Homeಕರ್ನಾಟಕಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ...

ಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಸವರ್ಣೀಯರು

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ ದೂರು ನೀಡಿದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಸವರ್ಣೀಯರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸದ್ಯ 25 ಜನರ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಮಾರ್ಚ್ 3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಮಾದಿಗ ಸಮುದಾಯದ ಹೆಮ್ಮವ್ವ ಮಲ್ಲಾಡದ ಹಾಗೂ ಅವರ ಪುತ್ರ ರಮೇಶ ಮಲ್ಲಾಡದ ಪ್ರವೇಶಿಸಲು ಯತ್ನಿಸಿದಾಗ ಕುಪಿತಗೊಂಡ 30-40 ಸವರ್ಣೀಯ ಸಮುದಾಯದ ಗ್ರಾಮಸ್ಥರ ಗುಂಪು ಹೆಮ್ಮವ್ವನ ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ. ಮೇಲ್ಛಾವಣಿಯ ಹೆಂಚುಗಳನ್ನು ಒಡೆದು ಅವರ ಬೈಕನ್ನು ಹಾನಿಗೊಳಿಸಿದ್ದಾರೆ. ತಾಯಿ-ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಭಾನುವಾರ ಸಂಜೆ ದ್ಯಾಮವ್ವ ದೇವಿಯ ಗ್ರಾಮದ ಜಾತ್ರೆಯ ಅಂಗವಾಗಿ ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಅಲ್ಲಿದ್ದ ಕೆಲ ಮಕ್ಕಳು, ಯುವಕರು ಮೆರವಣಿಗೆಯ ಜತೆಗೆ ಕುಣಿದು ಕುಪ್ಪಳಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ದಲಿತರು ಮೆರವಣಿಗೆಯಲ್ಲಿ ಸೇರಬಾರದು ಎಂದು ತಾಕೀತು ಮಾಡಿದ್ದಾರೆ. ಜಾತಿನಿಂದನೆ ನಡೆಸಿ ರಮೇಶ್ ಮೇಲೆ ಮತ್ತೆ ಹಲ್ಲೆ ನಡೆಸಲಾಗಿದೆ. ಇದು ಎರಡೂ ಕಡೆಯಿಂದ ಜಗಳಕ್ಕೆ ಕಾರಣವಾಗಿದೆ. ಇದರಿಂದ ನೊಂದ ದಲಿತ ಕುಟುಂಬವು ಸ್ವಾಭಿಮಾನಿ ದಲಿತ ಶಕ್ತಿ ಸಂಘಟನೆಯ ನೆರವಿನೊಂದಿಗೆ ಪೊಲೀಸರು ದೂರು ನೀಡಿದೆ.

ಇದರಿಂದ ಸವರ್ಣೀಯರು ರೊಚ್ಚಿಗೆದ್ದು ಭಾನುವಾರ ರಾತ್ರಿ 12 ಗಂಟೆ ಸಮಯದಲ್ಲಿ ದೂರು ನೀಡಿದ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಪ್ರಕಾರ, ಸುಮಾರು 30 ಗ್ರಾಮಸ್ಥರು ದಲಿತರ ಕಾಲೋನಿಗೆ ನುಗ್ಗಿ ಮನೆಗಳಿಗೆ ಮರದ ದಿಮ್ಮಿಗಳನ್ನು ಎಸೆದು ಪೆಟ್ರೋಲ್ ಸುರಿದಿದ್ದಾರೆ. ಅವರು ಮೊದಲ ಮನೆಗೆ ಬೆಂಕಿ ಹಚ್ಚಿದ್ದು, ಬೆಂಕಿಯು ಪಕ್ಕದ ಮನೆಗೂ ಹರಡಿದೆ. ನಂತರ ಅವರು ಓಡಿ ಹೋಗಿದ್ದಾರೆ. ಆದರೆ ಹೊಗೆಯಿಂದಾಗಿ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಎರಡೂ ಮನೆಯಲ್ಲಿದ್ದ ಒಟ್ಟು 12 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಗಳು ಸುಟ್ಟು ಹೋಗಿವೆ. ಇದೀಗ ಅವರೆಲ್ಲ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ.

