Homeಮುಖಪುಟಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

ಕೇರಳ: ದಲಿತ ಸಮುದಾಯದ ಸಚಿವರಿಗೆ ದೇವಸ್ಥಾನದಲ್ಲಿ ದೀಪ ನೀಡಲು ಹಿಂಜರಿದ ಅರ್ಚಕರು

- Advertisement -
- Advertisement -

ಕೇರಳದ ಎಸ್‌ಸಿ,ಎಸ್‌ಟಿ ಕಲ್ಯಾಣ ಸಚಿವ ಕೆ. ರಾಧಾಕೃಷ್ಣನ್ ಅವರು ಕಣ್ಣೂರಿನ ದೇವಸ್ಥಾನದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದ್ದಾರೆ ಎಂದು ಹೇಳಿದ್ದು, ಅರ್ಚಕರು ಅವರಿಗೆ ದೀಪವನ್ನು ನೀಡಲು ಹಿಂಜರಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಬಗ್ಗೆ ಅಖಿಲ ಕೇರಳ ತಂತ್ರಿ ಸಮಾಜಮ್ ಪ್ರತಿಕ್ರಿಯಿಸಿದ್ದು, ಈ ಘಟನೆಯು ಸಚಿವರ ತಪ್ಪು ತಿಳುವಳಿಕೆಯ ಭಾಗವಾಗಿದೆ ಮತ್ತು ದೇವಾಲಯಗಳಲ್ಲಿ ಯಾರಿಗೂ ತಾರತಮ್ಯ ಮಾಡಲಾಗಿಲ್ಲ ಎಂದು ಹೇಳಿದೆ.

ಸಿಪಿಐ(ಎಂ) ಕೇಂದ್ರ ಸಮಿತಿಯ ಸದಸ್ಯರಾದ ರಾಧಾಕೃಷ್ಣನ್ ಅವರು ಪಕ್ಷದ ಯುವ ಘಟಕವಾದ ಡಿವೈಎಫ್‌ಐನಿಂದ ರಾಜಕೀಯಕ್ಕೆ ಬಂದವರು. ಇವರು ಐದು ಬಾರಿ ಶಾಸಕರಾಗಿ  ಆಯ್ಕೆಯಾಗಿದ್ದು, ಪ್ರಸ್ತುತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೇರಳದಲ್ಲಿ ಪ್ರಮುಖ ದಲಿತ ನಾಯಕರಾಗಿರುವ ರಾಧಾಕೃಷ್ಣನ್, ಘಟನೆಯ ಬಗ್ಗೆ  ಮಾತನಾಡುತ್ತಾ, ದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯದಿಂದ ನಾನು ಹೇಳಿಕೆ ಕೊಟ್ಟಿದ್ದೇನೆ. ನಾನು ಹಲವು ರಾಜ್ಯಗಳಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕೇಳಿಕೊಂಡಿದ್ದು ನನಗೆ ನೋವು ತಂದಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೂಲಿ ಕೇಳಿದ್ದಕ್ಕೆ ದಲಿತನೊಬ್ಬನನ್ನು ಹೊಡೆದು ಕೊಲೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡರೊಬ್ಬರು ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಎಲ್ಲಾ ಘಟನೆಗಳು ದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರ ಬೆಳೆಯುತ್ತಿರುವುದನ್ನು ಸೂಚಿಸುತ್ತದೆ. ಈ ಘಟನೆಗಳು ಜಾತಿ ವ್ಯವಸ್ಥೆಯನ್ನು ಮರುಸ್ಥಾಪಿಸುವ ಸಂಘಪರಿವಾರದ ಅಜೆಂಡಾದ ಭಾಗವಾಗಿ ನಾನು ನೋಡುತ್ತೇನೆ ಎಂದು ರಾಧಾಕೃಷ್ಣನ್ ಅವರು ಹೇಳಿದ್ದಾರೆ.

