Homeಮುಖಪುಟಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

ಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

- Advertisement -
- Advertisement -

ಕೇರಳದ ಎಸ್‌ಸಿ,ಎಸ್‌ಟಿ ಕಲ್ಯಾಣ ಸಚಿವ ಕೆ. ರಾಧಾಕೃಷ್ಣನ್ ಅವರು ಕಣ್ಣೂರಿನ ದೇವಸ್ಥಾನದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದ್ದಾರೆ ಎಂದು ಹೇಳಿದ್ದು, ಅರ್ಚಕರು ಅವರಿಗೆ ದೀಪವನ್ನು ನೀಡಲು ಹಿಂಜರಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಅಖಿಲ ಕೇರಳ ತಂತ್ರಿ ಸಮಾಜಮ್ ಪ್ರತಿಕ್ರಿಯಿಸಿದ್ದು, ಈ ಘಟನೆಯು ಸಚಿವರ ತಪ್ಪು ತಿಳುವಳಿಕೆಯ ಭಾಗವಾಗಿದೆ ಮತ್ತು ದೇವಾಲಯಗಳಲ್ಲಿ ಯಾರಿಗೂ ತಾರತಮ್ಯ ಮಾಡಲಾಗಿಲ್ಲ ಎಂದು ಹೇಳಿದೆ.

ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯರಾದ ರಾಧಾಕೃಷ್ಣನ್ ಅವರು ಪಕ್ಷದ ಯುವ ಘಟಕವಾದ ಡಿವೈಎಫ್‌ಐನಿಂದ ರಾಜಕೀಯಕ್ಕೆ ಬಂದವರು. ಇವರು ಐದು ಬಾರಿ ಶಾಸಕರಾಗಿ  ಆಯ್ಕೆಯಾಗಿದ್ದು, ಪ್ರಸ್ತುತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೇರಳದಲ್ಲಿ ಪ್ರಮುಖ ದಲಿತ ನಾಯಕರಾಗಿರುವ ರಾಧಾಕೃಷ್ಣನ್, ಘಟನೆಯ ಬಗ್ಗೆ  ಮಾತನಾಡುತ್ತಾ, ದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯದಿಂದ ನಾನು ಹೇಳಿಕೆ ಕೊಟ್ಟಿದ್ದೇನೆ. ನಾನು ಹಲವು ರಾಜ್ಯಗಳಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕೇಳಿಕೊಂಡಿದ್ದು ನನಗೆ ನೋವು ತಂದಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೂಲಿ ಕೇಳಿದ್ದಕ್ಕೆ ದಲಿತನೊಬ್ಬನನ್ನು ಹೊಡೆದು ಕೊಲೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡರೊಬ್ಬರು ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಎಲ್ಲಾ ಘಟನೆಗಳು ದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರ ಬೆಳೆಯುತ್ತಿರುವುದನ್ನು ಸೂಚಿಸುತ್ತದೆ. ಈ ಘಟನೆಗಳು ಜಾತಿ ವ್ಯವಸ್ಥೆಯನ್ನು ಮರುಸ್ಥಾಪಿಸುವ ಸಂಘಪರಿವಾರದ ಅಜೆಂಡಾದ ಭಾಗವಾಗಿ ನಾನು ನೋಡುತ್ತೇನೆ ಎಂದು ರಾಧಾಕೃಷ್ಣನ್ ಅವರು ಹೇಳಿದ್ದಾರೆ.

ಇದು ಕೇರಳದಲ್ಲಿ ಅಥವಾ ಇಲ್ಲಿನ ದೇವಸ್ಥಾನಗಳಲ್ಲಿ ಮಾತ್ರ ನಡೆದ ಪ್ರತ್ಯೇಕ ಪ್ರಕರಣವೆಂದು ನಾನು ಭಾವಿಸುವುದಿಲ್ಲ. ಇಂತಹ ಘಟನೆಗಳು ಹಲವು ಕಡೆಗಳಲ್ಲಿ ನಡೆಯುತ್ತಿದೆ. ಕೇರಳದಲ್ಲಿ ಜಾತಿ ವ್ಯವಸ್ಥೆಯ ಅವಶೇಷಗಳು ಇನ್ನೂ ಕೆಲವು ಜನರ ಮನಸ್ಸಿನಲ್ಲಿ ಉಳಿದಿವೆ ಎಂದು ಸಚಿವರು ಹೇಳಿದ್ದಾರೆ.