ಈ ಬಗ್ಗೆ ಸಂತ್ರಸ್ತೆ ಹೆಮ್ಮವ್ವ ಮಲ್ಲಾಡದ ಮಾತನಾಡಿದ್ದು, ”ದಶಕಗಳಿಂದ ದಲಿತ ಸಮುದಾಯಕ್ಕೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ, ಆದರೆ ಅದು ನಮ್ಮ ಹಕ್ಕು ಎಂದು ದೇವಸ್ಥಾನ ಪ್ರವೇಶಿಸಿದೆವು. ಆದರೆ ಮೇಲ್ವರ್ಗದ ಗ್ರಾಮಸ್ಥರು ಮನೆಯ ಮೇಲ್ಛಾವಣಿಯ ಹೆಂಚು ಮತ್ತು ಬೈಕ್‌ಗೆ ಹಾನಿ ಮಾಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂತರ ಮನೆಗೆ ಬೆಂಕಿ ಹಚ್ಚಿದ್ದಾರೆ. ಗ್ರಾಮದ ದಲಿತರು ಗೌರವಯುತವಾಗಿ ಬದುಕಲು ರಕ್ಷಣೆ ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ” ಎಂದು ಹೇಳಿದರು.

ಘಟನೆ ನಂತರ 30 ಸವರ್ಣೀಯ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧದಿಂದ ಗಲಭೆ), 341(ತಪ್ಪಾದ ಸಂಯಮ), 451(ಅಪರಾಧ ಮಾಡಲು ಮನೆಗೆ ನುಗ್ಗುವುದು), 323(ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 354 (ದಾಳಿ) 504 (ಉದ್ದೇಶಪೂರ್ವಕ ಹಾನಿ) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ. ಫೋನ್ ಕರೆ ಮತ್ತು ಮೆಸೇಜ್‌ಗಳ ಮೂಲಕ ಇಡೀ ಕುಟುಂಬವನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಸಂಸದ ಎಲ್ ಹನುಮಂತಯ್ಯ ಆಗ್ರಹ

“ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ಮಾದಿಗ ಸಮುದಾಯದ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದೇನೆ. ಈ ಸಂಬಂಧ ಜಿಲ್ಲೆಯಲ್ಲಿ ನಡೆಯುತ್ತಿರುವ ಜಾತಿ ದೌರ್ಜನ್ಯಗಳ ಕುರಿತು ನಾಳೆ(ಮಾ.8) ಪೊಲೀಸ್‌ ಮಹಾ ನಿರ್ದೇಶಕ(ಡಿಜಿ)ರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಹಳ್ಳಿಗಳಲ್ಲಿ ದಲಿತ ಸಮುದಾಯ ಕನಿಷ್ಠ ಮಟ್ಟದ ಜೀವನ ನಡೆಸುವುದಕ್ಕೂ ಬಲಿಷ್ಠ ಸಮುದಾಯ ಅಡ್ಡಿಪಡಿಸುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ನಿರಂತರವಾಗಿ ನಡೆಯುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು” ಎಂದು ರಾಜ್ಯಸಭಾ ಸದಸ್ಯರಾದ ಎಲ್ ಹನುಮಂತಯ್ಯ ತಿಳಿಸಿದ್ದಾರೆ.

“ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಘಟನೆಯ ನಂತರ ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈಗ ಇಬ್ಬರು ಶರಣಾಗಿದ್ದಾರೆ. ಅವರನ್ನು ವಿಚಾರಣೆ ನಡೆಸುತ್ತಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ರೀತಿಯಾಗಿ ಸರಣಿ ದಲಿತ ದೌರ್ಜನ್ಯಗಳು ವರದಿಯಾಗಿದ್ದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಿ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಹಾಗಾಗಿಯೇ ಆರೋಪಿಗಳು ಶನಿವಾರದಿಂದ ಮಂಗಳವಾರ ರಾತ್ರಿವರೆಗೂ ದೌರ್ಜನ್ಯದ ಮೇಲೆ ದೌರ್ಜನ್ಯ ನಡೆಸಿದ್ದಾರೆ. ದಲಿತರ ಸಹಾಯಕ್ಕೆ ಬಂದವರಿಗೂ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಿಎಂ ಆಗಲಿ, ಇತರ ಸ್ಥಳೀಯ ಮುಖಂಡರಾಗಲಿ ದನಿಯೆತ್ತಿಲ್ಲ. ಒಟ್ಟಾರೆಯಾಗಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜೀವಹಾನಿಗಳು ಸಂಭವಿಸುವ ಸಾಧ್ಯತೆಯಿದ್ದು ಹಾವೇರಿ ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಂಡು ತನಿಖೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.

ಇದನ್ನೂ ಓದಿ; ‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...