Homeಮುಖಪುಟಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

ಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

- Advertisement -
- Advertisement -

ಕೇರಳದ ಎಸ್‌ಸಿ,ಎಸ್‌ಟಿ ಕಲ್ಯಾಣ ಸಚಿವ ಕೆ. ರಾಧಾಕೃಷ್ಣನ್ ಅವರು ಕಣ್ಣೂರಿನ ದೇವಸ್ಥಾನದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದ್ದಾರೆ ಎಂದು ಹೇಳಿದ್ದು, ಅರ್ಚಕರು ಅವರಿಗೆ ದೀಪವನ್ನು ನೀಡಲು ಹಿಂಜರಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಅಖಿಲ ಕೇರಳ ತಂತ್ರಿ ಸಮಾಜಮ್ ಪ್ರತಿಕ್ರಿಯಿಸಿದ್ದು, ಈ ಘಟನೆಯು ಸಚಿವರ ತಪ್ಪು ತಿಳುವಳಿಕೆಯ ಭಾಗವಾಗಿದೆ ಮತ್ತು ದೇವಾಲಯಗಳಲ್ಲಿ ಯಾರಿಗೂ ತಾರತಮ್ಯ ಮಾಡಲಾಗಿಲ್ಲ ಎಂದು ಹೇಳಿದೆ.

ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯರಾದ ರಾಧಾಕೃಷ್ಣನ್ ಅವರು ಪಕ್ಷದ ಯುವ ಘಟಕವಾದ ಡಿವೈಎಫ್‌ಐನಿಂದ ರಾಜಕೀಯಕ್ಕೆ ಬಂದವರು. ಇವರು ಐದು ಬಾರಿ ಶಾಸಕರಾಗಿ  ಆಯ್ಕೆಯಾಗಿದ್ದು, ಪ್ರಸ್ತುತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೇರಳದಲ್ಲಿ ಪ್ರಮುಖ ದಲಿತ ನಾಯಕರಾಗಿರುವ ರಾಧಾಕೃಷ್ಣನ್, ಘಟನೆಯ ಬಗ್ಗೆ  ಮಾತನಾಡುತ್ತಾ, ದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯದಿಂದ ನಾನು ಹೇಳಿಕೆ ಕೊಟ್ಟಿದ್ದೇನೆ. ನಾನು ಹಲವು ರಾಜ್ಯಗಳಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕೇಳಿಕೊಂಡಿದ್ದು ನನಗೆ ನೋವು ತಂದಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೂಲಿ ಕೇಳಿದ್ದಕ್ಕೆ ದಲಿತನೊಬ್ಬನನ್ನು ಹೊಡೆದು ಕೊಲೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡರೊಬ್ಬರು ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಎಲ್ಲಾ ಘಟನೆಗಳು ದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರ ಬೆಳೆಯುತ್ತಿರುವುದನ್ನು ಸೂಚಿಸುತ್ತದೆ. ಈ ಘಟನೆಗಳು ಜಾತಿ ವ್ಯವಸ್ಥೆಯನ್ನು ಮರುಸ್ಥಾಪಿಸುವ ಸಂಘಪರಿವಾರದ ಅಜೆಂಡಾದ ಭಾಗವಾಗಿ ನಾನು ನೋಡುತ್ತೇನೆ ಎಂದು ರಾಧಾಕೃಷ್ಣನ್ ಅವರು ಹೇಳಿದ್ದಾರೆ.

ಇದು ಕೇರಳದಲ್ಲಿ ಅಥವಾ ಇಲ್ಲಿನ ದೇವಸ್ಥಾನಗಳಲ್ಲಿ ಮಾತ್ರ ನಡೆದ ಪ್ರತ್ಯೇಕ ಪ್ರಕರಣವೆಂದು ನಾನು ಭಾವಿಸುವುದಿಲ್ಲ. ಇಂತಹ ಘಟನೆಗಳು ಹಲವು ಕಡೆಗಳಲ್ಲಿ ನಡೆಯುತ್ತಿದೆ. ಕೇರಳದಲ್ಲಿ ಜಾತಿ ವ್ಯವಸ್ಥೆಯ ಅವಶೇಷಗಳು ಇನ್ನೂ ಕೆಲವು ಜನರ ಮನಸ್ಸಿನಲ್ಲಿ ಉಳಿದಿವೆ ಎಂದು ಸಚಿವರು ಹೇಳಿದ್ದಾರೆ.

ಕೇರಳವು ಜಾತಿ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಸಮಾನತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಹಲವಾರು ಚಳುವಳಿಗಳನ್ನು ಮಾಡಿದೆ. ನಾವು ಕೇರಳದಲ್ಲಿ ಹಲವಾರು ನವೋದಯ ಚಳುವಳಿಗಳನ್ನು ಮಾಡಿದ್ದೇವೆ. ದಲಿತರು ಅದರಿಂದ ಪ್ರಯೋಜನ ಪಡೆದಿದ್ದಾರೆ. ನಮ್ಮ ರಾಜ್ಯವು ಪ್ರಗತಿಪರ ಧೋರಣೆಯನ್ನು ಹೊಂದಿದೆ. ಆದರೆ ಸಮಕಾಲೀನ ಭಾರತೀಯ ಪರಿಸ್ಥಿತಿಗಳು ಇಂತಹ ಪ್ರತಿಗಾಮಿ ವರ್ತನೆಗಳಿಗೆ ಪ್ರಚೋದನೆಯನ್ನು ನೀಡುತ್ತವೆ ಎಂದು ರಾಧಾಕೃಷ್ಣನ್‌ ಅವರು ಹೇಳಿದ್ದಾರೆ.

ಈ ವಿಚಾರದಲ್ಲಿ ನಾನು ಸಮಾಜದ ಯಾವುದೇ ನಿರ್ದಿಷ್ಟ ವಿಭಾಗವನ್ನು ದೂಷಿಸಲು ಬಯಸುವುದಿಲ್ಲ. ಈ ತಾರತಮ್ಯಕ್ಕೆ ದೇವಸ್ಥಾನದ ಅರ್ಚಕರು ಮಾತ್ರ ಕಾರಣ ಎಂದು ನಾನು ಭಾವಿಸುವುದಿಲ್ಲ. ಜಾತಿ ವ್ಯವಸ್ಥೆಯ ವಿರುದ್ಧ ಸಂಘಟಿತ ಹೋರಾಟ ಇಂದಿನ ಅಗತ್ಯವಾಗಿದೆ. ನಮ್ಮ ಗುರಿ ಜಾತಿರಹಿತ ಸಮಾಜ, ಆದರೆ ಅದನ್ನು ರಾತ್ರೋರಾತ್ರಿ ಸಾಧಿಸಲು ಸಾಧ್ಯವಿಲ್ಲ. ಬದಲಾಗಿ ಆ ದೇವಸ್ಥಾನದಲ್ಲಿ ನಡೆದಂತಹ ಹೇಯ ಕೃತ್ಯಗಳ ವಿರುದ್ಧ ಸಾಮೂಹಿಕ ಚಳವಳಿಯ ಅಗತ್ಯವಿದೆ ಎಂದು ರಾಧಾಕೃಷ್ಣನ್‌ ಹೇಳಿದ್ದಾರೆ.

ಇದನ್ನು ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...