ಕೇರಳವು ಜಾತಿ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಸಮಾನತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಹಲವಾರು ಚಳುವಳಿಗಳನ್ನು ಮಾಡಿದೆ. ನಾವು ಕೇರಳದಲ್ಲಿ ಹಲವಾರು ನವೋದಯ ಚಳುವಳಿಗಳನ್ನು ಮಾಡಿದ್ದೇವೆ. ದಲಿತರು ಅದರಿಂದ ಪ್ರಯೋಜನ ಪಡೆದಿದ್ದಾರೆ. ನಮ್ಮ ರಾಜ್ಯವು ಪ್ರಗತಿಪರ ಧೋರಣೆಯನ್ನು ಹೊಂದಿದೆ. ಆದರೆ ಸಮಕಾಲೀನ ಭಾರತೀಯ ಪರಿಸ್ಥಿತಿಗಳು ಇಂತಹ ಪ್ರತಿಗಾಮಿ ವರ್ತನೆಗಳಿಗೆ ಪ್ರಚೋದನೆಯನ್ನು ನೀಡುತ್ತವೆ ಎಂದು ರಾಧಾಕೃಷ್ಣನ್‌ ಅವರು ಹೇಳಿದ್ದಾರೆ.

ಈ ವಿಚಾರದಲ್ಲಿ ನಾನು ಸಮಾಜದ ಯಾವುದೇ ನಿರ್ದಿಷ್ಟ ವಿಭಾಗವನ್ನು ದೂಷಿಸಲು ಬಯಸುವುದಿಲ್ಲ. ಈ ತಾರತಮ್ಯಕ್ಕೆ ದೇವಸ್ಥಾನದ ಅರ್ಚಕರು ಮಾತ್ರ ಕಾರಣ ಎಂದು ನಾನು ಭಾವಿಸುವುದಿಲ್ಲ. ಜಾತಿ ವ್ಯವಸ್ಥೆಯ ವಿರುದ್ಧ ಸಂಘಟಿತ ಹೋರಾಟ ಇಂದಿನ ಅಗತ್ಯವಾಗಿದೆ. ನಮ್ಮ ಗುರಿ ಜಾತಿರಹಿತ ಸಮಾಜ, ಆದರೆ ಅದನ್ನು ರಾತ್ರೋರಾತ್ರಿ ಸಾಧಿಸಲು ಸಾಧ್ಯವಿಲ್ಲ. ಬದಲಾಗಿ ಆ ದೇವಸ್ಥಾನದಲ್ಲಿ ನಡೆದಂತಹ ಹೇಯ ಕೃತ್ಯಗಳ ವಿರುದ್ಧ ಸಾಮೂಹಿಕ ಚಳವಳಿಯ ಅಗತ್ಯವಿದೆ ಎಂದು ರಾಧಾಕೃಷ್ಣನ್‌ ಹೇಳಿದ್ದಾರೆ.

ಇದನ್ನು ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

0
ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆಯಾ? ಹೌದು ಈಗೊಂದು ಆರೋಪವನ್ನು ಸ್ಪರ್ಧೆಯ ಆಕಾಂಕ್ಷಿಗಳಾಗಿದ್ದ ಹಲವು ಅಭ್ಯರ್ಥಿಗಳು ಮಾಡಿದ್ದಾರೆ. ವಾರಾಣಾಸಿಯಲ್ಲಿ ಚುನಾವಣಾಧಿಕಾರಿಗಳು ಮತ್ತು ಬಿಜೆಪಿ-ಆರ್‌ಎಸ್‌ಎಸ್‌ನೊಂದಿಗೆ ನಂಟು ಹೊಂದಿದ್ದ...