Homeಕರ್ನಾಟಕಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ...

ಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಸವರ್ಣೀಯರು

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ ದೂರು ನೀಡಿದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಸವರ್ಣೀಯರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸದ್ಯ 25 ಜನರ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಮಾರ್ಚ್ 3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಮಾದಿಗ ಸಮುದಾಯದ ಹೆಮ್ಮವ್ವ ಮಲ್ಲಾಡದ ಹಾಗೂ ಅವರ ಪುತ್ರ ರಮೇಶ ಮಲ್ಲಾಡದ ಪ್ರವೇಶಿಸಲು ಯತ್ನಿಸಿದಾಗ ಕುಪಿತಗೊಂಡ 30-40 ಸವರ್ಣೀಯ ಸಮುದಾಯದ ಗ್ರಾಮಸ್ಥರ ಗುಂಪು ಹೆಮ್ಮವ್ವನ ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ. ಮೇಲ್ಛಾವಣಿಯ ಹೆಂಚುಗಳನ್ನು ಒಡೆದು ಅವರ ಬೈಕನ್ನು ಹಾನಿಗೊಳಿಸಿದ್ದಾರೆ. ತಾಯಿ-ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಭಾನುವಾರ ಸಂಜೆ ದ್ಯಾಮವ್ವ ದೇವಿಯ ಗ್ರಾಮದ ಜಾತ್ರೆಯ ಅಂಗವಾಗಿ ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಅಲ್ಲಿದ್ದ ಕೆಲ ಮಕ್ಕಳು, ಯುವಕರು ಮೆರವಣಿಗೆಯ ಜತೆಗೆ ಕುಣಿದು ಕುಪ್ಪಳಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ದಲಿತರು ಮೆರವಣಿಗೆಯಲ್ಲಿ ಸೇರಬಾರದು ಎಂದು ತಾಕೀತು ಮಾಡಿದ್ದಾರೆ. ಜಾತಿನಿಂದನೆ ನಡೆಸಿ ರಮೇಶ್ ಮೇಲೆ ಮತ್ತೆ ಹಲ್ಲೆ ನಡೆಸಲಾಗಿದೆ. ಇದು ಎರಡೂ ಕಡೆಯಿಂದ ಜಗಳಕ್ಕೆ ಕಾರಣವಾಗಿದೆ. ಇದರಿಂದ ನೊಂದ ದಲಿತ ಕುಟುಂಬವು ಸ್ವಾಭಿಮಾನಿ ದಲಿತ ಶಕ್ತಿ ಸಂಘಟನೆಯ ನೆರವಿನೊಂದಿಗೆ ಪೊಲೀಸರು ದೂರು ನೀಡಿದೆ.

ಇದರಿಂದ ಸವರ್ಣೀಯರು ರೊಚ್ಚಿಗೆದ್ದು ಭಾನುವಾರ ರಾತ್ರಿ 12 ಗಂಟೆ ಸಮಯದಲ್ಲಿ ದೂರು ನೀಡಿದ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಪ್ರಕಾರ, ಸುಮಾರು 30 ಗ್ರಾಮಸ್ಥರು ದಲಿತರ ಕಾಲೋನಿಗೆ ನುಗ್ಗಿ ಮನೆಗಳಿಗೆ ಮರದ ದಿಮ್ಮಿಗಳನ್ನು ಎಸೆದು ಪೆಟ್ರೋಲ್ ಸುರಿದಿದ್ದಾರೆ. ಅವರು ಮೊದಲ ಮನೆಗೆ ಬೆಂಕಿ ಹಚ್ಚಿದ್ದು, ಬೆಂಕಿಯು ಪಕ್ಕದ ಮನೆಗೂ ಹರಡಿದೆ. ನಂತರ ಅವರು ಓಡಿ ಹೋಗಿದ್ದಾರೆ. ಆದರೆ ಹೊಗೆಯಿಂದಾಗಿ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಎರಡೂ ಮನೆಯಲ್ಲಿದ್ದ ಒಟ್ಟು 12 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಗಳು ಸುಟ್ಟು ಹೋಗಿವೆ. ಇದೀಗ ಅವರೆಲ್ಲ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ.

