರೋರಾತ್ರಿ ಸಾಧಿಸಲು ಸಾಧ್ಯವಿಲ್ಲ. ಬದಲಾಗಿ ಆ ದೇವಸ್ಥಾನದಲ್ಲಿ ನಡೆದಂತಹ ಹೇಯ ಕೃತ್ಯಗಳ ವಿರುದ್ಧ ಸಾಮೂಹಿಕ ಚಳವಳಿಯ ಅಗತ್ಯವಿದೆ ಎಂದು ರಾಧಾಕೃಷ್ಣನ್‌ ಹೇಳಿದ್ದಾರೆ.

ಇದನ್ನು ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...