ಇದು ಕೇರಳದಲ್ಲಿ ಅಥವಾ ಇಲ್ಲಿನ ದೇವಸ್ಥಾನಗಳಲ್ಲಿ ಮಾತ್ರ ನಡೆದ ಪ್ರತ್ಯೇಕ ಪ್ರಕರಣವೆಂದು ನಾನು ಭಾವಿಸುವುದಿಲ್ಲ. ಇಂತಹ ಘಟನೆಗಳು ಹಲವು ಕಡೆಗಳಲ್ಲಿ ನಡೆಯುತ್ತಿದೆ. ಕೇರಳದಲ್ಲಿ ಜಾತಿ ವ್ಯವಸ್ಥೆಯ ಅವಶೇಷಗಳು ಇನ್ನೂ ಕೆಲವು ಜನರ ಮನಸ್ಸಿನಲ್ಲಿ ಉಳಿದಿವೆ ಎಂದು ಸಚಿವರು ಹೇಳಿದ್ದಾರೆ.

ಕೇರಳವು ಜಾತಿ ವ್ಯವಸ್ಥೆಯನ್ನು ತೊಡೆದುಹಾಕಲು ಮತ್ತು ಸಮಾನತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಹಲವಾರು ಚಳುವಳಿಗಳನ್ನು ಮಾಡಿದೆ. ನಾವು ಕೇರಳದಲ್ಲಿ ಹಲವಾರು ನವೋದಯ ಚಳುವಳಿಗಳನ್ನು ಮಾಡಿದ್ದೇವೆ. ದಲಿತರು ಅದರಿಂದ ಪ್ರಯೋಜನ ಪಡೆದಿದ್ದಾರೆ. ನಮ್ಮ ರಾಜ್ಯವು ಪ್ರಗತಿಪರ ಧೋರಣೆಯನ್ನು ಹೊಂದಿದೆ. ಆದರೆ ಸಮಕಾಲೀನ ಭಾರತೀಯ ಪರಿಸ್ಥಿತಿಗಳು ಇಂತಹ ಪ್ರತಿಗಾಮಿ ವರ್ತನೆಗಳಿಗೆ ಪ್ರಚೋದನೆಯನ್ನು ನೀಡುತ್ತವೆ ಎಂದು ರಾಧಾಕೃಷ್ಣನ್‌ ಅವರು ಹೇಳಿದ್ದಾರೆ.

ಈ ವಿಚಾರದಲ್ಲಿ ನಾನು ಸಮಾಜದ ಯಾವುದೇ ನಿರ್ದಿಷ್ಟ ವಿಭಾಗವನ್ನು ದೂಷಿಸಲು ಬಯಸುವುದಿಲ್ಲ. ಈ ತಾರತಮ್ಯಕ್ಕೆ ದೇವಸ್ಥಾನದ ಅರ್ಚಕರು ಮಾತ್ರ ಕಾರಣ ಎಂದು ನಾನು ಭಾವಿಸುವುದಿಲ್ಲ. ಜಾತಿ ವ್ಯವಸ್ಥೆಯ ವಿರುದ್ಧ ಸಂಘಟಿತ ಹೋರಾಟ ಇಂದಿನ ಅಗತ್ಯವಾಗಿದೆ. ನಮ್ಮ ಗುರಿ ಜಾತಿರಹಿತ ಸಮಾಜ, ಆದರೆ ಅದನ್ನು ರಾತ್ರೋರಾತ್ರಿ ಸಾಧಿಸಲು ಸಾಧ್ಯವಿಲ್ಲ. ಬದಲಾಗಿ ಆ ದೇವಸ್ಥಾನದಲ್ಲಿ ನಡೆದಂತಹ ಹೇಯ ಕೃತ್ಯಗಳ ವಿರುದ್ಧ ಸಾಮೂಹಿಕ ಚಳವಳಿಯ ಅಗತ್ಯವಿದೆ ಎಂದು ರಾಧಾಕೃಷ್ಣನ್‌ ಹೇಳಿದ್ದಾರೆ.

ಇದನ್ನು ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...