ಈ ಬಗ್ಗೆ ಸಂತ್ರಸ್ತೆ ಹೆಮ್ಮವ್ವ ಮಲ್ಲಾಡದ ಮಾತನಾಡಿದ್ದು, ”ದಶಕಗಳಿಂದ ದಲಿತ ಸಮುದಾಯಕ್ಕೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ, ಆದರೆ ಅದು ನಮ್ಮ ಹಕ್ಕು ಎಂದು ದೇವಸ್ಥಾನ ಪ್ರವೇಶಿಸಿದೆವು. ಆದರೆ ಮೇಲ್ವರ್ಗದ ಗ್ರಾಮಸ್ಥರು ಮನೆಯ ಮೇಲ್ಛಾವಣಿಯ ಹೆಂಚು ಮತ್ತು ಬೈಕ್‌ಗೆ ಹಾನಿ ಮಾಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂತರ ಮನೆಗೆ ಬೆಂಕಿ ಹಚ್ಚಿದ್ದಾರೆ. ಗ್ರಾಮದ ದಲಿತರು ಗೌರವಯುತವಾಗಿ ಬದುಕಲು ರಕ್ಷಣೆ ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ” ಎಂದು ಹೇಳಿದರು.

ಘಟನೆ ನಂತರ 30 ಸವರ್ಣೀಯ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧದಿಂದ ಗಲಭೆ), 341(ತಪ್ಪಾದ ಸಂಯಮ), 451(ಅಪರಾಧ ಮಾಡಲು ಮನೆಗೆ ನುಗ್ಗುವುದು), 323(ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 354 (ದಾಳಿ) 504 (ಉದ್ದೇಶಪೂರ್ವಕ ಹಾನಿ) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ. ಫೋನ್ ಕರೆ ಮತ್ತು ಮೆಸೇಜ್‌ಗಳ ಮೂಲಕ ಇಡೀ ಕುಟುಂಬವನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಸಂಸದ ಎಲ್ ಹನುಮಂತಯ್ಯ ಆಗ್ರಹ

“ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ಮಾದಿಗ ಸಮುದಾಯದ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದೇನೆ. ಈ ಸಂಬಂಧ ಜಿಲ್ಲೆಯಲ್ಲಿ ನಡೆಯುತ್ತಿರುವ ಜಾತಿ ದೌರ್ಜನ್ಯಗಳ ಕುರಿತು ನಾಳೆ(ಮಾ.8) ಪೊಲೀಸ್‌ ಮಹಾ ನಿರ್ದೇಶಕ(ಡಿಜಿ)ರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಹಳ್ಳಿಗಳಲ್ಲಿ ದಲಿತ ಸಮುದಾಯ ಕನಿಷ್ಠ ಮಟ್ಟದ ಜೀವನ ನಡೆಸುವುದಕ್ಕೂ ಬಲಿಷ್ಠ ಸಮುದಾಯ ಅಡ್ಡಿಪಡಿಸುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ನಿರಂತರವಾಗಿ ನಡೆಯುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು” ಎಂದು ರಾಜ್ಯಸಭಾ ಸದಸ್ಯರಾದ ಎಲ್ ಹನುಮಂತಯ್ಯ ತಿಳಿಸಿದ್ದಾರೆ.

“ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಘಟನೆಯ ನಂತರ ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈಗ ಇಬ್ಬರು ಶರಣಾಗಿದ್ದಾರೆ. ಅವರನ್ನು ವಿಚಾರಣೆ ನಡೆಸುತ್ತಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ರೀತಿಯಾಗಿ ಸರಣಿ ದಲಿತ ದೌರ್ಜನ್ಯಗಳು ವರದಿಯಾಗಿದ್ದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಿ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಹಾಗಾಗಿಯೇ ಆರೋಪಿಗಳು ಶನಿವಾರದಿಂದ ಮಂಗಳವಾರ ರಾತ್ರಿವರೆಗೂ ದೌರ್ಜನ್ಯದ ಮೇಲೆ ದೌರ್ಜನ್ಯ ನಡೆಸಿದ್ದಾರೆ. ದಲಿತರ ಸಹಾಯಕ್ಕೆ ಬಂದವರಿಗೂ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಿಎಂ ಆಗಲಿ, ಇತರ ಸ್ಥಳೀಯ ಮುಖಂಡರಾಗಲಿ ದನಿಯೆತ್ತಿಲ್ಲ. ಒಟ್ಟಾರೆಯಾಗಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜೀವಹಾನಿಗಳು ಸಂಭವಿಸುವ ಸಾಧ್ಯತೆಯಿದ್ದು ಹಾವೇರಿ ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಂಡು ತನಿಖೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.

ಇದನ್ನೂ ಓದಿ; ‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...