Homeಕರ್ನಾಟಕಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ...

ಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಸವರ್ಣೀಯರು

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ ದೂರು ನೀಡಿದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಸವರ್ಣೀಯರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸದ್ಯ 25 ಜನರ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಮಾರ್ಚ್ 3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಮಾದಿಗ ಸಮುದಾಯದ ಹೆಮ್ಮವ್ವ ಮಲ್ಲಾಡದ ಹಾಗೂ ಅವರ ಪುತ್ರ ರಮೇಶ ಮಲ್ಲಾಡದ ಪ್ರವೇಶಿಸಲು ಯತ್ನಿಸಿದಾಗ ಕುಪಿತಗೊಂಡ 30-40 ಸವರ್ಣೀಯ ಸಮುದಾಯದ ಗ್ರಾಮಸ್ಥರ ಗುಂಪು ಹೆಮ್ಮವ್ವನ ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ. ಮೇಲ್ಛಾವಣಿಯ ಹೆಂಚುಗಳನ್ನು ಒಡೆದು ಅವರ ಬೈಕನ್ನು ಹಾನಿಗೊಳಿಸಿದ್ದಾರೆ. ತಾಯಿ-ಮಗನ ಮೇಲೆ ಹಲ್ಲೆ ನಡೆಸಿದ್ದಾರೆ.

ಅಲ್ಲದೆ ಭಾನುವಾರ ಸಂಜೆ ದ್ಯಾಮವ್ವ ದೇವಿಯ ಗ್ರಾಮದ ಜಾತ್ರೆಯ ಅಂಗವಾಗಿ ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಅಲ್ಲಿದ್ದ ಕೆಲ ಮಕ್ಕಳು, ಯುವಕರು ಮೆರವಣಿಗೆಯ ಜತೆಗೆ ಕುಣಿದು ಕುಪ್ಪಳಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ದಲಿತರು ಮೆರವಣಿಗೆಯಲ್ಲಿ ಸೇರಬಾರದು ಎಂದು ತಾಕೀತು ಮಾಡಿದ್ದಾರೆ. ಜಾತಿನಿಂದನೆ ನಡೆಸಿ ರಮೇಶ್ ಮೇಲೆ ಮತ್ತೆ ಹಲ್ಲೆ ನಡೆಸಲಾಗಿದೆ. ಇದು ಎರಡೂ ಕಡೆಯಿಂದ ಜಗಳಕ್ಕೆ ಕಾರಣವಾಗಿದೆ. ಇದರಿಂದ ನೊಂದ ದಲಿತ ಕುಟುಂಬವು ಸ್ವಾಭಿಮಾನಿ ದಲಿತ ಶಕ್ತಿ ಸಂಘಟನೆಯ ನೆರವಿನೊಂದಿಗೆ ಪೊಲೀಸರು ದೂರು ನೀಡಿದೆ.

ಇದರಿಂದ ಸವರ್ಣೀಯರು ರೊಚ್ಚಿಗೆದ್ದು ಭಾನುವಾರ ರಾತ್ರಿ 12 ಗಂಟೆ ಸಮಯದಲ್ಲಿ ದೂರು ನೀಡಿದ ಕುಟುಂಬದ ಮನೆಗೆ ಬೆಂಕಿ ಹಚ್ಚಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಪ್ರಕಾರ, ಸುಮಾರು 30 ಗ್ರಾಮಸ್ಥರು ದಲಿತರ ಕಾಲೋನಿಗೆ ನುಗ್ಗಿ ಮನೆಗಳಿಗೆ ಮರದ ದಿಮ್ಮಿಗಳನ್ನು ಎಸೆದು ಪೆಟ್ರೋಲ್ ಸುರಿದಿದ್ದಾರೆ. ಅವರು ಮೊದಲ ಮನೆಗೆ ಬೆಂಕಿ ಹಚ್ಚಿದ್ದು, ಬೆಂಕಿಯು ಪಕ್ಕದ ಮನೆಗೂ ಹರಡಿದೆ. ನಂತರ ಅವರು ಓಡಿ ಹೋಗಿದ್ದಾರೆ. ಆದರೆ ಹೊಗೆಯಿಂದಾಗಿ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಎರಡೂ ಮನೆಯಲ್ಲಿದ್ದ ಒಟ್ಟು 12 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಗಳು ಸುಟ್ಟು ಹೋಗಿವೆ. ಇದೀಗ ಅವರೆಲ್ಲ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂಬಂಧಿಕರ ಮನೆಗಳಲ್ಲಿ ವಾಸವಾಗಿದ್ದಾರೆ.

ಈ ಬಗ್ಗೆ ಸಂತ್ರಸ್ತೆ ಹೆಮ್ಮವ್ವ ಮಲ್ಲಾಡದ ಮಾತನಾಡಿದ್ದು, ”ದಶಕಗಳಿಂದ ದಲಿತ ಸಮುದಾಯಕ್ಕೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ, ಆದರೆ ಅದು ನಮ್ಮ ಹಕ್ಕು ಎಂದು ದೇವಸ್ಥಾನ ಪ್ರವೇಶಿಸಿದೆವು. ಆದರೆ ಮೇಲ್ವರ್ಗದ ಗ್ರಾಮಸ್ಥರು ಮನೆಯ ಮೇಲ್ಛಾವಣಿಯ ಹೆಂಚು ಮತ್ತು ಬೈಕ್‌ಗೆ ಹಾನಿ ಮಾಡಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂತರ ಮನೆಗೆ ಬೆಂಕಿ ಹಚ್ಚಿದ್ದಾರೆ. ಗ್ರಾಮದ ದಲಿತರು ಗೌರವಯುತವಾಗಿ ಬದುಕಲು ರಕ್ಷಣೆ ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ” ಎಂದು ಹೇಳಿದರು.

ಘಟನೆ ನಂತರ 30 ಸವರ್ಣೀಯ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನು ಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧದಿಂದ ಗಲಭೆ), 341(ತಪ್ಪಾದ ಸಂಯಮ), 451(ಅಪರಾಧ ಮಾಡಲು ಮನೆಗೆ ನುಗ್ಗುವುದು), 323(ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 354 (ದಾಳಿ) 504 (ಉದ್ದೇಶಪೂರ್ವಕ ಹಾನಿ) ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ದಲಿತ ಸಮುದಾಯಗಳ ಪರ ನಿಂತ ಸ್ವಾಭಿಮಾನಿ ದಲಿತ ಶಕ್ತಿಯ ಮುಖಂಡರಾದ ಶಿವಲಿಂಗಂರವರಿಗೂ ಗ್ರಾಮದ ಸವರ್ಣೀಯರು ಕೊಲೆ ಬೆದರಿಕೆ ಹಾಕಿದ್ದಾರೆ. ಫೋನ್ ಕರೆ ಮತ್ತು ಮೆಸೇಜ್‌ಗಳ ಮೂಲಕ ಇಡೀ ಕುಟುಂಬವನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಸಂಸದ ಎಲ್ ಹನುಮಂತಯ್ಯ ಆಗ್ರಹ

“ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ಮಾದಿಗ ಸಮುದಾಯದ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದೇನೆ. ಈ ಸಂಬಂಧ ಜಿಲ್ಲೆಯಲ್ಲಿ ನಡೆಯುತ್ತಿರುವ ಜಾತಿ ದೌರ್ಜನ್ಯಗಳ ಕುರಿತು ನಾಳೆ(ಮಾ.8) ಪೊಲೀಸ್‌ ಮಹಾ ನಿರ್ದೇಶಕ(ಡಿಜಿ)ರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಹಳ್ಳಿಗಳಲ್ಲಿ ದಲಿತ ಸಮುದಾಯ ಕನಿಷ್ಠ ಮಟ್ಟದ ಜೀವನ ನಡೆಸುವುದಕ್ಕೂ ಬಲಿಷ್ಠ ಸಮುದಾಯ ಅಡ್ಡಿಪಡಿಸುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ನಿರಂತರವಾಗಿ ನಡೆಯುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು” ಎಂದು ರಾಜ್ಯಸಭಾ ಸದಸ್ಯರಾದ ಎಲ್ ಹನುಮಂತಯ್ಯ ತಿಳಿಸಿದ್ದಾರೆ.

“ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಘಟನೆಯ ನಂತರ ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈಗ ಇಬ್ಬರು ಶರಣಾಗಿದ್ದಾರೆ. ಅವರನ್ನು ವಿಚಾರಣೆ ನಡೆಸುತ್ತಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಈ ರೀತಿಯಾಗಿ ಸರಣಿ ದಲಿತ ದೌರ್ಜನ್ಯಗಳು ವರದಿಯಾಗಿದ್ದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಿ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಹಾಗಾಗಿಯೇ ಆರೋಪಿಗಳು ಶನಿವಾರದಿಂದ ಮಂಗಳವಾರ ರಾತ್ರಿವರೆಗೂ ದೌರ್ಜನ್ಯದ ಮೇಲೆ ದೌರ್ಜನ್ಯ ನಡೆಸಿದ್ದಾರೆ. ದಲಿತರ ಸಹಾಯಕ್ಕೆ ಬಂದವರಿಗೂ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಿಎಂ ಆಗಲಿ, ಇತರ ಸ್ಥಳೀಯ ಮುಖಂಡರಾಗಲಿ ದನಿಯೆತ್ತಿಲ್ಲ. ಒಟ್ಟಾರೆಯಾಗಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜೀವಹಾನಿಗಳು ಸಂಭವಿಸುವ ಸಾಧ್ಯತೆಯಿದ್ದು ಹಾವೇರಿ ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಕೊಂಡು ತನಿಖೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕಿದೆ.

ಇದನ್ನೂ ಓದಿ; ‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...